Homeಕರ್ನಾಟಕಜಾತಿ-ಧರ್ಮಗಳ ನಡುವೆ ಕೋಮುಗಲಭೆ ಎಬ್ಬಿಸಿ ಬೇಳೆ ಬೇಯಿಸಿಕೊಳ್ಳುವ ಯತ್ನಾಳ್‌ ಕುತಂತ್ರ ಫಲಿಸುವುದಿಲ್ಲ: ಕರವೇ

ಜಾತಿ-ಧರ್ಮಗಳ ನಡುವೆ ಕೋಮುಗಲಭೆ ಎಬ್ಬಿಸಿ ಬೇಳೆ ಬೇಯಿಸಿಕೊಳ್ಳುವ ಯತ್ನಾಳ್‌ ಕುತಂತ್ರ ಫಲಿಸುವುದಿಲ್ಲ: ಕರವೇ

ಕರವೇ ಅಂದರೆ ಕಳ್ಳರ ರಕ್ಷಣಾ ವೇದಿಕೆ. ನಕಲಿ ಕನ್ನಡ ಪರ ಸಂಘಟನೆಗಳಿಗೆ ಯಾರೂ ಹೆದರಬೇಡಿ ಎಂದ ಯತ್ನಾಳ್‌ಗೆ ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ತಿರುಗೇಟು ನೀಡಿದ್ದಾರೆ.

- Advertisement -
- Advertisement -

ಕರವೇ ಅಂದರೆ ಕಳ್ಳರ ರಕ್ಷಣಾ ವೇದಿಕೆ. ನಕಲಿ ಕನ್ನಡ ಪರ ಸಂಘಟನೆಗಳಿಗೆ ಯಾರೂ ಹೆದರಬೇಡಿ. ಡಿ. 5 ರಂದು ಕರೆ ನೀಡಲಾಗಿರುವ ಕರ್ನಾಟಕ ಬಂದ್ ವಿಫಲಗೊಳಿಸಿ ಎಂಬ ವಿವಾದಾತ್ಮಕ ಹೇಳಿಕೆ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕರವೇ ಕಿಡಿಕಾರಿದೆ.

ಈ ನಾಡಿನ ರಕ್ಷಣೆಗಾಗಿ ತಮ್ಮ ಸರ್ವಸ್ವವನ್ನು ಧಾರೆಯೆರೆದು ಹೋರಾಡುತ್ತಿರುವ ರಾಜ್ಯದ ಲಕ್ಷಾಂತರ ಕರವೇ ಕಾರ್ಯಕರ್ತರು ಸರಿಯಾದ ಸಂದರ್ಭದಲ್ಲಿ ಯತ್ನಾಳ್‌ಗೆ ಸರಿಯಾದ ಉತ್ತರ ನೀಡುತ್ತಾರೆ. ಯಾರು ಕಳ್ಳರು, ಯಾರು ಸುಳ್ಳರು ಎಂಬುದನ್ನು ರಾಜ್ಯದ ಜನತೆಯ ಮುಂದೆ ತೆರೆದಿಡಲಿದ್ದಾರೆ ಎಂದು ಕರವೇ ರಾಜ್ಯಾಧ್ಯಕ್ಷರಾದ ಟಿ.ಎ ನಾರಾಯಣಗೌಡರು ತಿಳಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ತಮ್ಮ ಬಾಯಿಹರುಕತನ ಪ್ರದರ್ಶಿಸಿದ್ದಾರೆ. ನೆರೆ ಪರಿಹಾರ, ಜಿಎಸ್‌ಟಿ ಬಾಕಿ ತರಲು ಒಕ್ಕೂಟ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿ ಎಂದು ಹಿಂದೆ ಸವಾಲು ಹಾಕಿದ್ದೆ. ಆದರೆ ಯತ್ನಾಳ್ ಆ ವಿಷಯ ಮಾತಾಡುತ್ತಿಲ್ಲ. ಅವರಿಗೆ ಜನರ ಕಷ್ಟಗಳ ಕುರಿತು ಕಾಳಜಿಯಿಲ್ಲ, ಕೇವಲ ಪ್ರಚಾರಕ್ಕಾಗಿ ನಾಲಿಗೆ ಹರಿಬಿಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯತ್ನಾಳ್ ಅವರು ನಾಡಿನ ಸಾಕ್ಷಿಪ್ರಜ್ಞೆ, ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ಎಚ್.ಎಸ್ ದೊರೆಸ್ವಾಮಿಯವರ ಕುರಿತೂ ಕೀಳಾಗಿ ಮಾತಾಡಿದ್ದಾರೆ. ಇದು ಅವರ ಸಂಸ್ಕಾರ, ಸಂಸ್ಕೃತಿಯನ್ನು ತೋರಿಸುತ್ತದೆ. ಒಬ್ಬ ಸ್ವಾತಂತ್ರ್ಯ ಹೋರಾಟಗಾರರನ್ನು‌ ನಿಂದಿಸುವ ಇವರು ಯಾವ ಸೀಮೆಯ ದೇಶಭಕ್ತರು? ಇವರೆಂಥ ರಾಷ್ಟ್ರೀಯವಾದಿಗಳು? ಎಂದು ಪ್ರಶ್ನಿಸಿದ್ದಾರೆ.

“ಕರವೇಯಲ್ಲಿ ಸಾಬರು ಇದ್ದಾರೆ” ಎಂದು ಹೇಳಿದ್ದಾರೆ ಯತ್ನಾಳ್. ಕರವೇಯಲ್ಲಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧರಾದಿಯಾಗಿ ಎಲ್ಲ ಧರ್ಮದವರೂ ಇದ್ದಾರೆ. ಭಾರತ ಸಂವಿಧಾನದ 14 ನೇ ವಿಧಿ, ಎಲ್ಲ ಭಾರತೀಯರೂ ಸಮಾನರೆಂದು ಹೇಳುತ್ತದೆ. ಕರವೇಯಲ್ಲಿ ಎಲ್ಲ ಧರ್ಮದವರೂ ಕನ್ನಡಸೇವೆಯಲ್ಲಿ ತೊಡಗಿದ್ದಾರೆ, ಅದಕ್ಕಾಗಿ ನಾವು ಹೆಮ್ಮೆಪಡುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ “ಕನ್ನಡವೇ ಜಾತಿ, ಕನ್ನಡವೇ ಧರ್ಮ, ಕನ್ನಡವೇ ದೇವರು” ಎಂಬ ಘೋಷವಾಕ್ಯದೊಂದಿಗೆ 21 ವರ್ಷಗಳಿಂದ ಕನ್ನಡ ಚಳವಳಿಯನ್ನು ಸಂಘಟಿಸುತ್ತಿದೆ. ಧರ್ಮ-ಧರ್ಮಗಳ ನಡುವೆ ದ್ವೇಷ ಹರಡಿ, ಕೋಮುಗಲಭೆ ಎಬ್ಬಿಸಿ ಬೇಳೆ ಬೇಯಿಸಿಕೊಳ್ಳುವುದು ಯತ್ನಾಳ್‌ರಂಥವರ ಕುತಂತ್ರ. ಯತ್ನಾಳ್ ಕುತಂತ್ರ ಫಲ ಕೊಡುವುದಿಲ್ಲ, ಅವರಿಗೆ ತಿರುಗುಬಾಣವಾಗುತ್ತದೆ ಎಂದಿದ್ದಾರೆ.

ತನ್ನನ್ನು ಮಂತ್ರಿ ಮಾಡಲೆಂದು ಆಗಾಗ ಬ್ಲಾಕ್ ಮೇಲ್ ಮಾಡುವ ಯತ್ನಾಳ್ ಈಗ ಬಿಜೆಪಿಯವರ ಪಾಲಿಗೇ ಗೊಡ್ಡುಹಸುವಾಗಿದ್ದಾರೆ. ಹೀಗಾಗಿ ಸುದ್ದಿಯಲ್ಲಿ ಇರಲು, ಆಕಾಶಕ್ಕೆ ಉಗುಳುವ ಕೆಲಸ ಮಾಡುತ್ತಿದ್ದಾರೆ. ಆಕಾಶಕ್ಕೆ ಉಗಿದರೆ ಅದು ಅವರ ಮೇಲೇ ಬೀಳುವುದಿಲ್ಲವೇ? ಹತ್ತು ಮಂದಿ ಪುಂಡಪೋಕರಿಗಳನ್ನು ಸುತ್ತ ನಿಲ್ಲಿಸಿಕೊಂಡು, ಮೀಡಿಯಾ ಮೈಕುಗಳ ಎದುರು ಬಾಯಿಗೆ ಬಂದಿದ್ದು ಮಾತನಾಡಿದರೆ ದೊಡ್ಡ ನಾಯಕನೆನಿಸಿಕೊಳ್ಳಬಹುದು ಎಂಬ ಭ್ರಮೆಯಲ್ಲಿ ಯತ್ನಾಳ್ ಇದ್ದಾರೆ. ಇಂಥವರು ಕರ್ನಾಟಕದ ರಾಜಕಾರಣದ ಇತಿಹಾಸದಲ್ಲಿ ಹೇಳ ಹೆಸರಿಲ್ಲದಂತೆ ಕಣ್ಮರೆಯಾಗಿದ್ದಾರೆ, ಇವರೂ ಆಗುತ್ತಾರೆ ಎಂದಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ನಿಜಕ್ಕೂ ಜನರ ಪರವಾದ ಕಾಳಜಿ ಇದ್ದರೆ, ಅವರದೇ ಜಿಲ್ಲೆ ವಿಜಯಪುರದಲ್ಲಿ ನರಳುತ್ತಿರುವ ನೆರೆಸಂತ್ರಸ್ಥರ ಜತೆ ನಿಲ್ಲಲಿ. ನೆರೆ ಪರಿಹಾರ ಯಾಕೆ ಕೊಟ್ಟಿಲ್ಲವೆಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಲಿ, ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೋರಾಟ ರೂಪಿಸಲಿ. ಆಗ ಅವರನ್ನು ಜನರು ನಾಯಕರೆಂದು ಪರಿಗಣಿಸುತ್ತಾರೆ ಎಂದು ನಾರಾಯಣಗೌಡ್ರು ತಿಳಿಸಿದ್ದಾರೆ.


ಇದನ್ನೂ ಓದಿ: ಯತ್ನಾಳ್‌ಗೆ ಗುಲಾಮಗಿರಿ ಬಿಟ್ಟು ಬೇರೇನೂ ಗೊತ್ತಿಲ್ಲ ಎಂದು ಒಪ್ಪಿಕೊಳ್ಳುತ್ತಾರೆಯೇ?: ಕರವೇ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...