Homeಕರ್ನಾಟಕಜಾತಿ-ಧರ್ಮಗಳ ನಡುವೆ ಕೋಮುಗಲಭೆ ಎಬ್ಬಿಸಿ ಬೇಳೆ ಬೇಯಿಸಿಕೊಳ್ಳುವ ಯತ್ನಾಳ್‌ ಕುತಂತ್ರ ಫಲಿಸುವುದಿಲ್ಲ: ಕರವೇ

ಜಾತಿ-ಧರ್ಮಗಳ ನಡುವೆ ಕೋಮುಗಲಭೆ ಎಬ್ಬಿಸಿ ಬೇಳೆ ಬೇಯಿಸಿಕೊಳ್ಳುವ ಯತ್ನಾಳ್‌ ಕುತಂತ್ರ ಫಲಿಸುವುದಿಲ್ಲ: ಕರವೇ

ಕರವೇ ಅಂದರೆ ಕಳ್ಳರ ರಕ್ಷಣಾ ವೇದಿಕೆ. ನಕಲಿ ಕನ್ನಡ ಪರ ಸಂಘಟನೆಗಳಿಗೆ ಯಾರೂ ಹೆದರಬೇಡಿ ಎಂದ ಯತ್ನಾಳ್‌ಗೆ ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ತಿರುಗೇಟು ನೀಡಿದ್ದಾರೆ.

- Advertisement -
- Advertisement -

ಕರವೇ ಅಂದರೆ ಕಳ್ಳರ ರಕ್ಷಣಾ ವೇದಿಕೆ. ನಕಲಿ ಕನ್ನಡ ಪರ ಸಂಘಟನೆಗಳಿಗೆ ಯಾರೂ ಹೆದರಬೇಡಿ. ಡಿ. 5 ರಂದು ಕರೆ ನೀಡಲಾಗಿರುವ ಕರ್ನಾಟಕ ಬಂದ್ ವಿಫಲಗೊಳಿಸಿ ಎಂಬ ವಿವಾದಾತ್ಮಕ ಹೇಳಿಕೆ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕರವೇ ಕಿಡಿಕಾರಿದೆ.

ಈ ನಾಡಿನ ರಕ್ಷಣೆಗಾಗಿ ತಮ್ಮ ಸರ್ವಸ್ವವನ್ನು ಧಾರೆಯೆರೆದು ಹೋರಾಡುತ್ತಿರುವ ರಾಜ್ಯದ ಲಕ್ಷಾಂತರ ಕರವೇ ಕಾರ್ಯಕರ್ತರು ಸರಿಯಾದ ಸಂದರ್ಭದಲ್ಲಿ ಯತ್ನಾಳ್‌ಗೆ ಸರಿಯಾದ ಉತ್ತರ ನೀಡುತ್ತಾರೆ. ಯಾರು ಕಳ್ಳರು, ಯಾರು ಸುಳ್ಳರು ಎಂಬುದನ್ನು ರಾಜ್ಯದ ಜನತೆಯ ಮುಂದೆ ತೆರೆದಿಡಲಿದ್ದಾರೆ ಎಂದು ಕರವೇ ರಾಜ್ಯಾಧ್ಯಕ್ಷರಾದ ಟಿ.ಎ ನಾರಾಯಣಗೌಡರು ತಿಳಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ತಮ್ಮ ಬಾಯಿಹರುಕತನ ಪ್ರದರ್ಶಿಸಿದ್ದಾರೆ. ನೆರೆ ಪರಿಹಾರ, ಜಿಎಸ್‌ಟಿ ಬಾಕಿ ತರಲು ಒಕ್ಕೂಟ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿ ಎಂದು ಹಿಂದೆ ಸವಾಲು ಹಾಕಿದ್ದೆ. ಆದರೆ ಯತ್ನಾಳ್ ಆ ವಿಷಯ ಮಾತಾಡುತ್ತಿಲ್ಲ. ಅವರಿಗೆ ಜನರ ಕಷ್ಟಗಳ ಕುರಿತು ಕಾಳಜಿಯಿಲ್ಲ, ಕೇವಲ ಪ್ರಚಾರಕ್ಕಾಗಿ ನಾಲಿಗೆ ಹರಿಬಿಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯತ್ನಾಳ್ ಅವರು ನಾಡಿನ ಸಾಕ್ಷಿಪ್ರಜ್ಞೆ, ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ಎಚ್.ಎಸ್ ದೊರೆಸ್ವಾಮಿಯವರ ಕುರಿತೂ ಕೀಳಾಗಿ ಮಾತಾಡಿದ್ದಾರೆ. ಇದು ಅವರ ಸಂಸ್ಕಾರ, ಸಂಸ್ಕೃತಿಯನ್ನು ತೋರಿಸುತ್ತದೆ. ಒಬ್ಬ ಸ್ವಾತಂತ್ರ್ಯ ಹೋರಾಟಗಾರರನ್ನು‌ ನಿಂದಿಸುವ ಇವರು ಯಾವ ಸೀಮೆಯ ದೇಶಭಕ್ತರು? ಇವರೆಂಥ ರಾಷ್ಟ್ರೀಯವಾದಿಗಳು? ಎಂದು ಪ್ರಶ್ನಿಸಿದ್ದಾರೆ.

“ಕರವೇಯಲ್ಲಿ ಸಾಬರು ಇದ್ದಾರೆ” ಎಂದು ಹೇಳಿದ್ದಾರೆ ಯತ್ನಾಳ್. ಕರವೇಯಲ್ಲಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧರಾದಿಯಾಗಿ ಎಲ್ಲ ಧರ್ಮದವರೂ ಇದ್ದಾರೆ. ಭಾರತ ಸಂವಿಧಾನದ 14 ನೇ ವಿಧಿ, ಎಲ್ಲ ಭಾರತೀಯರೂ ಸಮಾನರೆಂದು ಹೇಳುತ್ತದೆ. ಕರವೇಯಲ್ಲಿ ಎಲ್ಲ ಧರ್ಮದವರೂ ಕನ್ನಡಸೇವೆಯಲ್ಲಿ ತೊಡಗಿದ್ದಾರೆ, ಅದಕ್ಕಾಗಿ ನಾವು ಹೆಮ್ಮೆಪಡುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ “ಕನ್ನಡವೇ ಜಾತಿ, ಕನ್ನಡವೇ ಧರ್ಮ, ಕನ್ನಡವೇ ದೇವರು” ಎಂಬ ಘೋಷವಾಕ್ಯದೊಂದಿಗೆ 21 ವರ್ಷಗಳಿಂದ ಕನ್ನಡ ಚಳವಳಿಯನ್ನು ಸಂಘಟಿಸುತ್ತಿದೆ. ಧರ್ಮ-ಧರ್ಮಗಳ ನಡುವೆ ದ್ವೇಷ ಹರಡಿ, ಕೋಮುಗಲಭೆ ಎಬ್ಬಿಸಿ ಬೇಳೆ ಬೇಯಿಸಿಕೊಳ್ಳುವುದು ಯತ್ನಾಳ್‌ರಂಥವರ ಕುತಂತ್ರ. ಯತ್ನಾಳ್ ಕುತಂತ್ರ ಫಲ ಕೊಡುವುದಿಲ್ಲ, ಅವರಿಗೆ ತಿರುಗುಬಾಣವಾಗುತ್ತದೆ ಎಂದಿದ್ದಾರೆ.

ತನ್ನನ್ನು ಮಂತ್ರಿ ಮಾಡಲೆಂದು ಆಗಾಗ ಬ್ಲಾಕ್ ಮೇಲ್ ಮಾಡುವ ಯತ್ನಾಳ್ ಈಗ ಬಿಜೆಪಿಯವರ ಪಾಲಿಗೇ ಗೊಡ್ಡುಹಸುವಾಗಿದ್ದಾರೆ. ಹೀಗಾಗಿ ಸುದ್ದಿಯಲ್ಲಿ ಇರಲು, ಆಕಾಶಕ್ಕೆ ಉಗುಳುವ ಕೆಲಸ ಮಾಡುತ್ತಿದ್ದಾರೆ. ಆಕಾಶಕ್ಕೆ ಉಗಿದರೆ ಅದು ಅವರ ಮೇಲೇ ಬೀಳುವುದಿಲ್ಲವೇ? ಹತ್ತು ಮಂದಿ ಪುಂಡಪೋಕರಿಗಳನ್ನು ಸುತ್ತ ನಿಲ್ಲಿಸಿಕೊಂಡು, ಮೀಡಿಯಾ ಮೈಕುಗಳ ಎದುರು ಬಾಯಿಗೆ ಬಂದಿದ್ದು ಮಾತನಾಡಿದರೆ ದೊಡ್ಡ ನಾಯಕನೆನಿಸಿಕೊಳ್ಳಬಹುದು ಎಂಬ ಭ್ರಮೆಯಲ್ಲಿ ಯತ್ನಾಳ್ ಇದ್ದಾರೆ. ಇಂಥವರು ಕರ್ನಾಟಕದ ರಾಜಕಾರಣದ ಇತಿಹಾಸದಲ್ಲಿ ಹೇಳ ಹೆಸರಿಲ್ಲದಂತೆ ಕಣ್ಮರೆಯಾಗಿದ್ದಾರೆ, ಇವರೂ ಆಗುತ್ತಾರೆ ಎಂದಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ನಿಜಕ್ಕೂ ಜನರ ಪರವಾದ ಕಾಳಜಿ ಇದ್ದರೆ, ಅವರದೇ ಜಿಲ್ಲೆ ವಿಜಯಪುರದಲ್ಲಿ ನರಳುತ್ತಿರುವ ನೆರೆಸಂತ್ರಸ್ಥರ ಜತೆ ನಿಲ್ಲಲಿ. ನೆರೆ ಪರಿಹಾರ ಯಾಕೆ ಕೊಟ್ಟಿಲ್ಲವೆಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಲಿ, ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೋರಾಟ ರೂಪಿಸಲಿ. ಆಗ ಅವರನ್ನು ಜನರು ನಾಯಕರೆಂದು ಪರಿಗಣಿಸುತ್ತಾರೆ ಎಂದು ನಾರಾಯಣಗೌಡ್ರು ತಿಳಿಸಿದ್ದಾರೆ.


ಇದನ್ನೂ ಓದಿ: ಯತ್ನಾಳ್‌ಗೆ ಗುಲಾಮಗಿರಿ ಬಿಟ್ಟು ಬೇರೇನೂ ಗೊತ್ತಿಲ್ಲ ಎಂದು ಒಪ್ಪಿಕೊಳ್ಳುತ್ತಾರೆಯೇ?: ಕರವೇ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...