Homeಕರ್ನಾಟಕಜಾತಿ-ಧರ್ಮಗಳ ನಡುವೆ ಕೋಮುಗಲಭೆ ಎಬ್ಬಿಸಿ ಬೇಳೆ ಬೇಯಿಸಿಕೊಳ್ಳುವ ಯತ್ನಾಳ್‌ ಕುತಂತ್ರ ಫಲಿಸುವುದಿಲ್ಲ: ಕರವೇ

ಜಾತಿ-ಧರ್ಮಗಳ ನಡುವೆ ಕೋಮುಗಲಭೆ ಎಬ್ಬಿಸಿ ಬೇಳೆ ಬೇಯಿಸಿಕೊಳ್ಳುವ ಯತ್ನಾಳ್‌ ಕುತಂತ್ರ ಫಲಿಸುವುದಿಲ್ಲ: ಕರವೇ

ಕರವೇ ಅಂದರೆ ಕಳ್ಳರ ರಕ್ಷಣಾ ವೇದಿಕೆ. ನಕಲಿ ಕನ್ನಡ ಪರ ಸಂಘಟನೆಗಳಿಗೆ ಯಾರೂ ಹೆದರಬೇಡಿ ಎಂದ ಯತ್ನಾಳ್‌ಗೆ ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ತಿರುಗೇಟು ನೀಡಿದ್ದಾರೆ.

- Advertisement -
- Advertisement -

ಕರವೇ ಅಂದರೆ ಕಳ್ಳರ ರಕ್ಷಣಾ ವೇದಿಕೆ. ನಕಲಿ ಕನ್ನಡ ಪರ ಸಂಘಟನೆಗಳಿಗೆ ಯಾರೂ ಹೆದರಬೇಡಿ. ಡಿ. 5 ರಂದು ಕರೆ ನೀಡಲಾಗಿರುವ ಕರ್ನಾಟಕ ಬಂದ್ ವಿಫಲಗೊಳಿಸಿ ಎಂಬ ವಿವಾದಾತ್ಮಕ ಹೇಳಿಕೆ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕರವೇ ಕಿಡಿಕಾರಿದೆ.

ಈ ನಾಡಿನ ರಕ್ಷಣೆಗಾಗಿ ತಮ್ಮ ಸರ್ವಸ್ವವನ್ನು ಧಾರೆಯೆರೆದು ಹೋರಾಡುತ್ತಿರುವ ರಾಜ್ಯದ ಲಕ್ಷಾಂತರ ಕರವೇ ಕಾರ್ಯಕರ್ತರು ಸರಿಯಾದ ಸಂದರ್ಭದಲ್ಲಿ ಯತ್ನಾಳ್‌ಗೆ ಸರಿಯಾದ ಉತ್ತರ ನೀಡುತ್ತಾರೆ. ಯಾರು ಕಳ್ಳರು, ಯಾರು ಸುಳ್ಳರು ಎಂಬುದನ್ನು ರಾಜ್ಯದ ಜನತೆಯ ಮುಂದೆ ತೆರೆದಿಡಲಿದ್ದಾರೆ ಎಂದು ಕರವೇ ರಾಜ್ಯಾಧ್ಯಕ್ಷರಾದ ಟಿ.ಎ ನಾರಾಯಣಗೌಡರು ತಿಳಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ತಮ್ಮ ಬಾಯಿಹರುಕತನ ಪ್ರದರ್ಶಿಸಿದ್ದಾರೆ. ನೆರೆ ಪರಿಹಾರ, ಜಿಎಸ್‌ಟಿ ಬಾಕಿ ತರಲು ಒಕ್ಕೂಟ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿ ಎಂದು ಹಿಂದೆ ಸವಾಲು ಹಾಕಿದ್ದೆ. ಆದರೆ ಯತ್ನಾಳ್ ಆ ವಿಷಯ ಮಾತಾಡುತ್ತಿಲ್ಲ. ಅವರಿಗೆ ಜನರ ಕಷ್ಟಗಳ ಕುರಿತು ಕಾಳಜಿಯಿಲ್ಲ, ಕೇವಲ ಪ್ರಚಾರಕ್ಕಾಗಿ ನಾಲಿಗೆ ಹರಿಬಿಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯತ್ನಾಳ್ ಅವರು ನಾಡಿನ ಸಾಕ್ಷಿಪ್ರಜ್ಞೆ, ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ಎಚ್.ಎಸ್ ದೊರೆಸ್ವಾಮಿಯವರ ಕುರಿತೂ ಕೀಳಾಗಿ ಮಾತಾಡಿದ್ದಾರೆ. ಇದು ಅವರ ಸಂಸ್ಕಾರ, ಸಂಸ್ಕೃತಿಯನ್ನು ತೋರಿಸುತ್ತದೆ. ಒಬ್ಬ ಸ್ವಾತಂತ್ರ್ಯ ಹೋರಾಟಗಾರರನ್ನು‌ ನಿಂದಿಸುವ ಇವರು ಯಾವ ಸೀಮೆಯ ದೇಶಭಕ್ತರು? ಇವರೆಂಥ ರಾಷ್ಟ್ರೀಯವಾದಿಗಳು? ಎಂದು ಪ್ರಶ್ನಿಸಿದ್ದಾರೆ.

“ಕರವೇಯಲ್ಲಿ ಸಾಬರು ಇದ್ದಾರೆ” ಎಂದು ಹೇಳಿದ್ದಾರೆ ಯತ್ನಾಳ್. ಕರವೇಯಲ್ಲಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧರಾದಿಯಾಗಿ ಎಲ್ಲ ಧರ್ಮದವರೂ ಇದ್ದಾರೆ. ಭಾರತ ಸಂವಿಧಾನದ 14 ನೇ ವಿಧಿ, ಎಲ್ಲ ಭಾರತೀಯರೂ ಸಮಾನರೆಂದು ಹೇಳುತ್ತದೆ. ಕರವೇಯಲ್ಲಿ ಎಲ್ಲ ಧರ್ಮದವರೂ ಕನ್ನಡಸೇವೆಯಲ್ಲಿ ತೊಡಗಿದ್ದಾರೆ, ಅದಕ್ಕಾಗಿ ನಾವು ಹೆಮ್ಮೆಪಡುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ “ಕನ್ನಡವೇ ಜಾತಿ, ಕನ್ನಡವೇ ಧರ್ಮ, ಕನ್ನಡವೇ ದೇವರು” ಎಂಬ ಘೋಷವಾಕ್ಯದೊಂದಿಗೆ 21 ವರ್ಷಗಳಿಂದ ಕನ್ನಡ ಚಳವಳಿಯನ್ನು ಸಂಘಟಿಸುತ್ತಿದೆ. ಧರ್ಮ-ಧರ್ಮಗಳ ನಡುವೆ ದ್ವೇಷ ಹರಡಿ, ಕೋಮುಗಲಭೆ ಎಬ್ಬಿಸಿ ಬೇಳೆ ಬೇಯಿಸಿಕೊಳ್ಳುವುದು ಯತ್ನಾಳ್‌ರಂಥವರ ಕುತಂತ್ರ. ಯತ್ನಾಳ್ ಕುತಂತ್ರ ಫಲ ಕೊಡುವುದಿಲ್ಲ, ಅವರಿಗೆ ತಿರುಗುಬಾಣವಾಗುತ್ತದೆ ಎಂದಿದ್ದಾರೆ.

ತನ್ನನ್ನು ಮಂತ್ರಿ ಮಾಡಲೆಂದು ಆಗಾಗ ಬ್ಲಾಕ್ ಮೇಲ್ ಮಾಡುವ ಯತ್ನಾಳ್ ಈಗ ಬಿಜೆಪಿಯವರ ಪಾಲಿಗೇ ಗೊಡ್ಡುಹಸುವಾಗಿದ್ದಾರೆ. ಹೀಗಾಗಿ ಸುದ್ದಿಯಲ್ಲಿ ಇರಲು, ಆಕಾಶಕ್ಕೆ ಉಗುಳುವ ಕೆಲಸ ಮಾಡುತ್ತಿದ್ದಾರೆ. ಆಕಾಶಕ್ಕೆ ಉಗಿದರೆ ಅದು ಅವರ ಮೇಲೇ ಬೀಳುವುದಿಲ್ಲವೇ? ಹತ್ತು ಮಂದಿ ಪುಂಡಪೋಕರಿಗಳನ್ನು ಸುತ್ತ ನಿಲ್ಲಿಸಿಕೊಂಡು, ಮೀಡಿಯಾ ಮೈಕುಗಳ ಎದುರು ಬಾಯಿಗೆ ಬಂದಿದ್ದು ಮಾತನಾಡಿದರೆ ದೊಡ್ಡ ನಾಯಕನೆನಿಸಿಕೊಳ್ಳಬಹುದು ಎಂಬ ಭ್ರಮೆಯಲ್ಲಿ ಯತ್ನಾಳ್ ಇದ್ದಾರೆ. ಇಂಥವರು ಕರ್ನಾಟಕದ ರಾಜಕಾರಣದ ಇತಿಹಾಸದಲ್ಲಿ ಹೇಳ ಹೆಸರಿಲ್ಲದಂತೆ ಕಣ್ಮರೆಯಾಗಿದ್ದಾರೆ, ಇವರೂ ಆಗುತ್ತಾರೆ ಎಂದಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ನಿಜಕ್ಕೂ ಜನರ ಪರವಾದ ಕಾಳಜಿ ಇದ್ದರೆ, ಅವರದೇ ಜಿಲ್ಲೆ ವಿಜಯಪುರದಲ್ಲಿ ನರಳುತ್ತಿರುವ ನೆರೆಸಂತ್ರಸ್ಥರ ಜತೆ ನಿಲ್ಲಲಿ. ನೆರೆ ಪರಿಹಾರ ಯಾಕೆ ಕೊಟ್ಟಿಲ್ಲವೆಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಲಿ, ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೋರಾಟ ರೂಪಿಸಲಿ. ಆಗ ಅವರನ್ನು ಜನರು ನಾಯಕರೆಂದು ಪರಿಗಣಿಸುತ್ತಾರೆ ಎಂದು ನಾರಾಯಣಗೌಡ್ರು ತಿಳಿಸಿದ್ದಾರೆ.


ಇದನ್ನೂ ಓದಿ: ಯತ್ನಾಳ್‌ಗೆ ಗುಲಾಮಗಿರಿ ಬಿಟ್ಟು ಬೇರೇನೂ ಗೊತ್ತಿಲ್ಲ ಎಂದು ಒಪ್ಪಿಕೊಳ್ಳುತ್ತಾರೆಯೇ?: ಕರವೇ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...