Homeಕರ್ನಾಟಕರಾಮನಗರ: ರೇಷ್ಮೆ ಮಾರುಕಟ್ಟೆಯಲ್ಲಿ ಶೋಷಣೆ ಆರೋಪ - ಪತ್ರ ಅಭಿಯಾನ ಆರಂಭಿಸಿದ ರೈತರು

ರಾಮನಗರ: ರೇಷ್ಮೆ ಮಾರುಕಟ್ಟೆಯಲ್ಲಿ ಶೋಷಣೆ ಆರೋಪ – ಪತ್ರ ಅಭಿಯಾನ ಆರಂಭಿಸಿದ ರೈತರು

- Advertisement -
- Advertisement -

ಕಳೆದ 30 ವರ್ಷಗಳಿಂದ ರಾಮನಗರ ರೇಷ್ಮೆಗೂಡಿನ ಮಾರುಕಟ್ಟೆಯಲ್ಲಿ ರೀಲರ್‌ಗಳು ಹಾಗು ಗೂಡು ಕದಿಯುವ ಮಾಫಿಯಾದವರಿಂದ ರೈತರ ಮೇಲೆ ನಿರಂತರ ಶೋಷಣೆ ಆಗುತ್ತಿದೆ ಎಂದು ರೈತರು ಆರೋಪಿಸಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಪತ್ರ ಬರೆಯುವ ಮೂಲಕ ಪತ್ರ ಅಭಿಯಾನ ಆರಂಭಿಸಿದ್ದಾರೆ.

ರೈತರ ಮೇಲಿನ ಶೋಷಣೆ ತಪ್ಪಿಸಲು ಜರೂರು ಕ್ರಮ ವಹಿಸಬೇಕು ಎಂದು ಆಗ್ರಹಿಸಿ ಮಂಡ್ಯ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳ ಮುಂದೆ ಮುಖ್ಯಮಂತ್ರಿಗಳಿಗೆ ರಿಜಿಸ್ಟರ್‌ ಪೋಸ್ಟ್‌ನಲ್ಲಿ ಪತ್ರ ಬರೆಯುವ ಚಳವಳಿ ಆರಂಭವಾಗಿದೆ. ಮದ್ದೂರು ತಾಲೂಕಿನ ಹೋಬಳಿ ಮಟ್ಟದಲ್ಲೂ ರೈತರು ಪತ್ರ ಚಳವಳಿ ಆರಂಭಿಸಿದ್ದಾರೆ.

ಇಂದಿನಿಂದ ಪತ್ರ, ಇ-ಮೇಲ್, ಟ್ವಿಟರ್‌ ಮುಂದಾದ ಸಾಮಾಜಿಕ ಮಾಧ್ಯಮಗಳ ಮೂಲಕವೂ ಮುಖ್ಯಮಂತ್ರಿಗಳ ಮೇಲೆ ಒತ್ತಡ ತರಲಾಗುತ್ತದೆ ಎಂದು ರೈತಮುಖಂಡರಾದ ನ.ಲಿ.ಕೃಷ್ಣರವರು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

ರಾಮನಗರದ ರೇಷ್ಮೆಗೂಡು ಮಾರುಕಟ್ಟೆ ಬೃಹತ್ ವ್ಯವಹಾರ ಹೊಂದಿದ್ದು ರಾಜ್ಯದ ಎಲ್ಲಾ ಕಡೆಯಿಂದ ರೈತರು ರೇಷ್ಮೆ ಗೂಡು ಮಾರಾಟಕ್ಕಾಗಿ ರಾಮನಗರದ ಮಾರುಕಟ್ಟೆಗೆ ಬರುತ್ತಾರೆ. ಇಲ್ಲಿನ ರೀಲರ್‌ಗಳು ಮತ್ತು ಗೂಡು ಕದಿಯುವ ಮಾಫಿಯಾದವರು ಅಧಿಕಾರಿಗಳೊಂದಿಗೆ ಶಾಮಿಲಾಗಿ ಪ್ರತಿಕ್ಷಣ ಪ್ರತಿದಿನ ರೈತರನ್ನು ಶೋಷಣೆ ಮಾಡುತ್ತಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.

ಇದನ್ನೂ ಓದಿ: ಕಾವೇರಿಯ ಉಳಿವಿಗೆ ‘ಮೇಕೆದಾಟು ಅಣೆಕಟ್ಟು’ ಪ್ರಸ್ತಾಪ ಕೈಬಿಡಬೇಕು: ಮೇಧಾ ಪಾಟ್ಕರ್‌‌

ರೇಷ್ಮೆ ರೈತರು ಅಭಿಯಾನ ನಡೆಸಲು ಕಾರಣ:

ನಾನು ಗೌರಿ.ಕಾಂ ಜೊತೆಗೆ ಮಾತನಾಡಿರುವ ರೈತ ನ.ಲಿ ಕೃಷ್ಣ ಅಂದಿನ ಘಟನೆಯನ್ನು ತಿಳಿಸಿದ್ದು ಹೀಗೆ.. “ಜನವರಿ 12 ರಂದು ರೇಷ್ಮೆಗೂಡು ಮಾರಾಟಕ್ಕೆ ಬಂದಿದ್ದ ಹಾವೇರಿ ತಾಲೂಕು ಗುಬ್ಬಿ ಗ್ರಾಮದ ರೈತ ವಿರುಪಾಕ್ಷಪ್ಪ ಅವರ ಜಾಲರಿಯಿಂದ ಗೂಡು ಜಾಡಿಸುವ, ಗೂಡು ಬೇರ್ಪಡಿಸುವ ಮೂಲಕ ಅಕ್ರಮವಾಗಿ ಗೂಡು ಸಾಗಿಸುವ, ಗೂಡು ಕದಿಯುವ ಕೆಲಸಕ್ಕೆ ರೀಲರ್ ಮುನೀರ್ ಅಹಮದ್ ಮತ್ತು ಆತನ ಸಹಚರರು ಮುಂದಾಗಿದ್ದಾರೆ. ಹೀಗೆ ತೊಂದರೆ ಮಾಡಬೇಡಿ ಎಂದು ರೈತ ವಿರುಪಾಕ್ಷಪ್ಪ ಕೈ ಮುಗಿದು ಬೇಡಿಕೊಂಡರು ಕೇಳದೇ ಗೂಡು ಮಾಫಿಯಾ ಮಂದಿ ರೈತನ ಮೇಲೆ ಹಲ್ಲೆಗೆ ಮುಂದಾಗಿ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇಷ್ಟು ನಡೆಯುತ್ತಿದ್ದರೂ ಯಾವೊಬ್ಬ ಅಧಿಕಾರಿಯಾಗಲಿ, ಭದ್ರತಾ ಸಿಬ್ಬಂದಿಯಾಗಲಿ, ಅಲ್ಲೇ ಇದ್ದ ರೈತರಾಗಲಿ ವಿರುಪಾಕ್ಷಪ್ಪನವರ ರಕ್ಷಣೆಗೆ ಧಾವಿಸಿಲ್ಲ. ಇದು ಇಲ್ಲಿನ ಮಾರುಕಟ್ಟೆಯ ಗೂಡುಕದಿಯುವ ಮಾಫಿಯಾದ ಬಲವನ್ನು ತಿಳಿಸುತ್ತದೆ” ಎಂದಿದ್ದಾರೆ.

ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಮಾರುಕಟ್ಟೆ ಅಧಿಕಾರಿ ಈ ಕುರಿತು ಮರುದಿನ ಸಾಂಕೇತಿಕವಾಗಿ  ಪೊಲೀಸ್ ಠಾಣೆಗೆ ದೂರು ಸಲ್ಲಿಸಿ ತಮ್ಮ ಹುದ್ದೆಯ ರಕ್ಷಣೆಯ ನಾಟಕವಾಡಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.

ಇದು ಒಂದು ಘಟನೆಯಷ್ಟೆ, ಇಂತಹ ಜಾಲ ಕಳೆದ ಮೂವತ್ತು ವರ್ಷಗಳಿಂದಲೂ ಇಲ್ಲಿ ಬೆಳೆದು ನಿಂತಿದೆ. ಅಧಿಕ ಸಂಖ್ಯೆಯಲ್ಲಿ ರಾಜ್ಯದೆಲ್ಲೆಡೆಯಿಂದ ಬರುವ ರೈತರನ್ನು ವ್ಯವಸ್ಥಿತ ಸಂಚಿನ ಮೂಲಕ ಶೋಷಣೆ ಮಾಡುತ್ತಿದೆ. ಇಲ್ಲಿಗೆ ಗೂಡು ತರುವ ಬಹುತೇಕ ರೈತರು ಈ ಮಾಫಿಯಾದಿಂದ ಗೂಡು ರಕ್ಷಿಸಿ ಕೊಳ್ಳಲು ತಮ್ಮ ಗೂಡಿನ ಜಾಲರಿ ಬಿಟ್ಟು ಕದಲದೆ ದಿನವಿಡಿ ಕಾವಲು ಕಾಯಬೇಕಾದ ಪರಿಸ್ಥಿತಿ ಇದೆ. ಹರಾಜಿಗೆ ಮುನ್ನ ಗೂಡು ಪರೀಕ್ಷಿಸುವ ನೆಪದಲ್ಲಿ ಗೂಡು ಚೆಲ್ಲುವುದು, ಹರಾಜಿನ ನಂತರ ಅಕ್ರಮವಾಗಿ ಗುಂಪುಗೂಡಿ ನಿಯಮಬಾಹಿರವಾಗಿ ಗೂಡು ಬೇರ್ಪಡಿಸುವುದು, ಅಕ್ರಮವಾಗಿ ಗೂಡು ಸಾಗಿಸುವುದು, ಜಾಲರಿಯ ಕೆಳಕ್ಕೆ ಗೂಡು ಚೆಲ್ಲಿ ಗೂಡು ಕದಿಯುವ ಕೆಲಸ ಮಾಡುತ್ತಾರೆ. ದೇವರ ಹೆಸರಿನಲ್ಲಿ, ಇತರೆ ಕಾರಣ ಹೇಳಿ ಐದಾರು ಕೆ.ಜಿ.ಗೂಡು ಎತ್ತಿಕೊಳ್ಳುತ್ತಾರೆ. ಪ್ರಶ್ನಿಸುವ ರೈತನ ಮೇಲೆ ಮಾಫಿಯಾ ಮಂದಿ ಒಟ್ಟಾಗಿ ಸೇರಿ ಹಲ್ಲೆ ನಡೆಸುತ್ತಾರೆ ಎಂದು ನ.ಲಿ.ಕೃಷ್ಣ ತಿಳಿಸಿದ್ದಾರೆ.

ಇದನ್ನೂ ಓದಿ: ಒಡಿಶಾ: ಜಿಂದಾಲ್ ಸ್ಟೀಲ್ ವರ್ಕ್ಸ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ- ಪೊಲೀಸರಿಂದ ಮಾರಣಾಂತಿಕ ಹಲ್ಲೆ

ಪ್ರಕರಣ ಹಿನ್ನೆಲೆ ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ನಡೆಯುತ್ತಿರುವ ಶೋಷಣೆ ವಿರುದ್ಧ ರೈತರು ದನಿ ಎತ್ತಿದ್ದಾರೆ. ಮುಖ್ಯಮಂತ್ರಿಗಳು ಘಟನೆ ಎಸಗಿದ ರೀಲರ್ ಮುನೀರ್ ಅಹಮದ್ ಲೈಸನ್ಸ್ ರದ್ದುಗೊಳಿಸಬೇಕು. ಆತನ ಬಂಧನ ಮಾಡಬೇಕು. ಜೊತೆಗೆ ಪ್ರಮುಖವಾಗಿ ತಕ್ಷಣ ದಕ್ಷ ಅಧಿಕಾರಿಗಳ ನೇಮಕವಾಗಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

ಇವುಗಳ ಜೊತೆಗೆ…

* ಈ ಕೂಡಲೆ ರಾಮನಗರ ಮಾರುಕಟ್ಟೆಗೆ ದಕ್ಷ ಅಧಿಕಾರಿಗಳ ನೇಮಕವಾಗಬೇಕು

* ಮಾರುಕಟ್ಟೆಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ ನಿಷೇಧಿಸಬೇಕು

* ರೀಲರ್‌ಗಳು ಅಧಿಕೃತ ಬ್ಯಾಡ್ಜ್ ಧರಿಸಿ ವ್ಯಾಪಾರದಲ್ಲಿ ಭಾಗಿಯಾಗಬೇಕು

* ಮಾರುಕಟ್ಟೆ ಆವರಣದಲ್ಲಿ ಸಮಗ್ರವಾಗಿ ಸಿಸಿಟಿವಿ ಅಳವಡಿಸಿ ಅದನ್ನು ಬಹೃತ್ ಪರದೆಯಲ್ಲಿ ಪ್ರದರ್ಶಿಸಬೇಕು

* ಮಾರುಕಟ್ಟೆಯಲ್ಲಿ ಜಾಗೃತ ದಳ ನೇಮಿಸಿ ರೈತರ ಮೇಲಿನ ಶೋಷಣೆ ತಡೆಯಬೇಕು.

* ದಿನದ ವಹಿವಾಟಿನ ಕೊನೆಗೆ ಎಲ್ಲಾ ರೈತರಿಗೆ ತೂಕಕ್ಕೆ ತಕ್ಕ ದರಕ್ಕೆ ತಕ್ಕ ಹಣ ಹೊಂದಾಣಿಕೆ ಆಗಿರುವುದನ್ನ ಖಚಿತಪಡಿಸಿಕ್ಕೊಳ್ಳುವ ಅಧಿಕಾರಿ ನೇಮಕವಾಗಬೇಕು.

* ಮಾರುಕಟ್ಟೆ ಆವರಣದಲ್ಲಿ ಕಿರು ಪೊಲೀಸ್ ಠಾಣೆ ಸ್ಥಾಪಿಸಬೇಕು ಎಂಬ ಪ್ರಮುಖ ಹಕ್ಕೋತ್ತಾಯಗಳನ್ನು ಸಲ್ಲಿಸಿದ್ದಾರೆ.

ಘಟನೆ ಸಂಬಂಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೂಡ ಟ್ವೀಟ್ ಮಾಡಿ ಖಂಡಿಸಿದ್ದರು. “ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ರೈತನ ಮೇಲೆ ರೀಲರ್‌ ಒಬ್ಬ ದುಂಡಾವರ್ತನೆ ನಡೆಸಿದ ಘಟನೆ ಖಂಡನೀಯ. ಹಗಲು ರಾತ್ರಿ ನಿದ್ದೆಗೆಟ್ಟು ಕಷ್ಟದಿಂದ ರೇಷ್ಮೆಗೂಡು ಬೆಳೆದು ತರುವ ರೈತರ ಮೇಲೆ ಈ ರೀತಿ ದೌರ್ಜನ್ಯ ಎಸಗುವುದು ಅಕ್ಷಮ್ಯ” ಎಂದಿದ್ದರು.

“ದೌರ್ಜನ್ಯ ಎಸಗಿದ ರೀಲರುಗಳ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ರಾಮನಗರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಗಿರೀಶ್‌ ಅವರಿಗೆ ತಿಳಿಸಿದ್ದೇನೆ. ರೇಷ್ಮೆಗೂಡು ಹರಾಜು ನಡೆಯುವ ಸಂದರ್ಭದಲ್ಲಿ ಹೆಚ್ಚುವರಿ ಭದ್ರತೆ ಒದಗಿಸುವಂತೆಯೂ ಸೂಚಿಸಿದ್ದೇನೆ. ಇಂಥ ಘಟನೆಗಳು ಮರುಕಳಿಸದಂತೆ ಬಿಗಿಕ್ರಮ ಕೈಗೊಳ್ಳುವಂತೆ ಹೇಳಿದ್ದೇನೆ. ಹರಾಜು ಸಂದರ್ಭದಲ್ಲಿ ರೇಷ್ಮೆ ಗೂಡನ್ನು ಬೇರ್ಪಡಿಸುವುದು, ಅಕ್ರಮವಾಗಿ ಗೂಡನ್ನು ತೆಗೆದುಕೊಳ್ಳುವುದು, ಕಳ್ಳತನ ಮಾಡುವುದು ರಾಮನಗರ ಮಾರುಕಟ್ಟೆಯಲ್ಲಿ ನಡೆಯುತ್ತಿರುವ ಬಗ್ಗೆ ನನಗೆ ಅನೇಕ ದೂರುಗಳು ಬಂದಿವೆ. ಇಂಥ ಕಾನೂನು ಬಾಹಿರ ಕೃತ್ಯಗಳನ್ನು ಸಹಿಸುವ ಪ್ರಶ್ನೆ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.


ಇದನ್ನೂ ಓದಿ: ಸಂಸ್ಕೃತ ವಿವಿಗೆ ದುಡ್ಡು ಸುರಿಯುವ ಬದಲು ಸರ್ಕಾರಿ ಶಾಲೆ ಉಳಿಸಿ: ಕನ್ನಡಿಗರ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...