Homeಕರ್ನಾಟಕರಾಮನಗರ: ರೇಷ್ಮೆ ಮಾರುಕಟ್ಟೆಯಲ್ಲಿ ಶೋಷಣೆ ಆರೋಪ - ಪತ್ರ ಅಭಿಯಾನ ಆರಂಭಿಸಿದ ರೈತರು

ರಾಮನಗರ: ರೇಷ್ಮೆ ಮಾರುಕಟ್ಟೆಯಲ್ಲಿ ಶೋಷಣೆ ಆರೋಪ – ಪತ್ರ ಅಭಿಯಾನ ಆರಂಭಿಸಿದ ರೈತರು

- Advertisement -
- Advertisement -

ಕಳೆದ 30 ವರ್ಷಗಳಿಂದ ರಾಮನಗರ ರೇಷ್ಮೆಗೂಡಿನ ಮಾರುಕಟ್ಟೆಯಲ್ಲಿ ರೀಲರ್‌ಗಳು ಹಾಗು ಗೂಡು ಕದಿಯುವ ಮಾಫಿಯಾದವರಿಂದ ರೈತರ ಮೇಲೆ ನಿರಂತರ ಶೋಷಣೆ ಆಗುತ್ತಿದೆ ಎಂದು ರೈತರು ಆರೋಪಿಸಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಪತ್ರ ಬರೆಯುವ ಮೂಲಕ ಪತ್ರ ಅಭಿಯಾನ ಆರಂಭಿಸಿದ್ದಾರೆ.

ರೈತರ ಮೇಲಿನ ಶೋಷಣೆ ತಪ್ಪಿಸಲು ಜರೂರು ಕ್ರಮ ವಹಿಸಬೇಕು ಎಂದು ಆಗ್ರಹಿಸಿ ಮಂಡ್ಯ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳ ಮುಂದೆ ಮುಖ್ಯಮಂತ್ರಿಗಳಿಗೆ ರಿಜಿಸ್ಟರ್‌ ಪೋಸ್ಟ್‌ನಲ್ಲಿ ಪತ್ರ ಬರೆಯುವ ಚಳವಳಿ ಆರಂಭವಾಗಿದೆ. ಮದ್ದೂರು ತಾಲೂಕಿನ ಹೋಬಳಿ ಮಟ್ಟದಲ್ಲೂ ರೈತರು ಪತ್ರ ಚಳವಳಿ ಆರಂಭಿಸಿದ್ದಾರೆ.

ಇಂದಿನಿಂದ ಪತ್ರ, ಇ-ಮೇಲ್, ಟ್ವಿಟರ್‌ ಮುಂದಾದ ಸಾಮಾಜಿಕ ಮಾಧ್ಯಮಗಳ ಮೂಲಕವೂ ಮುಖ್ಯಮಂತ್ರಿಗಳ ಮೇಲೆ ಒತ್ತಡ ತರಲಾಗುತ್ತದೆ ಎಂದು ರೈತಮುಖಂಡರಾದ ನ.ಲಿ.ಕೃಷ್ಣರವರು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

ರಾಮನಗರದ ರೇಷ್ಮೆಗೂಡು ಮಾರುಕಟ್ಟೆ ಬೃಹತ್ ವ್ಯವಹಾರ ಹೊಂದಿದ್ದು ರಾಜ್ಯದ ಎಲ್ಲಾ ಕಡೆಯಿಂದ ರೈತರು ರೇಷ್ಮೆ ಗೂಡು ಮಾರಾಟಕ್ಕಾಗಿ ರಾಮನಗರದ ಮಾರುಕಟ್ಟೆಗೆ ಬರುತ್ತಾರೆ. ಇಲ್ಲಿನ ರೀಲರ್‌ಗಳು ಮತ್ತು ಗೂಡು ಕದಿಯುವ ಮಾಫಿಯಾದವರು ಅಧಿಕಾರಿಗಳೊಂದಿಗೆ ಶಾಮಿಲಾಗಿ ಪ್ರತಿಕ್ಷಣ ಪ್ರತಿದಿನ ರೈತರನ್ನು ಶೋಷಣೆ ಮಾಡುತ್ತಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.

ಇದನ್ನೂ ಓದಿ: ಕಾವೇರಿಯ ಉಳಿವಿಗೆ ‘ಮೇಕೆದಾಟು ಅಣೆಕಟ್ಟು’ ಪ್ರಸ್ತಾಪ ಕೈಬಿಡಬೇಕು: ಮೇಧಾ ಪಾಟ್ಕರ್‌‌

ರೇಷ್ಮೆ ರೈತರು ಅಭಿಯಾನ ನಡೆಸಲು ಕಾರಣ:

ನಾನು ಗೌರಿ.ಕಾಂ ಜೊತೆಗೆ ಮಾತನಾಡಿರುವ ರೈತ ನ.ಲಿ ಕೃಷ್ಣ ಅಂದಿನ ಘಟನೆಯನ್ನು ತಿಳಿಸಿದ್ದು ಹೀಗೆ.. “ಜನವರಿ 12 ರಂದು ರೇಷ್ಮೆಗೂಡು ಮಾರಾಟಕ್ಕೆ ಬಂದಿದ್ದ ಹಾವೇರಿ ತಾಲೂಕು ಗುಬ್ಬಿ ಗ್ರಾಮದ ರೈತ ವಿರುಪಾಕ್ಷಪ್ಪ ಅವರ ಜಾಲರಿಯಿಂದ ಗೂಡು ಜಾಡಿಸುವ, ಗೂಡು ಬೇರ್ಪಡಿಸುವ ಮೂಲಕ ಅಕ್ರಮವಾಗಿ ಗೂಡು ಸಾಗಿಸುವ, ಗೂಡು ಕದಿಯುವ ಕೆಲಸಕ್ಕೆ ರೀಲರ್ ಮುನೀರ್ ಅಹಮದ್ ಮತ್ತು ಆತನ ಸಹಚರರು ಮುಂದಾಗಿದ್ದಾರೆ. ಹೀಗೆ ತೊಂದರೆ ಮಾಡಬೇಡಿ ಎಂದು ರೈತ ವಿರುಪಾಕ್ಷಪ್ಪ ಕೈ ಮುಗಿದು ಬೇಡಿಕೊಂಡರು ಕೇಳದೇ ಗೂಡು ಮಾಫಿಯಾ ಮಂದಿ ರೈತನ ಮೇಲೆ ಹಲ್ಲೆಗೆ ಮುಂದಾಗಿ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇಷ್ಟು ನಡೆಯುತ್ತಿದ್ದರೂ ಯಾವೊಬ್ಬ ಅಧಿಕಾರಿಯಾಗಲಿ, ಭದ್ರತಾ ಸಿಬ್ಬಂದಿಯಾಗಲಿ, ಅಲ್ಲೇ ಇದ್ದ ರೈತರಾಗಲಿ ವಿರುಪಾಕ್ಷಪ್ಪನವರ ರಕ್ಷಣೆಗೆ ಧಾವಿಸಿಲ್ಲ. ಇದು ಇಲ್ಲಿನ ಮಾರುಕಟ್ಟೆಯ ಗೂಡುಕದಿಯುವ ಮಾಫಿಯಾದ ಬಲವನ್ನು ತಿಳಿಸುತ್ತದೆ” ಎಂದಿದ್ದಾರೆ.

ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಮಾರುಕಟ್ಟೆ ಅಧಿಕಾರಿ ಈ ಕುರಿತು ಮರುದಿನ ಸಾಂಕೇತಿಕವಾಗಿ  ಪೊಲೀಸ್ ಠಾಣೆಗೆ ದೂರು ಸಲ್ಲಿಸಿ ತಮ್ಮ ಹುದ್ದೆಯ ರಕ್ಷಣೆಯ ನಾಟಕವಾಡಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.

ಇದು ಒಂದು ಘಟನೆಯಷ್ಟೆ, ಇಂತಹ ಜಾಲ ಕಳೆದ ಮೂವತ್ತು ವರ್ಷಗಳಿಂದಲೂ ಇಲ್ಲಿ ಬೆಳೆದು ನಿಂತಿದೆ. ಅಧಿಕ ಸಂಖ್ಯೆಯಲ್ಲಿ ರಾಜ್ಯದೆಲ್ಲೆಡೆಯಿಂದ ಬರುವ ರೈತರನ್ನು ವ್ಯವಸ್ಥಿತ ಸಂಚಿನ ಮೂಲಕ ಶೋಷಣೆ ಮಾಡುತ್ತಿದೆ. ಇಲ್ಲಿಗೆ ಗೂಡು ತರುವ ಬಹುತೇಕ ರೈತರು ಈ ಮಾಫಿಯಾದಿಂದ ಗೂಡು ರಕ್ಷಿಸಿ ಕೊಳ್ಳಲು ತಮ್ಮ ಗೂಡಿನ ಜಾಲರಿ ಬಿಟ್ಟು ಕದಲದೆ ದಿನವಿಡಿ ಕಾವಲು ಕಾಯಬೇಕಾದ ಪರಿಸ್ಥಿತಿ ಇದೆ. ಹರಾಜಿಗೆ ಮುನ್ನ ಗೂಡು ಪರೀಕ್ಷಿಸುವ ನೆಪದಲ್ಲಿ ಗೂಡು ಚೆಲ್ಲುವುದು, ಹರಾಜಿನ ನಂತರ ಅಕ್ರಮವಾಗಿ ಗುಂಪುಗೂಡಿ ನಿಯಮಬಾಹಿರವಾಗಿ ಗೂಡು ಬೇರ್ಪಡಿಸುವುದು, ಅಕ್ರಮವಾಗಿ ಗೂಡು ಸಾಗಿಸುವುದು, ಜಾಲರಿಯ ಕೆಳಕ್ಕೆ ಗೂಡು ಚೆಲ್ಲಿ ಗೂಡು ಕದಿಯುವ ಕೆಲಸ ಮಾಡುತ್ತಾರೆ. ದೇವರ ಹೆಸರಿನಲ್ಲಿ, ಇತರೆ ಕಾರಣ ಹೇಳಿ ಐದಾರು ಕೆ.ಜಿ.ಗೂಡು ಎತ್ತಿಕೊಳ್ಳುತ್ತಾರೆ. ಪ್ರಶ್ನಿಸುವ ರೈತನ ಮೇಲೆ ಮಾಫಿಯಾ ಮಂದಿ ಒಟ್ಟಾಗಿ ಸೇರಿ ಹಲ್ಲೆ ನಡೆಸುತ್ತಾರೆ ಎಂದು ನ.ಲಿ.ಕೃಷ್ಣ ತಿಳಿಸಿದ್ದಾರೆ.

ಇದನ್ನೂ ಓದಿ: ಒಡಿಶಾ: ಜಿಂದಾಲ್ ಸ್ಟೀಲ್ ವರ್ಕ್ಸ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ- ಪೊಲೀಸರಿಂದ ಮಾರಣಾಂತಿಕ ಹಲ್ಲೆ

ಪ್ರಕರಣ ಹಿನ್ನೆಲೆ ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ನಡೆಯುತ್ತಿರುವ ಶೋಷಣೆ ವಿರುದ್ಧ ರೈತರು ದನಿ ಎತ್ತಿದ್ದಾರೆ. ಮುಖ್ಯಮಂತ್ರಿಗಳು ಘಟನೆ ಎಸಗಿದ ರೀಲರ್ ಮುನೀರ್ ಅಹಮದ್ ಲೈಸನ್ಸ್ ರದ್ದುಗೊಳಿಸಬೇಕು. ಆತನ ಬಂಧನ ಮಾಡಬೇಕು. ಜೊತೆಗೆ ಪ್ರಮುಖವಾಗಿ ತಕ್ಷಣ ದಕ್ಷ ಅಧಿಕಾರಿಗಳ ನೇಮಕವಾಗಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

ಇವುಗಳ ಜೊತೆಗೆ…

* ಈ ಕೂಡಲೆ ರಾಮನಗರ ಮಾರುಕಟ್ಟೆಗೆ ದಕ್ಷ ಅಧಿಕಾರಿಗಳ ನೇಮಕವಾಗಬೇಕು

* ಮಾರುಕಟ್ಟೆಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ ನಿಷೇಧಿಸಬೇಕು

* ರೀಲರ್‌ಗಳು ಅಧಿಕೃತ ಬ್ಯಾಡ್ಜ್ ಧರಿಸಿ ವ್ಯಾಪಾರದಲ್ಲಿ ಭಾಗಿಯಾಗಬೇಕು

* ಮಾರುಕಟ್ಟೆ ಆವರಣದಲ್ಲಿ ಸಮಗ್ರವಾಗಿ ಸಿಸಿಟಿವಿ ಅಳವಡಿಸಿ ಅದನ್ನು ಬಹೃತ್ ಪರದೆಯಲ್ಲಿ ಪ್ರದರ್ಶಿಸಬೇಕು

* ಮಾರುಕಟ್ಟೆಯಲ್ಲಿ ಜಾಗೃತ ದಳ ನೇಮಿಸಿ ರೈತರ ಮೇಲಿನ ಶೋಷಣೆ ತಡೆಯಬೇಕು.

* ದಿನದ ವಹಿವಾಟಿನ ಕೊನೆಗೆ ಎಲ್ಲಾ ರೈತರಿಗೆ ತೂಕಕ್ಕೆ ತಕ್ಕ ದರಕ್ಕೆ ತಕ್ಕ ಹಣ ಹೊಂದಾಣಿಕೆ ಆಗಿರುವುದನ್ನ ಖಚಿತಪಡಿಸಿಕ್ಕೊಳ್ಳುವ ಅಧಿಕಾರಿ ನೇಮಕವಾಗಬೇಕು.

* ಮಾರುಕಟ್ಟೆ ಆವರಣದಲ್ಲಿ ಕಿರು ಪೊಲೀಸ್ ಠಾಣೆ ಸ್ಥಾಪಿಸಬೇಕು ಎಂಬ ಪ್ರಮುಖ ಹಕ್ಕೋತ್ತಾಯಗಳನ್ನು ಸಲ್ಲಿಸಿದ್ದಾರೆ.

ಘಟನೆ ಸಂಬಂಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೂಡ ಟ್ವೀಟ್ ಮಾಡಿ ಖಂಡಿಸಿದ್ದರು. “ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ರೈತನ ಮೇಲೆ ರೀಲರ್‌ ಒಬ್ಬ ದುಂಡಾವರ್ತನೆ ನಡೆಸಿದ ಘಟನೆ ಖಂಡನೀಯ. ಹಗಲು ರಾತ್ರಿ ನಿದ್ದೆಗೆಟ್ಟು ಕಷ್ಟದಿಂದ ರೇಷ್ಮೆಗೂಡು ಬೆಳೆದು ತರುವ ರೈತರ ಮೇಲೆ ಈ ರೀತಿ ದೌರ್ಜನ್ಯ ಎಸಗುವುದು ಅಕ್ಷಮ್ಯ” ಎಂದಿದ್ದರು.

“ದೌರ್ಜನ್ಯ ಎಸಗಿದ ರೀಲರುಗಳ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ರಾಮನಗರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಗಿರೀಶ್‌ ಅವರಿಗೆ ತಿಳಿಸಿದ್ದೇನೆ. ರೇಷ್ಮೆಗೂಡು ಹರಾಜು ನಡೆಯುವ ಸಂದರ್ಭದಲ್ಲಿ ಹೆಚ್ಚುವರಿ ಭದ್ರತೆ ಒದಗಿಸುವಂತೆಯೂ ಸೂಚಿಸಿದ್ದೇನೆ. ಇಂಥ ಘಟನೆಗಳು ಮರುಕಳಿಸದಂತೆ ಬಿಗಿಕ್ರಮ ಕೈಗೊಳ್ಳುವಂತೆ ಹೇಳಿದ್ದೇನೆ. ಹರಾಜು ಸಂದರ್ಭದಲ್ಲಿ ರೇಷ್ಮೆ ಗೂಡನ್ನು ಬೇರ್ಪಡಿಸುವುದು, ಅಕ್ರಮವಾಗಿ ಗೂಡನ್ನು ತೆಗೆದುಕೊಳ್ಳುವುದು, ಕಳ್ಳತನ ಮಾಡುವುದು ರಾಮನಗರ ಮಾರುಕಟ್ಟೆಯಲ್ಲಿ ನಡೆಯುತ್ತಿರುವ ಬಗ್ಗೆ ನನಗೆ ಅನೇಕ ದೂರುಗಳು ಬಂದಿವೆ. ಇಂಥ ಕಾನೂನು ಬಾಹಿರ ಕೃತ್ಯಗಳನ್ನು ಸಹಿಸುವ ಪ್ರಶ್ನೆ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.


ಇದನ್ನೂ ಓದಿ: ಸಂಸ್ಕೃತ ವಿವಿಗೆ ದುಡ್ಡು ಸುರಿಯುವ ಬದಲು ಸರ್ಕಾರಿ ಶಾಲೆ ಉಳಿಸಿ: ಕನ್ನಡಿಗರ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...