Homeಕರ್ನಾಟಕ"ಕರ್ನಾಟಕ ರಾಷ್ಟ್ರ ಸಮಿತಿ" ನೂತನ ಪ್ರಾದೇಶಿಕ ಪಕ್ಷ ಅಸ್ತಿತ್ವಕ್ಕೆ... ಎಚ್.ಎಸ್ ದೊರೆಸ್ವಾಮಿಯವರಿಂದ ಉದ್ಘಾಟನೆ

“ಕರ್ನಾಟಕ ರಾಷ್ಟ್ರ ಸಮಿತಿ” ನೂತನ ಪ್ರಾದೇಶಿಕ ಪಕ್ಷ ಅಸ್ತಿತ್ವಕ್ಕೆ… ಎಚ್.ಎಸ್ ದೊರೆಸ್ವಾಮಿಯವರಿಂದ ಉದ್ಘಾಟನೆ

- Advertisement -
- Advertisement -

ಜನಪರ ಹೋರಾಟಗಾರ ರವಿ ಕೃಷ್ಣ ರೆಡ್ಡಿಯವರ ನೇತೃತ್ವದಲ್ಲಿ “ಕರ್ನಾಟಕ ರಾಷ್ಟ್ರ ಸಮಿತಿ” ಎಂಬ ನೂತನ ರಾಜಕೀಯ ಪಕ್ಷವನ್ನು ಅಸ್ತಿತ್ವಕ್ಕೆ ತರಲಾಗಿದೆ. ಕೆ.ಆರ್.ಎಸ್ ಎಂದು ಕರೆಯಲ್ಪಡುವ ಈ ಪಕ್ಷವು ಪ್ರಾದೇಶಿಕ-ಪ್ರಾಮಾಣಿಕ ಎಂಬ ಘೋಷವಾಕ್ಯಗಳನ್ನು  ಹೊಂದಿದ್ದು ಮುಂಬರುವ ಚುನಾವಣೆಗಳಲ್ಲಿ ಸಕ್ರಿಯವಾಗಿ ಸ್ಪರ್ಧಿಸಲಿದೆ.

ಇಂದು ಬೆಂಗಳೂರಿನಲ್ಲಿ ಪಕ್ಷದ ಉದ್ಘಾಟನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್ ದೊರೆಸ್ವಾಮಿಯವರು “ಇಂದು ಬಡತನ ಹೆಚ್ಚಾಗುತ್ತಿದೆ. ನಿರುದ್ಯೋಗ ಮಿತಿ ಮೀರುತ್ತಿದೆ. ದೇಶದ ಸಂಪತ್ತನ್ನೆಲ್ಲ ಕೇವಲ ಶೇ.10 ರಷ್ಟು ಜನ ನುಂಗಿದ್ದಾರೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಬಹಳಷ್ಟು ಜನ ಭೂಮಿ ವಸತಿಯಿಲ್ಲದೇ ಬೀದಿಪಾಲಾಗಿದ್ದಾರೆ. ಶಿಕ್ಷಣ, ಆರೋಗ್ಯ ನೀಡಬೇಕಾದ ಸರ್ಕಾರಗಳು ಕಣ್ಣು ಮುಚ್ಚಿ ಕುಳಿತಿವೆ ಹಾಗಾಗಿ ಪರ್ಯಾಯ ಪಕ್ಷಗಳು ಅಗತ್ಯವಾಗಿವೆ” ಎಂದರು.

ನಾವು ಸರ್ಕಾರದ ಬಳಿ ಭಿಕ್ಷೆ ಕೇಳುತ್ತಿಲ್ಲ. ಬಡವರ ಹಕ್ಕು ಕೇಳುತ್ತಿದ್ದೇವೆ. ಸ್ವಾತಂತ್ರ್ಯ ಬಂದು 70 ವರ್ಷಗಳಾದರೂ ಜನರನ್ನು ಹೀಗೆ ಇಟ್ಟಿರುವುದಕ್ಕೆ ಈ ಸರ್ಕಾರಗಳಿಗೆ ನಾಚಿಕೆಯಾಗುವುದಿಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದರು. ಇಂದು ಸರ್ಕಾರಗಳಿಗೆ ಕ್ರಿಮಿನಲ್ ಗಳು ಆಯ್ಕೆಯಾಗಿ ಹೋಗುತ್ತಿದ್ದಾರೆ. ಅವರ ಕೆಲಸ ಏನು? ಕೊಲೆ ಮಾಡುವುದಾ? ಎಂದು ಪ್ರಶ್ನಿಸಿದರು.

ನಮ್ಮ ಭಾರತದ ಸಂವಿಧಾನ ಏನು ಹೇಳುತ್ತದೆ? ನಾವು ಸ್ವಾತಂತ್ರ್ಯವನ್ನು ಉಳಿಸಿಕೊಳ್ಳುತ್ತೇವೆಯೇ? ನಮಗೆ ಭವಿಷ್ಯವಿದೆಯೇ? ಗ್ಯಾಟ್ ಒಪ್ಪಂದ ಆಗಿದೆ. ಪಿ.ವಿ ನರಸಿಂಹರಾವ್ ಹೋಗಿ ಸಹಿ ಮಾಡಿದ ಪರಿಣಾಮವನ್ನು ನಾವಿಂದು ಅನುಭವಿಸುತ್ತಿದ್ದೇವೆ. ಆಳುವವರು, ಬಂಡವಾಳಿಗರು ಸೇರಿ ದೇಶವನ್ನು ಮಾರುತ್ತಿದ್ದಾರೆ. ನೆಲ ಜಲವನ್ನು ದೋಚುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇಂದು ಹಲವಾರು ಪಕ್ಷಗಳಿವೆ. ಅವುಗಳಲ್ಲಿ ಒಬ್ಬ ನಾಯಕನಾಗುತ್ತಾನೆ. ಉಳಿದವರು ಆಗುವುದಿಲ್ಲ. ನಾಯಕನಾದವನು ತನ್ನ ಸೀಟು ಭದ್ರಪಡಿಸಿಕೊಳ್ಳಲು ಮಾತ್ರ ಕೆಲಸ ಮಾಡುತ್ತಾನೆ. ನಮ್ಮಲ್ಲಿ ಹಾಗಾಗಬಾರದು. ನಾವು ಜನರಿಗಾಗಿ ಕೆಲಸ ಮಾಡುಬೇಕು, ಆಂತರೀಕ ಪ್ರಜಾಪ್ರಭುತ್ವ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ರಾಜಕೀಯ ದಿವಾಳಿಯೆದ್ದಿದೆ. ನಾಯಕತ್ವದ ಅಭಾವವಿದೆ. ಇದಕ್ಕೆ ಪ್ರತಿಯಾಗಿ ಅವರು ಮಾಡಿದ ತಪ್ಪುಗಳನ್ನು ಗುರುತುಮಾಡಿ ಒಂದು ಆದರ್ಶಯುತ ರಾಜಕಾರಣವನ್ನು ನಾವು ಮಾಡಬೇಕಿದೆ. ನಾನು ಸವೋದಯವನ್ನು ಬಯಸುವವನು. ನಾನು ಬೇರೆ ಯಾವ ಪಕ್ಷಗಳ ಜೊತೆಗೂ ಇಲ್ಲ. ನೀವೆಲ್ಲರೂ ಒಂದು ಹೊಸ ದಾರಿ ತೋರಿಸಿದರೆ ಒಳ್ಳೆಯದು ಎಂದರು.

ನಿಮ್ಮ ಪಕ್ಷ ಚುನಾವಣೆ ಮತ್ತು ಹೋರಾಟ ಎರಡನ್ನು ಮಾಡಬೇಕು. ಕೇವಲ ಚುನಾವಣೆಗಳಿಗೆ ಸೀಮಿತರಾಗಬಾರದು. ದೇಶದ ಸಮಸ್ಯೆಗಳನ್ನು ಬಗೆಹರಿಸಲು ಹೋರಾಡಬೇಕು. ರಾಜ್ಯದಲ್ಲಿ ಭೂಮಿಗಾಗಿ ಚಳವಳಿ ನಡೆಯುತ್ತಿದೆ. ನೀವು ಕೈ ಜೋಡಿಸಬೇಕು. ಸರ್ಕಾರದ ಮೇಲೆ ಒತ್ತಡ ಹಾಕುವ ಕೆಲಸ ಮಾಡಬೇಕು, ಪ್ರಾಮಾಣಿಕವಾಗಿ ಕೆಲಸಮಾಡಿ ನಿಮಗೆ ಶುಭವಾಗಲಿ ಎಂದು ದೊರೆಸ್ವಾಮಿ ತಿಳಿಸಿದರು.

ಭ್ರಷ್ಟಚಾರ ವಿರೋಧಿ ಹೋರಾಟಗಾರರಾದ ಎಸ್.ಆರ್ ಹೀರೇಮಠರವರು ಮಾನತಾಡಿ ನಮ್ಮ ಜೀವನದುದ್ದಕ್ಕೂ ಇಂತಹ ಜನಪರ ಪ್ರಯೋಗಗಳಿಗೆ ಬೆಂಬಲವಿದೆ ಎಂದರು.

ಯಾವ ಕಾಲಘಟ್ಟದಲ್ಲಿ ಜೀವಿಸುತ್ತಿದ್ದೇವೆ ಎಂದರೆ ಕೆಲವೇ ದಿನಗಳ ಹಿಂದೆ ಇಡೀ ದೇಶವೇ ನೋಡುವಂತೆ ಕರ್ನಾಟಕದ ಮೂರು ಪಕ್ಷಗಳು ಮಾಡಿದ ರಾಜಕಾರಣ ನೋಡಿ ನಾವೆಲ್ಲರು ತಲೆತಗ್ಗಸಬೇಕು. 17 ಶಾಸಕರ ಜೊತೆ, ಮೂರು ಪಕ್ಷದ ನಾಯಕರು ವರ್ತಿಸಿದ ರೀತಿ, ರಾಜ್ಯಪಾಲರು ನಡೆದುಕೊಂಡ ವೈಖರಿ ಇಡೀ ರಾಜ್ಯಕ್ಕಾದ ಅವಮಾನವಾಗಿದೆ. ಪಾರ್ಟಿ ವಿಥ್ ಡಿಫರೆನ್ಸ್ ಎಂದು ಕರೆದುಕೊಳ್ಳುವ ಬಿಜೆಪಿಯವರು ಅತ್ಯಂತ ನಾಚಿಕೆಗೇಡಿನ ಆಪರೇಷನ್ ಕಮಲ ಮಾಡಿದ್ದರೆ ಎಂದರು.

ನನ್ನ ಜೀವಿತಾವಧಿಯಲ್ಲಿ ಎಂದೂ ಕೂಡ ರಾಜಕಾರಣ ಇಷ್ಟು ಕೀಳು ಮಟ್ಟಕ್ಕೆ ಇಳಿದಿರದಿಲ್ಲ. ಅಭಿವೃದ್ದಿ ಅನ್ನುವ ಹೆಸರಿನಲ್ಲಿ ಮಾಡಬಾರದ ಕೆಲಸ ಮಾಡಿ ಸೃಷ್ಟಿ ಮಾತೆಯ ಮೇಲೆ ಪ್ರಹಾರ ಮಾಡಿದ್ದೇವೆ. ಆಸೆ, ಅತಿ ಆಸೆ, ದುರಾಶೆಯಿಂದ ಪ್ರವಾಹವಾಗಿದೆ, ಪರಿಸರ ಸಮತೋಲನ ಕೆಡಿಸಿದ್ದೇವೆ. ಅದರ ಪರಿಣಾಮವನ್ನು ಈಗ ಅನಭವಿಸಬೇಕಾಗಿದೆ ಎಂದರು.

ಗಾಂಧೀಜಿಯವರು ಹೇಳಿದ ಹಾಗೆ ನಮಗೆ ಗುರಿ ಅಷ್ಟೇ ಮಹತ್ವವಲ್ಲ ದಾರಿಯೂ ಕೂಡ ಮುಖ್ಯ. ಸ್ವಾತಂತ್ರ್ಯ ಮತ್ತು ಸಮಾನತೆ ಎರಡು ಬೇಕು. ಇದಕ್ಕಾಗಿ ಈ ಪಕ್ಷ ಶ್ರಮಿಸಲಿ ಎಂದರು.

“ಕರ್ನಾಟಕ ರಾಷ್ಟ್ರ ಸಮಿತಿ”ಯ ಅಧ್ಯಕ್ಷರಾದ ರವಿಕೃಷ್ಙರೆಡ್ಡಿಯವರು ಸ್ವಚ್ಛ, ಪ್ರಾಮಾಣಿಕ, ಜನಪರ ರಾಜಕಾರಣಕ್ಕಾಗಿ ಈ ಪಕ್ಷವನ್ನು ಸ್ಥಾಪಿಸಿದ್ದೇವೆ. ರಾಜ್ಯದಲ್ಲಿ ಜೆಸಿಬಿ ಪಕ್ಷಗಳ ದುರಾಡಳಿತದ ವಿರುದ್ಧ ಹೋರಾಡಲಿದ್ದೇವೆ, ಹೀಗಲ್ಲದಿದ್ದರೆ ಇನ್ಯಾವಾಗ? ನಾವಲ್ಲದಿದ್ದರೆ ಇನ್ಯಾರು? ಎಂದರು.

ಸುಪ್ರೀಂ ಕೋರ್ಟ್ ನ ನ್ಯಾಯವಾದಿಗಳಾದ ಶ್ರೀ ಕೆ.ವಿ ಧನಂಜಯರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. “ಕರ್ನಾಟಕ ರಾಷ್ಟ್ರ ಸಮಿತಿ”ಯ ಉಪಾಧ್ಯಕ್ಷರಾದ ಎಚ್.ಎಸ್ ಲಿಂಗೇಗೌಡ, ಪ್ರಧಾನ ಕಾರ್ಯದರ್ಶಿಗಳಾದ ದೀಪಕ್ ಸಿ.ಎನ್, ಜಂಟಿ ಕಾರ್ಯದರ್ಶಿಗಳಾದ ರಘುಪತಿ ಭಟ್, ಮಲ್ಲಿಕಾರ್ಜುನ್ ಬಿ.ಎಸ್, ಖಜಾಂಚಿ ಅರವಿಂದ್ ಕೆ.ಬಿ ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯ ಸರ್ಕಾರ ‘ವಿಬಿ–ಜಿ ರಾಮ್ ಜಿ ಕಾಯ್ದೆ’ ತಿರಸ್ಕರಿಸಬೇಕು : ಮನರೇಗಾ ರಕ್ಷಣಾ ಒಕ್ಕೂಟದ ಮಹಾ ಪಂಚಾಯತ್‌ ಆಗ್ರಹ

ನರೇಗಾ ಯೋಜನೆ ಮುಂದುವರಿಸಲು ರಾಷ್ಟ್ರಪತಿ ಆದೇಶ ಹೊರಡಿಸಬೇಕು. ವಿಬಿ–ಜಿ ರಾಮ್‌ ಜಿ ಕಾಯ್ದೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸಿ 'ಮನರೇಗಾ ರಕ್ಷಣಾ ಒಕ್ಕೂಟ'ದ ಮಹಾ ಪಂಚಾಯತ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸೋಮವಾರ (ಫೆ.2)...

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...