Homeಕರ್ನಾಟಕ"ಕರ್ನಾಟಕ ರಾಷ್ಟ್ರ ಸಮಿತಿ" ನೂತನ ಪ್ರಾದೇಶಿಕ ಪಕ್ಷ ಅಸ್ತಿತ್ವಕ್ಕೆ... ಎಚ್.ಎಸ್ ದೊರೆಸ್ವಾಮಿಯವರಿಂದ ಉದ್ಘಾಟನೆ

“ಕರ್ನಾಟಕ ರಾಷ್ಟ್ರ ಸಮಿತಿ” ನೂತನ ಪ್ರಾದೇಶಿಕ ಪಕ್ಷ ಅಸ್ತಿತ್ವಕ್ಕೆ… ಎಚ್.ಎಸ್ ದೊರೆಸ್ವಾಮಿಯವರಿಂದ ಉದ್ಘಾಟನೆ

- Advertisement -
- Advertisement -

ಜನಪರ ಹೋರಾಟಗಾರ ರವಿ ಕೃಷ್ಣ ರೆಡ್ಡಿಯವರ ನೇತೃತ್ವದಲ್ಲಿ “ಕರ್ನಾಟಕ ರಾಷ್ಟ್ರ ಸಮಿತಿ” ಎಂಬ ನೂತನ ರಾಜಕೀಯ ಪಕ್ಷವನ್ನು ಅಸ್ತಿತ್ವಕ್ಕೆ ತರಲಾಗಿದೆ. ಕೆ.ಆರ್.ಎಸ್ ಎಂದು ಕರೆಯಲ್ಪಡುವ ಈ ಪಕ್ಷವು ಪ್ರಾದೇಶಿಕ-ಪ್ರಾಮಾಣಿಕ ಎಂಬ ಘೋಷವಾಕ್ಯಗಳನ್ನು  ಹೊಂದಿದ್ದು ಮುಂಬರುವ ಚುನಾವಣೆಗಳಲ್ಲಿ ಸಕ್ರಿಯವಾಗಿ ಸ್ಪರ್ಧಿಸಲಿದೆ.

ಇಂದು ಬೆಂಗಳೂರಿನಲ್ಲಿ ಪಕ್ಷದ ಉದ್ಘಾಟನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್ ದೊರೆಸ್ವಾಮಿಯವರು “ಇಂದು ಬಡತನ ಹೆಚ್ಚಾಗುತ್ತಿದೆ. ನಿರುದ್ಯೋಗ ಮಿತಿ ಮೀರುತ್ತಿದೆ. ದೇಶದ ಸಂಪತ್ತನ್ನೆಲ್ಲ ಕೇವಲ ಶೇ.10 ರಷ್ಟು ಜನ ನುಂಗಿದ್ದಾರೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಬಹಳಷ್ಟು ಜನ ಭೂಮಿ ವಸತಿಯಿಲ್ಲದೇ ಬೀದಿಪಾಲಾಗಿದ್ದಾರೆ. ಶಿಕ್ಷಣ, ಆರೋಗ್ಯ ನೀಡಬೇಕಾದ ಸರ್ಕಾರಗಳು ಕಣ್ಣು ಮುಚ್ಚಿ ಕುಳಿತಿವೆ ಹಾಗಾಗಿ ಪರ್ಯಾಯ ಪಕ್ಷಗಳು ಅಗತ್ಯವಾಗಿವೆ” ಎಂದರು.

ನಾವು ಸರ್ಕಾರದ ಬಳಿ ಭಿಕ್ಷೆ ಕೇಳುತ್ತಿಲ್ಲ. ಬಡವರ ಹಕ್ಕು ಕೇಳುತ್ತಿದ್ದೇವೆ. ಸ್ವಾತಂತ್ರ್ಯ ಬಂದು 70 ವರ್ಷಗಳಾದರೂ ಜನರನ್ನು ಹೀಗೆ ಇಟ್ಟಿರುವುದಕ್ಕೆ ಈ ಸರ್ಕಾರಗಳಿಗೆ ನಾಚಿಕೆಯಾಗುವುದಿಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದರು. ಇಂದು ಸರ್ಕಾರಗಳಿಗೆ ಕ್ರಿಮಿನಲ್ ಗಳು ಆಯ್ಕೆಯಾಗಿ ಹೋಗುತ್ತಿದ್ದಾರೆ. ಅವರ ಕೆಲಸ ಏನು? ಕೊಲೆ ಮಾಡುವುದಾ? ಎಂದು ಪ್ರಶ್ನಿಸಿದರು.

ನಮ್ಮ ಭಾರತದ ಸಂವಿಧಾನ ಏನು ಹೇಳುತ್ತದೆ? ನಾವು ಸ್ವಾತಂತ್ರ್ಯವನ್ನು ಉಳಿಸಿಕೊಳ್ಳುತ್ತೇವೆಯೇ? ನಮಗೆ ಭವಿಷ್ಯವಿದೆಯೇ? ಗ್ಯಾಟ್ ಒಪ್ಪಂದ ಆಗಿದೆ. ಪಿ.ವಿ ನರಸಿಂಹರಾವ್ ಹೋಗಿ ಸಹಿ ಮಾಡಿದ ಪರಿಣಾಮವನ್ನು ನಾವಿಂದು ಅನುಭವಿಸುತ್ತಿದ್ದೇವೆ. ಆಳುವವರು, ಬಂಡವಾಳಿಗರು ಸೇರಿ ದೇಶವನ್ನು ಮಾರುತ್ತಿದ್ದಾರೆ. ನೆಲ ಜಲವನ್ನು ದೋಚುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇಂದು ಹಲವಾರು ಪಕ್ಷಗಳಿವೆ. ಅವುಗಳಲ್ಲಿ ಒಬ್ಬ ನಾಯಕನಾಗುತ್ತಾನೆ. ಉಳಿದವರು ಆಗುವುದಿಲ್ಲ. ನಾಯಕನಾದವನು ತನ್ನ ಸೀಟು ಭದ್ರಪಡಿಸಿಕೊಳ್ಳಲು ಮಾತ್ರ ಕೆಲಸ ಮಾಡುತ್ತಾನೆ. ನಮ್ಮಲ್ಲಿ ಹಾಗಾಗಬಾರದು. ನಾವು ಜನರಿಗಾಗಿ ಕೆಲಸ ಮಾಡುಬೇಕು, ಆಂತರೀಕ ಪ್ರಜಾಪ್ರಭುತ್ವ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ರಾಜಕೀಯ ದಿವಾಳಿಯೆದ್ದಿದೆ. ನಾಯಕತ್ವದ ಅಭಾವವಿದೆ. ಇದಕ್ಕೆ ಪ್ರತಿಯಾಗಿ ಅವರು ಮಾಡಿದ ತಪ್ಪುಗಳನ್ನು ಗುರುತುಮಾಡಿ ಒಂದು ಆದರ್ಶಯುತ ರಾಜಕಾರಣವನ್ನು ನಾವು ಮಾಡಬೇಕಿದೆ. ನಾನು ಸವೋದಯವನ್ನು ಬಯಸುವವನು. ನಾನು ಬೇರೆ ಯಾವ ಪಕ್ಷಗಳ ಜೊತೆಗೂ ಇಲ್ಲ. ನೀವೆಲ್ಲರೂ ಒಂದು ಹೊಸ ದಾರಿ ತೋರಿಸಿದರೆ ಒಳ್ಳೆಯದು ಎಂದರು.

ನಿಮ್ಮ ಪಕ್ಷ ಚುನಾವಣೆ ಮತ್ತು ಹೋರಾಟ ಎರಡನ್ನು ಮಾಡಬೇಕು. ಕೇವಲ ಚುನಾವಣೆಗಳಿಗೆ ಸೀಮಿತರಾಗಬಾರದು. ದೇಶದ ಸಮಸ್ಯೆಗಳನ್ನು ಬಗೆಹರಿಸಲು ಹೋರಾಡಬೇಕು. ರಾಜ್ಯದಲ್ಲಿ ಭೂಮಿಗಾಗಿ ಚಳವಳಿ ನಡೆಯುತ್ತಿದೆ. ನೀವು ಕೈ ಜೋಡಿಸಬೇಕು. ಸರ್ಕಾರದ ಮೇಲೆ ಒತ್ತಡ ಹಾಕುವ ಕೆಲಸ ಮಾಡಬೇಕು, ಪ್ರಾಮಾಣಿಕವಾಗಿ ಕೆಲಸಮಾಡಿ ನಿಮಗೆ ಶುಭವಾಗಲಿ ಎಂದು ದೊರೆಸ್ವಾಮಿ ತಿಳಿಸಿದರು.

ಭ್ರಷ್ಟಚಾರ ವಿರೋಧಿ ಹೋರಾಟಗಾರರಾದ ಎಸ್.ಆರ್ ಹೀರೇಮಠರವರು ಮಾನತಾಡಿ ನಮ್ಮ ಜೀವನದುದ್ದಕ್ಕೂ ಇಂತಹ ಜನಪರ ಪ್ರಯೋಗಗಳಿಗೆ ಬೆಂಬಲವಿದೆ ಎಂದರು.

ಯಾವ ಕಾಲಘಟ್ಟದಲ್ಲಿ ಜೀವಿಸುತ್ತಿದ್ದೇವೆ ಎಂದರೆ ಕೆಲವೇ ದಿನಗಳ ಹಿಂದೆ ಇಡೀ ದೇಶವೇ ನೋಡುವಂತೆ ಕರ್ನಾಟಕದ ಮೂರು ಪಕ್ಷಗಳು ಮಾಡಿದ ರಾಜಕಾರಣ ನೋಡಿ ನಾವೆಲ್ಲರು ತಲೆತಗ್ಗಸಬೇಕು. 17 ಶಾಸಕರ ಜೊತೆ, ಮೂರು ಪಕ್ಷದ ನಾಯಕರು ವರ್ತಿಸಿದ ರೀತಿ, ರಾಜ್ಯಪಾಲರು ನಡೆದುಕೊಂಡ ವೈಖರಿ ಇಡೀ ರಾಜ್ಯಕ್ಕಾದ ಅವಮಾನವಾಗಿದೆ. ಪಾರ್ಟಿ ವಿಥ್ ಡಿಫರೆನ್ಸ್ ಎಂದು ಕರೆದುಕೊಳ್ಳುವ ಬಿಜೆಪಿಯವರು ಅತ್ಯಂತ ನಾಚಿಕೆಗೇಡಿನ ಆಪರೇಷನ್ ಕಮಲ ಮಾಡಿದ್ದರೆ ಎಂದರು.

ನನ್ನ ಜೀವಿತಾವಧಿಯಲ್ಲಿ ಎಂದೂ ಕೂಡ ರಾಜಕಾರಣ ಇಷ್ಟು ಕೀಳು ಮಟ್ಟಕ್ಕೆ ಇಳಿದಿರದಿಲ್ಲ. ಅಭಿವೃದ್ದಿ ಅನ್ನುವ ಹೆಸರಿನಲ್ಲಿ ಮಾಡಬಾರದ ಕೆಲಸ ಮಾಡಿ ಸೃಷ್ಟಿ ಮಾತೆಯ ಮೇಲೆ ಪ್ರಹಾರ ಮಾಡಿದ್ದೇವೆ. ಆಸೆ, ಅತಿ ಆಸೆ, ದುರಾಶೆಯಿಂದ ಪ್ರವಾಹವಾಗಿದೆ, ಪರಿಸರ ಸಮತೋಲನ ಕೆಡಿಸಿದ್ದೇವೆ. ಅದರ ಪರಿಣಾಮವನ್ನು ಈಗ ಅನಭವಿಸಬೇಕಾಗಿದೆ ಎಂದರು.

ಗಾಂಧೀಜಿಯವರು ಹೇಳಿದ ಹಾಗೆ ನಮಗೆ ಗುರಿ ಅಷ್ಟೇ ಮಹತ್ವವಲ್ಲ ದಾರಿಯೂ ಕೂಡ ಮುಖ್ಯ. ಸ್ವಾತಂತ್ರ್ಯ ಮತ್ತು ಸಮಾನತೆ ಎರಡು ಬೇಕು. ಇದಕ್ಕಾಗಿ ಈ ಪಕ್ಷ ಶ್ರಮಿಸಲಿ ಎಂದರು.

“ಕರ್ನಾಟಕ ರಾಷ್ಟ್ರ ಸಮಿತಿ”ಯ ಅಧ್ಯಕ್ಷರಾದ ರವಿಕೃಷ್ಙರೆಡ್ಡಿಯವರು ಸ್ವಚ್ಛ, ಪ್ರಾಮಾಣಿಕ, ಜನಪರ ರಾಜಕಾರಣಕ್ಕಾಗಿ ಈ ಪಕ್ಷವನ್ನು ಸ್ಥಾಪಿಸಿದ್ದೇವೆ. ರಾಜ್ಯದಲ್ಲಿ ಜೆಸಿಬಿ ಪಕ್ಷಗಳ ದುರಾಡಳಿತದ ವಿರುದ್ಧ ಹೋರಾಡಲಿದ್ದೇವೆ, ಹೀಗಲ್ಲದಿದ್ದರೆ ಇನ್ಯಾವಾಗ? ನಾವಲ್ಲದಿದ್ದರೆ ಇನ್ಯಾರು? ಎಂದರು.

ಸುಪ್ರೀಂ ಕೋರ್ಟ್ ನ ನ್ಯಾಯವಾದಿಗಳಾದ ಶ್ರೀ ಕೆ.ವಿ ಧನಂಜಯರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. “ಕರ್ನಾಟಕ ರಾಷ್ಟ್ರ ಸಮಿತಿ”ಯ ಉಪಾಧ್ಯಕ್ಷರಾದ ಎಚ್.ಎಸ್ ಲಿಂಗೇಗೌಡ, ಪ್ರಧಾನ ಕಾರ್ಯದರ್ಶಿಗಳಾದ ದೀಪಕ್ ಸಿ.ಎನ್, ಜಂಟಿ ಕಾರ್ಯದರ್ಶಿಗಳಾದ ರಘುಪತಿ ಭಟ್, ಮಲ್ಲಿಕಾರ್ಜುನ್ ಬಿ.ಎಸ್, ಖಜಾಂಚಿ ಅರವಿಂದ್ ಕೆ.ಬಿ ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...