Homeಕರ್ನಾಟಕ"ಕರ್ನಾಟಕ ರಾಷ್ಟ್ರ ಸಮಿತಿ" ನೂತನ ಪ್ರಾದೇಶಿಕ ಪಕ್ಷ ಅಸ್ತಿತ್ವಕ್ಕೆ... ಎಚ್.ಎಸ್ ದೊರೆಸ್ವಾಮಿಯವರಿಂದ ಉದ್ಘಾಟನೆ

“ಕರ್ನಾಟಕ ರಾಷ್ಟ್ರ ಸಮಿತಿ” ನೂತನ ಪ್ರಾದೇಶಿಕ ಪಕ್ಷ ಅಸ್ತಿತ್ವಕ್ಕೆ… ಎಚ್.ಎಸ್ ದೊರೆಸ್ವಾಮಿಯವರಿಂದ ಉದ್ಘಾಟನೆ

- Advertisement -
- Advertisement -

ಜನಪರ ಹೋರಾಟಗಾರ ರವಿ ಕೃಷ್ಣ ರೆಡ್ಡಿಯವರ ನೇತೃತ್ವದಲ್ಲಿ “ಕರ್ನಾಟಕ ರಾಷ್ಟ್ರ ಸಮಿತಿ” ಎಂಬ ನೂತನ ರಾಜಕೀಯ ಪಕ್ಷವನ್ನು ಅಸ್ತಿತ್ವಕ್ಕೆ ತರಲಾಗಿದೆ. ಕೆ.ಆರ್.ಎಸ್ ಎಂದು ಕರೆಯಲ್ಪಡುವ ಈ ಪಕ್ಷವು ಪ್ರಾದೇಶಿಕ-ಪ್ರಾಮಾಣಿಕ ಎಂಬ ಘೋಷವಾಕ್ಯಗಳನ್ನು  ಹೊಂದಿದ್ದು ಮುಂಬರುವ ಚುನಾವಣೆಗಳಲ್ಲಿ ಸಕ್ರಿಯವಾಗಿ ಸ್ಪರ್ಧಿಸಲಿದೆ.

ಇಂದು ಬೆಂಗಳೂರಿನಲ್ಲಿ ಪಕ್ಷದ ಉದ್ಘಾಟನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್ ದೊರೆಸ್ವಾಮಿಯವರು “ಇಂದು ಬಡತನ ಹೆಚ್ಚಾಗುತ್ತಿದೆ. ನಿರುದ್ಯೋಗ ಮಿತಿ ಮೀರುತ್ತಿದೆ. ದೇಶದ ಸಂಪತ್ತನ್ನೆಲ್ಲ ಕೇವಲ ಶೇ.10 ರಷ್ಟು ಜನ ನುಂಗಿದ್ದಾರೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಬಹಳಷ್ಟು ಜನ ಭೂಮಿ ವಸತಿಯಿಲ್ಲದೇ ಬೀದಿಪಾಲಾಗಿದ್ದಾರೆ. ಶಿಕ್ಷಣ, ಆರೋಗ್ಯ ನೀಡಬೇಕಾದ ಸರ್ಕಾರಗಳು ಕಣ್ಣು ಮುಚ್ಚಿ ಕುಳಿತಿವೆ ಹಾಗಾಗಿ ಪರ್ಯಾಯ ಪಕ್ಷಗಳು ಅಗತ್ಯವಾಗಿವೆ” ಎಂದರು.

ನಾವು ಸರ್ಕಾರದ ಬಳಿ ಭಿಕ್ಷೆ ಕೇಳುತ್ತಿಲ್ಲ. ಬಡವರ ಹಕ್ಕು ಕೇಳುತ್ತಿದ್ದೇವೆ. ಸ್ವಾತಂತ್ರ್ಯ ಬಂದು 70 ವರ್ಷಗಳಾದರೂ ಜನರನ್ನು ಹೀಗೆ ಇಟ್ಟಿರುವುದಕ್ಕೆ ಈ ಸರ್ಕಾರಗಳಿಗೆ ನಾಚಿಕೆಯಾಗುವುದಿಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದರು. ಇಂದು ಸರ್ಕಾರಗಳಿಗೆ ಕ್ರಿಮಿನಲ್ ಗಳು ಆಯ್ಕೆಯಾಗಿ ಹೋಗುತ್ತಿದ್ದಾರೆ. ಅವರ ಕೆಲಸ ಏನು? ಕೊಲೆ ಮಾಡುವುದಾ? ಎಂದು ಪ್ರಶ್ನಿಸಿದರು.

ನಮ್ಮ ಭಾರತದ ಸಂವಿಧಾನ ಏನು ಹೇಳುತ್ತದೆ? ನಾವು ಸ್ವಾತಂತ್ರ್ಯವನ್ನು ಉಳಿಸಿಕೊಳ್ಳುತ್ತೇವೆಯೇ? ನಮಗೆ ಭವಿಷ್ಯವಿದೆಯೇ? ಗ್ಯಾಟ್ ಒಪ್ಪಂದ ಆಗಿದೆ. ಪಿ.ವಿ ನರಸಿಂಹರಾವ್ ಹೋಗಿ ಸಹಿ ಮಾಡಿದ ಪರಿಣಾಮವನ್ನು ನಾವಿಂದು ಅನುಭವಿಸುತ್ತಿದ್ದೇವೆ. ಆಳುವವರು, ಬಂಡವಾಳಿಗರು ಸೇರಿ ದೇಶವನ್ನು ಮಾರುತ್ತಿದ್ದಾರೆ. ನೆಲ ಜಲವನ್ನು ದೋಚುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇಂದು ಹಲವಾರು ಪಕ್ಷಗಳಿವೆ. ಅವುಗಳಲ್ಲಿ ಒಬ್ಬ ನಾಯಕನಾಗುತ್ತಾನೆ. ಉಳಿದವರು ಆಗುವುದಿಲ್ಲ. ನಾಯಕನಾದವನು ತನ್ನ ಸೀಟು ಭದ್ರಪಡಿಸಿಕೊಳ್ಳಲು ಮಾತ್ರ ಕೆಲಸ ಮಾಡುತ್ತಾನೆ. ನಮ್ಮಲ್ಲಿ ಹಾಗಾಗಬಾರದು. ನಾವು ಜನರಿಗಾಗಿ ಕೆಲಸ ಮಾಡುಬೇಕು, ಆಂತರೀಕ ಪ್ರಜಾಪ್ರಭುತ್ವ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ರಾಜಕೀಯ ದಿವಾಳಿಯೆದ್ದಿದೆ. ನಾಯಕತ್ವದ ಅಭಾವವಿದೆ. ಇದಕ್ಕೆ ಪ್ರತಿಯಾಗಿ ಅವರು ಮಾಡಿದ ತಪ್ಪುಗಳನ್ನು ಗುರುತುಮಾಡಿ ಒಂದು ಆದರ್ಶಯುತ ರಾಜಕಾರಣವನ್ನು ನಾವು ಮಾಡಬೇಕಿದೆ. ನಾನು ಸವೋದಯವನ್ನು ಬಯಸುವವನು. ನಾನು ಬೇರೆ ಯಾವ ಪಕ್ಷಗಳ ಜೊತೆಗೂ ಇಲ್ಲ. ನೀವೆಲ್ಲರೂ ಒಂದು ಹೊಸ ದಾರಿ ತೋರಿಸಿದರೆ ಒಳ್ಳೆಯದು ಎಂದರು.

ನಿಮ್ಮ ಪಕ್ಷ ಚುನಾವಣೆ ಮತ್ತು ಹೋರಾಟ ಎರಡನ್ನು ಮಾಡಬೇಕು. ಕೇವಲ ಚುನಾವಣೆಗಳಿಗೆ ಸೀಮಿತರಾಗಬಾರದು. ದೇಶದ ಸಮಸ್ಯೆಗಳನ್ನು ಬಗೆಹರಿಸಲು ಹೋರಾಡಬೇಕು. ರಾಜ್ಯದಲ್ಲಿ ಭೂಮಿಗಾಗಿ ಚಳವಳಿ ನಡೆಯುತ್ತಿದೆ. ನೀವು ಕೈ ಜೋಡಿಸಬೇಕು. ಸರ್ಕಾರದ ಮೇಲೆ ಒತ್ತಡ ಹಾಕುವ ಕೆಲಸ ಮಾಡಬೇಕು, ಪ್ರಾಮಾಣಿಕವಾಗಿ ಕೆಲಸಮಾಡಿ ನಿಮಗೆ ಶುಭವಾಗಲಿ ಎಂದು ದೊರೆಸ್ವಾಮಿ ತಿಳಿಸಿದರು.

ಭ್ರಷ್ಟಚಾರ ವಿರೋಧಿ ಹೋರಾಟಗಾರರಾದ ಎಸ್.ಆರ್ ಹೀರೇಮಠರವರು ಮಾನತಾಡಿ ನಮ್ಮ ಜೀವನದುದ್ದಕ್ಕೂ ಇಂತಹ ಜನಪರ ಪ್ರಯೋಗಗಳಿಗೆ ಬೆಂಬಲವಿದೆ ಎಂದರು.

ಯಾವ ಕಾಲಘಟ್ಟದಲ್ಲಿ ಜೀವಿಸುತ್ತಿದ್ದೇವೆ ಎಂದರೆ ಕೆಲವೇ ದಿನಗಳ ಹಿಂದೆ ಇಡೀ ದೇಶವೇ ನೋಡುವಂತೆ ಕರ್ನಾಟಕದ ಮೂರು ಪಕ್ಷಗಳು ಮಾಡಿದ ರಾಜಕಾರಣ ನೋಡಿ ನಾವೆಲ್ಲರು ತಲೆತಗ್ಗಸಬೇಕು. 17 ಶಾಸಕರ ಜೊತೆ, ಮೂರು ಪಕ್ಷದ ನಾಯಕರು ವರ್ತಿಸಿದ ರೀತಿ, ರಾಜ್ಯಪಾಲರು ನಡೆದುಕೊಂಡ ವೈಖರಿ ಇಡೀ ರಾಜ್ಯಕ್ಕಾದ ಅವಮಾನವಾಗಿದೆ. ಪಾರ್ಟಿ ವಿಥ್ ಡಿಫರೆನ್ಸ್ ಎಂದು ಕರೆದುಕೊಳ್ಳುವ ಬಿಜೆಪಿಯವರು ಅತ್ಯಂತ ನಾಚಿಕೆಗೇಡಿನ ಆಪರೇಷನ್ ಕಮಲ ಮಾಡಿದ್ದರೆ ಎಂದರು.

ನನ್ನ ಜೀವಿತಾವಧಿಯಲ್ಲಿ ಎಂದೂ ಕೂಡ ರಾಜಕಾರಣ ಇಷ್ಟು ಕೀಳು ಮಟ್ಟಕ್ಕೆ ಇಳಿದಿರದಿಲ್ಲ. ಅಭಿವೃದ್ದಿ ಅನ್ನುವ ಹೆಸರಿನಲ್ಲಿ ಮಾಡಬಾರದ ಕೆಲಸ ಮಾಡಿ ಸೃಷ್ಟಿ ಮಾತೆಯ ಮೇಲೆ ಪ್ರಹಾರ ಮಾಡಿದ್ದೇವೆ. ಆಸೆ, ಅತಿ ಆಸೆ, ದುರಾಶೆಯಿಂದ ಪ್ರವಾಹವಾಗಿದೆ, ಪರಿಸರ ಸಮತೋಲನ ಕೆಡಿಸಿದ್ದೇವೆ. ಅದರ ಪರಿಣಾಮವನ್ನು ಈಗ ಅನಭವಿಸಬೇಕಾಗಿದೆ ಎಂದರು.

ಗಾಂಧೀಜಿಯವರು ಹೇಳಿದ ಹಾಗೆ ನಮಗೆ ಗುರಿ ಅಷ್ಟೇ ಮಹತ್ವವಲ್ಲ ದಾರಿಯೂ ಕೂಡ ಮುಖ್ಯ. ಸ್ವಾತಂತ್ರ್ಯ ಮತ್ತು ಸಮಾನತೆ ಎರಡು ಬೇಕು. ಇದಕ್ಕಾಗಿ ಈ ಪಕ್ಷ ಶ್ರಮಿಸಲಿ ಎಂದರು.

“ಕರ್ನಾಟಕ ರಾಷ್ಟ್ರ ಸಮಿತಿ”ಯ ಅಧ್ಯಕ್ಷರಾದ ರವಿಕೃಷ್ಙರೆಡ್ಡಿಯವರು ಸ್ವಚ್ಛ, ಪ್ರಾಮಾಣಿಕ, ಜನಪರ ರಾಜಕಾರಣಕ್ಕಾಗಿ ಈ ಪಕ್ಷವನ್ನು ಸ್ಥಾಪಿಸಿದ್ದೇವೆ. ರಾಜ್ಯದಲ್ಲಿ ಜೆಸಿಬಿ ಪಕ್ಷಗಳ ದುರಾಡಳಿತದ ವಿರುದ್ಧ ಹೋರಾಡಲಿದ್ದೇವೆ, ಹೀಗಲ್ಲದಿದ್ದರೆ ಇನ್ಯಾವಾಗ? ನಾವಲ್ಲದಿದ್ದರೆ ಇನ್ಯಾರು? ಎಂದರು.

ಸುಪ್ರೀಂ ಕೋರ್ಟ್ ನ ನ್ಯಾಯವಾದಿಗಳಾದ ಶ್ರೀ ಕೆ.ವಿ ಧನಂಜಯರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. “ಕರ್ನಾಟಕ ರಾಷ್ಟ್ರ ಸಮಿತಿ”ಯ ಉಪಾಧ್ಯಕ್ಷರಾದ ಎಚ್.ಎಸ್ ಲಿಂಗೇಗೌಡ, ಪ್ರಧಾನ ಕಾರ್ಯದರ್ಶಿಗಳಾದ ದೀಪಕ್ ಸಿ.ಎನ್, ಜಂಟಿ ಕಾರ್ಯದರ್ಶಿಗಳಾದ ರಘುಪತಿ ಭಟ್, ಮಲ್ಲಿಕಾರ್ಜುನ್ ಬಿ.ಎಸ್, ಖಜಾಂಚಿ ಅರವಿಂದ್ ಕೆ.ಬಿ ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...