Homeಕರ್ನಾಟಕ"ಕರ್ನಾಟಕ ರಾಷ್ಟ್ರ ಸಮಿತಿ" ನೂತನ ಪ್ರಾದೇಶಿಕ ಪಕ್ಷ ಅಸ್ತಿತ್ವಕ್ಕೆ... ಎಚ್.ಎಸ್ ದೊರೆಸ್ವಾಮಿಯವರಿಂದ ಉದ್ಘಾಟನೆ

“ಕರ್ನಾಟಕ ರಾಷ್ಟ್ರ ಸಮಿತಿ” ನೂತನ ಪ್ರಾದೇಶಿಕ ಪಕ್ಷ ಅಸ್ತಿತ್ವಕ್ಕೆ… ಎಚ್.ಎಸ್ ದೊರೆಸ್ವಾಮಿಯವರಿಂದ ಉದ್ಘಾಟನೆ

- Advertisement -
- Advertisement -

ಜನಪರ ಹೋರಾಟಗಾರ ರವಿ ಕೃಷ್ಣ ರೆಡ್ಡಿಯವರ ನೇತೃತ್ವದಲ್ಲಿ “ಕರ್ನಾಟಕ ರಾಷ್ಟ್ರ ಸಮಿತಿ” ಎಂಬ ನೂತನ ರಾಜಕೀಯ ಪಕ್ಷವನ್ನು ಅಸ್ತಿತ್ವಕ್ಕೆ ತರಲಾಗಿದೆ. ಕೆ.ಆರ್.ಎಸ್ ಎಂದು ಕರೆಯಲ್ಪಡುವ ಈ ಪಕ್ಷವು ಪ್ರಾದೇಶಿಕ-ಪ್ರಾಮಾಣಿಕ ಎಂಬ ಘೋಷವಾಕ್ಯಗಳನ್ನು  ಹೊಂದಿದ್ದು ಮುಂಬರುವ ಚುನಾವಣೆಗಳಲ್ಲಿ ಸಕ್ರಿಯವಾಗಿ ಸ್ಪರ್ಧಿಸಲಿದೆ.

ಇಂದು ಬೆಂಗಳೂರಿನಲ್ಲಿ ಪಕ್ಷದ ಉದ್ಘಾಟನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್ ದೊರೆಸ್ವಾಮಿಯವರು “ಇಂದು ಬಡತನ ಹೆಚ್ಚಾಗುತ್ತಿದೆ. ನಿರುದ್ಯೋಗ ಮಿತಿ ಮೀರುತ್ತಿದೆ. ದೇಶದ ಸಂಪತ್ತನ್ನೆಲ್ಲ ಕೇವಲ ಶೇ.10 ರಷ್ಟು ಜನ ನುಂಗಿದ್ದಾರೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಬಹಳಷ್ಟು ಜನ ಭೂಮಿ ವಸತಿಯಿಲ್ಲದೇ ಬೀದಿಪಾಲಾಗಿದ್ದಾರೆ. ಶಿಕ್ಷಣ, ಆರೋಗ್ಯ ನೀಡಬೇಕಾದ ಸರ್ಕಾರಗಳು ಕಣ್ಣು ಮುಚ್ಚಿ ಕುಳಿತಿವೆ ಹಾಗಾಗಿ ಪರ್ಯಾಯ ಪಕ್ಷಗಳು ಅಗತ್ಯವಾಗಿವೆ” ಎಂದರು.

ನಾವು ಸರ್ಕಾರದ ಬಳಿ ಭಿಕ್ಷೆ ಕೇಳುತ್ತಿಲ್ಲ. ಬಡವರ ಹಕ್ಕು ಕೇಳುತ್ತಿದ್ದೇವೆ. ಸ್ವಾತಂತ್ರ್ಯ ಬಂದು 70 ವರ್ಷಗಳಾದರೂ ಜನರನ್ನು ಹೀಗೆ ಇಟ್ಟಿರುವುದಕ್ಕೆ ಈ ಸರ್ಕಾರಗಳಿಗೆ ನಾಚಿಕೆಯಾಗುವುದಿಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದರು. ಇಂದು ಸರ್ಕಾರಗಳಿಗೆ ಕ್ರಿಮಿನಲ್ ಗಳು ಆಯ್ಕೆಯಾಗಿ ಹೋಗುತ್ತಿದ್ದಾರೆ. ಅವರ ಕೆಲಸ ಏನು? ಕೊಲೆ ಮಾಡುವುದಾ? ಎಂದು ಪ್ರಶ್ನಿಸಿದರು.

ನಮ್ಮ ಭಾರತದ ಸಂವಿಧಾನ ಏನು ಹೇಳುತ್ತದೆ? ನಾವು ಸ್ವಾತಂತ್ರ್ಯವನ್ನು ಉಳಿಸಿಕೊಳ್ಳುತ್ತೇವೆಯೇ? ನಮಗೆ ಭವಿಷ್ಯವಿದೆಯೇ? ಗ್ಯಾಟ್ ಒಪ್ಪಂದ ಆಗಿದೆ. ಪಿ.ವಿ ನರಸಿಂಹರಾವ್ ಹೋಗಿ ಸಹಿ ಮಾಡಿದ ಪರಿಣಾಮವನ್ನು ನಾವಿಂದು ಅನುಭವಿಸುತ್ತಿದ್ದೇವೆ. ಆಳುವವರು, ಬಂಡವಾಳಿಗರು ಸೇರಿ ದೇಶವನ್ನು ಮಾರುತ್ತಿದ್ದಾರೆ. ನೆಲ ಜಲವನ್ನು ದೋಚುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇಂದು ಹಲವಾರು ಪಕ್ಷಗಳಿವೆ. ಅವುಗಳಲ್ಲಿ ಒಬ್ಬ ನಾಯಕನಾಗುತ್ತಾನೆ. ಉಳಿದವರು ಆಗುವುದಿಲ್ಲ. ನಾಯಕನಾದವನು ತನ್ನ ಸೀಟು ಭದ್ರಪಡಿಸಿಕೊಳ್ಳಲು ಮಾತ್ರ ಕೆಲಸ ಮಾಡುತ್ತಾನೆ. ನಮ್ಮಲ್ಲಿ ಹಾಗಾಗಬಾರದು. ನಾವು ಜನರಿಗಾಗಿ ಕೆಲಸ ಮಾಡುಬೇಕು, ಆಂತರೀಕ ಪ್ರಜಾಪ್ರಭುತ್ವ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ರಾಜಕೀಯ ದಿವಾಳಿಯೆದ್ದಿದೆ. ನಾಯಕತ್ವದ ಅಭಾವವಿದೆ. ಇದಕ್ಕೆ ಪ್ರತಿಯಾಗಿ ಅವರು ಮಾಡಿದ ತಪ್ಪುಗಳನ್ನು ಗುರುತುಮಾಡಿ ಒಂದು ಆದರ್ಶಯುತ ರಾಜಕಾರಣವನ್ನು ನಾವು ಮಾಡಬೇಕಿದೆ. ನಾನು ಸವೋದಯವನ್ನು ಬಯಸುವವನು. ನಾನು ಬೇರೆ ಯಾವ ಪಕ್ಷಗಳ ಜೊತೆಗೂ ಇಲ್ಲ. ನೀವೆಲ್ಲರೂ ಒಂದು ಹೊಸ ದಾರಿ ತೋರಿಸಿದರೆ ಒಳ್ಳೆಯದು ಎಂದರು.

ನಿಮ್ಮ ಪಕ್ಷ ಚುನಾವಣೆ ಮತ್ತು ಹೋರಾಟ ಎರಡನ್ನು ಮಾಡಬೇಕು. ಕೇವಲ ಚುನಾವಣೆಗಳಿಗೆ ಸೀಮಿತರಾಗಬಾರದು. ದೇಶದ ಸಮಸ್ಯೆಗಳನ್ನು ಬಗೆಹರಿಸಲು ಹೋರಾಡಬೇಕು. ರಾಜ್ಯದಲ್ಲಿ ಭೂಮಿಗಾಗಿ ಚಳವಳಿ ನಡೆಯುತ್ತಿದೆ. ನೀವು ಕೈ ಜೋಡಿಸಬೇಕು. ಸರ್ಕಾರದ ಮೇಲೆ ಒತ್ತಡ ಹಾಕುವ ಕೆಲಸ ಮಾಡಬೇಕು, ಪ್ರಾಮಾಣಿಕವಾಗಿ ಕೆಲಸಮಾಡಿ ನಿಮಗೆ ಶುಭವಾಗಲಿ ಎಂದು ದೊರೆಸ್ವಾಮಿ ತಿಳಿಸಿದರು.

ಭ್ರಷ್ಟಚಾರ ವಿರೋಧಿ ಹೋರಾಟಗಾರರಾದ ಎಸ್.ಆರ್ ಹೀರೇಮಠರವರು ಮಾನತಾಡಿ ನಮ್ಮ ಜೀವನದುದ್ದಕ್ಕೂ ಇಂತಹ ಜನಪರ ಪ್ರಯೋಗಗಳಿಗೆ ಬೆಂಬಲವಿದೆ ಎಂದರು.

ಯಾವ ಕಾಲಘಟ್ಟದಲ್ಲಿ ಜೀವಿಸುತ್ತಿದ್ದೇವೆ ಎಂದರೆ ಕೆಲವೇ ದಿನಗಳ ಹಿಂದೆ ಇಡೀ ದೇಶವೇ ನೋಡುವಂತೆ ಕರ್ನಾಟಕದ ಮೂರು ಪಕ್ಷಗಳು ಮಾಡಿದ ರಾಜಕಾರಣ ನೋಡಿ ನಾವೆಲ್ಲರು ತಲೆತಗ್ಗಸಬೇಕು. 17 ಶಾಸಕರ ಜೊತೆ, ಮೂರು ಪಕ್ಷದ ನಾಯಕರು ವರ್ತಿಸಿದ ರೀತಿ, ರಾಜ್ಯಪಾಲರು ನಡೆದುಕೊಂಡ ವೈಖರಿ ಇಡೀ ರಾಜ್ಯಕ್ಕಾದ ಅವಮಾನವಾಗಿದೆ. ಪಾರ್ಟಿ ವಿಥ್ ಡಿಫರೆನ್ಸ್ ಎಂದು ಕರೆದುಕೊಳ್ಳುವ ಬಿಜೆಪಿಯವರು ಅತ್ಯಂತ ನಾಚಿಕೆಗೇಡಿನ ಆಪರೇಷನ್ ಕಮಲ ಮಾಡಿದ್ದರೆ ಎಂದರು.

ನನ್ನ ಜೀವಿತಾವಧಿಯಲ್ಲಿ ಎಂದೂ ಕೂಡ ರಾಜಕಾರಣ ಇಷ್ಟು ಕೀಳು ಮಟ್ಟಕ್ಕೆ ಇಳಿದಿರದಿಲ್ಲ. ಅಭಿವೃದ್ದಿ ಅನ್ನುವ ಹೆಸರಿನಲ್ಲಿ ಮಾಡಬಾರದ ಕೆಲಸ ಮಾಡಿ ಸೃಷ್ಟಿ ಮಾತೆಯ ಮೇಲೆ ಪ್ರಹಾರ ಮಾಡಿದ್ದೇವೆ. ಆಸೆ, ಅತಿ ಆಸೆ, ದುರಾಶೆಯಿಂದ ಪ್ರವಾಹವಾಗಿದೆ, ಪರಿಸರ ಸಮತೋಲನ ಕೆಡಿಸಿದ್ದೇವೆ. ಅದರ ಪರಿಣಾಮವನ್ನು ಈಗ ಅನಭವಿಸಬೇಕಾಗಿದೆ ಎಂದರು.

ಗಾಂಧೀಜಿಯವರು ಹೇಳಿದ ಹಾಗೆ ನಮಗೆ ಗುರಿ ಅಷ್ಟೇ ಮಹತ್ವವಲ್ಲ ದಾರಿಯೂ ಕೂಡ ಮುಖ್ಯ. ಸ್ವಾತಂತ್ರ್ಯ ಮತ್ತು ಸಮಾನತೆ ಎರಡು ಬೇಕು. ಇದಕ್ಕಾಗಿ ಈ ಪಕ್ಷ ಶ್ರಮಿಸಲಿ ಎಂದರು.

“ಕರ್ನಾಟಕ ರಾಷ್ಟ್ರ ಸಮಿತಿ”ಯ ಅಧ್ಯಕ್ಷರಾದ ರವಿಕೃಷ್ಙರೆಡ್ಡಿಯವರು ಸ್ವಚ್ಛ, ಪ್ರಾಮಾಣಿಕ, ಜನಪರ ರಾಜಕಾರಣಕ್ಕಾಗಿ ಈ ಪಕ್ಷವನ್ನು ಸ್ಥಾಪಿಸಿದ್ದೇವೆ. ರಾಜ್ಯದಲ್ಲಿ ಜೆಸಿಬಿ ಪಕ್ಷಗಳ ದುರಾಡಳಿತದ ವಿರುದ್ಧ ಹೋರಾಡಲಿದ್ದೇವೆ, ಹೀಗಲ್ಲದಿದ್ದರೆ ಇನ್ಯಾವಾಗ? ನಾವಲ್ಲದಿದ್ದರೆ ಇನ್ಯಾರು? ಎಂದರು.

ಸುಪ್ರೀಂ ಕೋರ್ಟ್ ನ ನ್ಯಾಯವಾದಿಗಳಾದ ಶ್ರೀ ಕೆ.ವಿ ಧನಂಜಯರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. “ಕರ್ನಾಟಕ ರಾಷ್ಟ್ರ ಸಮಿತಿ”ಯ ಉಪಾಧ್ಯಕ್ಷರಾದ ಎಚ್.ಎಸ್ ಲಿಂಗೇಗೌಡ, ಪ್ರಧಾನ ಕಾರ್ಯದರ್ಶಿಗಳಾದ ದೀಪಕ್ ಸಿ.ಎನ್, ಜಂಟಿ ಕಾರ್ಯದರ್ಶಿಗಳಾದ ರಘುಪತಿ ಭಟ್, ಮಲ್ಲಿಕಾರ್ಜುನ್ ಬಿ.ಎಸ್, ಖಜಾಂಚಿ ಅರವಿಂದ್ ಕೆ.ಬಿ ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...