Homeಕರ್ನಾಟಕ"ಕರ್ನಾಟಕ ರಾಷ್ಟ್ರ ಸಮಿತಿ" ನೂತನ ಪ್ರಾದೇಶಿಕ ಪಕ್ಷ ಅಸ್ತಿತ್ವಕ್ಕೆ... ಎಚ್.ಎಸ್ ದೊರೆಸ್ವಾಮಿಯವರಿಂದ ಉದ್ಘಾಟನೆ

“ಕರ್ನಾಟಕ ರಾಷ್ಟ್ರ ಸಮಿತಿ” ನೂತನ ಪ್ರಾದೇಶಿಕ ಪಕ್ಷ ಅಸ್ತಿತ್ವಕ್ಕೆ… ಎಚ್.ಎಸ್ ದೊರೆಸ್ವಾಮಿಯವರಿಂದ ಉದ್ಘಾಟನೆ

- Advertisement -
- Advertisement -

ಜನಪರ ಹೋರಾಟಗಾರ ರವಿ ಕೃಷ್ಣ ರೆಡ್ಡಿಯವರ ನೇತೃತ್ವದಲ್ಲಿ “ಕರ್ನಾಟಕ ರಾಷ್ಟ್ರ ಸಮಿತಿ” ಎಂಬ ನೂತನ ರಾಜಕೀಯ ಪಕ್ಷವನ್ನು ಅಸ್ತಿತ್ವಕ್ಕೆ ತರಲಾಗಿದೆ. ಕೆ.ಆರ್.ಎಸ್ ಎಂದು ಕರೆಯಲ್ಪಡುವ ಈ ಪಕ್ಷವು ಪ್ರಾದೇಶಿಕ-ಪ್ರಾಮಾಣಿಕ ಎಂಬ ಘೋಷವಾಕ್ಯಗಳನ್ನು  ಹೊಂದಿದ್ದು ಮುಂಬರುವ ಚುನಾವಣೆಗಳಲ್ಲಿ ಸಕ್ರಿಯವಾಗಿ ಸ್ಪರ್ಧಿಸಲಿದೆ.

ಇಂದು ಬೆಂಗಳೂರಿನಲ್ಲಿ ಪಕ್ಷದ ಉದ್ಘಾಟನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್ ದೊರೆಸ್ವಾಮಿಯವರು “ಇಂದು ಬಡತನ ಹೆಚ್ಚಾಗುತ್ತಿದೆ. ನಿರುದ್ಯೋಗ ಮಿತಿ ಮೀರುತ್ತಿದೆ. ದೇಶದ ಸಂಪತ್ತನ್ನೆಲ್ಲ ಕೇವಲ ಶೇ.10 ರಷ್ಟು ಜನ ನುಂಗಿದ್ದಾರೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಬಹಳಷ್ಟು ಜನ ಭೂಮಿ ವಸತಿಯಿಲ್ಲದೇ ಬೀದಿಪಾಲಾಗಿದ್ದಾರೆ. ಶಿಕ್ಷಣ, ಆರೋಗ್ಯ ನೀಡಬೇಕಾದ ಸರ್ಕಾರಗಳು ಕಣ್ಣು ಮುಚ್ಚಿ ಕುಳಿತಿವೆ ಹಾಗಾಗಿ ಪರ್ಯಾಯ ಪಕ್ಷಗಳು ಅಗತ್ಯವಾಗಿವೆ” ಎಂದರು.

ನಾವು ಸರ್ಕಾರದ ಬಳಿ ಭಿಕ್ಷೆ ಕೇಳುತ್ತಿಲ್ಲ. ಬಡವರ ಹಕ್ಕು ಕೇಳುತ್ತಿದ್ದೇವೆ. ಸ್ವಾತಂತ್ರ್ಯ ಬಂದು 70 ವರ್ಷಗಳಾದರೂ ಜನರನ್ನು ಹೀಗೆ ಇಟ್ಟಿರುವುದಕ್ಕೆ ಈ ಸರ್ಕಾರಗಳಿಗೆ ನಾಚಿಕೆಯಾಗುವುದಿಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದರು. ಇಂದು ಸರ್ಕಾರಗಳಿಗೆ ಕ್ರಿಮಿನಲ್ ಗಳು ಆಯ್ಕೆಯಾಗಿ ಹೋಗುತ್ತಿದ್ದಾರೆ. ಅವರ ಕೆಲಸ ಏನು? ಕೊಲೆ ಮಾಡುವುದಾ? ಎಂದು ಪ್ರಶ್ನಿಸಿದರು.

ನಮ್ಮ ಭಾರತದ ಸಂವಿಧಾನ ಏನು ಹೇಳುತ್ತದೆ? ನಾವು ಸ್ವಾತಂತ್ರ್ಯವನ್ನು ಉಳಿಸಿಕೊಳ್ಳುತ್ತೇವೆಯೇ? ನಮಗೆ ಭವಿಷ್ಯವಿದೆಯೇ? ಗ್ಯಾಟ್ ಒಪ್ಪಂದ ಆಗಿದೆ. ಪಿ.ವಿ ನರಸಿಂಹರಾವ್ ಹೋಗಿ ಸಹಿ ಮಾಡಿದ ಪರಿಣಾಮವನ್ನು ನಾವಿಂದು ಅನುಭವಿಸುತ್ತಿದ್ದೇವೆ. ಆಳುವವರು, ಬಂಡವಾಳಿಗರು ಸೇರಿ ದೇಶವನ್ನು ಮಾರುತ್ತಿದ್ದಾರೆ. ನೆಲ ಜಲವನ್ನು ದೋಚುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇಂದು ಹಲವಾರು ಪಕ್ಷಗಳಿವೆ. ಅವುಗಳಲ್ಲಿ ಒಬ್ಬ ನಾಯಕನಾಗುತ್ತಾನೆ. ಉಳಿದವರು ಆಗುವುದಿಲ್ಲ. ನಾಯಕನಾದವನು ತನ್ನ ಸೀಟು ಭದ್ರಪಡಿಸಿಕೊಳ್ಳಲು ಮಾತ್ರ ಕೆಲಸ ಮಾಡುತ್ತಾನೆ. ನಮ್ಮಲ್ಲಿ ಹಾಗಾಗಬಾರದು. ನಾವು ಜನರಿಗಾಗಿ ಕೆಲಸ ಮಾಡುಬೇಕು, ಆಂತರೀಕ ಪ್ರಜಾಪ್ರಭುತ್ವ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ರಾಜಕೀಯ ದಿವಾಳಿಯೆದ್ದಿದೆ. ನಾಯಕತ್ವದ ಅಭಾವವಿದೆ. ಇದಕ್ಕೆ ಪ್ರತಿಯಾಗಿ ಅವರು ಮಾಡಿದ ತಪ್ಪುಗಳನ್ನು ಗುರುತುಮಾಡಿ ಒಂದು ಆದರ್ಶಯುತ ರಾಜಕಾರಣವನ್ನು ನಾವು ಮಾಡಬೇಕಿದೆ. ನಾನು ಸವೋದಯವನ್ನು ಬಯಸುವವನು. ನಾನು ಬೇರೆ ಯಾವ ಪಕ್ಷಗಳ ಜೊತೆಗೂ ಇಲ್ಲ. ನೀವೆಲ್ಲರೂ ಒಂದು ಹೊಸ ದಾರಿ ತೋರಿಸಿದರೆ ಒಳ್ಳೆಯದು ಎಂದರು.

ನಿಮ್ಮ ಪಕ್ಷ ಚುನಾವಣೆ ಮತ್ತು ಹೋರಾಟ ಎರಡನ್ನು ಮಾಡಬೇಕು. ಕೇವಲ ಚುನಾವಣೆಗಳಿಗೆ ಸೀಮಿತರಾಗಬಾರದು. ದೇಶದ ಸಮಸ್ಯೆಗಳನ್ನು ಬಗೆಹರಿಸಲು ಹೋರಾಡಬೇಕು. ರಾಜ್ಯದಲ್ಲಿ ಭೂಮಿಗಾಗಿ ಚಳವಳಿ ನಡೆಯುತ್ತಿದೆ. ನೀವು ಕೈ ಜೋಡಿಸಬೇಕು. ಸರ್ಕಾರದ ಮೇಲೆ ಒತ್ತಡ ಹಾಕುವ ಕೆಲಸ ಮಾಡಬೇಕು, ಪ್ರಾಮಾಣಿಕವಾಗಿ ಕೆಲಸಮಾಡಿ ನಿಮಗೆ ಶುಭವಾಗಲಿ ಎಂದು ದೊರೆಸ್ವಾಮಿ ತಿಳಿಸಿದರು.

ಭ್ರಷ್ಟಚಾರ ವಿರೋಧಿ ಹೋರಾಟಗಾರರಾದ ಎಸ್.ಆರ್ ಹೀರೇಮಠರವರು ಮಾನತಾಡಿ ನಮ್ಮ ಜೀವನದುದ್ದಕ್ಕೂ ಇಂತಹ ಜನಪರ ಪ್ರಯೋಗಗಳಿಗೆ ಬೆಂಬಲವಿದೆ ಎಂದರು.

ಯಾವ ಕಾಲಘಟ್ಟದಲ್ಲಿ ಜೀವಿಸುತ್ತಿದ್ದೇವೆ ಎಂದರೆ ಕೆಲವೇ ದಿನಗಳ ಹಿಂದೆ ಇಡೀ ದೇಶವೇ ನೋಡುವಂತೆ ಕರ್ನಾಟಕದ ಮೂರು ಪಕ್ಷಗಳು ಮಾಡಿದ ರಾಜಕಾರಣ ನೋಡಿ ನಾವೆಲ್ಲರು ತಲೆತಗ್ಗಸಬೇಕು. 17 ಶಾಸಕರ ಜೊತೆ, ಮೂರು ಪಕ್ಷದ ನಾಯಕರು ವರ್ತಿಸಿದ ರೀತಿ, ರಾಜ್ಯಪಾಲರು ನಡೆದುಕೊಂಡ ವೈಖರಿ ಇಡೀ ರಾಜ್ಯಕ್ಕಾದ ಅವಮಾನವಾಗಿದೆ. ಪಾರ್ಟಿ ವಿಥ್ ಡಿಫರೆನ್ಸ್ ಎಂದು ಕರೆದುಕೊಳ್ಳುವ ಬಿಜೆಪಿಯವರು ಅತ್ಯಂತ ನಾಚಿಕೆಗೇಡಿನ ಆಪರೇಷನ್ ಕಮಲ ಮಾಡಿದ್ದರೆ ಎಂದರು.

ನನ್ನ ಜೀವಿತಾವಧಿಯಲ್ಲಿ ಎಂದೂ ಕೂಡ ರಾಜಕಾರಣ ಇಷ್ಟು ಕೀಳು ಮಟ್ಟಕ್ಕೆ ಇಳಿದಿರದಿಲ್ಲ. ಅಭಿವೃದ್ದಿ ಅನ್ನುವ ಹೆಸರಿನಲ್ಲಿ ಮಾಡಬಾರದ ಕೆಲಸ ಮಾಡಿ ಸೃಷ್ಟಿ ಮಾತೆಯ ಮೇಲೆ ಪ್ರಹಾರ ಮಾಡಿದ್ದೇವೆ. ಆಸೆ, ಅತಿ ಆಸೆ, ದುರಾಶೆಯಿಂದ ಪ್ರವಾಹವಾಗಿದೆ, ಪರಿಸರ ಸಮತೋಲನ ಕೆಡಿಸಿದ್ದೇವೆ. ಅದರ ಪರಿಣಾಮವನ್ನು ಈಗ ಅನಭವಿಸಬೇಕಾಗಿದೆ ಎಂದರು.

ಗಾಂಧೀಜಿಯವರು ಹೇಳಿದ ಹಾಗೆ ನಮಗೆ ಗುರಿ ಅಷ್ಟೇ ಮಹತ್ವವಲ್ಲ ದಾರಿಯೂ ಕೂಡ ಮುಖ್ಯ. ಸ್ವಾತಂತ್ರ್ಯ ಮತ್ತು ಸಮಾನತೆ ಎರಡು ಬೇಕು. ಇದಕ್ಕಾಗಿ ಈ ಪಕ್ಷ ಶ್ರಮಿಸಲಿ ಎಂದರು.

“ಕರ್ನಾಟಕ ರಾಷ್ಟ್ರ ಸಮಿತಿ”ಯ ಅಧ್ಯಕ್ಷರಾದ ರವಿಕೃಷ್ಙರೆಡ್ಡಿಯವರು ಸ್ವಚ್ಛ, ಪ್ರಾಮಾಣಿಕ, ಜನಪರ ರಾಜಕಾರಣಕ್ಕಾಗಿ ಈ ಪಕ್ಷವನ್ನು ಸ್ಥಾಪಿಸಿದ್ದೇವೆ. ರಾಜ್ಯದಲ್ಲಿ ಜೆಸಿಬಿ ಪಕ್ಷಗಳ ದುರಾಡಳಿತದ ವಿರುದ್ಧ ಹೋರಾಡಲಿದ್ದೇವೆ, ಹೀಗಲ್ಲದಿದ್ದರೆ ಇನ್ಯಾವಾಗ? ನಾವಲ್ಲದಿದ್ದರೆ ಇನ್ಯಾರು? ಎಂದರು.

ಸುಪ್ರೀಂ ಕೋರ್ಟ್ ನ ನ್ಯಾಯವಾದಿಗಳಾದ ಶ್ರೀ ಕೆ.ವಿ ಧನಂಜಯರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. “ಕರ್ನಾಟಕ ರಾಷ್ಟ್ರ ಸಮಿತಿ”ಯ ಉಪಾಧ್ಯಕ್ಷರಾದ ಎಚ್.ಎಸ್ ಲಿಂಗೇಗೌಡ, ಪ್ರಧಾನ ಕಾರ್ಯದರ್ಶಿಗಳಾದ ದೀಪಕ್ ಸಿ.ಎನ್, ಜಂಟಿ ಕಾರ್ಯದರ್ಶಿಗಳಾದ ರಘುಪತಿ ಭಟ್, ಮಲ್ಲಿಕಾರ್ಜುನ್ ಬಿ.ಎಸ್, ಖಜಾಂಚಿ ಅರವಿಂದ್ ಕೆ.ಬಿ ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...