Homeಕರ್ನಾಟಕ"ಕರ್ನಾಟಕ ರಾಷ್ಟ್ರ ಸಮಿತಿ" ನೂತನ ಪ್ರಾದೇಶಿಕ ಪಕ್ಷ ಅಸ್ತಿತ್ವಕ್ಕೆ... ಎಚ್.ಎಸ್ ದೊರೆಸ್ವಾಮಿಯವರಿಂದ ಉದ್ಘಾಟನೆ

“ಕರ್ನಾಟಕ ರಾಷ್ಟ್ರ ಸಮಿತಿ” ನೂತನ ಪ್ರಾದೇಶಿಕ ಪಕ್ಷ ಅಸ್ತಿತ್ವಕ್ಕೆ… ಎಚ್.ಎಸ್ ದೊರೆಸ್ವಾಮಿಯವರಿಂದ ಉದ್ಘಾಟನೆ

- Advertisement -
- Advertisement -

ಜನಪರ ಹೋರಾಟಗಾರ ರವಿ ಕೃಷ್ಣ ರೆಡ್ಡಿಯವರ ನೇತೃತ್ವದಲ್ಲಿ “ಕರ್ನಾಟಕ ರಾಷ್ಟ್ರ ಸಮಿತಿ” ಎಂಬ ನೂತನ ರಾಜಕೀಯ ಪಕ್ಷವನ್ನು ಅಸ್ತಿತ್ವಕ್ಕೆ ತರಲಾಗಿದೆ. ಕೆ.ಆರ್.ಎಸ್ ಎಂದು ಕರೆಯಲ್ಪಡುವ ಈ ಪಕ್ಷವು ಪ್ರಾದೇಶಿಕ-ಪ್ರಾಮಾಣಿಕ ಎಂಬ ಘೋಷವಾಕ್ಯಗಳನ್ನು  ಹೊಂದಿದ್ದು ಮುಂಬರುವ ಚುನಾವಣೆಗಳಲ್ಲಿ ಸಕ್ರಿಯವಾಗಿ ಸ್ಪರ್ಧಿಸಲಿದೆ.

ಇಂದು ಬೆಂಗಳೂರಿನಲ್ಲಿ ಪಕ್ಷದ ಉದ್ಘಾಟನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್ ದೊರೆಸ್ವಾಮಿಯವರು “ಇಂದು ಬಡತನ ಹೆಚ್ಚಾಗುತ್ತಿದೆ. ನಿರುದ್ಯೋಗ ಮಿತಿ ಮೀರುತ್ತಿದೆ. ದೇಶದ ಸಂಪತ್ತನ್ನೆಲ್ಲ ಕೇವಲ ಶೇ.10 ರಷ್ಟು ಜನ ನುಂಗಿದ್ದಾರೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಬಹಳಷ್ಟು ಜನ ಭೂಮಿ ವಸತಿಯಿಲ್ಲದೇ ಬೀದಿಪಾಲಾಗಿದ್ದಾರೆ. ಶಿಕ್ಷಣ, ಆರೋಗ್ಯ ನೀಡಬೇಕಾದ ಸರ್ಕಾರಗಳು ಕಣ್ಣು ಮುಚ್ಚಿ ಕುಳಿತಿವೆ ಹಾಗಾಗಿ ಪರ್ಯಾಯ ಪಕ್ಷಗಳು ಅಗತ್ಯವಾಗಿವೆ” ಎಂದರು.

ನಾವು ಸರ್ಕಾರದ ಬಳಿ ಭಿಕ್ಷೆ ಕೇಳುತ್ತಿಲ್ಲ. ಬಡವರ ಹಕ್ಕು ಕೇಳುತ್ತಿದ್ದೇವೆ. ಸ್ವಾತಂತ್ರ್ಯ ಬಂದು 70 ವರ್ಷಗಳಾದರೂ ಜನರನ್ನು ಹೀಗೆ ಇಟ್ಟಿರುವುದಕ್ಕೆ ಈ ಸರ್ಕಾರಗಳಿಗೆ ನಾಚಿಕೆಯಾಗುವುದಿಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದರು. ಇಂದು ಸರ್ಕಾರಗಳಿಗೆ ಕ್ರಿಮಿನಲ್ ಗಳು ಆಯ್ಕೆಯಾಗಿ ಹೋಗುತ್ತಿದ್ದಾರೆ. ಅವರ ಕೆಲಸ ಏನು? ಕೊಲೆ ಮಾಡುವುದಾ? ಎಂದು ಪ್ರಶ್ನಿಸಿದರು.

ನಮ್ಮ ಭಾರತದ ಸಂವಿಧಾನ ಏನು ಹೇಳುತ್ತದೆ? ನಾವು ಸ್ವಾತಂತ್ರ್ಯವನ್ನು ಉಳಿಸಿಕೊಳ್ಳುತ್ತೇವೆಯೇ? ನಮಗೆ ಭವಿಷ್ಯವಿದೆಯೇ? ಗ್ಯಾಟ್ ಒಪ್ಪಂದ ಆಗಿದೆ. ಪಿ.ವಿ ನರಸಿಂಹರಾವ್ ಹೋಗಿ ಸಹಿ ಮಾಡಿದ ಪರಿಣಾಮವನ್ನು ನಾವಿಂದು ಅನುಭವಿಸುತ್ತಿದ್ದೇವೆ. ಆಳುವವರು, ಬಂಡವಾಳಿಗರು ಸೇರಿ ದೇಶವನ್ನು ಮಾರುತ್ತಿದ್ದಾರೆ. ನೆಲ ಜಲವನ್ನು ದೋಚುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇಂದು ಹಲವಾರು ಪಕ್ಷಗಳಿವೆ. ಅವುಗಳಲ್ಲಿ ಒಬ್ಬ ನಾಯಕನಾಗುತ್ತಾನೆ. ಉಳಿದವರು ಆಗುವುದಿಲ್ಲ. ನಾಯಕನಾದವನು ತನ್ನ ಸೀಟು ಭದ್ರಪಡಿಸಿಕೊಳ್ಳಲು ಮಾತ್ರ ಕೆಲಸ ಮಾಡುತ್ತಾನೆ. ನಮ್ಮಲ್ಲಿ ಹಾಗಾಗಬಾರದು. ನಾವು ಜನರಿಗಾಗಿ ಕೆಲಸ ಮಾಡುಬೇಕು, ಆಂತರೀಕ ಪ್ರಜಾಪ್ರಭುತ್ವ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ರಾಜಕೀಯ ದಿವಾಳಿಯೆದ್ದಿದೆ. ನಾಯಕತ್ವದ ಅಭಾವವಿದೆ. ಇದಕ್ಕೆ ಪ್ರತಿಯಾಗಿ ಅವರು ಮಾಡಿದ ತಪ್ಪುಗಳನ್ನು ಗುರುತುಮಾಡಿ ಒಂದು ಆದರ್ಶಯುತ ರಾಜಕಾರಣವನ್ನು ನಾವು ಮಾಡಬೇಕಿದೆ. ನಾನು ಸವೋದಯವನ್ನು ಬಯಸುವವನು. ನಾನು ಬೇರೆ ಯಾವ ಪಕ್ಷಗಳ ಜೊತೆಗೂ ಇಲ್ಲ. ನೀವೆಲ್ಲರೂ ಒಂದು ಹೊಸ ದಾರಿ ತೋರಿಸಿದರೆ ಒಳ್ಳೆಯದು ಎಂದರು.

ನಿಮ್ಮ ಪಕ್ಷ ಚುನಾವಣೆ ಮತ್ತು ಹೋರಾಟ ಎರಡನ್ನು ಮಾಡಬೇಕು. ಕೇವಲ ಚುನಾವಣೆಗಳಿಗೆ ಸೀಮಿತರಾಗಬಾರದು. ದೇಶದ ಸಮಸ್ಯೆಗಳನ್ನು ಬಗೆಹರಿಸಲು ಹೋರಾಡಬೇಕು. ರಾಜ್ಯದಲ್ಲಿ ಭೂಮಿಗಾಗಿ ಚಳವಳಿ ನಡೆಯುತ್ತಿದೆ. ನೀವು ಕೈ ಜೋಡಿಸಬೇಕು. ಸರ್ಕಾರದ ಮೇಲೆ ಒತ್ತಡ ಹಾಕುವ ಕೆಲಸ ಮಾಡಬೇಕು, ಪ್ರಾಮಾಣಿಕವಾಗಿ ಕೆಲಸಮಾಡಿ ನಿಮಗೆ ಶುಭವಾಗಲಿ ಎಂದು ದೊರೆಸ್ವಾಮಿ ತಿಳಿಸಿದರು.

ಭ್ರಷ್ಟಚಾರ ವಿರೋಧಿ ಹೋರಾಟಗಾರರಾದ ಎಸ್.ಆರ್ ಹೀರೇಮಠರವರು ಮಾನತಾಡಿ ನಮ್ಮ ಜೀವನದುದ್ದಕ್ಕೂ ಇಂತಹ ಜನಪರ ಪ್ರಯೋಗಗಳಿಗೆ ಬೆಂಬಲವಿದೆ ಎಂದರು.

ಯಾವ ಕಾಲಘಟ್ಟದಲ್ಲಿ ಜೀವಿಸುತ್ತಿದ್ದೇವೆ ಎಂದರೆ ಕೆಲವೇ ದಿನಗಳ ಹಿಂದೆ ಇಡೀ ದೇಶವೇ ನೋಡುವಂತೆ ಕರ್ನಾಟಕದ ಮೂರು ಪಕ್ಷಗಳು ಮಾಡಿದ ರಾಜಕಾರಣ ನೋಡಿ ನಾವೆಲ್ಲರು ತಲೆತಗ್ಗಸಬೇಕು. 17 ಶಾಸಕರ ಜೊತೆ, ಮೂರು ಪಕ್ಷದ ನಾಯಕರು ವರ್ತಿಸಿದ ರೀತಿ, ರಾಜ್ಯಪಾಲರು ನಡೆದುಕೊಂಡ ವೈಖರಿ ಇಡೀ ರಾಜ್ಯಕ್ಕಾದ ಅವಮಾನವಾಗಿದೆ. ಪಾರ್ಟಿ ವಿಥ್ ಡಿಫರೆನ್ಸ್ ಎಂದು ಕರೆದುಕೊಳ್ಳುವ ಬಿಜೆಪಿಯವರು ಅತ್ಯಂತ ನಾಚಿಕೆಗೇಡಿನ ಆಪರೇಷನ್ ಕಮಲ ಮಾಡಿದ್ದರೆ ಎಂದರು.

ನನ್ನ ಜೀವಿತಾವಧಿಯಲ್ಲಿ ಎಂದೂ ಕೂಡ ರಾಜಕಾರಣ ಇಷ್ಟು ಕೀಳು ಮಟ್ಟಕ್ಕೆ ಇಳಿದಿರದಿಲ್ಲ. ಅಭಿವೃದ್ದಿ ಅನ್ನುವ ಹೆಸರಿನಲ್ಲಿ ಮಾಡಬಾರದ ಕೆಲಸ ಮಾಡಿ ಸೃಷ್ಟಿ ಮಾತೆಯ ಮೇಲೆ ಪ್ರಹಾರ ಮಾಡಿದ್ದೇವೆ. ಆಸೆ, ಅತಿ ಆಸೆ, ದುರಾಶೆಯಿಂದ ಪ್ರವಾಹವಾಗಿದೆ, ಪರಿಸರ ಸಮತೋಲನ ಕೆಡಿಸಿದ್ದೇವೆ. ಅದರ ಪರಿಣಾಮವನ್ನು ಈಗ ಅನಭವಿಸಬೇಕಾಗಿದೆ ಎಂದರು.

ಗಾಂಧೀಜಿಯವರು ಹೇಳಿದ ಹಾಗೆ ನಮಗೆ ಗುರಿ ಅಷ್ಟೇ ಮಹತ್ವವಲ್ಲ ದಾರಿಯೂ ಕೂಡ ಮುಖ್ಯ. ಸ್ವಾತಂತ್ರ್ಯ ಮತ್ತು ಸಮಾನತೆ ಎರಡು ಬೇಕು. ಇದಕ್ಕಾಗಿ ಈ ಪಕ್ಷ ಶ್ರಮಿಸಲಿ ಎಂದರು.

“ಕರ್ನಾಟಕ ರಾಷ್ಟ್ರ ಸಮಿತಿ”ಯ ಅಧ್ಯಕ್ಷರಾದ ರವಿಕೃಷ್ಙರೆಡ್ಡಿಯವರು ಸ್ವಚ್ಛ, ಪ್ರಾಮಾಣಿಕ, ಜನಪರ ರಾಜಕಾರಣಕ್ಕಾಗಿ ಈ ಪಕ್ಷವನ್ನು ಸ್ಥಾಪಿಸಿದ್ದೇವೆ. ರಾಜ್ಯದಲ್ಲಿ ಜೆಸಿಬಿ ಪಕ್ಷಗಳ ದುರಾಡಳಿತದ ವಿರುದ್ಧ ಹೋರಾಡಲಿದ್ದೇವೆ, ಹೀಗಲ್ಲದಿದ್ದರೆ ಇನ್ಯಾವಾಗ? ನಾವಲ್ಲದಿದ್ದರೆ ಇನ್ಯಾರು? ಎಂದರು.

ಸುಪ್ರೀಂ ಕೋರ್ಟ್ ನ ನ್ಯಾಯವಾದಿಗಳಾದ ಶ್ರೀ ಕೆ.ವಿ ಧನಂಜಯರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. “ಕರ್ನಾಟಕ ರಾಷ್ಟ್ರ ಸಮಿತಿ”ಯ ಉಪಾಧ್ಯಕ್ಷರಾದ ಎಚ್.ಎಸ್ ಲಿಂಗೇಗೌಡ, ಪ್ರಧಾನ ಕಾರ್ಯದರ್ಶಿಗಳಾದ ದೀಪಕ್ ಸಿ.ಎನ್, ಜಂಟಿ ಕಾರ್ಯದರ್ಶಿಗಳಾದ ರಘುಪತಿ ಭಟ್, ಮಲ್ಲಿಕಾರ್ಜುನ್ ಬಿ.ಎಸ್, ಖಜಾಂಚಿ ಅರವಿಂದ್ ಕೆ.ಬಿ ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...