Homeಕರ್ನಾಟಕ"ಕರ್ನಾಟಕ ರಾಷ್ಟ್ರ ಸಮಿತಿ" ನೂತನ ಪ್ರಾದೇಶಿಕ ಪಕ್ಷ ಅಸ್ತಿತ್ವಕ್ಕೆ... ಎಚ್.ಎಸ್ ದೊರೆಸ್ವಾಮಿಯವರಿಂದ ಉದ್ಘಾಟನೆ

“ಕರ್ನಾಟಕ ರಾಷ್ಟ್ರ ಸಮಿತಿ” ನೂತನ ಪ್ರಾದೇಶಿಕ ಪಕ್ಷ ಅಸ್ತಿತ್ವಕ್ಕೆ… ಎಚ್.ಎಸ್ ದೊರೆಸ್ವಾಮಿಯವರಿಂದ ಉದ್ಘಾಟನೆ

- Advertisement -
- Advertisement -

ಜನಪರ ಹೋರಾಟಗಾರ ರವಿ ಕೃಷ್ಣ ರೆಡ್ಡಿಯವರ ನೇತೃತ್ವದಲ್ಲಿ “ಕರ್ನಾಟಕ ರಾಷ್ಟ್ರ ಸಮಿತಿ” ಎಂಬ ನೂತನ ರಾಜಕೀಯ ಪಕ್ಷವನ್ನು ಅಸ್ತಿತ್ವಕ್ಕೆ ತರಲಾಗಿದೆ. ಕೆ.ಆರ್.ಎಸ್ ಎಂದು ಕರೆಯಲ್ಪಡುವ ಈ ಪಕ್ಷವು ಪ್ರಾದೇಶಿಕ-ಪ್ರಾಮಾಣಿಕ ಎಂಬ ಘೋಷವಾಕ್ಯಗಳನ್ನು  ಹೊಂದಿದ್ದು ಮುಂಬರುವ ಚುನಾವಣೆಗಳಲ್ಲಿ ಸಕ್ರಿಯವಾಗಿ ಸ್ಪರ್ಧಿಸಲಿದೆ.

ಇಂದು ಬೆಂಗಳೂರಿನಲ್ಲಿ ಪಕ್ಷದ ಉದ್ಘಾಟನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್ ದೊರೆಸ್ವಾಮಿಯವರು “ಇಂದು ಬಡತನ ಹೆಚ್ಚಾಗುತ್ತಿದೆ. ನಿರುದ್ಯೋಗ ಮಿತಿ ಮೀರುತ್ತಿದೆ. ದೇಶದ ಸಂಪತ್ತನ್ನೆಲ್ಲ ಕೇವಲ ಶೇ.10 ರಷ್ಟು ಜನ ನುಂಗಿದ್ದಾರೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಬಹಳಷ್ಟು ಜನ ಭೂಮಿ ವಸತಿಯಿಲ್ಲದೇ ಬೀದಿಪಾಲಾಗಿದ್ದಾರೆ. ಶಿಕ್ಷಣ, ಆರೋಗ್ಯ ನೀಡಬೇಕಾದ ಸರ್ಕಾರಗಳು ಕಣ್ಣು ಮುಚ್ಚಿ ಕುಳಿತಿವೆ ಹಾಗಾಗಿ ಪರ್ಯಾಯ ಪಕ್ಷಗಳು ಅಗತ್ಯವಾಗಿವೆ” ಎಂದರು.

ನಾವು ಸರ್ಕಾರದ ಬಳಿ ಭಿಕ್ಷೆ ಕೇಳುತ್ತಿಲ್ಲ. ಬಡವರ ಹಕ್ಕು ಕೇಳುತ್ತಿದ್ದೇವೆ. ಸ್ವಾತಂತ್ರ್ಯ ಬಂದು 70 ವರ್ಷಗಳಾದರೂ ಜನರನ್ನು ಹೀಗೆ ಇಟ್ಟಿರುವುದಕ್ಕೆ ಈ ಸರ್ಕಾರಗಳಿಗೆ ನಾಚಿಕೆಯಾಗುವುದಿಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದರು. ಇಂದು ಸರ್ಕಾರಗಳಿಗೆ ಕ್ರಿಮಿನಲ್ ಗಳು ಆಯ್ಕೆಯಾಗಿ ಹೋಗುತ್ತಿದ್ದಾರೆ. ಅವರ ಕೆಲಸ ಏನು? ಕೊಲೆ ಮಾಡುವುದಾ? ಎಂದು ಪ್ರಶ್ನಿಸಿದರು.

ನಮ್ಮ ಭಾರತದ ಸಂವಿಧಾನ ಏನು ಹೇಳುತ್ತದೆ? ನಾವು ಸ್ವಾತಂತ್ರ್ಯವನ್ನು ಉಳಿಸಿಕೊಳ್ಳುತ್ತೇವೆಯೇ? ನಮಗೆ ಭವಿಷ್ಯವಿದೆಯೇ? ಗ್ಯಾಟ್ ಒಪ್ಪಂದ ಆಗಿದೆ. ಪಿ.ವಿ ನರಸಿಂಹರಾವ್ ಹೋಗಿ ಸಹಿ ಮಾಡಿದ ಪರಿಣಾಮವನ್ನು ನಾವಿಂದು ಅನುಭವಿಸುತ್ತಿದ್ದೇವೆ. ಆಳುವವರು, ಬಂಡವಾಳಿಗರು ಸೇರಿ ದೇಶವನ್ನು ಮಾರುತ್ತಿದ್ದಾರೆ. ನೆಲ ಜಲವನ್ನು ದೋಚುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇಂದು ಹಲವಾರು ಪಕ್ಷಗಳಿವೆ. ಅವುಗಳಲ್ಲಿ ಒಬ್ಬ ನಾಯಕನಾಗುತ್ತಾನೆ. ಉಳಿದವರು ಆಗುವುದಿಲ್ಲ. ನಾಯಕನಾದವನು ತನ್ನ ಸೀಟು ಭದ್ರಪಡಿಸಿಕೊಳ್ಳಲು ಮಾತ್ರ ಕೆಲಸ ಮಾಡುತ್ತಾನೆ. ನಮ್ಮಲ್ಲಿ ಹಾಗಾಗಬಾರದು. ನಾವು ಜನರಿಗಾಗಿ ಕೆಲಸ ಮಾಡುಬೇಕು, ಆಂತರೀಕ ಪ್ರಜಾಪ್ರಭುತ್ವ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ರಾಜಕೀಯ ದಿವಾಳಿಯೆದ್ದಿದೆ. ನಾಯಕತ್ವದ ಅಭಾವವಿದೆ. ಇದಕ್ಕೆ ಪ್ರತಿಯಾಗಿ ಅವರು ಮಾಡಿದ ತಪ್ಪುಗಳನ್ನು ಗುರುತುಮಾಡಿ ಒಂದು ಆದರ್ಶಯುತ ರಾಜಕಾರಣವನ್ನು ನಾವು ಮಾಡಬೇಕಿದೆ. ನಾನು ಸವೋದಯವನ್ನು ಬಯಸುವವನು. ನಾನು ಬೇರೆ ಯಾವ ಪಕ್ಷಗಳ ಜೊತೆಗೂ ಇಲ್ಲ. ನೀವೆಲ್ಲರೂ ಒಂದು ಹೊಸ ದಾರಿ ತೋರಿಸಿದರೆ ಒಳ್ಳೆಯದು ಎಂದರು.

ನಿಮ್ಮ ಪಕ್ಷ ಚುನಾವಣೆ ಮತ್ತು ಹೋರಾಟ ಎರಡನ್ನು ಮಾಡಬೇಕು. ಕೇವಲ ಚುನಾವಣೆಗಳಿಗೆ ಸೀಮಿತರಾಗಬಾರದು. ದೇಶದ ಸಮಸ್ಯೆಗಳನ್ನು ಬಗೆಹರಿಸಲು ಹೋರಾಡಬೇಕು. ರಾಜ್ಯದಲ್ಲಿ ಭೂಮಿಗಾಗಿ ಚಳವಳಿ ನಡೆಯುತ್ತಿದೆ. ನೀವು ಕೈ ಜೋಡಿಸಬೇಕು. ಸರ್ಕಾರದ ಮೇಲೆ ಒತ್ತಡ ಹಾಕುವ ಕೆಲಸ ಮಾಡಬೇಕು, ಪ್ರಾಮಾಣಿಕವಾಗಿ ಕೆಲಸಮಾಡಿ ನಿಮಗೆ ಶುಭವಾಗಲಿ ಎಂದು ದೊರೆಸ್ವಾಮಿ ತಿಳಿಸಿದರು.

ಭ್ರಷ್ಟಚಾರ ವಿರೋಧಿ ಹೋರಾಟಗಾರರಾದ ಎಸ್.ಆರ್ ಹೀರೇಮಠರವರು ಮಾನತಾಡಿ ನಮ್ಮ ಜೀವನದುದ್ದಕ್ಕೂ ಇಂತಹ ಜನಪರ ಪ್ರಯೋಗಗಳಿಗೆ ಬೆಂಬಲವಿದೆ ಎಂದರು.

ಯಾವ ಕಾಲಘಟ್ಟದಲ್ಲಿ ಜೀವಿಸುತ್ತಿದ್ದೇವೆ ಎಂದರೆ ಕೆಲವೇ ದಿನಗಳ ಹಿಂದೆ ಇಡೀ ದೇಶವೇ ನೋಡುವಂತೆ ಕರ್ನಾಟಕದ ಮೂರು ಪಕ್ಷಗಳು ಮಾಡಿದ ರಾಜಕಾರಣ ನೋಡಿ ನಾವೆಲ್ಲರು ತಲೆತಗ್ಗಸಬೇಕು. 17 ಶಾಸಕರ ಜೊತೆ, ಮೂರು ಪಕ್ಷದ ನಾಯಕರು ವರ್ತಿಸಿದ ರೀತಿ, ರಾಜ್ಯಪಾಲರು ನಡೆದುಕೊಂಡ ವೈಖರಿ ಇಡೀ ರಾಜ್ಯಕ್ಕಾದ ಅವಮಾನವಾಗಿದೆ. ಪಾರ್ಟಿ ವಿಥ್ ಡಿಫರೆನ್ಸ್ ಎಂದು ಕರೆದುಕೊಳ್ಳುವ ಬಿಜೆಪಿಯವರು ಅತ್ಯಂತ ನಾಚಿಕೆಗೇಡಿನ ಆಪರೇಷನ್ ಕಮಲ ಮಾಡಿದ್ದರೆ ಎಂದರು.

ನನ್ನ ಜೀವಿತಾವಧಿಯಲ್ಲಿ ಎಂದೂ ಕೂಡ ರಾಜಕಾರಣ ಇಷ್ಟು ಕೀಳು ಮಟ್ಟಕ್ಕೆ ಇಳಿದಿರದಿಲ್ಲ. ಅಭಿವೃದ್ದಿ ಅನ್ನುವ ಹೆಸರಿನಲ್ಲಿ ಮಾಡಬಾರದ ಕೆಲಸ ಮಾಡಿ ಸೃಷ್ಟಿ ಮಾತೆಯ ಮೇಲೆ ಪ್ರಹಾರ ಮಾಡಿದ್ದೇವೆ. ಆಸೆ, ಅತಿ ಆಸೆ, ದುರಾಶೆಯಿಂದ ಪ್ರವಾಹವಾಗಿದೆ, ಪರಿಸರ ಸಮತೋಲನ ಕೆಡಿಸಿದ್ದೇವೆ. ಅದರ ಪರಿಣಾಮವನ್ನು ಈಗ ಅನಭವಿಸಬೇಕಾಗಿದೆ ಎಂದರು.

ಗಾಂಧೀಜಿಯವರು ಹೇಳಿದ ಹಾಗೆ ನಮಗೆ ಗುರಿ ಅಷ್ಟೇ ಮಹತ್ವವಲ್ಲ ದಾರಿಯೂ ಕೂಡ ಮುಖ್ಯ. ಸ್ವಾತಂತ್ರ್ಯ ಮತ್ತು ಸಮಾನತೆ ಎರಡು ಬೇಕು. ಇದಕ್ಕಾಗಿ ಈ ಪಕ್ಷ ಶ್ರಮಿಸಲಿ ಎಂದರು.

“ಕರ್ನಾಟಕ ರಾಷ್ಟ್ರ ಸಮಿತಿ”ಯ ಅಧ್ಯಕ್ಷರಾದ ರವಿಕೃಷ್ಙರೆಡ್ಡಿಯವರು ಸ್ವಚ್ಛ, ಪ್ರಾಮಾಣಿಕ, ಜನಪರ ರಾಜಕಾರಣಕ್ಕಾಗಿ ಈ ಪಕ್ಷವನ್ನು ಸ್ಥಾಪಿಸಿದ್ದೇವೆ. ರಾಜ್ಯದಲ್ಲಿ ಜೆಸಿಬಿ ಪಕ್ಷಗಳ ದುರಾಡಳಿತದ ವಿರುದ್ಧ ಹೋರಾಡಲಿದ್ದೇವೆ, ಹೀಗಲ್ಲದಿದ್ದರೆ ಇನ್ಯಾವಾಗ? ನಾವಲ್ಲದಿದ್ದರೆ ಇನ್ಯಾರು? ಎಂದರು.

ಸುಪ್ರೀಂ ಕೋರ್ಟ್ ನ ನ್ಯಾಯವಾದಿಗಳಾದ ಶ್ರೀ ಕೆ.ವಿ ಧನಂಜಯರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. “ಕರ್ನಾಟಕ ರಾಷ್ಟ್ರ ಸಮಿತಿ”ಯ ಉಪಾಧ್ಯಕ್ಷರಾದ ಎಚ್.ಎಸ್ ಲಿಂಗೇಗೌಡ, ಪ್ರಧಾನ ಕಾರ್ಯದರ್ಶಿಗಳಾದ ದೀಪಕ್ ಸಿ.ಎನ್, ಜಂಟಿ ಕಾರ್ಯದರ್ಶಿಗಳಾದ ರಘುಪತಿ ಭಟ್, ಮಲ್ಲಿಕಾರ್ಜುನ್ ಬಿ.ಎಸ್, ಖಜಾಂಚಿ ಅರವಿಂದ್ ಕೆ.ಬಿ ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...