Homeಕರ್ನಾಟಕ"ಕರ್ನಾಟಕ ರಾಷ್ಟ್ರ ಸಮಿತಿ" ನೂತನ ಪ್ರಾದೇಶಿಕ ಪಕ್ಷ ಅಸ್ತಿತ್ವಕ್ಕೆ... ಎಚ್.ಎಸ್ ದೊರೆಸ್ವಾಮಿಯವರಿಂದ ಉದ್ಘಾಟನೆ

“ಕರ್ನಾಟಕ ರಾಷ್ಟ್ರ ಸಮಿತಿ” ನೂತನ ಪ್ರಾದೇಶಿಕ ಪಕ್ಷ ಅಸ್ತಿತ್ವಕ್ಕೆ… ಎಚ್.ಎಸ್ ದೊರೆಸ್ವಾಮಿಯವರಿಂದ ಉದ್ಘಾಟನೆ

- Advertisement -
- Advertisement -

ಜನಪರ ಹೋರಾಟಗಾರ ರವಿ ಕೃಷ್ಣ ರೆಡ್ಡಿಯವರ ನೇತೃತ್ವದಲ್ಲಿ “ಕರ್ನಾಟಕ ರಾಷ್ಟ್ರ ಸಮಿತಿ” ಎಂಬ ನೂತನ ರಾಜಕೀಯ ಪಕ್ಷವನ್ನು ಅಸ್ತಿತ್ವಕ್ಕೆ ತರಲಾಗಿದೆ. ಕೆ.ಆರ್.ಎಸ್ ಎಂದು ಕರೆಯಲ್ಪಡುವ ಈ ಪಕ್ಷವು ಪ್ರಾದೇಶಿಕ-ಪ್ರಾಮಾಣಿಕ ಎಂಬ ಘೋಷವಾಕ್ಯಗಳನ್ನು  ಹೊಂದಿದ್ದು ಮುಂಬರುವ ಚುನಾವಣೆಗಳಲ್ಲಿ ಸಕ್ರಿಯವಾಗಿ ಸ್ಪರ್ಧಿಸಲಿದೆ.

ಇಂದು ಬೆಂಗಳೂರಿನಲ್ಲಿ ಪಕ್ಷದ ಉದ್ಘಾಟನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್ ದೊರೆಸ್ವಾಮಿಯವರು “ಇಂದು ಬಡತನ ಹೆಚ್ಚಾಗುತ್ತಿದೆ. ನಿರುದ್ಯೋಗ ಮಿತಿ ಮೀರುತ್ತಿದೆ. ದೇಶದ ಸಂಪತ್ತನ್ನೆಲ್ಲ ಕೇವಲ ಶೇ.10 ರಷ್ಟು ಜನ ನುಂಗಿದ್ದಾರೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಬಹಳಷ್ಟು ಜನ ಭೂಮಿ ವಸತಿಯಿಲ್ಲದೇ ಬೀದಿಪಾಲಾಗಿದ್ದಾರೆ. ಶಿಕ್ಷಣ, ಆರೋಗ್ಯ ನೀಡಬೇಕಾದ ಸರ್ಕಾರಗಳು ಕಣ್ಣು ಮುಚ್ಚಿ ಕುಳಿತಿವೆ ಹಾಗಾಗಿ ಪರ್ಯಾಯ ಪಕ್ಷಗಳು ಅಗತ್ಯವಾಗಿವೆ” ಎಂದರು.

ನಾವು ಸರ್ಕಾರದ ಬಳಿ ಭಿಕ್ಷೆ ಕೇಳುತ್ತಿಲ್ಲ. ಬಡವರ ಹಕ್ಕು ಕೇಳುತ್ತಿದ್ದೇವೆ. ಸ್ವಾತಂತ್ರ್ಯ ಬಂದು 70 ವರ್ಷಗಳಾದರೂ ಜನರನ್ನು ಹೀಗೆ ಇಟ್ಟಿರುವುದಕ್ಕೆ ಈ ಸರ್ಕಾರಗಳಿಗೆ ನಾಚಿಕೆಯಾಗುವುದಿಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದರು. ಇಂದು ಸರ್ಕಾರಗಳಿಗೆ ಕ್ರಿಮಿನಲ್ ಗಳು ಆಯ್ಕೆಯಾಗಿ ಹೋಗುತ್ತಿದ್ದಾರೆ. ಅವರ ಕೆಲಸ ಏನು? ಕೊಲೆ ಮಾಡುವುದಾ? ಎಂದು ಪ್ರಶ್ನಿಸಿದರು.

ನಮ್ಮ ಭಾರತದ ಸಂವಿಧಾನ ಏನು ಹೇಳುತ್ತದೆ? ನಾವು ಸ್ವಾತಂತ್ರ್ಯವನ್ನು ಉಳಿಸಿಕೊಳ್ಳುತ್ತೇವೆಯೇ? ನಮಗೆ ಭವಿಷ್ಯವಿದೆಯೇ? ಗ್ಯಾಟ್ ಒಪ್ಪಂದ ಆಗಿದೆ. ಪಿ.ವಿ ನರಸಿಂಹರಾವ್ ಹೋಗಿ ಸಹಿ ಮಾಡಿದ ಪರಿಣಾಮವನ್ನು ನಾವಿಂದು ಅನುಭವಿಸುತ್ತಿದ್ದೇವೆ. ಆಳುವವರು, ಬಂಡವಾಳಿಗರು ಸೇರಿ ದೇಶವನ್ನು ಮಾರುತ್ತಿದ್ದಾರೆ. ನೆಲ ಜಲವನ್ನು ದೋಚುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇಂದು ಹಲವಾರು ಪಕ್ಷಗಳಿವೆ. ಅವುಗಳಲ್ಲಿ ಒಬ್ಬ ನಾಯಕನಾಗುತ್ತಾನೆ. ಉಳಿದವರು ಆಗುವುದಿಲ್ಲ. ನಾಯಕನಾದವನು ತನ್ನ ಸೀಟು ಭದ್ರಪಡಿಸಿಕೊಳ್ಳಲು ಮಾತ್ರ ಕೆಲಸ ಮಾಡುತ್ತಾನೆ. ನಮ್ಮಲ್ಲಿ ಹಾಗಾಗಬಾರದು. ನಾವು ಜನರಿಗಾಗಿ ಕೆಲಸ ಮಾಡುಬೇಕು, ಆಂತರೀಕ ಪ್ರಜಾಪ್ರಭುತ್ವ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ರಾಜಕೀಯ ದಿವಾಳಿಯೆದ್ದಿದೆ. ನಾಯಕತ್ವದ ಅಭಾವವಿದೆ. ಇದಕ್ಕೆ ಪ್ರತಿಯಾಗಿ ಅವರು ಮಾಡಿದ ತಪ್ಪುಗಳನ್ನು ಗುರುತುಮಾಡಿ ಒಂದು ಆದರ್ಶಯುತ ರಾಜಕಾರಣವನ್ನು ನಾವು ಮಾಡಬೇಕಿದೆ. ನಾನು ಸವೋದಯವನ್ನು ಬಯಸುವವನು. ನಾನು ಬೇರೆ ಯಾವ ಪಕ್ಷಗಳ ಜೊತೆಗೂ ಇಲ್ಲ. ನೀವೆಲ್ಲರೂ ಒಂದು ಹೊಸ ದಾರಿ ತೋರಿಸಿದರೆ ಒಳ್ಳೆಯದು ಎಂದರು.

ನಿಮ್ಮ ಪಕ್ಷ ಚುನಾವಣೆ ಮತ್ತು ಹೋರಾಟ ಎರಡನ್ನು ಮಾಡಬೇಕು. ಕೇವಲ ಚುನಾವಣೆಗಳಿಗೆ ಸೀಮಿತರಾಗಬಾರದು. ದೇಶದ ಸಮಸ್ಯೆಗಳನ್ನು ಬಗೆಹರಿಸಲು ಹೋರಾಡಬೇಕು. ರಾಜ್ಯದಲ್ಲಿ ಭೂಮಿಗಾಗಿ ಚಳವಳಿ ನಡೆಯುತ್ತಿದೆ. ನೀವು ಕೈ ಜೋಡಿಸಬೇಕು. ಸರ್ಕಾರದ ಮೇಲೆ ಒತ್ತಡ ಹಾಕುವ ಕೆಲಸ ಮಾಡಬೇಕು, ಪ್ರಾಮಾಣಿಕವಾಗಿ ಕೆಲಸಮಾಡಿ ನಿಮಗೆ ಶುಭವಾಗಲಿ ಎಂದು ದೊರೆಸ್ವಾಮಿ ತಿಳಿಸಿದರು.

ಭ್ರಷ್ಟಚಾರ ವಿರೋಧಿ ಹೋರಾಟಗಾರರಾದ ಎಸ್.ಆರ್ ಹೀರೇಮಠರವರು ಮಾನತಾಡಿ ನಮ್ಮ ಜೀವನದುದ್ದಕ್ಕೂ ಇಂತಹ ಜನಪರ ಪ್ರಯೋಗಗಳಿಗೆ ಬೆಂಬಲವಿದೆ ಎಂದರು.

ಯಾವ ಕಾಲಘಟ್ಟದಲ್ಲಿ ಜೀವಿಸುತ್ತಿದ್ದೇವೆ ಎಂದರೆ ಕೆಲವೇ ದಿನಗಳ ಹಿಂದೆ ಇಡೀ ದೇಶವೇ ನೋಡುವಂತೆ ಕರ್ನಾಟಕದ ಮೂರು ಪಕ್ಷಗಳು ಮಾಡಿದ ರಾಜಕಾರಣ ನೋಡಿ ನಾವೆಲ್ಲರು ತಲೆತಗ್ಗಸಬೇಕು. 17 ಶಾಸಕರ ಜೊತೆ, ಮೂರು ಪಕ್ಷದ ನಾಯಕರು ವರ್ತಿಸಿದ ರೀತಿ, ರಾಜ್ಯಪಾಲರು ನಡೆದುಕೊಂಡ ವೈಖರಿ ಇಡೀ ರಾಜ್ಯಕ್ಕಾದ ಅವಮಾನವಾಗಿದೆ. ಪಾರ್ಟಿ ವಿಥ್ ಡಿಫರೆನ್ಸ್ ಎಂದು ಕರೆದುಕೊಳ್ಳುವ ಬಿಜೆಪಿಯವರು ಅತ್ಯಂತ ನಾಚಿಕೆಗೇಡಿನ ಆಪರೇಷನ್ ಕಮಲ ಮಾಡಿದ್ದರೆ ಎಂದರು.

ನನ್ನ ಜೀವಿತಾವಧಿಯಲ್ಲಿ ಎಂದೂ ಕೂಡ ರಾಜಕಾರಣ ಇಷ್ಟು ಕೀಳು ಮಟ್ಟಕ್ಕೆ ಇಳಿದಿರದಿಲ್ಲ. ಅಭಿವೃದ್ದಿ ಅನ್ನುವ ಹೆಸರಿನಲ್ಲಿ ಮಾಡಬಾರದ ಕೆಲಸ ಮಾಡಿ ಸೃಷ್ಟಿ ಮಾತೆಯ ಮೇಲೆ ಪ್ರಹಾರ ಮಾಡಿದ್ದೇವೆ. ಆಸೆ, ಅತಿ ಆಸೆ, ದುರಾಶೆಯಿಂದ ಪ್ರವಾಹವಾಗಿದೆ, ಪರಿಸರ ಸಮತೋಲನ ಕೆಡಿಸಿದ್ದೇವೆ. ಅದರ ಪರಿಣಾಮವನ್ನು ಈಗ ಅನಭವಿಸಬೇಕಾಗಿದೆ ಎಂದರು.

ಗಾಂಧೀಜಿಯವರು ಹೇಳಿದ ಹಾಗೆ ನಮಗೆ ಗುರಿ ಅಷ್ಟೇ ಮಹತ್ವವಲ್ಲ ದಾರಿಯೂ ಕೂಡ ಮುಖ್ಯ. ಸ್ವಾತಂತ್ರ್ಯ ಮತ್ತು ಸಮಾನತೆ ಎರಡು ಬೇಕು. ಇದಕ್ಕಾಗಿ ಈ ಪಕ್ಷ ಶ್ರಮಿಸಲಿ ಎಂದರು.

“ಕರ್ನಾಟಕ ರಾಷ್ಟ್ರ ಸಮಿತಿ”ಯ ಅಧ್ಯಕ್ಷರಾದ ರವಿಕೃಷ್ಙರೆಡ್ಡಿಯವರು ಸ್ವಚ್ಛ, ಪ್ರಾಮಾಣಿಕ, ಜನಪರ ರಾಜಕಾರಣಕ್ಕಾಗಿ ಈ ಪಕ್ಷವನ್ನು ಸ್ಥಾಪಿಸಿದ್ದೇವೆ. ರಾಜ್ಯದಲ್ಲಿ ಜೆಸಿಬಿ ಪಕ್ಷಗಳ ದುರಾಡಳಿತದ ವಿರುದ್ಧ ಹೋರಾಡಲಿದ್ದೇವೆ, ಹೀಗಲ್ಲದಿದ್ದರೆ ಇನ್ಯಾವಾಗ? ನಾವಲ್ಲದಿದ್ದರೆ ಇನ್ಯಾರು? ಎಂದರು.

ಸುಪ್ರೀಂ ಕೋರ್ಟ್ ನ ನ್ಯಾಯವಾದಿಗಳಾದ ಶ್ರೀ ಕೆ.ವಿ ಧನಂಜಯರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. “ಕರ್ನಾಟಕ ರಾಷ್ಟ್ರ ಸಮಿತಿ”ಯ ಉಪಾಧ್ಯಕ್ಷರಾದ ಎಚ್.ಎಸ್ ಲಿಂಗೇಗೌಡ, ಪ್ರಧಾನ ಕಾರ್ಯದರ್ಶಿಗಳಾದ ದೀಪಕ್ ಸಿ.ಎನ್, ಜಂಟಿ ಕಾರ್ಯದರ್ಶಿಗಳಾದ ರಘುಪತಿ ಭಟ್, ಮಲ್ಲಿಕಾರ್ಜುನ್ ಬಿ.ಎಸ್, ಖಜಾಂಚಿ ಅರವಿಂದ್ ಕೆ.ಬಿ ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...