Homeಕರ್ನಾಟಕಅಬಕಾರಿ ಸಚಿವ ಗೋಪಾಲಯ್ಯ ವಿರುದ್ಧ ಎಸಿಬಿಯಲ್ಲಿ ದೂರು ದಾಖಲು: ವಲಸೆ ಸಚಿವರಿಗೆ ನಡುಕ

ಅಬಕಾರಿ ಸಚಿವ ಗೋಪಾಲಯ್ಯ ವಿರುದ್ಧ ಎಸಿಬಿಯಲ್ಲಿ ದೂರು ದಾಖಲು: ವಲಸೆ ಸಚಿವರಿಗೆ ನಡುಕ

- Advertisement -
- Advertisement -

ಕಾಂಗ್ರೆಸ್-ಜೆಡಿಎಸ್‌ ಮೈತ್ರಿ ಸರ್ಕಾರವನ್ನು ತೊರೆದು ಬಿಜೆಪಿ ಸೇರಿ ಸರ್ಕಾರದಲ್ಲಿ ಮಂತ್ರಿಯಾಗಿರುವ ವಲಸೆ ಸಚಿವರಲ್ಲಿ ಈಗ ಅಭದ್ರತೆಯ ಭೀತಿ ಆರಂಭವಾಗಿದೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಬದಲಾವಣೆ ವಿಚಾರದಿಂದಲೇ ತಮ್ಮ ಸ್ಥಾನಗಳ ಕುರಿತು ಚಿಂತಿತರಾಗಿರುವ ವಲಸೆ ಸಚಿವರಿಗೆ ಸೋಮವಾರ ಸ್ಫೋಟಗೊಂಡಿರುವ ಅಬಕಾರಿ ಸಚಿವ ಕೆ.ಗೋಪಾಲಯ್ಯನವರ ಕುರಿತಾದ ಹಫ್ತಾ ಆಡಿಯೋ ಇನ್ನಷ್ಟು ಭೀತಿಯನ್ನು ಉಂಟುಮಾಡಿದೆ.

ಭ್ರಷ್ಟಾಚಾರ ವಿರೋಧಿ ಹೋರಾಟಗಾರ ರವಿಕೃಷ್ಣಾ ರೆಡ್ಡಿಯವರ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಅಬಕಾರಿ ಸಚಿವ ಕೆ. ಗೋಪಾಲಯ್ಯನವರ ವಿರುದ್ಧ ಬೆಂಗಳೂರಿನ ಎಸಿಬಿಯಲ್ಲಿ ದೂರು ದಾಖಲಿಸಿದೆ. ಕರ್ನಾಟಕ ರಾಷ್ಟ್ರ ಸಮಿತಿಯ ಬೆಂಗಳೂರು ಘಟಕದ ಅಧ್ಯಕ್ಷ ಮಂಜುನಾಥ್ ಎಸ್‌, ರಾಜ್ಯ ಕಾರ್ಯದರ್ಶಿ ರಘುರಾಮ್ ಎಸ್‌ ಭಟ್ ಎಸಿಬಿಯ ಎಡಿಜಿಪಿಯವರಿಗೆ ನೀಡಿರುವ ದೂರಿನಲ್ಲಿ ಕೆ.ಗೋಪಾಲಯ್ಯನವರು ಲಂಚ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ : ಯುಪಿ ವಿಧಾನಸಭಾ ಚುನಾವಣೆ-ಆದಿತ್ಯನಾಥ್‌ ಮುಖ್ಯಮಂತ್ರಿ ಅಭ್ಯರ್ಥಿ‌: ಬಿಜೆಪಿ

ಹಿರಿಯ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ವಲಸೆ ಸಚಿವರಿಂದಲೆ ಸರ್ಕಾರ ದುರ್ಬಲವಾಗಿದೆ ಎಂಬ ಹೇಳಿಕೆಯನ್ನು ನೀಡಿ ಈಗಾಗಲೇ ಮೂಲ ಬಿಜೆಪಿಗರಿಗೆ ವಲಸೆ ಸಚಿವರ ಕುರಿತು ಇರುವ ಅಸಮಾಧಾನವನ್ನು ಹೊರಹಾಕಿದ್ದರು. ಈಗ ಕೆ. ಗೋಪಾಲಯ್ಯ ಅವರು ಜಿಲ್ಲೆಗಳಿಂದ ಪ್ರತಿ ತಿಂಗಳು 5 ಲಕ್ಷ ರೂಪಾಯಿ ಹಣ ಸಂಗ್ರಹಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಗೋಪಾಲಯ್ಯನವರು ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿ 4 ಜನ ಅಧಿಕಾರಿಗಳನ್ನು ಅಮಾನತ್ತು ಮಾಡಿದ್ದಾರೆ. ಇಷ್ಟಕ್ಕೆ ಗೋಪಾಲಯ್ಯನವರ ಮೇಲಿನ ಲಂಚ ಸ್ವೀಕಾರ ಪ್ರಕರಣ ತಣ್ಣಗಾಗಿಲ್ಲ.

ಅಬಕಾರಿ ಸಚಿವ ಕೆ. ಗೋಪಾಲಯ್ಯನವರ ಮೇಲಿನ ಲಂಚ ಸ್ವೀಕಾರದ ಆಡಿಯೋ ಈಗ ವಿರೋಧ ಪಕ್ಷಗಳಿಗೆ ಮುಖ್ಯಮಂತ್ರಿ ಬಿ.ಎಸ್‌.ಯೆಡಿಯೂರಪ್ಪನವರ ಸರ್ಕಾರದ ಮೇಲೆ ಹರಿಹಾಯಲು ಒಳ್ಳೆಯ ಅಸ್ತ್ರವಾಗಿ ಮಾರ್ಪಟ್ಟಿದೆ. ಈಗಾಗಲೇ ಬಿಜೆಪಿಯ ವಿಧಾನಪರಿಷತ್ ಸದಸ್ಯ ಹೆಚ್‌.ವಿಶ್ವನಾಥ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಪುತ್ರ ಬಿ.ವೈ ವಿಜಯೇಂದ್ರ ಅವರ ಮೇಲೆ 20 ಸಾವಿರ ಕೋಟಿ ಭ್ರಷ್ಟಾಚಾರದ ಆರೋಪವನ್ನು ಮಾಡಿದ್ದಾರೆ. ಭಿನ್ನಮತ ಚಟುವಟಿಕೆ, ಮುಖ್ಯಮಂತ್ರಿ ಯಡಿಯೂರಪ್ಪನವರ ನಾಯಕತ್ವದ ಬಗೆಗಿನ ಅಸಮಾಧಾನದ ಜೊತೆಗೆ ಭ್ರಷ್ಟಾಚಾರದ ಆರೋಪಗಳು ಸರ್ಕಾರದ ವರ್ಚಸ್ಸಿಗೆ ಸರಿಪಡಿಸಲಾಗದ ಧಕ್ಕೆಯನ್ನು ಉಂಟುಮಾಡಿದೆ.

ಯಡಿಯೂರಪ್ಪನವರ ಸರ್ಕಾರ ಭ್ರಷ್ಟ ಸರ್ಕಾರ ಎಂಬ ಭಾವನೆ ಜನರಲ್ಲಿ ಬಲವಾಗಿ ಬೇರೂರ ತೊಡಗಿದ್ದು ವಿರೋಧ ಪಕ್ಷಗಳು ತಮ್ಮ ಆರೋಪಗಳ ಸುರಿಮಳೆಯ ಮೂಲಕ ಮೂಲಕ  ಮತ್ತೊಂದಿಷ್ಟು ತುಪ್ಪ ಸುರಿಯುತ್ತಿದ್ದಾರೆ. ಸರ್ಕಾರ ತನ್ನ ಮೇಲಿನ ಭ್ರಷ್ಟಾಚಾರದ ಆರೋಪಗಳಿಂದ ಹೊರಬರಲು ಅಬಕಾರಿ ಸಚಿವ ಕೆ. ಗೋಪಾಲಯ್ಯನವರ ತಲೆದಂಡವಾಗಬೇಕು ಎಂಬ ಕೂಗು ಬಿಜೆಪಿ ಸಚಿವರಿಂದಲೇ ಕೇಳಿಬಂದಿದೆ. ಕೆಲವು ಬಿಜೆಪಿ ನಾಯಕರು ಕೆ.ಗೋಪಾಲಯ್ಯನವರನ್ನು ಸಚಿವ ಸಂಪುಟದಿಂದ ಕೈ ಬಿಡುವಂತೆ ಮುಖ್ಯ ಮಂತ್ರಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಬಿಜೆಪಿ ಮೂಲಗಳು ಹೇಳಿವೆ.

ಮೊನ್ನೆ ಸೋಮವಾರ ಜೂನ್ 21 ರಂದು ಮಹತ್ವದ ಸಚಿವ ಸಂಪುಟ ಸಭೆ ನಡೆದಿದ್ದು, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಮೇಲಿನ ಅತ್ಯಾಚಾರದ ಪ್ರಕರಣದ ವಿಷಯ ಮತ್ತು ಗೋಪಲಾಯ್ಯನವರ ಆಡಿಯೋ ವಿಷಯ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ. ಕ್ಯಾಬಿನೆಟ್ ಸಭೆ ಬಳಿಕ ಆರೋಗ್ಯ ಸಚಿವ ಕೆ ಸುಧಾಕರ್, ಕೃಷಿ ಸಚಿವ ಬಿ.ಸಿ.ಪಾಟೀಲ್, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಶ್ರೀಮಂತ್ ಪಾಟೀಲ್ ಸೇರಿ ಅನೇಕ ವಲಸೆ ಸಚಿವರು ಸಭೆ ಸೇರಿ ರಾಜ್ಯ ರಾಜಕೀಯದ ಬೆಳವಣಿಗೆ ಕುರಿತು ಚರ್ಚೆ ನಡೆಸಿದ್ದಾರೆ.

ಕಳೆದ ಜನವರಿ ನಂತರ ಅಂದರೆ ಹಿಂದಿನ 6 ತಿಂಗಳಿನಲ್ಲಿ ಕೆ.ನಾಗೇಶ್ ಮತ್ತು ರಮೇಶ್ ಜಾರಕಿಹೋಳಿ ಅವರನ್ನು ಸಂಪುಟದಿಂದ ಕೈಬಿಡಲಾಗಿದೆ. ಈ ಹಿಂದೆ ಅಬಕಾರಿ ಸಚಿವರಾಗಿದ್ದ ನಾಗೇಶ್ ಅವರನ್ನು ಕೂಡ ಭ್ರಷ್ಟಾಚಾರದ ಆರೋಪದ ಮೇಲೆ ಸಚಿವ ಸ್ಥಾನದಿಂದ ಕೆಳಗಿಳಿಸಲಾಗಿತ್ತು. ಇದೆಲ್ಲ ಬೆಳವಣಿಗೆಗಳನ್ನು ಗಮನಿಸುತ್ತಿರುವ ವಲಸೆ ಸಚಿವರಲ್ಲಿ ಸದ್ಯ ನಡುಕ ಆರಂಭವಾಗಿದ್ದು ತಮ್ಮ ತಮ್ಮ ಸಚಿವ ಸ್ಥಾನವನ್ನು ಉಳಿಸಿಕೊಳ್ಳುವುದು ಹೇಗೆ ಎಂಬ ಚಿಂತೆ ಕಾಡುತ್ತಿದೆ.

ಯಡಿಯೂರಪ್ಪನವರು ಇರುವ ವರೆಗೆ ನಮಗೆ ತೊಂದರೆಯಿಲ್ಲ. ಒಂದು ವೇಳೆ ಯಡಿಯೂರಪ್ಪನವರ ಬದಲಾವಣೆಯಾದರೆ ಮುಂದೆ ನಮ್ಮ ಕತೆ ಏನೆಂದು ತಿಳಿದಿಲ್ಲ ಎಂದು ಹೆಸರು ಹೇಳಲಿಚ್ಚಿಸದ ವಲಸೆ ಸಚಿವರೊಬ್ಬರು ಪ್ರತಿಕ್ರಿಯಿಸಿದ್ದಾರೆ ಎಂದು ವರದಿಯಾಗಿದೆ.

ಸರ್ಕಾರ ಕೆ. ಗೋಪಾಲಯ್ಯನವರಿಂದ ರಾಜೀನಾಮೆಯನ್ನು ಪಡೆಯುತ್ತದೆಯೇ ಎಂಬುದು ಸರ್ಕಾರಕ್ಕೆ ಬಿಟ್ಟ ವಿಚಾರ. ವಿರೋಧ ಪಕ್ಷಗಳು ಮಾತ್ರ ಕೆ.ಗೋಪಾಲಯ್ಯನವರ ರಾಜೀನಾಮೆಗೆ ಬಿಗಿ ಪಟ್ಟು ಹಿಡಿದಿವೆ. ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿಯವರು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಕರ್ನಾಟಕ ಸರ್ಕಾರ ಭ್ರಷ್ಟಾಚಾರಗಳಿಂದ ತುಂಬಿ ಹೋಗಿದೆ. ಲಂಚ ನೀಡಿದ ಅಧಿಕಾರಿಗಳಿಗೆ ಮಾತ್ರ ಯಾಕೆ ಶಿಕ್ಷೆ? ಹಫ್ತಾ ಪಡೆಯುವ ಸಚಿವರಿಗೆ ಯಾವುದೇ ಶಿಕ್ಷೆ ಇಲ್ಲವೇ ಎಂದು ಸರಣಿ ಟ್ವೀಟ್‌ಗಳ ಮೂಲಕ ಕೆ.ಗೋಪಲಯ್ಯನವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ಕರ್ನಾಟಕ ಕಾಂಗ್ರೆಸ್‌ ಕೂಡ ಕೆ.ಗೋಪಾಲಯ್ಯನವರ ಹಫ್ತಾ ಹಗರಣವನ್ನು ಗಂಭೀರವಾಗಿ  ಪರಿಗಣಿಸಿದ್ದು ಅಬಕಾರಿ ಸಚಿವರ ರಾಜೀನಾಮೆಗೆ ಪಟ್ಟು ಹಿಡಿದಿದೆ. ಉಗ್ರ ಹೋರಾಟದ ಎಚ್ಚರಿಕೆಯನ್ನೂ ಸಹ ನೀಡಿದೆ.

ಅಬಕಾರಿ ಸಚಿವ ಕೆ.ಗೋಪಾಲಯ್ಯನವರ ರಾಜೀನಾಮೆಗೆ ವಿರೋಧ ಪಕ್ಷಗಳ ಒತ್ತಡ, ಬಿಜೆಪಿಯ ಒಳಗಿನವರ ಒತ್ತಾಯ ತೀವ್ರಗೊಂಡಿರುವ ಈ ಹೊತ್ತಿನಲ್ಲಿ ವಲಸೆ ಸಚಿವರಲ್ಲಿ ಇನ್ನಿಲ್ಲದ ನಡುಕ ಆರಂಭವಾಗಿದೆ. ರಾಜ್ಯ ಸರ್ಕಾರದಲ್ಲಿ ತಮಗೆ ಹಿನ್ನಡೆಯಾಗುತ್ತಿರುವುದನ್ನು ಗಮನಿಸುತ್ತಿರುವ ಕೆಲ ವಲಸೆ ಸಚಿವರು ಸದ್ಯದಲ್ಲೇ ದೆಹಲಿಗೆ ತೆರಳಿ ಬಿಜೆಪಿ ಹೈಕಮಾಂಡ್ ಮುಂದೆ ಮೂಲ ಬಿಜೆಪಿಗರ ವಿರುದ್ಧ ದೂರನ್ನು ನೀಡಲು ನಿರ್ಧರಿಸಿದ್ದಾರೆ.

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಕರ್ನಾಟಕ ಭೇಟಿಯ ಸಂದರ್ಭದಲ್ಲಿ ನಾವು ನಮ್ಮ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟಿದ್ದೇವೆ. ಅವರು ನಮಗೆ ದೆಹಲಿಗೆ ಬಂದು ಹೈಕಮಾಂಡ್ ಭೇಟಿಯಾಗಲು ಹೇಳಿದ್ದಾರೆ. ನಮ್ಮ ಸಮಸ್ಯೆಗಳನ್ನು ನಾವು ಹೈಕಮಾಂಡ್ ಮುಂದೆ ಇಡುತ್ತೇವೆ. ಕೆಲ ನಾಯಕರು ಬಿಜೆಪಿ ಸರ್ಕಾರ ರಚನೆಯಾಗಲು ನಮ್ಮ ಪಾತ್ರವೂ ಇರುವದನ್ನು ಮರೆತು ನಮ್ಮ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

-ರಾಜೇಶ್ ಹೆಬ್ಬಾರ್


ಇದನ್ನೂ ಓದಿ : ಮೈಸೂರಿನಲ್ಲಿ ಡೆಲ್ಟಾ ಪ್ಲಸ್​ ರೂಪಾಂತರಿ ಪತ್ತೆ: ಸಚಿವ ಸುಧಾಕರ್ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...