Homeಕರ್ನಾಟಕಅಬಕಾರಿ ಸಚಿವ ಗೋಪಾಲಯ್ಯ ವಿರುದ್ಧ ಎಸಿಬಿಯಲ್ಲಿ ದೂರು ದಾಖಲು: ವಲಸೆ ಸಚಿವರಿಗೆ ನಡುಕ

ಅಬಕಾರಿ ಸಚಿವ ಗೋಪಾಲಯ್ಯ ವಿರುದ್ಧ ಎಸಿಬಿಯಲ್ಲಿ ದೂರು ದಾಖಲು: ವಲಸೆ ಸಚಿವರಿಗೆ ನಡುಕ

- Advertisement -
- Advertisement -

ಕಾಂಗ್ರೆಸ್-ಜೆಡಿಎಸ್‌ ಮೈತ್ರಿ ಸರ್ಕಾರವನ್ನು ತೊರೆದು ಬಿಜೆಪಿ ಸೇರಿ ಸರ್ಕಾರದಲ್ಲಿ ಮಂತ್ರಿಯಾಗಿರುವ ವಲಸೆ ಸಚಿವರಲ್ಲಿ ಈಗ ಅಭದ್ರತೆಯ ಭೀತಿ ಆರಂಭವಾಗಿದೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಬದಲಾವಣೆ ವಿಚಾರದಿಂದಲೇ ತಮ್ಮ ಸ್ಥಾನಗಳ ಕುರಿತು ಚಿಂತಿತರಾಗಿರುವ ವಲಸೆ ಸಚಿವರಿಗೆ ಸೋಮವಾರ ಸ್ಫೋಟಗೊಂಡಿರುವ ಅಬಕಾರಿ ಸಚಿವ ಕೆ.ಗೋಪಾಲಯ್ಯನವರ ಕುರಿತಾದ ಹಫ್ತಾ ಆಡಿಯೋ ಇನ್ನಷ್ಟು ಭೀತಿಯನ್ನು ಉಂಟುಮಾಡಿದೆ.

ಭ್ರಷ್ಟಾಚಾರ ವಿರೋಧಿ ಹೋರಾಟಗಾರ ರವಿಕೃಷ್ಣಾ ರೆಡ್ಡಿಯವರ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಅಬಕಾರಿ ಸಚಿವ ಕೆ. ಗೋಪಾಲಯ್ಯನವರ ವಿರುದ್ಧ ಬೆಂಗಳೂರಿನ ಎಸಿಬಿಯಲ್ಲಿ ದೂರು ದಾಖಲಿಸಿದೆ. ಕರ್ನಾಟಕ ರಾಷ್ಟ್ರ ಸಮಿತಿಯ ಬೆಂಗಳೂರು ಘಟಕದ ಅಧ್ಯಕ್ಷ ಮಂಜುನಾಥ್ ಎಸ್‌, ರಾಜ್ಯ ಕಾರ್ಯದರ್ಶಿ ರಘುರಾಮ್ ಎಸ್‌ ಭಟ್ ಎಸಿಬಿಯ ಎಡಿಜಿಪಿಯವರಿಗೆ ನೀಡಿರುವ ದೂರಿನಲ್ಲಿ ಕೆ.ಗೋಪಾಲಯ್ಯನವರು ಲಂಚ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ : ಯುಪಿ ವಿಧಾನಸಭಾ ಚುನಾವಣೆ-ಆದಿತ್ಯನಾಥ್‌ ಮುಖ್ಯಮಂತ್ರಿ ಅಭ್ಯರ್ಥಿ‌: ಬಿಜೆಪಿ

ಹಿರಿಯ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ವಲಸೆ ಸಚಿವರಿಂದಲೆ ಸರ್ಕಾರ ದುರ್ಬಲವಾಗಿದೆ ಎಂಬ ಹೇಳಿಕೆಯನ್ನು ನೀಡಿ ಈಗಾಗಲೇ ಮೂಲ ಬಿಜೆಪಿಗರಿಗೆ ವಲಸೆ ಸಚಿವರ ಕುರಿತು ಇರುವ ಅಸಮಾಧಾನವನ್ನು ಹೊರಹಾಕಿದ್ದರು. ಈಗ ಕೆ. ಗೋಪಾಲಯ್ಯ ಅವರು ಜಿಲ್ಲೆಗಳಿಂದ ಪ್ರತಿ ತಿಂಗಳು 5 ಲಕ್ಷ ರೂಪಾಯಿ ಹಣ ಸಂಗ್ರಹಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಗೋಪಾಲಯ್ಯನವರು ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿ 4 ಜನ ಅಧಿಕಾರಿಗಳನ್ನು ಅಮಾನತ್ತು ಮಾಡಿದ್ದಾರೆ. ಇಷ್ಟಕ್ಕೆ ಗೋಪಾಲಯ್ಯನವರ ಮೇಲಿನ ಲಂಚ ಸ್ವೀಕಾರ ಪ್ರಕರಣ ತಣ್ಣಗಾಗಿಲ್ಲ.

ಅಬಕಾರಿ ಸಚಿವ ಕೆ. ಗೋಪಾಲಯ್ಯನವರ ಮೇಲಿನ ಲಂಚ ಸ್ವೀಕಾರದ ಆಡಿಯೋ ಈಗ ವಿರೋಧ ಪಕ್ಷಗಳಿಗೆ ಮುಖ್ಯಮಂತ್ರಿ ಬಿ.ಎಸ್‌.ಯೆಡಿಯೂರಪ್ಪನವರ ಸರ್ಕಾರದ ಮೇಲೆ ಹರಿಹಾಯಲು ಒಳ್ಳೆಯ ಅಸ್ತ್ರವಾಗಿ ಮಾರ್ಪಟ್ಟಿದೆ. ಈಗಾಗಲೇ ಬಿಜೆಪಿಯ ವಿಧಾನಪರಿಷತ್ ಸದಸ್ಯ ಹೆಚ್‌.ವಿಶ್ವನಾಥ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಪುತ್ರ ಬಿ.ವೈ ವಿಜಯೇಂದ್ರ ಅವರ ಮೇಲೆ 20 ಸಾವಿರ ಕೋಟಿ ಭ್ರಷ್ಟಾಚಾರದ ಆರೋಪವನ್ನು ಮಾಡಿದ್ದಾರೆ. ಭಿನ್ನಮತ ಚಟುವಟಿಕೆ, ಮುಖ್ಯಮಂತ್ರಿ ಯಡಿಯೂರಪ್ಪನವರ ನಾಯಕತ್ವದ ಬಗೆಗಿನ ಅಸಮಾಧಾನದ ಜೊತೆಗೆ ಭ್ರಷ್ಟಾಚಾರದ ಆರೋಪಗಳು ಸರ್ಕಾರದ ವರ್ಚಸ್ಸಿಗೆ ಸರಿಪಡಿಸಲಾಗದ ಧಕ್ಕೆಯನ್ನು ಉಂಟುಮಾಡಿದೆ.

ಯಡಿಯೂರಪ್ಪನವರ ಸರ್ಕಾರ ಭ್ರಷ್ಟ ಸರ್ಕಾರ ಎಂಬ ಭಾವನೆ ಜನರಲ್ಲಿ ಬಲವಾಗಿ ಬೇರೂರ ತೊಡಗಿದ್ದು ವಿರೋಧ ಪಕ್ಷಗಳು ತಮ್ಮ ಆರೋಪಗಳ ಸುರಿಮಳೆಯ ಮೂಲಕ ಮೂಲಕ  ಮತ್ತೊಂದಿಷ್ಟು ತುಪ್ಪ ಸುರಿಯುತ್ತಿದ್ದಾರೆ. ಸರ್ಕಾರ ತನ್ನ ಮೇಲಿನ ಭ್ರಷ್ಟಾಚಾರದ ಆರೋಪಗಳಿಂದ ಹೊರಬರಲು ಅಬಕಾರಿ ಸಚಿವ ಕೆ. ಗೋಪಾಲಯ್ಯನವರ ತಲೆದಂಡವಾಗಬೇಕು ಎಂಬ ಕೂಗು ಬಿಜೆಪಿ ಸಚಿವರಿಂದಲೇ ಕೇಳಿಬಂದಿದೆ. ಕೆಲವು ಬಿಜೆಪಿ ನಾಯಕರು ಕೆ.ಗೋಪಾಲಯ್ಯನವರನ್ನು ಸಚಿವ ಸಂಪುಟದಿಂದ ಕೈ ಬಿಡುವಂತೆ ಮುಖ್ಯ ಮಂತ್ರಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಬಿಜೆಪಿ ಮೂಲಗಳು ಹೇಳಿವೆ.

ಮೊನ್ನೆ ಸೋಮವಾರ ಜೂನ್ 21 ರಂದು ಮಹತ್ವದ ಸಚಿವ ಸಂಪುಟ ಸಭೆ ನಡೆದಿದ್ದು, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಮೇಲಿನ ಅತ್ಯಾಚಾರದ ಪ್ರಕರಣದ ವಿಷಯ ಮತ್ತು ಗೋಪಲಾಯ್ಯನವರ ಆಡಿಯೋ ವಿಷಯ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ. ಕ್ಯಾಬಿನೆಟ್ ಸಭೆ ಬಳಿಕ ಆರೋಗ್ಯ ಸಚಿವ ಕೆ ಸುಧಾಕರ್, ಕೃಷಿ ಸಚಿವ ಬಿ.ಸಿ.ಪಾಟೀಲ್, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಶ್ರೀಮಂತ್ ಪಾಟೀಲ್ ಸೇರಿ ಅನೇಕ ವಲಸೆ ಸಚಿವರು ಸಭೆ ಸೇರಿ ರಾಜ್ಯ ರಾಜಕೀಯದ ಬೆಳವಣಿಗೆ ಕುರಿತು ಚರ್ಚೆ ನಡೆಸಿದ್ದಾರೆ.

ಕಳೆದ ಜನವರಿ ನಂತರ ಅಂದರೆ ಹಿಂದಿನ 6 ತಿಂಗಳಿನಲ್ಲಿ ಕೆ.ನಾಗೇಶ್ ಮತ್ತು ರಮೇಶ್ ಜಾರಕಿಹೋಳಿ ಅವರನ್ನು ಸಂಪುಟದಿಂದ ಕೈಬಿಡಲಾಗಿದೆ. ಈ ಹಿಂದೆ ಅಬಕಾರಿ ಸಚಿವರಾಗಿದ್ದ ನಾಗೇಶ್ ಅವರನ್ನು ಕೂಡ ಭ್ರಷ್ಟಾಚಾರದ ಆರೋಪದ ಮೇಲೆ ಸಚಿವ ಸ್ಥಾನದಿಂದ ಕೆಳಗಿಳಿಸಲಾಗಿತ್ತು. ಇದೆಲ್ಲ ಬೆಳವಣಿಗೆಗಳನ್ನು ಗಮನಿಸುತ್ತಿರುವ ವಲಸೆ ಸಚಿವರಲ್ಲಿ ಸದ್ಯ ನಡುಕ ಆರಂಭವಾಗಿದ್ದು ತಮ್ಮ ತಮ್ಮ ಸಚಿವ ಸ್ಥಾನವನ್ನು ಉಳಿಸಿಕೊಳ್ಳುವುದು ಹೇಗೆ ಎಂಬ ಚಿಂತೆ ಕಾಡುತ್ತಿದೆ.

ಯಡಿಯೂರಪ್ಪನವರು ಇರುವ ವರೆಗೆ ನಮಗೆ ತೊಂದರೆಯಿಲ್ಲ. ಒಂದು ವೇಳೆ ಯಡಿಯೂರಪ್ಪನವರ ಬದಲಾವಣೆಯಾದರೆ ಮುಂದೆ ನಮ್ಮ ಕತೆ ಏನೆಂದು ತಿಳಿದಿಲ್ಲ ಎಂದು ಹೆಸರು ಹೇಳಲಿಚ್ಚಿಸದ ವಲಸೆ ಸಚಿವರೊಬ್ಬರು ಪ್ರತಿಕ್ರಿಯಿಸಿದ್ದಾರೆ ಎಂದು ವರದಿಯಾಗಿದೆ.

ಸರ್ಕಾರ ಕೆ. ಗೋಪಾಲಯ್ಯನವರಿಂದ ರಾಜೀನಾಮೆಯನ್ನು ಪಡೆಯುತ್ತದೆಯೇ ಎಂಬುದು ಸರ್ಕಾರಕ್ಕೆ ಬಿಟ್ಟ ವಿಚಾರ. ವಿರೋಧ ಪಕ್ಷಗಳು ಮಾತ್ರ ಕೆ.ಗೋಪಾಲಯ್ಯನವರ ರಾಜೀನಾಮೆಗೆ ಬಿಗಿ ಪಟ್ಟು ಹಿಡಿದಿವೆ. ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿಯವರು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಕರ್ನಾಟಕ ಸರ್ಕಾರ ಭ್ರಷ್ಟಾಚಾರಗಳಿಂದ ತುಂಬಿ ಹೋಗಿದೆ. ಲಂಚ ನೀಡಿದ ಅಧಿಕಾರಿಗಳಿಗೆ ಮಾತ್ರ ಯಾಕೆ ಶಿಕ್ಷೆ? ಹಫ್ತಾ ಪಡೆಯುವ ಸಚಿವರಿಗೆ ಯಾವುದೇ ಶಿಕ್ಷೆ ಇಲ್ಲವೇ ಎಂದು ಸರಣಿ ಟ್ವೀಟ್‌ಗಳ ಮೂಲಕ ಕೆ.ಗೋಪಲಯ್ಯನವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ಕರ್ನಾಟಕ ಕಾಂಗ್ರೆಸ್‌ ಕೂಡ ಕೆ.ಗೋಪಾಲಯ್ಯನವರ ಹಫ್ತಾ ಹಗರಣವನ್ನು ಗಂಭೀರವಾಗಿ  ಪರಿಗಣಿಸಿದ್ದು ಅಬಕಾರಿ ಸಚಿವರ ರಾಜೀನಾಮೆಗೆ ಪಟ್ಟು ಹಿಡಿದಿದೆ. ಉಗ್ರ ಹೋರಾಟದ ಎಚ್ಚರಿಕೆಯನ್ನೂ ಸಹ ನೀಡಿದೆ.

ಅಬಕಾರಿ ಸಚಿವ ಕೆ.ಗೋಪಾಲಯ್ಯನವರ ರಾಜೀನಾಮೆಗೆ ವಿರೋಧ ಪಕ್ಷಗಳ ಒತ್ತಡ, ಬಿಜೆಪಿಯ ಒಳಗಿನವರ ಒತ್ತಾಯ ತೀವ್ರಗೊಂಡಿರುವ ಈ ಹೊತ್ತಿನಲ್ಲಿ ವಲಸೆ ಸಚಿವರಲ್ಲಿ ಇನ್ನಿಲ್ಲದ ನಡುಕ ಆರಂಭವಾಗಿದೆ. ರಾಜ್ಯ ಸರ್ಕಾರದಲ್ಲಿ ತಮಗೆ ಹಿನ್ನಡೆಯಾಗುತ್ತಿರುವುದನ್ನು ಗಮನಿಸುತ್ತಿರುವ ಕೆಲ ವಲಸೆ ಸಚಿವರು ಸದ್ಯದಲ್ಲೇ ದೆಹಲಿಗೆ ತೆರಳಿ ಬಿಜೆಪಿ ಹೈಕಮಾಂಡ್ ಮುಂದೆ ಮೂಲ ಬಿಜೆಪಿಗರ ವಿರುದ್ಧ ದೂರನ್ನು ನೀಡಲು ನಿರ್ಧರಿಸಿದ್ದಾರೆ.

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಕರ್ನಾಟಕ ಭೇಟಿಯ ಸಂದರ್ಭದಲ್ಲಿ ನಾವು ನಮ್ಮ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟಿದ್ದೇವೆ. ಅವರು ನಮಗೆ ದೆಹಲಿಗೆ ಬಂದು ಹೈಕಮಾಂಡ್ ಭೇಟಿಯಾಗಲು ಹೇಳಿದ್ದಾರೆ. ನಮ್ಮ ಸಮಸ್ಯೆಗಳನ್ನು ನಾವು ಹೈಕಮಾಂಡ್ ಮುಂದೆ ಇಡುತ್ತೇವೆ. ಕೆಲ ನಾಯಕರು ಬಿಜೆಪಿ ಸರ್ಕಾರ ರಚನೆಯಾಗಲು ನಮ್ಮ ಪಾತ್ರವೂ ಇರುವದನ್ನು ಮರೆತು ನಮ್ಮ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

-ರಾಜೇಶ್ ಹೆಬ್ಬಾರ್


ಇದನ್ನೂ ಓದಿ : ಮೈಸೂರಿನಲ್ಲಿ ಡೆಲ್ಟಾ ಪ್ಲಸ್​ ರೂಪಾಂತರಿ ಪತ್ತೆ: ಸಚಿವ ಸುಧಾಕರ್ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...