Homeಕರ್ನಾಟಕಅಬಕಾರಿ ಸಚಿವ ಗೋಪಾಲಯ್ಯ ವಿರುದ್ಧ ಎಸಿಬಿಯಲ್ಲಿ ದೂರು ದಾಖಲು: ವಲಸೆ ಸಚಿವರಿಗೆ ನಡುಕ

ಅಬಕಾರಿ ಸಚಿವ ಗೋಪಾಲಯ್ಯ ವಿರುದ್ಧ ಎಸಿಬಿಯಲ್ಲಿ ದೂರು ದಾಖಲು: ವಲಸೆ ಸಚಿವರಿಗೆ ನಡುಕ

- Advertisement -
- Advertisement -

ಕಾಂಗ್ರೆಸ್-ಜೆಡಿಎಸ್‌ ಮೈತ್ರಿ ಸರ್ಕಾರವನ್ನು ತೊರೆದು ಬಿಜೆಪಿ ಸೇರಿ ಸರ್ಕಾರದಲ್ಲಿ ಮಂತ್ರಿಯಾಗಿರುವ ವಲಸೆ ಸಚಿವರಲ್ಲಿ ಈಗ ಅಭದ್ರತೆಯ ಭೀತಿ ಆರಂಭವಾಗಿದೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಬದಲಾವಣೆ ವಿಚಾರದಿಂದಲೇ ತಮ್ಮ ಸ್ಥಾನಗಳ ಕುರಿತು ಚಿಂತಿತರಾಗಿರುವ ವಲಸೆ ಸಚಿವರಿಗೆ ಸೋಮವಾರ ಸ್ಫೋಟಗೊಂಡಿರುವ ಅಬಕಾರಿ ಸಚಿವ ಕೆ.ಗೋಪಾಲಯ್ಯನವರ ಕುರಿತಾದ ಹಫ್ತಾ ಆಡಿಯೋ ಇನ್ನಷ್ಟು ಭೀತಿಯನ್ನು ಉಂಟುಮಾಡಿದೆ.

ಭ್ರಷ್ಟಾಚಾರ ವಿರೋಧಿ ಹೋರಾಟಗಾರ ರವಿಕೃಷ್ಣಾ ರೆಡ್ಡಿಯವರ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಅಬಕಾರಿ ಸಚಿವ ಕೆ. ಗೋಪಾಲಯ್ಯನವರ ವಿರುದ್ಧ ಬೆಂಗಳೂರಿನ ಎಸಿಬಿಯಲ್ಲಿ ದೂರು ದಾಖಲಿಸಿದೆ. ಕರ್ನಾಟಕ ರಾಷ್ಟ್ರ ಸಮಿತಿಯ ಬೆಂಗಳೂರು ಘಟಕದ ಅಧ್ಯಕ್ಷ ಮಂಜುನಾಥ್ ಎಸ್‌, ರಾಜ್ಯ ಕಾರ್ಯದರ್ಶಿ ರಘುರಾಮ್ ಎಸ್‌ ಭಟ್ ಎಸಿಬಿಯ ಎಡಿಜಿಪಿಯವರಿಗೆ ನೀಡಿರುವ ದೂರಿನಲ್ಲಿ ಕೆ.ಗೋಪಾಲಯ್ಯನವರು ಲಂಚ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ : ಯುಪಿ ವಿಧಾನಸಭಾ ಚುನಾವಣೆ-ಆದಿತ್ಯನಾಥ್‌ ಮುಖ್ಯಮಂತ್ರಿ ಅಭ್ಯರ್ಥಿ‌: ಬಿಜೆಪಿ

ಹಿರಿಯ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ವಲಸೆ ಸಚಿವರಿಂದಲೆ ಸರ್ಕಾರ ದುರ್ಬಲವಾಗಿದೆ ಎಂಬ ಹೇಳಿಕೆಯನ್ನು ನೀಡಿ ಈಗಾಗಲೇ ಮೂಲ ಬಿಜೆಪಿಗರಿಗೆ ವಲಸೆ ಸಚಿವರ ಕುರಿತು ಇರುವ ಅಸಮಾಧಾನವನ್ನು ಹೊರಹಾಕಿದ್ದರು. ಈಗ ಕೆ. ಗೋಪಾಲಯ್ಯ ಅವರು ಜಿಲ್ಲೆಗಳಿಂದ ಪ್ರತಿ ತಿಂಗಳು 5 ಲಕ್ಷ ರೂಪಾಯಿ ಹಣ ಸಂಗ್ರಹಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಗೋಪಾಲಯ್ಯನವರು ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿ 4 ಜನ ಅಧಿಕಾರಿಗಳನ್ನು ಅಮಾನತ್ತು ಮಾಡಿದ್ದಾರೆ. ಇಷ್ಟಕ್ಕೆ ಗೋಪಾಲಯ್ಯನವರ ಮೇಲಿನ ಲಂಚ ಸ್ವೀಕಾರ ಪ್ರಕರಣ ತಣ್ಣಗಾಗಿಲ್ಲ.

ಅಬಕಾರಿ ಸಚಿವ ಕೆ. ಗೋಪಾಲಯ್ಯನವರ ಮೇಲಿನ ಲಂಚ ಸ್ವೀಕಾರದ ಆಡಿಯೋ ಈಗ ವಿರೋಧ ಪಕ್ಷಗಳಿಗೆ ಮುಖ್ಯಮಂತ್ರಿ ಬಿ.ಎಸ್‌.ಯೆಡಿಯೂರಪ್ಪನವರ ಸರ್ಕಾರದ ಮೇಲೆ ಹರಿಹಾಯಲು ಒಳ್ಳೆಯ ಅಸ್ತ್ರವಾಗಿ ಮಾರ್ಪಟ್ಟಿದೆ. ಈಗಾಗಲೇ ಬಿಜೆಪಿಯ ವಿಧಾನಪರಿಷತ್ ಸದಸ್ಯ ಹೆಚ್‌.ವಿಶ್ವನಾಥ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಪುತ್ರ ಬಿ.ವೈ ವಿಜಯೇಂದ್ರ ಅವರ ಮೇಲೆ 20 ಸಾವಿರ ಕೋಟಿ ಭ್ರಷ್ಟಾಚಾರದ ಆರೋಪವನ್ನು ಮಾಡಿದ್ದಾರೆ. ಭಿನ್ನಮತ ಚಟುವಟಿಕೆ, ಮುಖ್ಯಮಂತ್ರಿ ಯಡಿಯೂರಪ್ಪನವರ ನಾಯಕತ್ವದ ಬಗೆಗಿನ ಅಸಮಾಧಾನದ ಜೊತೆಗೆ ಭ್ರಷ್ಟಾಚಾರದ ಆರೋಪಗಳು ಸರ್ಕಾರದ ವರ್ಚಸ್ಸಿಗೆ ಸರಿಪಡಿಸಲಾಗದ ಧಕ್ಕೆಯನ್ನು ಉಂಟುಮಾಡಿದೆ.

ಯಡಿಯೂರಪ್ಪನವರ ಸರ್ಕಾರ ಭ್ರಷ್ಟ ಸರ್ಕಾರ ಎಂಬ ಭಾವನೆ ಜನರಲ್ಲಿ ಬಲವಾಗಿ ಬೇರೂರ ತೊಡಗಿದ್ದು ವಿರೋಧ ಪಕ್ಷಗಳು ತಮ್ಮ ಆರೋಪಗಳ ಸುರಿಮಳೆಯ ಮೂಲಕ ಮೂಲಕ  ಮತ್ತೊಂದಿಷ್ಟು ತುಪ್ಪ ಸುರಿಯುತ್ತಿದ್ದಾರೆ. ಸರ್ಕಾರ ತನ್ನ ಮೇಲಿನ ಭ್ರಷ್ಟಾಚಾರದ ಆರೋಪಗಳಿಂದ ಹೊರಬರಲು ಅಬಕಾರಿ ಸಚಿವ ಕೆ. ಗೋಪಾಲಯ್ಯನವರ ತಲೆದಂಡವಾಗಬೇಕು ಎಂಬ ಕೂಗು ಬಿಜೆಪಿ ಸಚಿವರಿಂದಲೇ ಕೇಳಿಬಂದಿದೆ. ಕೆಲವು ಬಿಜೆಪಿ ನಾಯಕರು ಕೆ.ಗೋಪಾಲಯ್ಯನವರನ್ನು ಸಚಿವ ಸಂಪುಟದಿಂದ ಕೈ ಬಿಡುವಂತೆ ಮುಖ್ಯ ಮಂತ್ರಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಬಿಜೆಪಿ ಮೂಲಗಳು ಹೇಳಿವೆ.

ಮೊನ್ನೆ ಸೋಮವಾರ ಜೂನ್ 21 ರಂದು ಮಹತ್ವದ ಸಚಿವ ಸಂಪುಟ ಸಭೆ ನಡೆದಿದ್ದು, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಮೇಲಿನ ಅತ್ಯಾಚಾರದ ಪ್ರಕರಣದ ವಿಷಯ ಮತ್ತು ಗೋಪಲಾಯ್ಯನವರ ಆಡಿಯೋ ವಿಷಯ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ. ಕ್ಯಾಬಿನೆಟ್ ಸಭೆ ಬಳಿಕ ಆರೋಗ್ಯ ಸಚಿವ ಕೆ ಸುಧಾಕರ್, ಕೃಷಿ ಸಚಿವ ಬಿ.ಸಿ.ಪಾಟೀಲ್, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಶ್ರೀಮಂತ್ ಪಾಟೀಲ್ ಸೇರಿ ಅನೇಕ ವಲಸೆ ಸಚಿವರು ಸಭೆ ಸೇರಿ ರಾಜ್ಯ ರಾಜಕೀಯದ ಬೆಳವಣಿಗೆ ಕುರಿತು ಚರ್ಚೆ ನಡೆಸಿದ್ದಾರೆ.

ಕಳೆದ ಜನವರಿ ನಂತರ ಅಂದರೆ ಹಿಂದಿನ 6 ತಿಂಗಳಿನಲ್ಲಿ ಕೆ.ನಾಗೇಶ್ ಮತ್ತು ರಮೇಶ್ ಜಾರಕಿಹೋಳಿ ಅವರನ್ನು ಸಂಪುಟದಿಂದ ಕೈಬಿಡಲಾಗಿದೆ. ಈ ಹಿಂದೆ ಅಬಕಾರಿ ಸಚಿವರಾಗಿದ್ದ ನಾಗೇಶ್ ಅವರನ್ನು ಕೂಡ ಭ್ರಷ್ಟಾಚಾರದ ಆರೋಪದ ಮೇಲೆ ಸಚಿವ ಸ್ಥಾನದಿಂದ ಕೆಳಗಿಳಿಸಲಾಗಿತ್ತು. ಇದೆಲ್ಲ ಬೆಳವಣಿಗೆಗಳನ್ನು ಗಮನಿಸುತ್ತಿರುವ ವಲಸೆ ಸಚಿವರಲ್ಲಿ ಸದ್ಯ ನಡುಕ ಆರಂಭವಾಗಿದ್ದು ತಮ್ಮ ತಮ್ಮ ಸಚಿವ ಸ್ಥಾನವನ್ನು ಉಳಿಸಿಕೊಳ್ಳುವುದು ಹೇಗೆ ಎಂಬ ಚಿಂತೆ ಕಾಡುತ್ತಿದೆ.

ಯಡಿಯೂರಪ್ಪನವರು ಇರುವ ವರೆಗೆ ನಮಗೆ ತೊಂದರೆಯಿಲ್ಲ. ಒಂದು ವೇಳೆ ಯಡಿಯೂರಪ್ಪನವರ ಬದಲಾವಣೆಯಾದರೆ ಮುಂದೆ ನಮ್ಮ ಕತೆ ಏನೆಂದು ತಿಳಿದಿಲ್ಲ ಎಂದು ಹೆಸರು ಹೇಳಲಿಚ್ಚಿಸದ ವಲಸೆ ಸಚಿವರೊಬ್ಬರು ಪ್ರತಿಕ್ರಿಯಿಸಿದ್ದಾರೆ ಎಂದು ವರದಿಯಾಗಿದೆ.

ಸರ್ಕಾರ ಕೆ. ಗೋಪಾಲಯ್ಯನವರಿಂದ ರಾಜೀನಾಮೆಯನ್ನು ಪಡೆಯುತ್ತದೆಯೇ ಎಂಬುದು ಸರ್ಕಾರಕ್ಕೆ ಬಿಟ್ಟ ವಿಚಾರ. ವಿರೋಧ ಪಕ್ಷಗಳು ಮಾತ್ರ ಕೆ.ಗೋಪಾಲಯ್ಯನವರ ರಾಜೀನಾಮೆಗೆ ಬಿಗಿ ಪಟ್ಟು ಹಿಡಿದಿವೆ. ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿಯವರು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಕರ್ನಾಟಕ ಸರ್ಕಾರ ಭ್ರಷ್ಟಾಚಾರಗಳಿಂದ ತುಂಬಿ ಹೋಗಿದೆ. ಲಂಚ ನೀಡಿದ ಅಧಿಕಾರಿಗಳಿಗೆ ಮಾತ್ರ ಯಾಕೆ ಶಿಕ್ಷೆ? ಹಫ್ತಾ ಪಡೆಯುವ ಸಚಿವರಿಗೆ ಯಾವುದೇ ಶಿಕ್ಷೆ ಇಲ್ಲವೇ ಎಂದು ಸರಣಿ ಟ್ವೀಟ್‌ಗಳ ಮೂಲಕ ಕೆ.ಗೋಪಲಯ್ಯನವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ಕರ್ನಾಟಕ ಕಾಂಗ್ರೆಸ್‌ ಕೂಡ ಕೆ.ಗೋಪಾಲಯ್ಯನವರ ಹಫ್ತಾ ಹಗರಣವನ್ನು ಗಂಭೀರವಾಗಿ  ಪರಿಗಣಿಸಿದ್ದು ಅಬಕಾರಿ ಸಚಿವರ ರಾಜೀನಾಮೆಗೆ ಪಟ್ಟು ಹಿಡಿದಿದೆ. ಉಗ್ರ ಹೋರಾಟದ ಎಚ್ಚರಿಕೆಯನ್ನೂ ಸಹ ನೀಡಿದೆ.

ಅಬಕಾರಿ ಸಚಿವ ಕೆ.ಗೋಪಾಲಯ್ಯನವರ ರಾಜೀನಾಮೆಗೆ ವಿರೋಧ ಪಕ್ಷಗಳ ಒತ್ತಡ, ಬಿಜೆಪಿಯ ಒಳಗಿನವರ ಒತ್ತಾಯ ತೀವ್ರಗೊಂಡಿರುವ ಈ ಹೊತ್ತಿನಲ್ಲಿ ವಲಸೆ ಸಚಿವರಲ್ಲಿ ಇನ್ನಿಲ್ಲದ ನಡುಕ ಆರಂಭವಾಗಿದೆ. ರಾಜ್ಯ ಸರ್ಕಾರದಲ್ಲಿ ತಮಗೆ ಹಿನ್ನಡೆಯಾಗುತ್ತಿರುವುದನ್ನು ಗಮನಿಸುತ್ತಿರುವ ಕೆಲ ವಲಸೆ ಸಚಿವರು ಸದ್ಯದಲ್ಲೇ ದೆಹಲಿಗೆ ತೆರಳಿ ಬಿಜೆಪಿ ಹೈಕಮಾಂಡ್ ಮುಂದೆ ಮೂಲ ಬಿಜೆಪಿಗರ ವಿರುದ್ಧ ದೂರನ್ನು ನೀಡಲು ನಿರ್ಧರಿಸಿದ್ದಾರೆ.

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಕರ್ನಾಟಕ ಭೇಟಿಯ ಸಂದರ್ಭದಲ್ಲಿ ನಾವು ನಮ್ಮ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟಿದ್ದೇವೆ. ಅವರು ನಮಗೆ ದೆಹಲಿಗೆ ಬಂದು ಹೈಕಮಾಂಡ್ ಭೇಟಿಯಾಗಲು ಹೇಳಿದ್ದಾರೆ. ನಮ್ಮ ಸಮಸ್ಯೆಗಳನ್ನು ನಾವು ಹೈಕಮಾಂಡ್ ಮುಂದೆ ಇಡುತ್ತೇವೆ. ಕೆಲ ನಾಯಕರು ಬಿಜೆಪಿ ಸರ್ಕಾರ ರಚನೆಯಾಗಲು ನಮ್ಮ ಪಾತ್ರವೂ ಇರುವದನ್ನು ಮರೆತು ನಮ್ಮ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

-ರಾಜೇಶ್ ಹೆಬ್ಬಾರ್


ಇದನ್ನೂ ಓದಿ : ಮೈಸೂರಿನಲ್ಲಿ ಡೆಲ್ಟಾ ಪ್ಲಸ್​ ರೂಪಾಂತರಿ ಪತ್ತೆ: ಸಚಿವ ಸುಧಾಕರ್ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...