Homeಕರ್ನಾಟಕಅಬಕಾರಿ ಸಚಿವ ಗೋಪಾಲಯ್ಯ ವಿರುದ್ಧ ಎಸಿಬಿಯಲ್ಲಿ ದೂರು ದಾಖಲು: ವಲಸೆ ಸಚಿವರಿಗೆ ನಡುಕ

ಅಬಕಾರಿ ಸಚಿವ ಗೋಪಾಲಯ್ಯ ವಿರುದ್ಧ ಎಸಿಬಿಯಲ್ಲಿ ದೂರು ದಾಖಲು: ವಲಸೆ ಸಚಿವರಿಗೆ ನಡುಕ

- Advertisement -
- Advertisement -

ಕಾಂಗ್ರೆಸ್-ಜೆಡಿಎಸ್‌ ಮೈತ್ರಿ ಸರ್ಕಾರವನ್ನು ತೊರೆದು ಬಿಜೆಪಿ ಸೇರಿ ಸರ್ಕಾರದಲ್ಲಿ ಮಂತ್ರಿಯಾಗಿರುವ ವಲಸೆ ಸಚಿವರಲ್ಲಿ ಈಗ ಅಭದ್ರತೆಯ ಭೀತಿ ಆರಂಭವಾಗಿದೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಬದಲಾವಣೆ ವಿಚಾರದಿಂದಲೇ ತಮ್ಮ ಸ್ಥಾನಗಳ ಕುರಿತು ಚಿಂತಿತರಾಗಿರುವ ವಲಸೆ ಸಚಿವರಿಗೆ ಸೋಮವಾರ ಸ್ಫೋಟಗೊಂಡಿರುವ ಅಬಕಾರಿ ಸಚಿವ ಕೆ.ಗೋಪಾಲಯ್ಯನವರ ಕುರಿತಾದ ಹಫ್ತಾ ಆಡಿಯೋ ಇನ್ನಷ್ಟು ಭೀತಿಯನ್ನು ಉಂಟುಮಾಡಿದೆ.

ಭ್ರಷ್ಟಾಚಾರ ವಿರೋಧಿ ಹೋರಾಟಗಾರ ರವಿಕೃಷ್ಣಾ ರೆಡ್ಡಿಯವರ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಅಬಕಾರಿ ಸಚಿವ ಕೆ. ಗೋಪಾಲಯ್ಯನವರ ವಿರುದ್ಧ ಬೆಂಗಳೂರಿನ ಎಸಿಬಿಯಲ್ಲಿ ದೂರು ದಾಖಲಿಸಿದೆ. ಕರ್ನಾಟಕ ರಾಷ್ಟ್ರ ಸಮಿತಿಯ ಬೆಂಗಳೂರು ಘಟಕದ ಅಧ್ಯಕ್ಷ ಮಂಜುನಾಥ್ ಎಸ್‌, ರಾಜ್ಯ ಕಾರ್ಯದರ್ಶಿ ರಘುರಾಮ್ ಎಸ್‌ ಭಟ್ ಎಸಿಬಿಯ ಎಡಿಜಿಪಿಯವರಿಗೆ ನೀಡಿರುವ ದೂರಿನಲ್ಲಿ ಕೆ.ಗೋಪಾಲಯ್ಯನವರು ಲಂಚ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ : ಯುಪಿ ವಿಧಾನಸಭಾ ಚುನಾವಣೆ-ಆದಿತ್ಯನಾಥ್‌ ಮುಖ್ಯಮಂತ್ರಿ ಅಭ್ಯರ್ಥಿ‌: ಬಿಜೆಪಿ

ಹಿರಿಯ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ವಲಸೆ ಸಚಿವರಿಂದಲೆ ಸರ್ಕಾರ ದುರ್ಬಲವಾಗಿದೆ ಎಂಬ ಹೇಳಿಕೆಯನ್ನು ನೀಡಿ ಈಗಾಗಲೇ ಮೂಲ ಬಿಜೆಪಿಗರಿಗೆ ವಲಸೆ ಸಚಿವರ ಕುರಿತು ಇರುವ ಅಸಮಾಧಾನವನ್ನು ಹೊರಹಾಕಿದ್ದರು. ಈಗ ಕೆ. ಗೋಪಾಲಯ್ಯ ಅವರು ಜಿಲ್ಲೆಗಳಿಂದ ಪ್ರತಿ ತಿಂಗಳು 5 ಲಕ್ಷ ರೂಪಾಯಿ ಹಣ ಸಂಗ್ರಹಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಗೋಪಾಲಯ್ಯನವರು ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿ 4 ಜನ ಅಧಿಕಾರಿಗಳನ್ನು ಅಮಾನತ್ತು ಮಾಡಿದ್ದಾರೆ. ಇಷ್ಟಕ್ಕೆ ಗೋಪಾಲಯ್ಯನವರ ಮೇಲಿನ ಲಂಚ ಸ್ವೀಕಾರ ಪ್ರಕರಣ ತಣ್ಣಗಾಗಿಲ್ಲ.

ಅಬಕಾರಿ ಸಚಿವ ಕೆ. ಗೋಪಾಲಯ್ಯನವರ ಮೇಲಿನ ಲಂಚ ಸ್ವೀಕಾರದ ಆಡಿಯೋ ಈಗ ವಿರೋಧ ಪಕ್ಷಗಳಿಗೆ ಮುಖ್ಯಮಂತ್ರಿ ಬಿ.ಎಸ್‌.ಯೆಡಿಯೂರಪ್ಪನವರ ಸರ್ಕಾರದ ಮೇಲೆ ಹರಿಹಾಯಲು ಒಳ್ಳೆಯ ಅಸ್ತ್ರವಾಗಿ ಮಾರ್ಪಟ್ಟಿದೆ. ಈಗಾಗಲೇ ಬಿಜೆಪಿಯ ವಿಧಾನಪರಿಷತ್ ಸದಸ್ಯ ಹೆಚ್‌.ವಿಶ್ವನಾಥ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಪುತ್ರ ಬಿ.ವೈ ವಿಜಯೇಂದ್ರ ಅವರ ಮೇಲೆ 20 ಸಾವಿರ ಕೋಟಿ ಭ್ರಷ್ಟಾಚಾರದ ಆರೋಪವನ್ನು ಮಾಡಿದ್ದಾರೆ. ಭಿನ್ನಮತ ಚಟುವಟಿಕೆ, ಮುಖ್ಯಮಂತ್ರಿ ಯಡಿಯೂರಪ್ಪನವರ ನಾಯಕತ್ವದ ಬಗೆಗಿನ ಅಸಮಾಧಾನದ ಜೊತೆಗೆ ಭ್ರಷ್ಟಾಚಾರದ ಆರೋಪಗಳು ಸರ್ಕಾರದ ವರ್ಚಸ್ಸಿಗೆ ಸರಿಪಡಿಸಲಾಗದ ಧಕ್ಕೆಯನ್ನು ಉಂಟುಮಾಡಿದೆ.

ಯಡಿಯೂರಪ್ಪನವರ ಸರ್ಕಾರ ಭ್ರಷ್ಟ ಸರ್ಕಾರ ಎಂಬ ಭಾವನೆ ಜನರಲ್ಲಿ ಬಲವಾಗಿ ಬೇರೂರ ತೊಡಗಿದ್ದು ವಿರೋಧ ಪಕ್ಷಗಳು ತಮ್ಮ ಆರೋಪಗಳ ಸುರಿಮಳೆಯ ಮೂಲಕ ಮೂಲಕ  ಮತ್ತೊಂದಿಷ್ಟು ತುಪ್ಪ ಸುರಿಯುತ್ತಿದ್ದಾರೆ. ಸರ್ಕಾರ ತನ್ನ ಮೇಲಿನ ಭ್ರಷ್ಟಾಚಾರದ ಆರೋಪಗಳಿಂದ ಹೊರಬರಲು ಅಬಕಾರಿ ಸಚಿವ ಕೆ. ಗೋಪಾಲಯ್ಯನವರ ತಲೆದಂಡವಾಗಬೇಕು ಎಂಬ ಕೂಗು ಬಿಜೆಪಿ ಸಚಿವರಿಂದಲೇ ಕೇಳಿಬಂದಿದೆ. ಕೆಲವು ಬಿಜೆಪಿ ನಾಯಕರು ಕೆ.ಗೋಪಾಲಯ್ಯನವರನ್ನು ಸಚಿವ ಸಂಪುಟದಿಂದ ಕೈ ಬಿಡುವಂತೆ ಮುಖ್ಯ ಮಂತ್ರಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಬಿಜೆಪಿ ಮೂಲಗಳು ಹೇಳಿವೆ.

ಮೊನ್ನೆ ಸೋಮವಾರ ಜೂನ್ 21 ರಂದು ಮಹತ್ವದ ಸಚಿವ ಸಂಪುಟ ಸಭೆ ನಡೆದಿದ್ದು, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಮೇಲಿನ ಅತ್ಯಾಚಾರದ ಪ್ರಕರಣದ ವಿಷಯ ಮತ್ತು ಗೋಪಲಾಯ್ಯನವರ ಆಡಿಯೋ ವಿಷಯ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ. ಕ್ಯಾಬಿನೆಟ್ ಸಭೆ ಬಳಿಕ ಆರೋಗ್ಯ ಸಚಿವ ಕೆ ಸುಧಾಕರ್, ಕೃಷಿ ಸಚಿವ ಬಿ.ಸಿ.ಪಾಟೀಲ್, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಶ್ರೀಮಂತ್ ಪಾಟೀಲ್ ಸೇರಿ ಅನೇಕ ವಲಸೆ ಸಚಿವರು ಸಭೆ ಸೇರಿ ರಾಜ್ಯ ರಾಜಕೀಯದ ಬೆಳವಣಿಗೆ ಕುರಿತು ಚರ್ಚೆ ನಡೆಸಿದ್ದಾರೆ.

ಕಳೆದ ಜನವರಿ ನಂತರ ಅಂದರೆ ಹಿಂದಿನ 6 ತಿಂಗಳಿನಲ್ಲಿ ಕೆ.ನಾಗೇಶ್ ಮತ್ತು ರಮೇಶ್ ಜಾರಕಿಹೋಳಿ ಅವರನ್ನು ಸಂಪುಟದಿಂದ ಕೈಬಿಡಲಾಗಿದೆ. ಈ ಹಿಂದೆ ಅಬಕಾರಿ ಸಚಿವರಾಗಿದ್ದ ನಾಗೇಶ್ ಅವರನ್ನು ಕೂಡ ಭ್ರಷ್ಟಾಚಾರದ ಆರೋಪದ ಮೇಲೆ ಸಚಿವ ಸ್ಥಾನದಿಂದ ಕೆಳಗಿಳಿಸಲಾಗಿತ್ತು. ಇದೆಲ್ಲ ಬೆಳವಣಿಗೆಗಳನ್ನು ಗಮನಿಸುತ್ತಿರುವ ವಲಸೆ ಸಚಿವರಲ್ಲಿ ಸದ್ಯ ನಡುಕ ಆರಂಭವಾಗಿದ್ದು ತಮ್ಮ ತಮ್ಮ ಸಚಿವ ಸ್ಥಾನವನ್ನು ಉಳಿಸಿಕೊಳ್ಳುವುದು ಹೇಗೆ ಎಂಬ ಚಿಂತೆ ಕಾಡುತ್ತಿದೆ.

ಯಡಿಯೂರಪ್ಪನವರು ಇರುವ ವರೆಗೆ ನಮಗೆ ತೊಂದರೆಯಿಲ್ಲ. ಒಂದು ವೇಳೆ ಯಡಿಯೂರಪ್ಪನವರ ಬದಲಾವಣೆಯಾದರೆ ಮುಂದೆ ನಮ್ಮ ಕತೆ ಏನೆಂದು ತಿಳಿದಿಲ್ಲ ಎಂದು ಹೆಸರು ಹೇಳಲಿಚ್ಚಿಸದ ವಲಸೆ ಸಚಿವರೊಬ್ಬರು ಪ್ರತಿಕ್ರಿಯಿಸಿದ್ದಾರೆ ಎಂದು ವರದಿಯಾಗಿದೆ.

ಸರ್ಕಾರ ಕೆ. ಗೋಪಾಲಯ್ಯನವರಿಂದ ರಾಜೀನಾಮೆಯನ್ನು ಪಡೆಯುತ್ತದೆಯೇ ಎಂಬುದು ಸರ್ಕಾರಕ್ಕೆ ಬಿಟ್ಟ ವಿಚಾರ. ವಿರೋಧ ಪಕ್ಷಗಳು ಮಾತ್ರ ಕೆ.ಗೋಪಾಲಯ್ಯನವರ ರಾಜೀನಾಮೆಗೆ ಬಿಗಿ ಪಟ್ಟು ಹಿಡಿದಿವೆ. ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿಯವರು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಕರ್ನಾಟಕ ಸರ್ಕಾರ ಭ್ರಷ್ಟಾಚಾರಗಳಿಂದ ತುಂಬಿ ಹೋಗಿದೆ. ಲಂಚ ನೀಡಿದ ಅಧಿಕಾರಿಗಳಿಗೆ ಮಾತ್ರ ಯಾಕೆ ಶಿಕ್ಷೆ? ಹಫ್ತಾ ಪಡೆಯುವ ಸಚಿವರಿಗೆ ಯಾವುದೇ ಶಿಕ್ಷೆ ಇಲ್ಲವೇ ಎಂದು ಸರಣಿ ಟ್ವೀಟ್‌ಗಳ ಮೂಲಕ ಕೆ.ಗೋಪಲಯ್ಯನವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ಕರ್ನಾಟಕ ಕಾಂಗ್ರೆಸ್‌ ಕೂಡ ಕೆ.ಗೋಪಾಲಯ್ಯನವರ ಹಫ್ತಾ ಹಗರಣವನ್ನು ಗಂಭೀರವಾಗಿ  ಪರಿಗಣಿಸಿದ್ದು ಅಬಕಾರಿ ಸಚಿವರ ರಾಜೀನಾಮೆಗೆ ಪಟ್ಟು ಹಿಡಿದಿದೆ. ಉಗ್ರ ಹೋರಾಟದ ಎಚ್ಚರಿಕೆಯನ್ನೂ ಸಹ ನೀಡಿದೆ.

ಅಬಕಾರಿ ಸಚಿವ ಕೆ.ಗೋಪಾಲಯ್ಯನವರ ರಾಜೀನಾಮೆಗೆ ವಿರೋಧ ಪಕ್ಷಗಳ ಒತ್ತಡ, ಬಿಜೆಪಿಯ ಒಳಗಿನವರ ಒತ್ತಾಯ ತೀವ್ರಗೊಂಡಿರುವ ಈ ಹೊತ್ತಿನಲ್ಲಿ ವಲಸೆ ಸಚಿವರಲ್ಲಿ ಇನ್ನಿಲ್ಲದ ನಡುಕ ಆರಂಭವಾಗಿದೆ. ರಾಜ್ಯ ಸರ್ಕಾರದಲ್ಲಿ ತಮಗೆ ಹಿನ್ನಡೆಯಾಗುತ್ತಿರುವುದನ್ನು ಗಮನಿಸುತ್ತಿರುವ ಕೆಲ ವಲಸೆ ಸಚಿವರು ಸದ್ಯದಲ್ಲೇ ದೆಹಲಿಗೆ ತೆರಳಿ ಬಿಜೆಪಿ ಹೈಕಮಾಂಡ್ ಮುಂದೆ ಮೂಲ ಬಿಜೆಪಿಗರ ವಿರುದ್ಧ ದೂರನ್ನು ನೀಡಲು ನಿರ್ಧರಿಸಿದ್ದಾರೆ.

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಕರ್ನಾಟಕ ಭೇಟಿಯ ಸಂದರ್ಭದಲ್ಲಿ ನಾವು ನಮ್ಮ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟಿದ್ದೇವೆ. ಅವರು ನಮಗೆ ದೆಹಲಿಗೆ ಬಂದು ಹೈಕಮಾಂಡ್ ಭೇಟಿಯಾಗಲು ಹೇಳಿದ್ದಾರೆ. ನಮ್ಮ ಸಮಸ್ಯೆಗಳನ್ನು ನಾವು ಹೈಕಮಾಂಡ್ ಮುಂದೆ ಇಡುತ್ತೇವೆ. ಕೆಲ ನಾಯಕರು ಬಿಜೆಪಿ ಸರ್ಕಾರ ರಚನೆಯಾಗಲು ನಮ್ಮ ಪಾತ್ರವೂ ಇರುವದನ್ನು ಮರೆತು ನಮ್ಮ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

-ರಾಜೇಶ್ ಹೆಬ್ಬಾರ್


ಇದನ್ನೂ ಓದಿ : ಮೈಸೂರಿನಲ್ಲಿ ಡೆಲ್ಟಾ ಪ್ಲಸ್​ ರೂಪಾಂತರಿ ಪತ್ತೆ: ಸಚಿವ ಸುಧಾಕರ್ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...