Homeಮುಖಪುಟ’ಸೂಕ್ಷ್ಮ ವಿಚಾರಗಳಿಗೆ ವಿವಾದದ ಸ್ಪರ್ಶ ನೀಡುವುದು ಬಿಜೆಪಿ, ಸಿಟಿ ರವಿ ಅವರಿಗೆ ಕರತಲಾಮಲಕ’: ಜೆಡಿಎಸ್

’ಸೂಕ್ಷ್ಮ ವಿಚಾರಗಳಿಗೆ ವಿವಾದದ ಸ್ಪರ್ಶ ನೀಡುವುದು ಬಿಜೆಪಿ, ಸಿಟಿ ರವಿ ಅವರಿಗೆ ಕರತಲಾಮಲಕ’: ಜೆಡಿಎಸ್

- Advertisement -
- Advertisement -

ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ಗೆ ಕೇರಳದಿಂದ ಕಳುಹಿಸಲಾಗಿದ್ದ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ನಿರಾಕರಿಸಿರುವ ಒಕ್ಕೂಟ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗುತ್ತದೆ. ಈ ನಡುವೆ ರಾಜ್ಯ ಬಿಜೆಪಿ ನಾಯಕರು ಒಕ್ಕೂಟ ಸರ್ಕಾರದ ಸಮರ್ಥನೆಗೆ ಇಳಿದಿರುವುದನ್ನು ಜಾತ್ಯಾತೀತ ಜನತಾದಳ ಖಂಡಿಸಿದೆ.

“ಗಣರಾಜ್ಯೋತ್ಸವ ಪರೇಡ್ ಸ್ತಬ್ಧಚಿತ್ರಗಳ ಆಯ್ಕೆಯಲ್ಲಿ ನಾರಾಯಣ ಗುರುಗಳ ಚಿತ್ರವುಳ್ಳ ಕೇರಳ ರಾಜ್ಯದ ಸ್ತಬ್ಧಚಿತ್ರವನ್ನು ತಿರಸ್ಕಾರ ಮಾಡಿದ್ದನ್ನು ಪ್ರಶ್ನೆ ಮಾಡಿದ್ದನ್ನೇ ಬಿಜೆಪಿ ವಿವಾದ ಎಂದು ಬಿಂಬಿಸುತ್ತಿದೆ. ಸೂಕ್ಷ್ಮ ವಿಚಾರಗಳಿಗೆ ವಿವಾದದ ಸ್ಪರ್ಶ ನೀಡುವುದು ಕರ್ನಾಟಕ ಬಿಜೆಪಿ ಮತ್ತು ಸಿ.ಟಿ.ರವಿ ಅವರಿಗೆ ಕರತಲಾಮಲಕ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

’ವಿವಾದವಲ್ಲದ ವಿಚಾರ ಅಂದರೇನು..? ನಾರಾಯಣ ಗುರುಗಳಿಗೆ ಆದ ಅನ್ಯಾಯವನ್ನು ಪ್ರಶ್ನೆ ಮಾಡಬಾರದಿತ್ತೆ..? ಕೇರಳ ಸರ್ಕಾರ ಸ್ತಬ್ಧಚಿತ್ರದ ಮಾರ್ಗದರ್ಶಿ ಸೂತ್ರಗಳನ್ನು ಪಾಲಿಸಿಲ್ಲ ಎಂದಾದರೆ ಆ ಮಾರ್ಗದರ್ಶಿ ಸೂತ್ರಗಳನ್ನು ಸಾರ್ವಜನಿಕವಾಗಿ ದೇಶದ ಮುಂದಿಡಿ. ಅರೆಬರೆ ವಿವರ ಬೇಡ’ ಎಂದಿದೆ.

ಇದನ್ನೂ ಓದಿ: ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ ವಿವಾದ: ಸುಳ್ಳು ಹೇಳಿದ ಸಚಿವ ಸುನಿಲ್ ಕುಮಾರ್‌?

’ಕೇರಳದ ಜತೆಗೆ ತಮಿಳುನಾಡು, ಪಶ್ಚಿಮ ಬಂಗಾಳ ರಾಜ್ಯಗಳ ಸ್ತಬ್ಧಚಿತ್ರಗಳನ್ನು ಕೂಡ ನಿರಾಕರಿಸಲಾಗಿದೆ. ಪ್ರಾದೇಶಿಕ ಪಕ್ಷಗಳ ಆಡಳಿತ ಇರುವ ರಾಜ್ಯಗಳ ಸ್ತಬ್ಧ ಚಿತ್ರಗಳ ಆಯ್ಕೆ ಬಗ್ಗೆ ಏಕೆ ತಾರತಮ್ಯ ನೀತಿ..? ಪ್ರಾದೇಶಿಕ ಆಸ್ಮಿತೆಯ ಕತ್ತು ಹಿಸುಕುವ ಪ್ರಯತ್ನವೇ ಇದು ಎಂಬ ಅನುಮಾನ ಬರುತ್ತಿದೆ’ ಎಂದು ಅನುಮಾನ ವ್ಯಕ್ತಪಡಿಸಿದೆ.

’ಆಯ್ಕೆ ಸಮಿತಿಯಲ್ಲಿ ಇರುವವರು ಯಾರು..? ಅವರ ಹಿನ್ನೆಲೆ ಏನು..? ಅವರ ಆಯ್ಕೆಯ ಬಗ್ಗೆ ಇರುವ ಮಾನದಂಡ ಏನು..? ಇದು ಕೂಡ ದೇಶಕ್ಕೆ ಗೊತ್ತಾಗಬೇಕಿದೆ. ಸ್ತಬ್ಧಚಿತ್ರಗಳ ಆಯ್ಕೆಯಲ್ಲಿ ಕೇಂದ್ರ ಸರಕಾರದ ಪಾತ್ರ ಇಲ್ಲ ಎನ್ನುವ ಬಿಜೆಪಿ, ಪ್ರಧಾನಿಗಳಿಗೆ ಶ್ರೀ ನಾರಾಯಣ ಗುರುಗಳ ಬಗ್ಗೆ ತುಂಬಾ ಗೌರವ ಇದೆ ಎನ್ನುತ್ತೀರಿ. ಏನಿದು ಎರಡು ನಾಲಗೆಯ ತುತ್ತೂರಿ..?’ ಎಂದು ಪ್ರಶ್ನಿಸಿದೆ.

’ಈ ವಿವಾದವನ್ನು ಹುಟ್ಟು ಹಾಕಿದವರು ಎಚ್.ಡಿ.ಕುಮಾರಸ್ವಾಮಿ ಅವರಲ್ಲ, ಬಿಜೆಪಿ ಮತ್ತು ಕೇಂದ್ರ ಸರ್ಕಾರ. ವಿವಿಧತೆಯಲ್ಲಿ ಏಕತೆಯುಳ್ಳ ಭಾರತವನ್ನು ಸಾಂಸ್ಕೃತಿಕವಾಗಿ ಬೆಂಗಾಡು ಮಾಡುವ ಇಂಥ ಹುನ್ನಾರಗಳು ಇನ್ನಾದರೂ ನಿಲ್ಲಲ್ಲಿ. ಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರದಲ್ಲಿ ಇದ್ದ ನ್ಯೂನತೆಗಳು ಏನು..? ಎಂದು ತಿಳಿಯುವ ಹಕ್ಕು ದೇಶಕ್ಕಿದೆ ಎನ್ನುವುದು ನಮ್ಮ ಭಾವನೆ’ ಎಂದು ಹೇಳಿದೆ.


ಇದನ್ನೂ ಓದಿ: ನಾರಾಯಣ ಗುರು ಸ್ತಬ್ಧಚಿತ್ರ ಪ್ರದರ್ಶನಕ್ಕೆ ನಿರಾಕರಣೆ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...