Homeಮುಖಪುಟ’ಸೂಕ್ಷ್ಮ ವಿಚಾರಗಳಿಗೆ ವಿವಾದದ ಸ್ಪರ್ಶ ನೀಡುವುದು ಬಿಜೆಪಿ, ಸಿಟಿ ರವಿ ಅವರಿಗೆ ಕರತಲಾಮಲಕ’: ಜೆಡಿಎಸ್

’ಸೂಕ್ಷ್ಮ ವಿಚಾರಗಳಿಗೆ ವಿವಾದದ ಸ್ಪರ್ಶ ನೀಡುವುದು ಬಿಜೆಪಿ, ಸಿಟಿ ರವಿ ಅವರಿಗೆ ಕರತಲಾಮಲಕ’: ಜೆಡಿಎಸ್

- Advertisement -
- Advertisement -

ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ಗೆ ಕೇರಳದಿಂದ ಕಳುಹಿಸಲಾಗಿದ್ದ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ನಿರಾಕರಿಸಿರುವ ಒಕ್ಕೂಟ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗುತ್ತದೆ. ಈ ನಡುವೆ ರಾಜ್ಯ ಬಿಜೆಪಿ ನಾಯಕರು ಒಕ್ಕೂಟ ಸರ್ಕಾರದ ಸಮರ್ಥನೆಗೆ ಇಳಿದಿರುವುದನ್ನು ಜಾತ್ಯಾತೀತ ಜನತಾದಳ ಖಂಡಿಸಿದೆ.

“ಗಣರಾಜ್ಯೋತ್ಸವ ಪರೇಡ್ ಸ್ತಬ್ಧಚಿತ್ರಗಳ ಆಯ್ಕೆಯಲ್ಲಿ ನಾರಾಯಣ ಗುರುಗಳ ಚಿತ್ರವುಳ್ಳ ಕೇರಳ ರಾಜ್ಯದ ಸ್ತಬ್ಧಚಿತ್ರವನ್ನು ತಿರಸ್ಕಾರ ಮಾಡಿದ್ದನ್ನು ಪ್ರಶ್ನೆ ಮಾಡಿದ್ದನ್ನೇ ಬಿಜೆಪಿ ವಿವಾದ ಎಂದು ಬಿಂಬಿಸುತ್ತಿದೆ. ಸೂಕ್ಷ್ಮ ವಿಚಾರಗಳಿಗೆ ವಿವಾದದ ಸ್ಪರ್ಶ ನೀಡುವುದು ಕರ್ನಾಟಕ ಬಿಜೆಪಿ ಮತ್ತು ಸಿ.ಟಿ.ರವಿ ಅವರಿಗೆ ಕರತಲಾಮಲಕ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

’ವಿವಾದವಲ್ಲದ ವಿಚಾರ ಅಂದರೇನು..? ನಾರಾಯಣ ಗುರುಗಳಿಗೆ ಆದ ಅನ್ಯಾಯವನ್ನು ಪ್ರಶ್ನೆ ಮಾಡಬಾರದಿತ್ತೆ..? ಕೇರಳ ಸರ್ಕಾರ ಸ್ತಬ್ಧಚಿತ್ರದ ಮಾರ್ಗದರ್ಶಿ ಸೂತ್ರಗಳನ್ನು ಪಾಲಿಸಿಲ್ಲ ಎಂದಾದರೆ ಆ ಮಾರ್ಗದರ್ಶಿ ಸೂತ್ರಗಳನ್ನು ಸಾರ್ವಜನಿಕವಾಗಿ ದೇಶದ ಮುಂದಿಡಿ. ಅರೆಬರೆ ವಿವರ ಬೇಡ’ ಎಂದಿದೆ.

ಇದನ್ನೂ ಓದಿ: ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ ವಿವಾದ: ಸುಳ್ಳು ಹೇಳಿದ ಸಚಿವ ಸುನಿಲ್ ಕುಮಾರ್‌?

’ಕೇರಳದ ಜತೆಗೆ ತಮಿಳುನಾಡು, ಪಶ್ಚಿಮ ಬಂಗಾಳ ರಾಜ್ಯಗಳ ಸ್ತಬ್ಧಚಿತ್ರಗಳನ್ನು ಕೂಡ ನಿರಾಕರಿಸಲಾಗಿದೆ. ಪ್ರಾದೇಶಿಕ ಪಕ್ಷಗಳ ಆಡಳಿತ ಇರುವ ರಾಜ್ಯಗಳ ಸ್ತಬ್ಧ ಚಿತ್ರಗಳ ಆಯ್ಕೆ ಬಗ್ಗೆ ಏಕೆ ತಾರತಮ್ಯ ನೀತಿ..? ಪ್ರಾದೇಶಿಕ ಆಸ್ಮಿತೆಯ ಕತ್ತು ಹಿಸುಕುವ ಪ್ರಯತ್ನವೇ ಇದು ಎಂಬ ಅನುಮಾನ ಬರುತ್ತಿದೆ’ ಎಂದು ಅನುಮಾನ ವ್ಯಕ್ತಪಡಿಸಿದೆ.

’ಆಯ್ಕೆ ಸಮಿತಿಯಲ್ಲಿ ಇರುವವರು ಯಾರು..? ಅವರ ಹಿನ್ನೆಲೆ ಏನು..? ಅವರ ಆಯ್ಕೆಯ ಬಗ್ಗೆ ಇರುವ ಮಾನದಂಡ ಏನು..? ಇದು ಕೂಡ ದೇಶಕ್ಕೆ ಗೊತ್ತಾಗಬೇಕಿದೆ. ಸ್ತಬ್ಧಚಿತ್ರಗಳ ಆಯ್ಕೆಯಲ್ಲಿ ಕೇಂದ್ರ ಸರಕಾರದ ಪಾತ್ರ ಇಲ್ಲ ಎನ್ನುವ ಬಿಜೆಪಿ, ಪ್ರಧಾನಿಗಳಿಗೆ ಶ್ರೀ ನಾರಾಯಣ ಗುರುಗಳ ಬಗ್ಗೆ ತುಂಬಾ ಗೌರವ ಇದೆ ಎನ್ನುತ್ತೀರಿ. ಏನಿದು ಎರಡು ನಾಲಗೆಯ ತುತ್ತೂರಿ..?’ ಎಂದು ಪ್ರಶ್ನಿಸಿದೆ.

’ಈ ವಿವಾದವನ್ನು ಹುಟ್ಟು ಹಾಕಿದವರು ಎಚ್.ಡಿ.ಕುಮಾರಸ್ವಾಮಿ ಅವರಲ್ಲ, ಬಿಜೆಪಿ ಮತ್ತು ಕೇಂದ್ರ ಸರ್ಕಾರ. ವಿವಿಧತೆಯಲ್ಲಿ ಏಕತೆಯುಳ್ಳ ಭಾರತವನ್ನು ಸಾಂಸ್ಕೃತಿಕವಾಗಿ ಬೆಂಗಾಡು ಮಾಡುವ ಇಂಥ ಹುನ್ನಾರಗಳು ಇನ್ನಾದರೂ ನಿಲ್ಲಲ್ಲಿ. ಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರದಲ್ಲಿ ಇದ್ದ ನ್ಯೂನತೆಗಳು ಏನು..? ಎಂದು ತಿಳಿಯುವ ಹಕ್ಕು ದೇಶಕ್ಕಿದೆ ಎನ್ನುವುದು ನಮ್ಮ ಭಾವನೆ’ ಎಂದು ಹೇಳಿದೆ.


ಇದನ್ನೂ ಓದಿ: ನಾರಾಯಣ ಗುರು ಸ್ತಬ್ಧಚಿತ್ರ ಪ್ರದರ್ಶನಕ್ಕೆ ನಿರಾಕರಣೆ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....