Homeಮುಖಪುಟ’ಸೂಕ್ಷ್ಮ ವಿಚಾರಗಳಿಗೆ ವಿವಾದದ ಸ್ಪರ್ಶ ನೀಡುವುದು ಬಿಜೆಪಿ, ಸಿಟಿ ರವಿ ಅವರಿಗೆ ಕರತಲಾಮಲಕ’: ಜೆಡಿಎಸ್

’ಸೂಕ್ಷ್ಮ ವಿಚಾರಗಳಿಗೆ ವಿವಾದದ ಸ್ಪರ್ಶ ನೀಡುವುದು ಬಿಜೆಪಿ, ಸಿಟಿ ರವಿ ಅವರಿಗೆ ಕರತಲಾಮಲಕ’: ಜೆಡಿಎಸ್

- Advertisement -
- Advertisement -

ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ಗೆ ಕೇರಳದಿಂದ ಕಳುಹಿಸಲಾಗಿದ್ದ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ನಿರಾಕರಿಸಿರುವ ಒಕ್ಕೂಟ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗುತ್ತದೆ. ಈ ನಡುವೆ ರಾಜ್ಯ ಬಿಜೆಪಿ ನಾಯಕರು ಒಕ್ಕೂಟ ಸರ್ಕಾರದ ಸಮರ್ಥನೆಗೆ ಇಳಿದಿರುವುದನ್ನು ಜಾತ್ಯಾತೀತ ಜನತಾದಳ ಖಂಡಿಸಿದೆ.

“ಗಣರಾಜ್ಯೋತ್ಸವ ಪರೇಡ್ ಸ್ತಬ್ಧಚಿತ್ರಗಳ ಆಯ್ಕೆಯಲ್ಲಿ ನಾರಾಯಣ ಗುರುಗಳ ಚಿತ್ರವುಳ್ಳ ಕೇರಳ ರಾಜ್ಯದ ಸ್ತಬ್ಧಚಿತ್ರವನ್ನು ತಿರಸ್ಕಾರ ಮಾಡಿದ್ದನ್ನು ಪ್ರಶ್ನೆ ಮಾಡಿದ್ದನ್ನೇ ಬಿಜೆಪಿ ವಿವಾದ ಎಂದು ಬಿಂಬಿಸುತ್ತಿದೆ. ಸೂಕ್ಷ್ಮ ವಿಚಾರಗಳಿಗೆ ವಿವಾದದ ಸ್ಪರ್ಶ ನೀಡುವುದು ಕರ್ನಾಟಕ ಬಿಜೆಪಿ ಮತ್ತು ಸಿ.ಟಿ.ರವಿ ಅವರಿಗೆ ಕರತಲಾಮಲಕ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

’ವಿವಾದವಲ್ಲದ ವಿಚಾರ ಅಂದರೇನು..? ನಾರಾಯಣ ಗುರುಗಳಿಗೆ ಆದ ಅನ್ಯಾಯವನ್ನು ಪ್ರಶ್ನೆ ಮಾಡಬಾರದಿತ್ತೆ..? ಕೇರಳ ಸರ್ಕಾರ ಸ್ತಬ್ಧಚಿತ್ರದ ಮಾರ್ಗದರ್ಶಿ ಸೂತ್ರಗಳನ್ನು ಪಾಲಿಸಿಲ್ಲ ಎಂದಾದರೆ ಆ ಮಾರ್ಗದರ್ಶಿ ಸೂತ್ರಗಳನ್ನು ಸಾರ್ವಜನಿಕವಾಗಿ ದೇಶದ ಮುಂದಿಡಿ. ಅರೆಬರೆ ವಿವರ ಬೇಡ’ ಎಂದಿದೆ.

ಇದನ್ನೂ ಓದಿ: ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ ವಿವಾದ: ಸುಳ್ಳು ಹೇಳಿದ ಸಚಿವ ಸುನಿಲ್ ಕುಮಾರ್‌?

’ಕೇರಳದ ಜತೆಗೆ ತಮಿಳುನಾಡು, ಪಶ್ಚಿಮ ಬಂಗಾಳ ರಾಜ್ಯಗಳ ಸ್ತಬ್ಧಚಿತ್ರಗಳನ್ನು ಕೂಡ ನಿರಾಕರಿಸಲಾಗಿದೆ. ಪ್ರಾದೇಶಿಕ ಪಕ್ಷಗಳ ಆಡಳಿತ ಇರುವ ರಾಜ್ಯಗಳ ಸ್ತಬ್ಧ ಚಿತ್ರಗಳ ಆಯ್ಕೆ ಬಗ್ಗೆ ಏಕೆ ತಾರತಮ್ಯ ನೀತಿ..? ಪ್ರಾದೇಶಿಕ ಆಸ್ಮಿತೆಯ ಕತ್ತು ಹಿಸುಕುವ ಪ್ರಯತ್ನವೇ ಇದು ಎಂಬ ಅನುಮಾನ ಬರುತ್ತಿದೆ’ ಎಂದು ಅನುಮಾನ ವ್ಯಕ್ತಪಡಿಸಿದೆ.

’ಆಯ್ಕೆ ಸಮಿತಿಯಲ್ಲಿ ಇರುವವರು ಯಾರು..? ಅವರ ಹಿನ್ನೆಲೆ ಏನು..? ಅವರ ಆಯ್ಕೆಯ ಬಗ್ಗೆ ಇರುವ ಮಾನದಂಡ ಏನು..? ಇದು ಕೂಡ ದೇಶಕ್ಕೆ ಗೊತ್ತಾಗಬೇಕಿದೆ. ಸ್ತಬ್ಧಚಿತ್ರಗಳ ಆಯ್ಕೆಯಲ್ಲಿ ಕೇಂದ್ರ ಸರಕಾರದ ಪಾತ್ರ ಇಲ್ಲ ಎನ್ನುವ ಬಿಜೆಪಿ, ಪ್ರಧಾನಿಗಳಿಗೆ ಶ್ರೀ ನಾರಾಯಣ ಗುರುಗಳ ಬಗ್ಗೆ ತುಂಬಾ ಗೌರವ ಇದೆ ಎನ್ನುತ್ತೀರಿ. ಏನಿದು ಎರಡು ನಾಲಗೆಯ ತುತ್ತೂರಿ..?’ ಎಂದು ಪ್ರಶ್ನಿಸಿದೆ.

’ಈ ವಿವಾದವನ್ನು ಹುಟ್ಟು ಹಾಕಿದವರು ಎಚ್.ಡಿ.ಕುಮಾರಸ್ವಾಮಿ ಅವರಲ್ಲ, ಬಿಜೆಪಿ ಮತ್ತು ಕೇಂದ್ರ ಸರ್ಕಾರ. ವಿವಿಧತೆಯಲ್ಲಿ ಏಕತೆಯುಳ್ಳ ಭಾರತವನ್ನು ಸಾಂಸ್ಕೃತಿಕವಾಗಿ ಬೆಂಗಾಡು ಮಾಡುವ ಇಂಥ ಹುನ್ನಾರಗಳು ಇನ್ನಾದರೂ ನಿಲ್ಲಲ್ಲಿ. ಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರದಲ್ಲಿ ಇದ್ದ ನ್ಯೂನತೆಗಳು ಏನು..? ಎಂದು ತಿಳಿಯುವ ಹಕ್ಕು ದೇಶಕ್ಕಿದೆ ಎನ್ನುವುದು ನಮ್ಮ ಭಾವನೆ’ ಎಂದು ಹೇಳಿದೆ.


ಇದನ್ನೂ ಓದಿ: ನಾರಾಯಣ ಗುರು ಸ್ತಬ್ಧಚಿತ್ರ ಪ್ರದರ್ಶನಕ್ಕೆ ನಿರಾಕರಣೆ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...