Homeಕರ್ನಾಟಕKSRTC ಟ್ರೇಡ್‌ ಮಾರ್ಕ್‌ ವಿವಾದ: ಹೈಕೋರ್ಟ್‌ನಲ್ಲಿ ಕರ್ನಾಟಕಕ್ಕೆ ಜಯ

KSRTC ಟ್ರೇಡ್‌ ಮಾರ್ಕ್‌ ವಿವಾದ: ಹೈಕೋರ್ಟ್‌ನಲ್ಲಿ ಕರ್ನಾಟಕಕ್ಕೆ ಜಯ

- Advertisement -
- Advertisement -

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಕೆಎಸ್ಸಾರ್ಟಿಸಿ(KSRTC) ಟ್ರೇಡ್‌ ಮಾರ್ಕ್‌ ಬಳಸಲು ಅನುಮತಿಸಬಾರದು ಎಂದು ಕೇರಳ ರಾಜ್ಯ ಆರ್‌ಟಿಸಿ ಸಲ್ಲಿಸಿದ ಮನವಿಯನ್ನು ಮದ್ರಾಸ್‌ ಹೈಕೋರ್ಟ್‌ ವಜಾಗೊಳಿಸಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಇದೀಗ ಯಾವುದೇ ಕಾನೂನಿನ ಸಮಸ್ಯೆಯಿಲ್ಲದೆ ಕೆಎಸ್ಸಾರ್ಟಿಸಿ ಹೆಸರನ್ನು ಬಳಸಬಹುದಾಗಿದೆ.

ಈ ಕುರಿತು ಕೇರಳ ಸಲ್ಲಿಸಿದ ಅರ್ಜಿ ವಿಚಾರಣೆ ವೇಳೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಕೆಎಸ್ಸಾರ್ಟಿಸಿ ಹೆಸರು ಬಳಕೆ ಮಾಡಲು ಯಾವುದೇ ಅಭ್ಯಂತರವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಹೇಳಿದ್ದು, ಕೇರಳ ಆರ್ಟಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಕೆಎಸ್‌ಆರ್‌ಟಿಸಿ ಎಂಬ ಟ್ರೇಡ್‌ ಮಾರ್ಕ್‌ ಬಳಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಇರುವ ಎಲ್ಲಾ ಕಾನೂನು ಅಡೆತಡೆಗಳನ್ನು ಮದ್ರಾಸ್ ಹೈಕೋರ್ಟ್ ತೆರವುಗೊಳಿಸಿದೆ.

ಕೇರಳ ಮತ್ತು ಕರ್ನಾಟಕ ರಾಜ್ಯಗಳು ತಮ್ಮ ಸರ್ಕಾರಿ ಸ್ವಾಮ್ಯದ ಸಾರ್ವಜನಿಕ ಸಾರಿಗೆ ನಿಗಮಗಳಿಗೆ ಕ್ರಮವಾಗಿ 1965 ಮತ್ತು 1973 ರಿಂದ KSRTC ಎಂಬ ಸಂಕ್ಷೇಪಣವನ್ನು ಬಳಸುತ್ತಿವೆ. ಕರ್ನಾಟಕವು 1973ರಿಂದ ಕೆಎಸ್‌ಆರ್‌ಟಿಸಿ ಲೋಗೊ ಬಳಸುತ್ತಿರುವ ಬಗ್ಗೆ ದಾಖಲೆಗಳನ್ನು ಚೆನ್ನೈ ಟ್ರೇಡ್‌ ಮಾರ್ಕ್‌ ನೋಂದಣಿ ಅಧಿಕಾರಿಗೆ ಸಲ್ಲಿಸಿ 2013ರಲ್ಲಿ ಟ್ರೇಡ್‌ ಮಾರ್ಕ್‌ ಪ್ರಮಾಣ ಪತ್ರವನ್ನು ಪಡೆದಿತ್ತು. ಇದಲ್ಲದೆ ಭಾರತ ಸರಕಾರದ ರಿಜಿಸ್ಟ್ರಾರ್ ಆಫ್ ಕಾಪಿ ರೈಟ್ಸ್ ಅವರಿಂದ ‘ಕೆಎಸ್ಸಾರ್ಟಿಸಿ’ ಲೋಗೋ ಮತ್ತು ‘ಗಂಡಭೇರುಂಡ ಗುರುತು’ ಬಳಕೆಗಾಗಿ ಕಾಪಿ ರೈಟ್ ಸಹ ಪಡೆದಿದೆ. ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಚೆನ್ನೈನಲ್ಲಿರುವ ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿಯ (ಇಂಟಲೆಕ್ಚುವಲ್‌ ಪ್ರಾಪರ್ಟಿ ಅಪೀಲ್‌ ಬೋರ್ಡ್‌)  ಮುಂದೆ ಇದನ್ನು ಪ್ರಶ್ನಿಸಿತ್ತು. ಆದರೆ ಕೇಂದ್ರ ಸರ್ಕಾರವು ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿಯನ್ನು ರದ್ದುಗೊಳಿಸಿ ಅಲ್ಲಿರುವ ಪ್ರಕರಣಗಳನ್ನು ಮದ್ರಾಸ್‌ ಹೈಕೋರ್ಟ್‌ಗೆ ವರ್ಗಾಯಿಸಿತ್ತು.

1937ರಿಂದ ತಿರುವಾಂಕೂರು ರಾಜ್ಯ ಸಾರಿಗೆ ಸಂಸ್ಥೆಯಿದ್ದು, ಕೇರಳ ರಾಜ್ಯ ಉದಯವಾದ ಬಳಿಕ 1965ರಿಂದ ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮ ಆರಂಭವಾಯಿತು.  42 ವರ್ಷಗಳಿಂದ ಕೇರಳ ರಾಜ್ಯ ಆರ್‌ಟಿಸಿಯು ಕೆಎಸ್‌ಆರ್‌ಟಿಸಿ ಬಳಸುತ್ತಿರುವುದರಿಂದ ಕರ್ನಾಟಕದ ಟ್ರೇಡ್‌ ಮಾರ್ಕ್‌ ಪ್ರಮಾಣ ಪತ್ರವನ್ನು ಅಮಾನ್ಯಗೊಳಿಸಬೇಕು ಎಂದು ಕೋರ್ಟ್‌ನಲ್ಲಿ ವಾದಿಸಿತ್ತು.

ಈ ಪ್ರಕರಣವನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿದ ಮದ್ರಾಸ್ ಹೈಕೋರ್ಟ್‌, ಉಭಯ ರಾಜ್ಯಗಳ ವಾದ–ಪ್ರತಿವಾದ ಆಲಿಸಿ ಕೇರಳದ ಅರ್ಜಿಯನ್ನು ವಜಾಗೊಳಿಸಿ ಕರ್ನಾಟಕದ ವಾದವನ್ನು ಎತ್ತಿ ಹಿಡಿದಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕೆಎಸ್ಸಾರ್ಟಿಸಿ ಅಧಿಕಾರಿಗಳು, ಕೇರಳ ರಾಜ್ಯ ಕೆಎಸ್‌ಆರ್‌ಟಿಸಿ ಬಳಕೆ ಮಾಡುವುದನ್ನು ನಾವು ಆಕ್ಷೇಪಿಸಿಲ್ಲ. ಆದರೆ ಅವರು ಆಕ್ಷೇಪಣೆ ಸಲ್ಲಿಸಿದ್ದು, ಹೈಕೋರ್ಟ್‌ ಅರ್ಜಿಯನ್ನು ವಜಾ ಮಾಡಿದೆ. ಈಗ ನಮಗೆ ಯಾವುದೇ ಕಾನೂನಿನ ತಡೆಯಿಲ್ಲ ಎಂದು ಹೇಳಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...