Homeಕರ್ನಾಟಕಕನ್ನಡದ ಮೊದಲ ಲೆಸ್ಬಿಯನ್ ಚಿತ್ರ ’ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆ

ಕನ್ನಡದ ಮೊದಲ ಲೆಸ್ಬಿಯನ್ ಚಿತ್ರ ’ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆ

- Advertisement -
- Advertisement -

ನಟಿ, ನಿರ್ದೇಶಕಿ, ಬರಹಗಾರ್ತಿ ಶೈಲಜಾ ಪಡಿಂಡಾಲ ನಿರ್ದೇಶಿಸಿರುವ ಕನ್ನಡದ ಮೊದಲ ಲೆಸ್ಬಿಯನ್ ಪ್ರೇಮಕಥೆಯ ಚಿತ್ರ ‘ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ.

ಕನ್ನಡದ ಈ ಲೆಸ್ಬಿಯನ್ ಪ್ರೇಮಕಥೆಯನ್ನು ಆಧರಿಸಿದ ಚಿತ್ರ ‘ನಾನು ಲೇಡಿಸ್’ ಅಪರೂಪದ ಗೌರವವನ್ನು ಗಳಿಸಿದ್ದು, ಮುಂದಿನ ತಿಂಗಳು ಅಕ್ಟೋಬರ್‌ 1 ರಿಂದ 16 ರವರೆಗೆ ಅಮೆರಿಕದ ಸಿಯಾಟಲ್‌ನಲ್ಲಿ ನಡೆಯಲಿರುವ 16 ನೇ ತಸ್ವೀರ್ ದಕ್ಷಿಣ ಏಷ್ಯನ್ ಚಲನಚಿತ್ರೋತ್ಸವದಲ್ಲಿ ಈ ಚಿತ್ರವನ್ನು ಪ್ರದರ್ಶಿಸಲಾಗುತ್ತದೆ.

’ನಾನು ಲೇಡಿಸ್’ ಚಲನಚಿತ್ರವು ಇಬ್ಬರು ಯುವತಿಯರು ಈ ಸಮಾಜದಲ್ಲಿ ತಮ್ಮ ಪ್ರೇಮವನ್ನು ಉಳಿಸಿಕೊಳ್ಳಲು ಹೆಣಗಾಡುವ ಕಥೆಯ ಜೊತೆಗೆ ಮಧ್ಯಮ ವರ್ಗದ ಆರ್ಥಿಕ ಸಮಸ್ಯೆಗಳು, ಸಮಾಜ, ಆರ್ಥಿಕ ವ್ಯವಸ್ಥೆ, ಲಿಂಗತ್ವ, ಮದುವೆ, ಸಲಿಂಗಿಗಳ ಸಮುದಾಯದ ಸಂತಾನೋತ್ಪತ್ತಿ ಹಕ್ಕುಗಳಂತಹ ಅನೇಕ ಅಂಶಗಳನ್ನು ಈ ಚಲನಚಿತ್ರವು ಹೊಂದಿದೆ ಎಂದು ಶೈಲಜಾ ತಿಳಿಸಿದ್ದಾರೆ.

ಇದನ್ನೂ ಓದಿ: ಅಕ್ಕಯ್ ಸಂದರ್ಶನ; ಮಂಗಳ ಮತ್ತು ಅಮಂಗಳ ಅನ್ನುವಂತದ್ದೆಲ್ಲ ಬ್ರಾಹ್ಮಣ್ಯ ಪ್ರೇರಿತ; ಇರುವುದು ಮನುಷ್ಯರು ಮತ್ತು ವೈವಿಧ್ಯತೆ

ಐದು ವರ್ಷದ ಕೆಳಗೆ ಶೈಲಜಾ ‘ಮೆಮೋರೀಸ್ ಆಫ್ ಮೆಷೀನ್’ ಎಂಬ ಕಿರುಚಿತ್ರ ನಿರ್ದೇಶಿಸುವ ಮೂಲಕ ನಿರ್ದೇಶನಕ್ಕೆ ಕಾಲಿಟ್ಟಿದ್ದರು. ಸಾಕಷ್ಟು ಚರ್ಚೆಗೆ ಕಾರಣವಾಗಿದ್ದ ಆ ಕಿರುಚಿತ್ರ ಉತ್ತಮ ಪ್ರತಿಕ್ರಿಯೆಯನ್ನು ಪಡೆದಿತ್ತು. ಈ ಬಾರಿ ಲೆಸ್ಬಿಯನ್ ಪ್ರೇಮಕಥೆಯ ಮೂಲಕ ಕನ್ನಡಕ್ಕೆ ಅಪರೂಪವಾದ ಕಥಾ ಎಳೆಯನ್ನು ಹೇಳಲು ಹೊರಟಿದ್ದಾರೆ.

Naanu Ladies | Shailaja Padindala

’ನನ್ನ ಮೊದಲ ಕಿರುಚಿತ್ರ ’ಮೆಮೋರೀಸ್ ಆಫ್ ಮೆಷೀನ್’ ಇದೆ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿತ್ತು. ಈಗ ನನ್ನ ಮೊದಲ ಚಿತ್ರ ಕೂಡ ಇಲ್ಲಿಯೇ ಪ್ರದರ್ಶನಗೊಳ್ಳುತ್ತಿರುವುದಕ್ಕೆ ನಾನು ರೋಮಾಂಚಿತಳಾಗಿದ್ದೇನೆ. ತಸ್ವೀರ್ ದಕ್ಷಿಣ ಏಷ್ಯನ್ ಚಲನಚಿತ್ರೋತ್ಸವದೊಂದಿಗೆ ನನ್ನ ಅನುಭವ ಮರೆಯಲಾರದಂತಹದ್ದು’ ಎಂದು ಶೈಲಜಾ ಹೇಳಿದ್ದಾರೆ.

ಇನ್ನು ತಸ್ವೀರ್ ಫಿಲ್ಮ್ ಫೆಸ್ಟಿವಲ್‌ನ ಸಂಸ್ಥಾಪಕಿ ರೀಟಾ ಮೆಹೆರ್ “ಇದೊಂದು ಕಠಿಣ ಸ್ಪರ್ಧೆಯಾಗಿತ್ತು. ನಮ್ಮ ಚಲನಚಿತ್ರೋತ್ಸವದ 16 ನೇ ಆವೃತ್ತಿಯಲ್ಲಿ ಶೈಲಜಾ ಅವರ ‘ನಾನು ಲೇಡಿಸ್’  ಪ್ರದರ್ಶಿಸುತ್ತಿರುವುದಕ್ಕೆ ನಮಗೆ ಸಂತೋಷವಾಗಿದೆ. ನಾನು ಲೇಡೀಸ್ ಒಂದು ಸುಂದರ ಕಥೆ!” ಎಂದಿದ್ದಾರೆ.

ಚಿತ್ರದಲ್ಲಿ ಶೈಲಜಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರೊಂದಿಗೆ ಮೇದಿನಿ ಕೆಳಮನೆ, ಗುರು ಸೋಮಸುಂದರಮ್ ಮೊದಲಾದವರು ಬಣ್ಣ ಹಚ್ಚಿದ್ದಾರೆ. ಛಾಯಾಗ್ರಹಣದ ಹೊಣೆಯನ್ನು ಹೊಸಬರಾದ ಕೋಮಲ್ ಖಿಯಾನಿ ಮತ್ತು ಚೆಹೆಕ್ ಬಿಲ್ಗಿ ಹೊತ್ತಿದ್ದಾರೆ. ಚಿತ್ರವನ್ನು ವಿಷ್ಣು ಪ್ರದೀಪ್, ಎಸ್ತರ್ ರೋಷಿತಾ ಮತ್ತು ತಿಜು ಈಸ್ತಪ್ಪನ್ ನಿರ್ಮಿಸಿದ್ದಾರೆ.

ದಕ್ಷಿಣ ಏಷ್ಯನ್ ಚಲನಚಿತ್ರೋತ್ಸವದಲ್ಲಿ ಪ್ರದರ್ಶನದ ನಂತರ, ಚಲನಚಿತ್ರವನ್ನು ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಲಾಗಿದೆ.


ಇದನ್ನೂ ಓದಿ: 200 ಹಲ್ಲಾ ಹೋ: ಪ್ರತೀಕಾರ ಹತ್ಯೆಯ ಸುತ್ತ ಮಹತ್ವದ ಜಾತಿ ದೌರ್ಜನ್ಯದ ಪ್ರಶ್ನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...