Homeಕರ್ನಾಟಕಶಂಕರ್ ‌ನಾಗ್‌ ಜನ್ಮದಿನ: ಕನ್ನಡಿಗರ ಮನದಲ್ಲಿ ಎಂದಿಗೂ ’ಆಟೋರಾಜ’ ಅಮರ

ಶಂಕರ್ ‌ನಾಗ್‌ ಜನ್ಮದಿನ: ಕನ್ನಡಿಗರ ಮನದಲ್ಲಿ ಎಂದಿಗೂ ’ಆಟೋರಾಜ’ ಅಮರ

27ನೇ ವಯಸ್ಸಿನಲ್ಲಿ 'ಮಿಂಚಿನ ಓಟ ’ದಂಥ ದರೋಡೆಕೋರರ ಸಿನಿಮಾ ನಿರ್ದೇಶಿಸಿ, ಏಳು ರಾಜ್ಯ ಪ್ರಶಸ್ತಿಗಳನ್ನು ಶಂಕರ್‌ ನಾಗ್ ಬಾಚಿಕೊಂಡಿದ್ದರು.

- Advertisement -
- Advertisement -

ಇಂದು (ನವೆಂಬರ್ 9) ಕನ್ನಡ ಚಿತ್ರರಂಗದ ಅಪ್ರತಿಮ ಕಲಾವಿದ, ಅದ್ಬುತ ನಿರ್ದೇಶಕ, ನಿರ್ಮಾಪಕ ಶಂಕರ್‌ ನಾಗ್ ಅವರ ಜನ್ಮದಿನ. ಕನ್ನಡಿಗರ ನೆಚ್ಚಿನ ಆಟೋರಾಜ ನಮ್ಮಿಂದ ಭೌತಿಕವಾಗಿ ದೂರವಾಗಿ 31 ವರ್ಷಗಳು ಕಳೆದಿವೆ. ಆದರೆ, ಅವರ ಸಾಧನೆಯ ಮೂಲಕ ಜನಮಾನಸದಲ್ಲಿ ಮರೆಯದ ಛಾಪು ಮೂಡಿಸಿದ್ದಾರೆ.

ಶಂಕರ್‌ನಾಗ್ ಬದುಕಿದ್ದು 36 ವರ್ಷ, ಆದರೆ ಅವರ ಸಾಧನೆ ಇಂದಿಗೂ ಅಮರ. 12 ವರ್ಷಗಳಲ್ಲಿ ಶಂಕರ್​ನಾಗ್​, ಬರೋಬ್ಬರಿ 98 ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ಅವುಗಳಲ್ಲಿ 90 ಸಿನಿಮಾಗಳಲ್ಲಿ ನಟನಾಗಿ ಕಾಣಿಸಿಕೊಂಡಿದ್ದಾರೆ.

ಶಂಕರ್ ನಾಗ್ ನವೆಂಬರ್ 9, 1954ರಲ್ಲಿ ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಹುಟ್ಟಿದರು. ಮುಂಬೈನಲ್ಲಿದ್ದ ಶಂಕರ್‌ನಾಗ್ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ಭಾರತೀಯ ರಾಷ್ಟ್ರೀಯ ಪ್ರಶಸ್ತಿ ವಿಜೇತ ಮರಾಠಿ ಚಿತ್ರ ‘22 ಜೂನ್ 1897’ ಕ್ಕೆ ಚಿತ್ರಕಥೆ ಬರೆದಿದ್ದರು.

ಇದನ್ನೂ ಓದಿ: ಕನ್ನಡ ಚಿತ್ರರಂಗಕ್ಕೆ ಹೊಸ ಕ್ರಿಯಾಶೀಲತೆ ತಂದುಕೊಟ್ಟ ’ಅಪ್ಪು ಡ್ಯಾನ್ಸ್’

 

1978 ರಲ್ಲಿ ತೆರೆಕಂಡ ಗಿರೀಶ ಕಾರ್ನಾಡ್ ನಿರ್ದೇಶನದ ‘ಒಂದಾನೊಂದು ಕಾಲದಲ್ಲಿ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಶಂಕರ್‌ ನಾಗ್, ಹಿಂತಿರುಗಿ ನೋಡಿದ್ದೇ ಇಲ್ಲ. ನಟನಾಗಿ ಪದಾರ್ಪಣೆ ಮಾಡಿದ ಎರಡೇ ವರ್ಷಕ್ಕೆ 1980 ರಲ್ಲಿ ತಮ್ಮ 27ರ ವಯಸ್ಸಿನಲ್ಲಿ ‘ಮಿಂಚಿನ ಓಟ’ ಚಿತ್ರವನ್ನ ನಿರ್ದೇಶಿಸಿ, ನಿರ್ಮಾಣ ಮಾಡುವ ಮೂಲಕ ತಾನೊಬ್ಬ ಒಳ್ಳೆಯ ನಿರ್ದೇಶಕ ಅನ್ನೋದನ್ನ ನಿರೂಪಿಸಿದ್ದರು. ’ಮಿಂಚಿನ ಓಟ ’ದಂಥ ದರೋಡೆಕೋರರ ಸಿನಿಮಾ ನಿರ್ದೇಶಿಸಿ, ಏಳು ರಾಜ್ಯಪ್ರಶಸ್ತಿಗಳನ್ನು ಶಂಕರ್‌ನಾಗ್ ಬಾಚಿಕೊಂಡರು. ಬರೀ ಕನ್ನಡ ಚಿತ್ರರಂಗವಲ್ಲದೆ, ಮರಾಠಿ, ಹಿಂದಿ ಮತ್ತು ಇಂಗ್ಲಿಷ್ ಚಿತ್ರರಂಗದಲ್ಲೂ ತಮ್ಮ ಛಾಪು ಮೂಡಿಸಿದ್ದಾರೆ.

ಇದನ್ನೂ ಓದಿ:  ಪುನೀತ್ ರಾಜಕುಮಾರ್ ನುಡಿನಮನ; ಮುಗ್ಧ ನಗುವೊಂದರ ಕಣ್ಮರೆ

ನಂತರ ಸಂಗೀತ ಮಾಂತ್ರಿಕ ಇಳಯ ರಾಜಾರನ್ನು ಕರೆ ತಂದು ಸಂಗೀತ ಕೊಡಿಸಿದ ‘ಜನ್ಮ ಜನ್ಮದ ಅನುಬಂಧ’, ‘ಗೀತಾ’ದಂಥ ಸಿನಿಮಾಗಳ ಹಾಡುಗಳು ಇಂದಿಗೂ ಜನಪ್ರಿಯ. ಶಂಕರ್‌ ನಿರ್ದೇಶನಕ್ಕೆ ಮನಸೋತ ರಾಜ್‌ಕುಮಾರ್‌ ಕೂಡ  ತಮ್ಮ ಇಮೇಜಿನ ಹಂಗು ತೊರೆದು, ‘ಒಂದು ಮುತ್ತಿನ ಕಥೆ’ಯಲ್ಲಿ ಅಭಿನಯಿಸಿದ್ದರು.

ಸೀತಾರಾಮು, ಆಟೋರಾಜ, ಸಾಂಗ್ಲಿಯಾನ, ನೋಡಿ ಸ್ವಾಮಿ ನಾವಿರೋದೇ ಹೀಗೆ, ಆ್ಯಕ್ಸಿಡೆಂಟ್, ಸಿಬಿಐ ಶಂಕರ್‌, ಮೂಗನ ಸೇಡು, ತರ್ಕ, ಗೀತಾ, ನ್ಯಾಯಾ ಎಲ್ಲಿದೆ ಚಿತ್ರಗಳು ಸೇರಿ 90 ಚಿತ್ರಗಳ ಮೂಲಕ ಜನರ ಮನ ಗೆದ್ದವರು. ತಮ್ಮ ’ಮುನಿಯನ ಮಾದರಿ’ ಚಿತ್ರದ ಮೂಲಕ ರೈತರ, ಹಳ್ಳಿಗರ ಸಮಸ್ಯೆಗಳಿಗೆ ದನಿಯಾದರು.

PC: Mythical India

ಕಿರುತೆರೆಯಲ್ಲಿ ತನ್ನದೆ ಛಾಪು ಮೂಡಿಸಿದ್ದ ‘ಮಾಲ್ಗುಡಿ ಡೇಸ್‌’ನಂತಹ ಗಟ್ಟಿ ಧಾರಾವಾಹಿಯನ್ನು ನೀಡಿದ ಕೀರ್ತಿ ಶಂಕರ್‌ ನಾಗ್‌ ಅವರಿಗೆ ಸಲ್ಲುತ್ತದೆ. 1986ರಲ್ಲಿ ಪ್ರಸಾರವಾದ ಈ ಧಾರವಾಹಿಯ ಕ್ರೇಜ್ ಎಷ್ಟಿತ್ತು ಎಂಬುದಕ್ಕೆ  ಉದಾಹರಣೆಯೆಂದರೆ ಕಳೆದ ವರ್ಷ ಝೀ ಕನ್ನಡ ಇದರ ಕನ್ನಡ ಅವತರಣಿಕೆ ಪ್ರಸಾರ ಮಾಡಿತ್ತು.

The nostalgia inducing 'Malgudi Days': When Swami was my friend too | The News Minute

ನಟ ಶಂಕರ್‌ ನಾಗ್ ನಮ್ಮನಗಲಿದ್ದು ಸೆಪ್ಟೆಂಬರ್‌ 30, 1990 ರಂದು. ಅಂದು ಭಾರತೀಯ ಚಿತ್ರರಂಗವೇ ಆಘಾತಕ್ಕೆ ಒಳಗಾದ ದಿನ. ಇಡೀ ಚಿತ್ರರಂಗ ಒಬ್ಬ ಅಪ್ರತಿಮ ಕಲಾವಿದ, ನಟ, ನಿರ್ದೇಶಕ, ನಿರ್ಮಾಪಕ, ರಂಗಭೂಮಿ ಕಲಾವಿದ, ಕರಾಟೆ ಕಿಂಗ್ ಎಂದು ಖ್ಯಾತರಾಗಿದ್ದ ಶಂಕರ್‌ ನಾಗ್ ಅವ‌ರನ್ನು ಕಳೆದುಕೊಂಡಿತ್ತು.

ದಾವಣಗೆರೆ ಬಳಿಯ ಆನಗೋಡಿನ ಬಳಿ ಶಂಕರ್‌ನಾಗ್‌ ಕಾರು ಅಪಘಾತದಲ್ಲಿ ನಿಧನರಾದರು. ಜೋಕುಮಾರಸ್ವಾಮಿ ಚಿತ್ರದ ಚಿತ್ರೀಕರಣ ಸಮಯದಲ್ಲಿ ನಡೆದ ಈ ದುರ್ಘಟನೆಯಿಂದ ಇಡೀ ಕರುನಾಡೇ ಆಘಾತಕ್ಕೆ ಒಳಗಾಗಿತ್ತು.

ತಮ್ಮ 12 ವರ್ಷಗಳ ಸಿನಿ ಜೀವನದಲ್ಲಿ ಆಟೋ ಚಾಲಕರ ಹೀರೋ ಆಗಿ, ಯುವ ನಿರ್ದೇಶಕರ ಸ್ಪೂರ್ತಿಯಾಗಿ ಶಂಕರ್​ನಾಗ್​ ಇಂದಿಗೂ ರಾರಾಜಿಸುತ್ತಿದ್ದಾರೆ. ಇವರ ನೆನಪಲ್ಲಿ ಸ್ಥಾಪಿಸಲಾದ ‘ರಂಗಶಂಕರ’ ನಾಟಕ ರಂಗ, ಅದೆಷ್ಟೋ ಯುವ ಪ್ರತಿಭೆಗಳಿಗೆ ವೇದಿಕೆಯಾಗಿದೆ. ನಟ ಶಂಕರ್‌ ನಾಗ್ ಪತ್ನಿ ಅರುಂಧತಿ ನಾಗ್ ರಂಗಶಂಕರದ ಹೊಣೆ ಹೊತ್ತಿದ್ದಾರೆ.

ರಂಗಶಂಕರದ ಮೂಲಕ ತಮ್ಮ ರಂಗತಂಡದ ಕನಸು ಕಟ್ಟಿಕೊಂಡ ರಂಗಕರ್ಮಿ ರಾಜ್‌ಗುರು ನಾನುಗೌರಿ.ಕಾಂ ಜೊತೆ ಶಂಕರ್‌ ನಾಗ್ ಅವರು ಇವರಲ್ಲಿ ತುಂಬಿದ ಸ್ಪೂರ್ತಿ ಬಗ್ಗೆ ಹಂಚಿಕೊಂಡಿದ್ದು ಹೀಗೆ.

“ಕಾಲೇಜಿನ ದಿನಗಳಲ್ಲಿ ರಂಗಶಂಕರದ ವೇದಿಕೆಯಲ್ಲಿ ನಾನು ಅಭಿನಯಿಸುವಾಗ ಮುಂದಿನ ಸಾಲಿನಲ್ಲಿ ಕೂತಿದ್ದ ಅರುಂಧತಿ ಅಮ್ಮ “ನೀನು ಶಂಕ್ರನ ಥರಾ ಬಿಹೇವ್ ಮಾಡ್ತಿಯಾ ಕಣೋ” ಅಂದಿದ್ರು, ಈಗದು ಅವರಿಗೆ ನೆನಪಿನಲ್ಲಿರುತ್ತದೊ ಇಲ್ಲವೋ ಗೊತ್ತಿಲ್ಲಾ. ಆದರೆ, ಸತತ 15 ವರ್ಷಗಳಿಂದ ಶಂಕ್ರಣ್ಣ ನನ್ನ ಸಾತ್ವಿಕ ಮತ್ತು ರಂಗಪಯಣ ತಂಡಗಳನ್ನು ಹೇಗೆ ಆವರಿಸಿದ್ದಾರೆ ಎಂದರೆ… ಸಾತ್ವಿಕದಲ್ಲಿ “S” ಮೊದಲಕ್ಷರ, ರಂಗಪಯಣದಲ್ಲಿ “NA” ಕೊನೆ ಅಕ್ಷರ ಎರಡು ತಂಡದ ಪ್ರಾರಂಭದಿಂದ ಅಂತ್ಯದವರೆಗೂ ಅವರಿದ್ದಾರೆ” 

ರಾಜ್‌ಗುರು, ರಂಗಕರ್ಮಿ

“ಅವರ ಎಷ್ಟೋ ಸಮುದ್ರದಷ್ಟು ಕನಸುಗಳನ್ನು ನಾವು ನನಸು ಮಾಡಲಾಗದೆ ಇದ್ದರು ಸಾಸಿವೆಯಷ್ಟಾದರು ನೆರವೇರಿಸುವ ಕಾಯಕದಲ್ಲಿ ನಾವು ತೊಡಗಿದ್ದೇವೆ. ಮತ್ತು ಯಶಸ್ಸು ಕಂಡಿದ್ದೇವೆ. ಆ ಯಶಸ್ಸಿನ ಸಿಂಹಪಾಲು ಶಂಕ್ರಣ್ಣನಿಗೆ. ನಾವು ನಾಮಕಾವಸ್ತೆ ಅಷ್ಟೇ” ಎಂದು ಶಂಕರ್‌ ನಾಗ್ ಅವರಿಗೆ ನಮನ ಸಲ್ಲಿಸುತ್ತಾರೆ.

ನಮ್ಮ ಮೆಟ್ರೋ ಯೋಜನೆ ಶಂಕರ್‌ ನಾಗ್ ಅವರ ಕನಸಿನ ಕೂಸಾಗಿತ್ತು. ಒಬ್ಬ ವ್ಯಕ್ತಿ ತಮ್ಮ ಪೂರ್ತಿ ಜೀವನದಲ್ಲಿ ಸಾಧಿಸಲಾಗದ ಅಗಾಧ ಕೆಲಸಗಳನ್ನು ಶಂಕರ್‌ ನಾಗ್ 36 ವರ್ಷಗಳಲ್ಲಿ ಸಾಧಿಸಿದ್ದಾರೆ.

ಶಂಕರ್‌ ನಾಗ್ ಅವರ ಜನ್ಮದಿನದ ಹಿನ್ನೆಲೆ ಚಿತ್ರರಂಗದ ಕಲಾವಿದರು, ಅಭಿಮಾನಿಗಳು, ಗಣ್ಯರು ನಟನನ್ನು ನೆನಪಿಸಿಕೊಂಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ’ಇಂದು ಕನ್ನಡ ಚಿತ್ರರಂಗದ ಅಪೂರ್ವ ನಟ, ನಿರ್ದೇಶಕ, ಅಪ್ರತಿಮ ದೂರದೃಷ್ಟಿಯುಳ್ಳ ತಾಂತ್ರಿಕ ನಿಪುಣರಾಗಿದ್ದ ಶಂಕರ್‌ ನಾಗ್ ಅವರ ಜಯಂತಿ. ಅವರಿಗೆ ನನ್ನ ಶ್ರದ್ಧಾಪೂರ್ವಕ ನಮನಗಳು. ಸಿನಿಮಾ, ರಂಗಭೂಮಿಯಲ್ಲಿ ಬೆರಗು ಮೂಡಿಸುವ ಅನೇಕ ಪ್ರಯೋಗಗಳನ್ನು ನಡೆಸಿದ್ದ ಅವರು ಸದಾ ಚೈತನ್ಯ ಚಿಲುಮೆ ಆಗಿದ್ದರು” ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಪುನೀತ್ ರಾಜಕುಮಾರ್ ‘ನಮ್ಮ ಅಪ್ಪು’ ಆದದ್ದು..: ಕೆ.ಫಣಿರಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...