Homeಕರ್ನಾಟಕಶಂಕರ್ ‌ನಾಗ್‌ ಜನ್ಮದಿನ: ಕನ್ನಡಿಗರ ಮನದಲ್ಲಿ ಎಂದಿಗೂ ’ಆಟೋರಾಜ’ ಅಮರ

ಶಂಕರ್ ‌ನಾಗ್‌ ಜನ್ಮದಿನ: ಕನ್ನಡಿಗರ ಮನದಲ್ಲಿ ಎಂದಿಗೂ ’ಆಟೋರಾಜ’ ಅಮರ

27ನೇ ವಯಸ್ಸಿನಲ್ಲಿ 'ಮಿಂಚಿನ ಓಟ ’ದಂಥ ದರೋಡೆಕೋರರ ಸಿನಿಮಾ ನಿರ್ದೇಶಿಸಿ, ಏಳು ರಾಜ್ಯ ಪ್ರಶಸ್ತಿಗಳನ್ನು ಶಂಕರ್‌ ನಾಗ್ ಬಾಚಿಕೊಂಡಿದ್ದರು.

- Advertisement -
- Advertisement -

ಇಂದು (ನವೆಂಬರ್ 9) ಕನ್ನಡ ಚಿತ್ರರಂಗದ ಅಪ್ರತಿಮ ಕಲಾವಿದ, ಅದ್ಬುತ ನಿರ್ದೇಶಕ, ನಿರ್ಮಾಪಕ ಶಂಕರ್‌ ನಾಗ್ ಅವರ ಜನ್ಮದಿನ. ಕನ್ನಡಿಗರ ನೆಚ್ಚಿನ ಆಟೋರಾಜ ನಮ್ಮಿಂದ ಭೌತಿಕವಾಗಿ ದೂರವಾಗಿ 31 ವರ್ಷಗಳು ಕಳೆದಿವೆ. ಆದರೆ, ಅವರ ಸಾಧನೆಯ ಮೂಲಕ ಜನಮಾನಸದಲ್ಲಿ ಮರೆಯದ ಛಾಪು ಮೂಡಿಸಿದ್ದಾರೆ.

ಶಂಕರ್‌ನಾಗ್ ಬದುಕಿದ್ದು 36 ವರ್ಷ, ಆದರೆ ಅವರ ಸಾಧನೆ ಇಂದಿಗೂ ಅಮರ. 12 ವರ್ಷಗಳಲ್ಲಿ ಶಂಕರ್​ನಾಗ್​, ಬರೋಬ್ಬರಿ 98 ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ಅವುಗಳಲ್ಲಿ 90 ಸಿನಿಮಾಗಳಲ್ಲಿ ನಟನಾಗಿ ಕಾಣಿಸಿಕೊಂಡಿದ್ದಾರೆ.

ಶಂಕರ್ ನಾಗ್ ನವೆಂಬರ್ 9, 1954ರಲ್ಲಿ ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಹುಟ್ಟಿದರು. ಮುಂಬೈನಲ್ಲಿದ್ದ ಶಂಕರ್‌ನಾಗ್ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ಭಾರತೀಯ ರಾಷ್ಟ್ರೀಯ ಪ್ರಶಸ್ತಿ ವಿಜೇತ ಮರಾಠಿ ಚಿತ್ರ ‘22 ಜೂನ್ 1897’ ಕ್ಕೆ ಚಿತ್ರಕಥೆ ಬರೆದಿದ್ದರು.

ಇದನ್ನೂ ಓದಿ: ಕನ್ನಡ ಚಿತ್ರರಂಗಕ್ಕೆ ಹೊಸ ಕ್ರಿಯಾಶೀಲತೆ ತಂದುಕೊಟ್ಟ ’ಅಪ್ಪು ಡ್ಯಾನ್ಸ್’

 

1978 ರಲ್ಲಿ ತೆರೆಕಂಡ ಗಿರೀಶ ಕಾರ್ನಾಡ್ ನಿರ್ದೇಶನದ ‘ಒಂದಾನೊಂದು ಕಾಲದಲ್ಲಿ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಶಂಕರ್‌ ನಾಗ್, ಹಿಂತಿರುಗಿ ನೋಡಿದ್ದೇ ಇಲ್ಲ. ನಟನಾಗಿ ಪದಾರ್ಪಣೆ ಮಾಡಿದ ಎರಡೇ ವರ್ಷಕ್ಕೆ 1980 ರಲ್ಲಿ ತಮ್ಮ 27ರ ವಯಸ್ಸಿನಲ್ಲಿ ‘ಮಿಂಚಿನ ಓಟ’ ಚಿತ್ರವನ್ನ ನಿರ್ದೇಶಿಸಿ, ನಿರ್ಮಾಣ ಮಾಡುವ ಮೂಲಕ ತಾನೊಬ್ಬ ಒಳ್ಳೆಯ ನಿರ್ದೇಶಕ ಅನ್ನೋದನ್ನ ನಿರೂಪಿಸಿದ್ದರು. ’ಮಿಂಚಿನ ಓಟ ’ದಂಥ ದರೋಡೆಕೋರರ ಸಿನಿಮಾ ನಿರ್ದೇಶಿಸಿ, ಏಳು ರಾಜ್ಯಪ್ರಶಸ್ತಿಗಳನ್ನು ಶಂಕರ್‌ನಾಗ್ ಬಾಚಿಕೊಂಡರು. ಬರೀ ಕನ್ನಡ ಚಿತ್ರರಂಗವಲ್ಲದೆ, ಮರಾಠಿ, ಹಿಂದಿ ಮತ್ತು ಇಂಗ್ಲಿಷ್ ಚಿತ್ರರಂಗದಲ್ಲೂ ತಮ್ಮ ಛಾಪು ಮೂಡಿಸಿದ್ದಾರೆ.

ಇದನ್ನೂ ಓದಿ:  ಪುನೀತ್ ರಾಜಕುಮಾರ್ ನುಡಿನಮನ; ಮುಗ್ಧ ನಗುವೊಂದರ ಕಣ್ಮರೆ

ನಂತರ ಸಂಗೀತ ಮಾಂತ್ರಿಕ ಇಳಯ ರಾಜಾರನ್ನು ಕರೆ ತಂದು ಸಂಗೀತ ಕೊಡಿಸಿದ ‘ಜನ್ಮ ಜನ್ಮದ ಅನುಬಂಧ’, ‘ಗೀತಾ’ದಂಥ ಸಿನಿಮಾಗಳ ಹಾಡುಗಳು ಇಂದಿಗೂ ಜನಪ್ರಿಯ. ಶಂಕರ್‌ ನಿರ್ದೇಶನಕ್ಕೆ ಮನಸೋತ ರಾಜ್‌ಕುಮಾರ್‌ ಕೂಡ  ತಮ್ಮ ಇಮೇಜಿನ ಹಂಗು ತೊರೆದು, ‘ಒಂದು ಮುತ್ತಿನ ಕಥೆ’ಯಲ್ಲಿ ಅಭಿನಯಿಸಿದ್ದರು.

ಸೀತಾರಾಮು, ಆಟೋರಾಜ, ಸಾಂಗ್ಲಿಯಾನ, ನೋಡಿ ಸ್ವಾಮಿ ನಾವಿರೋದೇ ಹೀಗೆ, ಆ್ಯಕ್ಸಿಡೆಂಟ್, ಸಿಬಿಐ ಶಂಕರ್‌, ಮೂಗನ ಸೇಡು, ತರ್ಕ, ಗೀತಾ, ನ್ಯಾಯಾ ಎಲ್ಲಿದೆ ಚಿತ್ರಗಳು ಸೇರಿ 90 ಚಿತ್ರಗಳ ಮೂಲಕ ಜನರ ಮನ ಗೆದ್ದವರು. ತಮ್ಮ ’ಮುನಿಯನ ಮಾದರಿ’ ಚಿತ್ರದ ಮೂಲಕ ರೈತರ, ಹಳ್ಳಿಗರ ಸಮಸ್ಯೆಗಳಿಗೆ ದನಿಯಾದರು.

PC: Mythical India

ಕಿರುತೆರೆಯಲ್ಲಿ ತನ್ನದೆ ಛಾಪು ಮೂಡಿಸಿದ್ದ ‘ಮಾಲ್ಗುಡಿ ಡೇಸ್‌’ನಂತಹ ಗಟ್ಟಿ ಧಾರಾವಾಹಿಯನ್ನು ನೀಡಿದ ಕೀರ್ತಿ ಶಂಕರ್‌ ನಾಗ್‌ ಅವರಿಗೆ ಸಲ್ಲುತ್ತದೆ. 1986ರಲ್ಲಿ ಪ್ರಸಾರವಾದ ಈ ಧಾರವಾಹಿಯ ಕ್ರೇಜ್ ಎಷ್ಟಿತ್ತು ಎಂಬುದಕ್ಕೆ  ಉದಾಹರಣೆಯೆಂದರೆ ಕಳೆದ ವರ್ಷ ಝೀ ಕನ್ನಡ ಇದರ ಕನ್ನಡ ಅವತರಣಿಕೆ ಪ್ರಸಾರ ಮಾಡಿತ್ತು.

The nostalgia inducing 'Malgudi Days': When Swami was my friend too | The News Minute

ನಟ ಶಂಕರ್‌ ನಾಗ್ ನಮ್ಮನಗಲಿದ್ದು ಸೆಪ್ಟೆಂಬರ್‌ 30, 1990 ರಂದು. ಅಂದು ಭಾರತೀಯ ಚಿತ್ರರಂಗವೇ ಆಘಾತಕ್ಕೆ ಒಳಗಾದ ದಿನ. ಇಡೀ ಚಿತ್ರರಂಗ ಒಬ್ಬ ಅಪ್ರತಿಮ ಕಲಾವಿದ, ನಟ, ನಿರ್ದೇಶಕ, ನಿರ್ಮಾಪಕ, ರಂಗಭೂಮಿ ಕಲಾವಿದ, ಕರಾಟೆ ಕಿಂಗ್ ಎಂದು ಖ್ಯಾತರಾಗಿದ್ದ ಶಂಕರ್‌ ನಾಗ್ ಅವ‌ರನ್ನು ಕಳೆದುಕೊಂಡಿತ್ತು.

ದಾವಣಗೆರೆ ಬಳಿಯ ಆನಗೋಡಿನ ಬಳಿ ಶಂಕರ್‌ನಾಗ್‌ ಕಾರು ಅಪಘಾತದಲ್ಲಿ ನಿಧನರಾದರು. ಜೋಕುಮಾರಸ್ವಾಮಿ ಚಿತ್ರದ ಚಿತ್ರೀಕರಣ ಸಮಯದಲ್ಲಿ ನಡೆದ ಈ ದುರ್ಘಟನೆಯಿಂದ ಇಡೀ ಕರುನಾಡೇ ಆಘಾತಕ್ಕೆ ಒಳಗಾಗಿತ್ತು.

ತಮ್ಮ 12 ವರ್ಷಗಳ ಸಿನಿ ಜೀವನದಲ್ಲಿ ಆಟೋ ಚಾಲಕರ ಹೀರೋ ಆಗಿ, ಯುವ ನಿರ್ದೇಶಕರ ಸ್ಪೂರ್ತಿಯಾಗಿ ಶಂಕರ್​ನಾಗ್​ ಇಂದಿಗೂ ರಾರಾಜಿಸುತ್ತಿದ್ದಾರೆ. ಇವರ ನೆನಪಲ್ಲಿ ಸ್ಥಾಪಿಸಲಾದ ‘ರಂಗಶಂಕರ’ ನಾಟಕ ರಂಗ, ಅದೆಷ್ಟೋ ಯುವ ಪ್ರತಿಭೆಗಳಿಗೆ ವೇದಿಕೆಯಾಗಿದೆ. ನಟ ಶಂಕರ್‌ ನಾಗ್ ಪತ್ನಿ ಅರುಂಧತಿ ನಾಗ್ ರಂಗಶಂಕರದ ಹೊಣೆ ಹೊತ್ತಿದ್ದಾರೆ.

ರಂಗಶಂಕರದ ಮೂಲಕ ತಮ್ಮ ರಂಗತಂಡದ ಕನಸು ಕಟ್ಟಿಕೊಂಡ ರಂಗಕರ್ಮಿ ರಾಜ್‌ಗುರು ನಾನುಗೌರಿ.ಕಾಂ ಜೊತೆ ಶಂಕರ್‌ ನಾಗ್ ಅವರು ಇವರಲ್ಲಿ ತುಂಬಿದ ಸ್ಪೂರ್ತಿ ಬಗ್ಗೆ ಹಂಚಿಕೊಂಡಿದ್ದು ಹೀಗೆ.

“ಕಾಲೇಜಿನ ದಿನಗಳಲ್ಲಿ ರಂಗಶಂಕರದ ವೇದಿಕೆಯಲ್ಲಿ ನಾನು ಅಭಿನಯಿಸುವಾಗ ಮುಂದಿನ ಸಾಲಿನಲ್ಲಿ ಕೂತಿದ್ದ ಅರುಂಧತಿ ಅಮ್ಮ “ನೀನು ಶಂಕ್ರನ ಥರಾ ಬಿಹೇವ್ ಮಾಡ್ತಿಯಾ ಕಣೋ” ಅಂದಿದ್ರು, ಈಗದು ಅವರಿಗೆ ನೆನಪಿನಲ್ಲಿರುತ್ತದೊ ಇಲ್ಲವೋ ಗೊತ್ತಿಲ್ಲಾ. ಆದರೆ, ಸತತ 15 ವರ್ಷಗಳಿಂದ ಶಂಕ್ರಣ್ಣ ನನ್ನ ಸಾತ್ವಿಕ ಮತ್ತು ರಂಗಪಯಣ ತಂಡಗಳನ್ನು ಹೇಗೆ ಆವರಿಸಿದ್ದಾರೆ ಎಂದರೆ… ಸಾತ್ವಿಕದಲ್ಲಿ “S” ಮೊದಲಕ್ಷರ, ರಂಗಪಯಣದಲ್ಲಿ “NA” ಕೊನೆ ಅಕ್ಷರ ಎರಡು ತಂಡದ ಪ್ರಾರಂಭದಿಂದ ಅಂತ್ಯದವರೆಗೂ ಅವರಿದ್ದಾರೆ” 

ರಾಜ್‌ಗುರು, ರಂಗಕರ್ಮಿ

“ಅವರ ಎಷ್ಟೋ ಸಮುದ್ರದಷ್ಟು ಕನಸುಗಳನ್ನು ನಾವು ನನಸು ಮಾಡಲಾಗದೆ ಇದ್ದರು ಸಾಸಿವೆಯಷ್ಟಾದರು ನೆರವೇರಿಸುವ ಕಾಯಕದಲ್ಲಿ ನಾವು ತೊಡಗಿದ್ದೇವೆ. ಮತ್ತು ಯಶಸ್ಸು ಕಂಡಿದ್ದೇವೆ. ಆ ಯಶಸ್ಸಿನ ಸಿಂಹಪಾಲು ಶಂಕ್ರಣ್ಣನಿಗೆ. ನಾವು ನಾಮಕಾವಸ್ತೆ ಅಷ್ಟೇ” ಎಂದು ಶಂಕರ್‌ ನಾಗ್ ಅವರಿಗೆ ನಮನ ಸಲ್ಲಿಸುತ್ತಾರೆ.

ನಮ್ಮ ಮೆಟ್ರೋ ಯೋಜನೆ ಶಂಕರ್‌ ನಾಗ್ ಅವರ ಕನಸಿನ ಕೂಸಾಗಿತ್ತು. ಒಬ್ಬ ವ್ಯಕ್ತಿ ತಮ್ಮ ಪೂರ್ತಿ ಜೀವನದಲ್ಲಿ ಸಾಧಿಸಲಾಗದ ಅಗಾಧ ಕೆಲಸಗಳನ್ನು ಶಂಕರ್‌ ನಾಗ್ 36 ವರ್ಷಗಳಲ್ಲಿ ಸಾಧಿಸಿದ್ದಾರೆ.

ಶಂಕರ್‌ ನಾಗ್ ಅವರ ಜನ್ಮದಿನದ ಹಿನ್ನೆಲೆ ಚಿತ್ರರಂಗದ ಕಲಾವಿದರು, ಅಭಿಮಾನಿಗಳು, ಗಣ್ಯರು ನಟನನ್ನು ನೆನಪಿಸಿಕೊಂಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ’ಇಂದು ಕನ್ನಡ ಚಿತ್ರರಂಗದ ಅಪೂರ್ವ ನಟ, ನಿರ್ದೇಶಕ, ಅಪ್ರತಿಮ ದೂರದೃಷ್ಟಿಯುಳ್ಳ ತಾಂತ್ರಿಕ ನಿಪುಣರಾಗಿದ್ದ ಶಂಕರ್‌ ನಾಗ್ ಅವರ ಜಯಂತಿ. ಅವರಿಗೆ ನನ್ನ ಶ್ರದ್ಧಾಪೂರ್ವಕ ನಮನಗಳು. ಸಿನಿಮಾ, ರಂಗಭೂಮಿಯಲ್ಲಿ ಬೆರಗು ಮೂಡಿಸುವ ಅನೇಕ ಪ್ರಯೋಗಗಳನ್ನು ನಡೆಸಿದ್ದ ಅವರು ಸದಾ ಚೈತನ್ಯ ಚಿಲುಮೆ ಆಗಿದ್ದರು” ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಪುನೀತ್ ರಾಜಕುಮಾರ್ ‘ನಮ್ಮ ಅಪ್ಪು’ ಆದದ್ದು..: ಕೆ.ಫಣಿರಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...