Homeಕರ್ನಾಟಕರಾಜ್ಯದಲ್ಲಿ ಸೋಮವಾರದಿಂದ ಶಾಲೆಗಳು ಓಪನ್: ಆದರೆ ತರಗತಿಯಿಲ್ಲ...

ರಾಜ್ಯದಲ್ಲಿ ಸೋಮವಾರದಿಂದ ಶಾಲೆಗಳು ಓಪನ್: ಆದರೆ ತರಗತಿಯಿಲ್ಲ…

ಕೇಂದ್ರದಿಂದ ಗ್ರೀನ್ ಸಿಗ್ನಲ್ ಬರುವವರೆಗೂ ರೆಗ್ಯುಲರ್ ತರಗತಿಗಳು ಪ್ರಾರಂಭವಾಗುವುದಿಲ್ಲ. ತರಗತಿಗಳಿಗೆ ಬರಲು ವಿದ್ಯಾರ್ಥಿಗಳು ಉತ್ಸುಕರಾಗಿದ್ದಾರೆ. ಆದರೆ ಶಾಲೆಗಳನ್ನು ಪುನಃ ತೆರೆಯುವ ಬಗ್ಗೆ ಪೋಷಕರು ಕಳವಳ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ರಾಜ್ಯದಲ್ಲಿ ಸೋಮವಾರದಿಂದ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳು ತೆರೆಯಲಿದ್ದು, ಆದರೆ ತರಗತಿಗಳು ಆರಂಭವಾಗುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ದಿನನಿತ್ಯ‌ ತರಗತಿಗಳನ್ನು ಪ್ರಾರಂಭಿಸಲು ಕೇಂದ್ರದ ಅನುಮೋದನೆಗಾಗಿ ಕಾಯುತ್ತಿದ್ದೇವೆ ಎಂದಿದ್ದಾರೆ.

“ಸೆಪ್ಟೆಂಬರ್ 21 ರಿಂದ ಶಿಕ್ಷಕರು ಮತ್ತು ಪಿಯುಸಿ ಉಪನ್ಯಾಸಕರು ಶಾಲೆ, ಕಾಲೇಜುಗಳಲ್ಲಿ ಹಾಜರಿರುತ್ತಾರೆ. 9, 10 ನೇ ತರಗತಿ ವಿದ್ಯಾರ್ಥಿಗಳು, ಪಿಯುಸಿ ವಿದ್ಯಾರ್ಥಿಗಳು ಅವರ ಅಧ್ಯಯನಕ್ಕೆ ಸಂಬಂಧಿಸಿದ ಅನುಮಾನಗಳು ಇದ್ದರೆ ಶಾಲೆಗೆ ಹೋಗಿ ನಿವಾರಿಸಿಕೊಳ್ಳಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮೈಸೂರಿನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಕಾಲದಲ್ಲೂ ನಿಲ್ಲದ ಸುಲಿಗೆ; ಖಾಸಗಿ ಶಾಲೆಗಳಲ್ಲಿ ‘ಕೋವಿಡ್ ಫೀಸ್’ ವಸೂಲಿ ಆರಂಭ

ಕೇಂದ್ರದಿಂದ ಗ್ರೀನ್ ಸಿಗ್ನಲ್ ಬರುವವರೆಗೂ ರೆಗ್ಯುಲರ್ ತರಗತಿಗಳು ಪ್ರಾರಂಭವಾಗುವುದಿಲ್ಲ. ತರಗತಿಗಳಿಗೆ ಬರಲು ವಿದ್ಯಾರ್ಥಿಗಳು ಉತ್ಸುಕರಾಗಿದ್ದಾರೆ. ಆದರೆ ಶಾಲೆಗಳನ್ನು ಪುನಃ ತೆರೆಯುವ ಬಗ್ಗೆ ಪೋಷಕರು ಕಳವಳ ವ್ಯಕ್ತಪಡಿಸಿದ್ದಾರೆ. ಆನ್‌ಲೈನ್ ತರಗತಿಗಳೇ ಆರಾಮದಾಯಕವೆಂದು ಪೋಷಕರು ಹೇಳುತ್ತಾರೆ. ಇಲ್ಲಿ ಪೋಷಕರಿಗೆ ತಮ್ಮ ಮಕ್ಕಳ ಬಗ್ಗೆ ಇರುವ ಕಾಳಜಿ ಅರ್ಥ ಮಾಡಿಕೊಳ್ಳಬೇಕು ಎಂದು ಸುರೇಶ್ ಕುಮಾರ್ ಹೇಳಿದರು.

ಜೊತೆಗೆ, ಕೇಂದ್ರದಿಂದ ತರಗತಿಗಳ ಪ್ರಾರಂಭಕ್ಕೆ ಒಪ್ಪಿಗೆ ದೊರೆತ ಬಳಿಕ, ಪೋಷಕರಿಂದ ಒಪ್ಪಿಗೆ ಪತ್ರಗಳನ್ನು ಪಡೆಯುವುದನ್ನು ಕಡ್ಡಾಯಗೊಳಿಸುವ ಬಗ್ಗೆ ನಾವು ಯೋಚಿಸುತ್ತಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ: ಹೀಗೆ ಮಾಡಿದರೆ ಸರ್ಕಾರಿ ಶಾಲೆಗಳು ಉತ್ತಮವಾಗಬಹುದಲ್ಲವೇ? 

ಪ್ರತಿವರ್ಷ ಜೂನ್ ವೇಳೆಗೆ 10 ಲಕ್ಷ ವಿದ್ಯಾರ್ಥಿಗಳು ದಾಖಲಾಗುತ್ತಿದ್ದರು. ಅದು ಈ ವರ್ಷ ಆಗಲಿಲ್ಲ. ಆದ್ದರಿಂದ, ಸೆಪ್ಟೆಂಬರ್ ಅಂತ್ಯದ ವೇಳೆಗೆ ದಾಖಲಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಗುರಿಯನ್ನು ನಿಗದಿಪಡಿಸಲಾಗಿದೆ ಎಂದಿದ್ದಾರೆ.

ಈ ಬಾರಿ ಖಾಸಗಿ ಶಾಲೆಗಳು ಕೇವಲ ಒಂದು ಟರ್ಮ್ ಫೀಸ್ ಮಾತ್ರ ಪಡೆಯಬೇಕು ಎಂಬ ಆದೇಶವನ್ನು ಸರ್ಕಾರ ಜಾರಿಗೆ ತಂದಿದೆ. ಆಗೊಮ್ಮೆ ಖಾಸಗಿ ಶಾಲೆಗಳಿಂದ ಪೋಷಕರಿಗೆ ಸಮಸ್ಯೆ ಆದರೆ ಡಿಡಿಪಿಐ, ಬಿಇಓ ಈ‌ ಬಗ್ಗೆ ಕ್ರಮ‌ ಕೈಗೊಳ್ಳುತ್ತಾರೆ. ಅವರಿಗೆ ಈಗಾಗಲೇ ಸರ್ಕಾರದಿಂದ ಸೂಚನೆ ಕೊಟ್ಟಿದ್ದೇವೆ. ಜೊತೆಗೆ 2020-21ರ ಶೈಕ್ಷಣಿಕ ವರ್ಷಕ್ಕೆ ಶಾಲೆಗಳು ಶುಲ್ಕವನ್ನು ಹೆಚ್ಚಿಸಲು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ.


ಇದನ್ನೂ ಓದಿ: ಸರ್ಕಾರಿ ಶಾಲೆಯ ಶಿಕ್ಷಕರು ನಮ್ಮ ವಿದ್ಯಾರ್ಥಿಗಳನ್ನು ಸೆಳೆಯುತ್ತಿದ್ದಾರೆ ಎಂದು ದೂರಿದ ಖಾಸಗಿ ಶಾಲೆಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...