Homeಕರ್ನಾಟಕದ್ವೇಷ – ಅಪರಾಧಗಳಲ್ಲಿ ಉತ್ತರ ಪ್ರದೇಶದ ನಂತರ ಕರ್ನಾಟಕ 2ನೇ ಸ್ಥಾನದಲ್ಲಿದೆ: ಹರ್ಷಮಂದರ್

ದ್ವೇಷ – ಅಪರಾಧಗಳಲ್ಲಿ ಉತ್ತರ ಪ್ರದೇಶದ ನಂತರ ಕರ್ನಾಟಕ 2ನೇ ಸ್ಥಾನದಲ್ಲಿದೆ: ಹರ್ಷಮಂದರ್

- Advertisement -
- Advertisement -

ದ್ವೇಷ – ಅಪರಾಧಗಳಲ್ಲಿ ಉತ್ತರ ಪ್ರದೇಶದ ನಂತರ ಕರ್ನಾಟಕ 2ನೇ ಸ್ಥಾನದಲ್ಲಿದೆ ಎಂದು ಖ್ಯಾತ ಹೋರಾಟಗಾರ ಹಾಗೂ ನವದೆಹಲಿಯ ಸೆಂಟರ್ ಫಾರ್ ಈಕ್ವಿಟಿ ಸ್ಟಡೀಸ್ ನಿರ್ದೇಶಕರಾದ ಹರ್ಷಮಂದರ್ ಕಳವಳ ವ್ಯಕ್ತಪಡಿಸಿದ್ದಾರೆ. ಹೆಚ್ಚುತ್ತಿರುವ ಅಸಹಿಷ್ಟುತೆ ಕುರಿತು ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ನಡೆದ ಪ್ಯಾನಲ್ ಚರ್ಚೆಯಲ್ಲಿ ಮಾತನಾಡಿದ ಅವರು ಕರ್ನಾಟಕ ಪರಿಸ್ಥಿತಿ ತೀರಾ ಕೆಳಮಟ್ಟದಲ್ಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯು ಹೆಚ್ಚುತ್ತಿರುವ ದ್ವೇಷ ಅಪರಾಧಗಳಲ್ಲಿ ಭಾರತದಲ್ಲಿಯೇ ನಂಬರ್ ಒನ್ ಜಿಲ್ಲೆಯಾಗಿದೆ ಎಂದು ಅವರು ಅಂಕಿ ಅಂಶದ ಸಮೇತ ವಿವರಿಸಿದ್ದಾರೆ.

ಕಳೆದ ಐದು ವರ್ಷಗಳಿಂದ ದೇಶದಲ್ಲಿನ ದ್ವೇಷ ಅಪರಾಧಗಳನ್ನು ದಾಖಲು ಮಾಡುತ್ತಿರುವ ಶರೀಬ್ ಅಲಿ ಮತ್ತು ಕ್ವಿಲ್ ಫೌಂಡೇಶನ್ ಪ್ರಕಾರ 2014ರಿಂದ ಭಾರತದಲ್ಲಿ ಒಟ್ಟು 948 ಅಪರಾಧ ಘಟನೆಗಳು ನಡೆದಿದ್ದು ಇದರಲ್ಲಿ 117 ಗುಂಪು ಹಲ್ಲೆಗಳು, 258 ದೈಹಿಕ ಹಲ್ಲೆಗಳ ಜೊತೆಗೆ ಚರ್ಚ್ ಮತ್ತು ಮಸೀದಿಗಳ ಮೇಲಿನ ದಾಳಿಗಳೂ ಸೇರಿವೆ.  ಒಟ್ಟು 11,722 ಜನ ದ್ವೇಷ ಅಪರಾಧಗಳಿಂದ ಸಂತ್ರಸ್ತರಾಗಿದ್ದು 108 ಜನ ಮೃತಪಟ್ಟಿದ್ದಾರೆಂದು ವರದಿ ಹೇಳುತ್ತಿದೆ. ಕರ್ನಾಟಕದಲ್ಲಿಯೂ 111 ಘಟನೆಗಳಿಂದ 553 ಜನ ಸಂತ್ರಸ್ತರಾಗಿದ್ದಾರೆ ಎಂದಿದ್ದಾರೆ.

ಅಪಾಯಿಕಾರಿ ಬೆಳವಣಿಗೆ

ಇದೊಂದು ಅಪಾಯಕಾರಿ ಬೆಳವಣಿಗೆಯಾಗಿದ್ದು  ಮೋದಿ ಅಧಿಕಾರಕ್ಕೆ ಬಂದ ನಂತರ  ಈ ರೀತಿಯ ದ್ವೇಷ ಅಪರಾಧಗಳು ಹೆಚ್ಚಾಗುತ್ತಿವೆ ಎಂದು ಆರೋಪಿಸಿದ್ದಾರೆ. ಅಲ್ಪಸಂಖ್ಯಾತರ ಮೇಲಿನ ಹಲ್ಲೆಗಳನ್ನು ಅವರು ಕಾನೂನುಬದ್ದಗೊಳಿಸಲು ಹೊರಟಿದ್ದಾರೆ, 2019ರಲ್ಲಿ ಅವರಿಗೆ ಸಿಕ್ಕ ಬಹುಮತ ಅವರನ್ನು ಈ ನಿಟ್ಟಿನಲ್ಲಿ ಮತ್ತಷ್ಟು ಪ್ರೇರೇಪಿಸಲಿದೆ ಎಂದಿದ್ದಾರೆ.

ಭಾರತ ಜನತೆ ಬಿಜೆಪಿಗೆ ಬಹುಮತವನ್ನು ನೀಡಿರುವುದು ಅಭಿವೃದ್ದಿಗಾಗಿ ಮತ್ತು ಆರ್ಥಿಕ ಬೆಳವಣಿಗೆ ಸಾಧಿಸುವುದಕ್ಕಾಗಿಯೇ ಹೊರತು ಹಿಂದುತ್ವದ ರಾಜಕಾರಣ ಮಾಡಲಿಕ್ಕಲ್ಲ ಎಂದಿದ್ದಾರೆ.

ಈ ನವ ಭಾರತದಲ್ಲಿ, ಮೋದಿಯವರ ಆಳ್ವಿಕೆಯಲ್ಲಿ ಹಿಂಸೆಯನ್ನು ವೈಭವೀಕರಿಸುತ್ತಾ, ಹಿಂಸೆ ಮಾಡಿದವರಿಗೆ ಹೀರೋ ಪಟ್ಟ ನೀಡಿತ್ತಾ ಮತ್ತಷ್ಟು ಹಿಂಸೆಗೆ ಪ್ರಚೋದನೆ ನೀಡಲಾಗುತ್ತಿದೆ. ಇಂದಿನ ಸಾಮಾಜಿಕ ರಚನೆಯನ್ನು ಮರುರಚಿಸುವ ಮೂಲಕ ಅಲ್ಪ ಸಂಖ್ಯಾತರರಿಗೆ ಇದು ನಿಮ್ಮ ನೆಲವಲ್ಲ ಎಂದು ಸಾರಿ ಹೇಳುತ್ತಿದ್ದಾರೆ. ಇಂದಿನ ಭಾರತದ ಸ್ಥಿತಿಯು 1930ರ ಜರ್ಮನಿಯಲ್ಲಿನ ಸ್ಥಿತಿಗಿಂತ ಭಿನ್ನವಾಗಿಲ್ಲ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಮಾನವೀಯತೆ ಮತ್ತು ಸೌಹಾರ್ದತೆಗಾಗಿನ ಮಹಾತ್ಮ ಗಾಂಧಿಯವರ ಕೆಲಸಗಳನ್ನು ನೆನಪಿಸಿದ ಹರ್ಷ ಮಂದರ್ ರವರು 1947ರಲ್ಲಿ ಗಾಂಧಿಯವರಿಗೆ ಪಾಕಿಸ್ತಾನಕ್ಕೆ ಆಗಮಿಸಲು ಆಹ್ವಾನ ಬಂದಿತ್ತು. ಭಾರತದಲ್ಲಿ ಮುಸ್ಲಿಂ ಯುವಕನೊಬ್ಬ ಭಯಮುಕ್ತನಾಗಿ ಬೀದಿಯಲ್ಲಿ ಓಡಾಡುವಂತಹ ಪರಿಸ್ಥಿತಿ ಬರುವವರೆಗೂ ನಾನು ದೆಹಲಿಯಿಂದ ಒಂದು ಹೆಜ್ಜೆ ಕೂಡ ಹೊರಹಾಕುವುದಿಲ್ಲ ಎಂದು ಹೇಳಿದ್ದನ್ನು ಸ್ಮರಿಸಿದರು. ಆದರೆ ಮಹಾತ್ಮ ಗಾಂಧಿಯವರ ಆಶಯಗಳು ಇನ್ನೂ ಈಡೇರಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...