Homeಕರ್ನಾಟಕದ್ವೇಷ – ಅಪರಾಧಗಳಲ್ಲಿ ಉತ್ತರ ಪ್ರದೇಶದ ನಂತರ ಕರ್ನಾಟಕ 2ನೇ ಸ್ಥಾನದಲ್ಲಿದೆ: ಹರ್ಷಮಂದರ್

ದ್ವೇಷ – ಅಪರಾಧಗಳಲ್ಲಿ ಉತ್ತರ ಪ್ರದೇಶದ ನಂತರ ಕರ್ನಾಟಕ 2ನೇ ಸ್ಥಾನದಲ್ಲಿದೆ: ಹರ್ಷಮಂದರ್

- Advertisement -
- Advertisement -

ದ್ವೇಷ – ಅಪರಾಧಗಳಲ್ಲಿ ಉತ್ತರ ಪ್ರದೇಶದ ನಂತರ ಕರ್ನಾಟಕ 2ನೇ ಸ್ಥಾನದಲ್ಲಿದೆ ಎಂದು ಖ್ಯಾತ ಹೋರಾಟಗಾರ ಹಾಗೂ ನವದೆಹಲಿಯ ಸೆಂಟರ್ ಫಾರ್ ಈಕ್ವಿಟಿ ಸ್ಟಡೀಸ್ ನಿರ್ದೇಶಕರಾದ ಹರ್ಷಮಂದರ್ ಕಳವಳ ವ್ಯಕ್ತಪಡಿಸಿದ್ದಾರೆ. ಹೆಚ್ಚುತ್ತಿರುವ ಅಸಹಿಷ್ಟುತೆ ಕುರಿತು ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ನಡೆದ ಪ್ಯಾನಲ್ ಚರ್ಚೆಯಲ್ಲಿ ಮಾತನಾಡಿದ ಅವರು ಕರ್ನಾಟಕ ಪರಿಸ್ಥಿತಿ ತೀರಾ ಕೆಳಮಟ್ಟದಲ್ಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯು ಹೆಚ್ಚುತ್ತಿರುವ ದ್ವೇಷ ಅಪರಾಧಗಳಲ್ಲಿ ಭಾರತದಲ್ಲಿಯೇ ನಂಬರ್ ಒನ್ ಜಿಲ್ಲೆಯಾಗಿದೆ ಎಂದು ಅವರು ಅಂಕಿ ಅಂಶದ ಸಮೇತ ವಿವರಿಸಿದ್ದಾರೆ.

ಕಳೆದ ಐದು ವರ್ಷಗಳಿಂದ ದೇಶದಲ್ಲಿನ ದ್ವೇಷ ಅಪರಾಧಗಳನ್ನು ದಾಖಲು ಮಾಡುತ್ತಿರುವ ಶರೀಬ್ ಅಲಿ ಮತ್ತು ಕ್ವಿಲ್ ಫೌಂಡೇಶನ್ ಪ್ರಕಾರ 2014ರಿಂದ ಭಾರತದಲ್ಲಿ ಒಟ್ಟು 948 ಅಪರಾಧ ಘಟನೆಗಳು ನಡೆದಿದ್ದು ಇದರಲ್ಲಿ 117 ಗುಂಪು ಹಲ್ಲೆಗಳು, 258 ದೈಹಿಕ ಹಲ್ಲೆಗಳ ಜೊತೆಗೆ ಚರ್ಚ್ ಮತ್ತು ಮಸೀದಿಗಳ ಮೇಲಿನ ದಾಳಿಗಳೂ ಸೇರಿವೆ.  ಒಟ್ಟು 11,722 ಜನ ದ್ವೇಷ ಅಪರಾಧಗಳಿಂದ ಸಂತ್ರಸ್ತರಾಗಿದ್ದು 108 ಜನ ಮೃತಪಟ್ಟಿದ್ದಾರೆಂದು ವರದಿ ಹೇಳುತ್ತಿದೆ. ಕರ್ನಾಟಕದಲ್ಲಿಯೂ 111 ಘಟನೆಗಳಿಂದ 553 ಜನ ಸಂತ್ರಸ್ತರಾಗಿದ್ದಾರೆ ಎಂದಿದ್ದಾರೆ.

ಅಪಾಯಿಕಾರಿ ಬೆಳವಣಿಗೆ

ಇದೊಂದು ಅಪಾಯಕಾರಿ ಬೆಳವಣಿಗೆಯಾಗಿದ್ದು  ಮೋದಿ ಅಧಿಕಾರಕ್ಕೆ ಬಂದ ನಂತರ  ಈ ರೀತಿಯ ದ್ವೇಷ ಅಪರಾಧಗಳು ಹೆಚ್ಚಾಗುತ್ತಿವೆ ಎಂದು ಆರೋಪಿಸಿದ್ದಾರೆ. ಅಲ್ಪಸಂಖ್ಯಾತರ ಮೇಲಿನ ಹಲ್ಲೆಗಳನ್ನು ಅವರು ಕಾನೂನುಬದ್ದಗೊಳಿಸಲು ಹೊರಟಿದ್ದಾರೆ, 2019ರಲ್ಲಿ ಅವರಿಗೆ ಸಿಕ್ಕ ಬಹುಮತ ಅವರನ್ನು ಈ ನಿಟ್ಟಿನಲ್ಲಿ ಮತ್ತಷ್ಟು ಪ್ರೇರೇಪಿಸಲಿದೆ ಎಂದಿದ್ದಾರೆ.

ಭಾರತ ಜನತೆ ಬಿಜೆಪಿಗೆ ಬಹುಮತವನ್ನು ನೀಡಿರುವುದು ಅಭಿವೃದ್ದಿಗಾಗಿ ಮತ್ತು ಆರ್ಥಿಕ ಬೆಳವಣಿಗೆ ಸಾಧಿಸುವುದಕ್ಕಾಗಿಯೇ ಹೊರತು ಹಿಂದುತ್ವದ ರಾಜಕಾರಣ ಮಾಡಲಿಕ್ಕಲ್ಲ ಎಂದಿದ್ದಾರೆ.

ಈ ನವ ಭಾರತದಲ್ಲಿ, ಮೋದಿಯವರ ಆಳ್ವಿಕೆಯಲ್ಲಿ ಹಿಂಸೆಯನ್ನು ವೈಭವೀಕರಿಸುತ್ತಾ, ಹಿಂಸೆ ಮಾಡಿದವರಿಗೆ ಹೀರೋ ಪಟ್ಟ ನೀಡಿತ್ತಾ ಮತ್ತಷ್ಟು ಹಿಂಸೆಗೆ ಪ್ರಚೋದನೆ ನೀಡಲಾಗುತ್ತಿದೆ. ಇಂದಿನ ಸಾಮಾಜಿಕ ರಚನೆಯನ್ನು ಮರುರಚಿಸುವ ಮೂಲಕ ಅಲ್ಪ ಸಂಖ್ಯಾತರರಿಗೆ ಇದು ನಿಮ್ಮ ನೆಲವಲ್ಲ ಎಂದು ಸಾರಿ ಹೇಳುತ್ತಿದ್ದಾರೆ. ಇಂದಿನ ಭಾರತದ ಸ್ಥಿತಿಯು 1930ರ ಜರ್ಮನಿಯಲ್ಲಿನ ಸ್ಥಿತಿಗಿಂತ ಭಿನ್ನವಾಗಿಲ್ಲ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಮಾನವೀಯತೆ ಮತ್ತು ಸೌಹಾರ್ದತೆಗಾಗಿನ ಮಹಾತ್ಮ ಗಾಂಧಿಯವರ ಕೆಲಸಗಳನ್ನು ನೆನಪಿಸಿದ ಹರ್ಷ ಮಂದರ್ ರವರು 1947ರಲ್ಲಿ ಗಾಂಧಿಯವರಿಗೆ ಪಾಕಿಸ್ತಾನಕ್ಕೆ ಆಗಮಿಸಲು ಆಹ್ವಾನ ಬಂದಿತ್ತು. ಭಾರತದಲ್ಲಿ ಮುಸ್ಲಿಂ ಯುವಕನೊಬ್ಬ ಭಯಮುಕ್ತನಾಗಿ ಬೀದಿಯಲ್ಲಿ ಓಡಾಡುವಂತಹ ಪರಿಸ್ಥಿತಿ ಬರುವವರೆಗೂ ನಾನು ದೆಹಲಿಯಿಂದ ಒಂದು ಹೆಜ್ಜೆ ಕೂಡ ಹೊರಹಾಕುವುದಿಲ್ಲ ಎಂದು ಹೇಳಿದ್ದನ್ನು ಸ್ಮರಿಸಿದರು. ಆದರೆ ಮಹಾತ್ಮ ಗಾಂಧಿಯವರ ಆಶಯಗಳು ಇನ್ನೂ ಈಡೇರಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...