Homeಕರ್ನಾಟಕದ್ವೇಷ – ಅಪರಾಧಗಳಲ್ಲಿ ಉತ್ತರ ಪ್ರದೇಶದ ನಂತರ ಕರ್ನಾಟಕ 2ನೇ ಸ್ಥಾನದಲ್ಲಿದೆ: ಹರ್ಷಮಂದರ್

ದ್ವೇಷ – ಅಪರಾಧಗಳಲ್ಲಿ ಉತ್ತರ ಪ್ರದೇಶದ ನಂತರ ಕರ್ನಾಟಕ 2ನೇ ಸ್ಥಾನದಲ್ಲಿದೆ: ಹರ್ಷಮಂದರ್

- Advertisement -
- Advertisement -

ದ್ವೇಷ – ಅಪರಾಧಗಳಲ್ಲಿ ಉತ್ತರ ಪ್ರದೇಶದ ನಂತರ ಕರ್ನಾಟಕ 2ನೇ ಸ್ಥಾನದಲ್ಲಿದೆ ಎಂದು ಖ್ಯಾತ ಹೋರಾಟಗಾರ ಹಾಗೂ ನವದೆಹಲಿಯ ಸೆಂಟರ್ ಫಾರ್ ಈಕ್ವಿಟಿ ಸ್ಟಡೀಸ್ ನಿರ್ದೇಶಕರಾದ ಹರ್ಷಮಂದರ್ ಕಳವಳ ವ್ಯಕ್ತಪಡಿಸಿದ್ದಾರೆ. ಹೆಚ್ಚುತ್ತಿರುವ ಅಸಹಿಷ್ಟುತೆ ಕುರಿತು ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ನಡೆದ ಪ್ಯಾನಲ್ ಚರ್ಚೆಯಲ್ಲಿ ಮಾತನಾಡಿದ ಅವರು ಕರ್ನಾಟಕ ಪರಿಸ್ಥಿತಿ ತೀರಾ ಕೆಳಮಟ್ಟದಲ್ಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯು ಹೆಚ್ಚುತ್ತಿರುವ ದ್ವೇಷ ಅಪರಾಧಗಳಲ್ಲಿ ಭಾರತದಲ್ಲಿಯೇ ನಂಬರ್ ಒನ್ ಜಿಲ್ಲೆಯಾಗಿದೆ ಎಂದು ಅವರು ಅಂಕಿ ಅಂಶದ ಸಮೇತ ವಿವರಿಸಿದ್ದಾರೆ.

ಕಳೆದ ಐದು ವರ್ಷಗಳಿಂದ ದೇಶದಲ್ಲಿನ ದ್ವೇಷ ಅಪರಾಧಗಳನ್ನು ದಾಖಲು ಮಾಡುತ್ತಿರುವ ಶರೀಬ್ ಅಲಿ ಮತ್ತು ಕ್ವಿಲ್ ಫೌಂಡೇಶನ್ ಪ್ರಕಾರ 2014ರಿಂದ ಭಾರತದಲ್ಲಿ ಒಟ್ಟು 948 ಅಪರಾಧ ಘಟನೆಗಳು ನಡೆದಿದ್ದು ಇದರಲ್ಲಿ 117 ಗುಂಪು ಹಲ್ಲೆಗಳು, 258 ದೈಹಿಕ ಹಲ್ಲೆಗಳ ಜೊತೆಗೆ ಚರ್ಚ್ ಮತ್ತು ಮಸೀದಿಗಳ ಮೇಲಿನ ದಾಳಿಗಳೂ ಸೇರಿವೆ.  ಒಟ್ಟು 11,722 ಜನ ದ್ವೇಷ ಅಪರಾಧಗಳಿಂದ ಸಂತ್ರಸ್ತರಾಗಿದ್ದು 108 ಜನ ಮೃತಪಟ್ಟಿದ್ದಾರೆಂದು ವರದಿ ಹೇಳುತ್ತಿದೆ. ಕರ್ನಾಟಕದಲ್ಲಿಯೂ 111 ಘಟನೆಗಳಿಂದ 553 ಜನ ಸಂತ್ರಸ್ತರಾಗಿದ್ದಾರೆ ಎಂದಿದ್ದಾರೆ.

ಅಪಾಯಿಕಾರಿ ಬೆಳವಣಿಗೆ

ಇದೊಂದು ಅಪಾಯಕಾರಿ ಬೆಳವಣಿಗೆಯಾಗಿದ್ದು  ಮೋದಿ ಅಧಿಕಾರಕ್ಕೆ ಬಂದ ನಂತರ  ಈ ರೀತಿಯ ದ್ವೇಷ ಅಪರಾಧಗಳು ಹೆಚ್ಚಾಗುತ್ತಿವೆ ಎಂದು ಆರೋಪಿಸಿದ್ದಾರೆ. ಅಲ್ಪಸಂಖ್ಯಾತರ ಮೇಲಿನ ಹಲ್ಲೆಗಳನ್ನು ಅವರು ಕಾನೂನುಬದ್ದಗೊಳಿಸಲು ಹೊರಟಿದ್ದಾರೆ, 2019ರಲ್ಲಿ ಅವರಿಗೆ ಸಿಕ್ಕ ಬಹುಮತ ಅವರನ್ನು ಈ ನಿಟ್ಟಿನಲ್ಲಿ ಮತ್ತಷ್ಟು ಪ್ರೇರೇಪಿಸಲಿದೆ ಎಂದಿದ್ದಾರೆ.

ಭಾರತ ಜನತೆ ಬಿಜೆಪಿಗೆ ಬಹುಮತವನ್ನು ನೀಡಿರುವುದು ಅಭಿವೃದ್ದಿಗಾಗಿ ಮತ್ತು ಆರ್ಥಿಕ ಬೆಳವಣಿಗೆ ಸಾಧಿಸುವುದಕ್ಕಾಗಿಯೇ ಹೊರತು ಹಿಂದುತ್ವದ ರಾಜಕಾರಣ ಮಾಡಲಿಕ್ಕಲ್ಲ ಎಂದಿದ್ದಾರೆ.

ಈ ನವ ಭಾರತದಲ್ಲಿ, ಮೋದಿಯವರ ಆಳ್ವಿಕೆಯಲ್ಲಿ ಹಿಂಸೆಯನ್ನು ವೈಭವೀಕರಿಸುತ್ತಾ, ಹಿಂಸೆ ಮಾಡಿದವರಿಗೆ ಹೀರೋ ಪಟ್ಟ ನೀಡಿತ್ತಾ ಮತ್ತಷ್ಟು ಹಿಂಸೆಗೆ ಪ್ರಚೋದನೆ ನೀಡಲಾಗುತ್ತಿದೆ. ಇಂದಿನ ಸಾಮಾಜಿಕ ರಚನೆಯನ್ನು ಮರುರಚಿಸುವ ಮೂಲಕ ಅಲ್ಪ ಸಂಖ್ಯಾತರರಿಗೆ ಇದು ನಿಮ್ಮ ನೆಲವಲ್ಲ ಎಂದು ಸಾರಿ ಹೇಳುತ್ತಿದ್ದಾರೆ. ಇಂದಿನ ಭಾರತದ ಸ್ಥಿತಿಯು 1930ರ ಜರ್ಮನಿಯಲ್ಲಿನ ಸ್ಥಿತಿಗಿಂತ ಭಿನ್ನವಾಗಿಲ್ಲ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಮಾನವೀಯತೆ ಮತ್ತು ಸೌಹಾರ್ದತೆಗಾಗಿನ ಮಹಾತ್ಮ ಗಾಂಧಿಯವರ ಕೆಲಸಗಳನ್ನು ನೆನಪಿಸಿದ ಹರ್ಷ ಮಂದರ್ ರವರು 1947ರಲ್ಲಿ ಗಾಂಧಿಯವರಿಗೆ ಪಾಕಿಸ್ತಾನಕ್ಕೆ ಆಗಮಿಸಲು ಆಹ್ವಾನ ಬಂದಿತ್ತು. ಭಾರತದಲ್ಲಿ ಮುಸ್ಲಿಂ ಯುವಕನೊಬ್ಬ ಭಯಮುಕ್ತನಾಗಿ ಬೀದಿಯಲ್ಲಿ ಓಡಾಡುವಂತಹ ಪರಿಸ್ಥಿತಿ ಬರುವವರೆಗೂ ನಾನು ದೆಹಲಿಯಿಂದ ಒಂದು ಹೆಜ್ಜೆ ಕೂಡ ಹೊರಹಾಕುವುದಿಲ್ಲ ಎಂದು ಹೇಳಿದ್ದನ್ನು ಸ್ಮರಿಸಿದರು. ಆದರೆ ಮಹಾತ್ಮ ಗಾಂಧಿಯವರ ಆಶಯಗಳು ಇನ್ನೂ ಈಡೇರಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...