Homeಕರ್ನಾಟಕದ್ವೇಷ – ಅಪರಾಧಗಳಲ್ಲಿ ಉತ್ತರ ಪ್ರದೇಶದ ನಂತರ ಕರ್ನಾಟಕ 2ನೇ ಸ್ಥಾನದಲ್ಲಿದೆ: ಹರ್ಷಮಂದರ್

ದ್ವೇಷ – ಅಪರಾಧಗಳಲ್ಲಿ ಉತ್ತರ ಪ್ರದೇಶದ ನಂತರ ಕರ್ನಾಟಕ 2ನೇ ಸ್ಥಾನದಲ್ಲಿದೆ: ಹರ್ಷಮಂದರ್

- Advertisement -
- Advertisement -

ದ್ವೇಷ – ಅಪರಾಧಗಳಲ್ಲಿ ಉತ್ತರ ಪ್ರದೇಶದ ನಂತರ ಕರ್ನಾಟಕ 2ನೇ ಸ್ಥಾನದಲ್ಲಿದೆ ಎಂದು ಖ್ಯಾತ ಹೋರಾಟಗಾರ ಹಾಗೂ ನವದೆಹಲಿಯ ಸೆಂಟರ್ ಫಾರ್ ಈಕ್ವಿಟಿ ಸ್ಟಡೀಸ್ ನಿರ್ದೇಶಕರಾದ ಹರ್ಷಮಂದರ್ ಕಳವಳ ವ್ಯಕ್ತಪಡಿಸಿದ್ದಾರೆ. ಹೆಚ್ಚುತ್ತಿರುವ ಅಸಹಿಷ್ಟುತೆ ಕುರಿತು ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ನಡೆದ ಪ್ಯಾನಲ್ ಚರ್ಚೆಯಲ್ಲಿ ಮಾತನಾಡಿದ ಅವರು ಕರ್ನಾಟಕ ಪರಿಸ್ಥಿತಿ ತೀರಾ ಕೆಳಮಟ್ಟದಲ್ಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯು ಹೆಚ್ಚುತ್ತಿರುವ ದ್ವೇಷ ಅಪರಾಧಗಳಲ್ಲಿ ಭಾರತದಲ್ಲಿಯೇ ನಂಬರ್ ಒನ್ ಜಿಲ್ಲೆಯಾಗಿದೆ ಎಂದು ಅವರು ಅಂಕಿ ಅಂಶದ ಸಮೇತ ವಿವರಿಸಿದ್ದಾರೆ.

ಕಳೆದ ಐದು ವರ್ಷಗಳಿಂದ ದೇಶದಲ್ಲಿನ ದ್ವೇಷ ಅಪರಾಧಗಳನ್ನು ದಾಖಲು ಮಾಡುತ್ತಿರುವ ಶರೀಬ್ ಅಲಿ ಮತ್ತು ಕ್ವಿಲ್ ಫೌಂಡೇಶನ್ ಪ್ರಕಾರ 2014ರಿಂದ ಭಾರತದಲ್ಲಿ ಒಟ್ಟು 948 ಅಪರಾಧ ಘಟನೆಗಳು ನಡೆದಿದ್ದು ಇದರಲ್ಲಿ 117 ಗುಂಪು ಹಲ್ಲೆಗಳು, 258 ದೈಹಿಕ ಹಲ್ಲೆಗಳ ಜೊತೆಗೆ ಚರ್ಚ್ ಮತ್ತು ಮಸೀದಿಗಳ ಮೇಲಿನ ದಾಳಿಗಳೂ ಸೇರಿವೆ.  ಒಟ್ಟು 11,722 ಜನ ದ್ವೇಷ ಅಪರಾಧಗಳಿಂದ ಸಂತ್ರಸ್ತರಾಗಿದ್ದು 108 ಜನ ಮೃತಪಟ್ಟಿದ್ದಾರೆಂದು ವರದಿ ಹೇಳುತ್ತಿದೆ. ಕರ್ನಾಟಕದಲ್ಲಿಯೂ 111 ಘಟನೆಗಳಿಂದ 553 ಜನ ಸಂತ್ರಸ್ತರಾಗಿದ್ದಾರೆ ಎಂದಿದ್ದಾರೆ.

ಅಪಾಯಿಕಾರಿ ಬೆಳವಣಿಗೆ

ಇದೊಂದು ಅಪಾಯಕಾರಿ ಬೆಳವಣಿಗೆಯಾಗಿದ್ದು  ಮೋದಿ ಅಧಿಕಾರಕ್ಕೆ ಬಂದ ನಂತರ  ಈ ರೀತಿಯ ದ್ವೇಷ ಅಪರಾಧಗಳು ಹೆಚ್ಚಾಗುತ್ತಿವೆ ಎಂದು ಆರೋಪಿಸಿದ್ದಾರೆ. ಅಲ್ಪಸಂಖ್ಯಾತರ ಮೇಲಿನ ಹಲ್ಲೆಗಳನ್ನು ಅವರು ಕಾನೂನುಬದ್ದಗೊಳಿಸಲು ಹೊರಟಿದ್ದಾರೆ, 2019ರಲ್ಲಿ ಅವರಿಗೆ ಸಿಕ್ಕ ಬಹುಮತ ಅವರನ್ನು ಈ ನಿಟ್ಟಿನಲ್ಲಿ ಮತ್ತಷ್ಟು ಪ್ರೇರೇಪಿಸಲಿದೆ ಎಂದಿದ್ದಾರೆ.

ಭಾರತ ಜನತೆ ಬಿಜೆಪಿಗೆ ಬಹುಮತವನ್ನು ನೀಡಿರುವುದು ಅಭಿವೃದ್ದಿಗಾಗಿ ಮತ್ತು ಆರ್ಥಿಕ ಬೆಳವಣಿಗೆ ಸಾಧಿಸುವುದಕ್ಕಾಗಿಯೇ ಹೊರತು ಹಿಂದುತ್ವದ ರಾಜಕಾರಣ ಮಾಡಲಿಕ್ಕಲ್ಲ ಎಂದಿದ್ದಾರೆ.

ಈ ನವ ಭಾರತದಲ್ಲಿ, ಮೋದಿಯವರ ಆಳ್ವಿಕೆಯಲ್ಲಿ ಹಿಂಸೆಯನ್ನು ವೈಭವೀಕರಿಸುತ್ತಾ, ಹಿಂಸೆ ಮಾಡಿದವರಿಗೆ ಹೀರೋ ಪಟ್ಟ ನೀಡಿತ್ತಾ ಮತ್ತಷ್ಟು ಹಿಂಸೆಗೆ ಪ್ರಚೋದನೆ ನೀಡಲಾಗುತ್ತಿದೆ. ಇಂದಿನ ಸಾಮಾಜಿಕ ರಚನೆಯನ್ನು ಮರುರಚಿಸುವ ಮೂಲಕ ಅಲ್ಪ ಸಂಖ್ಯಾತರರಿಗೆ ಇದು ನಿಮ್ಮ ನೆಲವಲ್ಲ ಎಂದು ಸಾರಿ ಹೇಳುತ್ತಿದ್ದಾರೆ. ಇಂದಿನ ಭಾರತದ ಸ್ಥಿತಿಯು 1930ರ ಜರ್ಮನಿಯಲ್ಲಿನ ಸ್ಥಿತಿಗಿಂತ ಭಿನ್ನವಾಗಿಲ್ಲ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಮಾನವೀಯತೆ ಮತ್ತು ಸೌಹಾರ್ದತೆಗಾಗಿನ ಮಹಾತ್ಮ ಗಾಂಧಿಯವರ ಕೆಲಸಗಳನ್ನು ನೆನಪಿಸಿದ ಹರ್ಷ ಮಂದರ್ ರವರು 1947ರಲ್ಲಿ ಗಾಂಧಿಯವರಿಗೆ ಪಾಕಿಸ್ತಾನಕ್ಕೆ ಆಗಮಿಸಲು ಆಹ್ವಾನ ಬಂದಿತ್ತು. ಭಾರತದಲ್ಲಿ ಮುಸ್ಲಿಂ ಯುವಕನೊಬ್ಬ ಭಯಮುಕ್ತನಾಗಿ ಬೀದಿಯಲ್ಲಿ ಓಡಾಡುವಂತಹ ಪರಿಸ್ಥಿತಿ ಬರುವವರೆಗೂ ನಾನು ದೆಹಲಿಯಿಂದ ಒಂದು ಹೆಜ್ಜೆ ಕೂಡ ಹೊರಹಾಕುವುದಿಲ್ಲ ಎಂದು ಹೇಳಿದ್ದನ್ನು ಸ್ಮರಿಸಿದರು. ಆದರೆ ಮಹಾತ್ಮ ಗಾಂಧಿಯವರ ಆಶಯಗಳು ಇನ್ನೂ ಈಡೇರಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read