Homeಕರ್ನಾಟಕದ್ವೇಷ – ಅಪರಾಧಗಳಲ್ಲಿ ಉತ್ತರ ಪ್ರದೇಶದ ನಂತರ ಕರ್ನಾಟಕ 2ನೇ ಸ್ಥಾನದಲ್ಲಿದೆ: ಹರ್ಷಮಂದರ್

ದ್ವೇಷ – ಅಪರಾಧಗಳಲ್ಲಿ ಉತ್ತರ ಪ್ರದೇಶದ ನಂತರ ಕರ್ನಾಟಕ 2ನೇ ಸ್ಥಾನದಲ್ಲಿದೆ: ಹರ್ಷಮಂದರ್

- Advertisement -
- Advertisement -

ದ್ವೇಷ – ಅಪರಾಧಗಳಲ್ಲಿ ಉತ್ತರ ಪ್ರದೇಶದ ನಂತರ ಕರ್ನಾಟಕ 2ನೇ ಸ್ಥಾನದಲ್ಲಿದೆ ಎಂದು ಖ್ಯಾತ ಹೋರಾಟಗಾರ ಹಾಗೂ ನವದೆಹಲಿಯ ಸೆಂಟರ್ ಫಾರ್ ಈಕ್ವಿಟಿ ಸ್ಟಡೀಸ್ ನಿರ್ದೇಶಕರಾದ ಹರ್ಷಮಂದರ್ ಕಳವಳ ವ್ಯಕ್ತಪಡಿಸಿದ್ದಾರೆ. ಹೆಚ್ಚುತ್ತಿರುವ ಅಸಹಿಷ್ಟುತೆ ಕುರಿತು ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ನಡೆದ ಪ್ಯಾನಲ್ ಚರ್ಚೆಯಲ್ಲಿ ಮಾತನಾಡಿದ ಅವರು ಕರ್ನಾಟಕ ಪರಿಸ್ಥಿತಿ ತೀರಾ ಕೆಳಮಟ್ಟದಲ್ಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯು ಹೆಚ್ಚುತ್ತಿರುವ ದ್ವೇಷ ಅಪರಾಧಗಳಲ್ಲಿ ಭಾರತದಲ್ಲಿಯೇ ನಂಬರ್ ಒನ್ ಜಿಲ್ಲೆಯಾಗಿದೆ ಎಂದು ಅವರು ಅಂಕಿ ಅಂಶದ ಸಮೇತ ವಿವರಿಸಿದ್ದಾರೆ.

ಕಳೆದ ಐದು ವರ್ಷಗಳಿಂದ ದೇಶದಲ್ಲಿನ ದ್ವೇಷ ಅಪರಾಧಗಳನ್ನು ದಾಖಲು ಮಾಡುತ್ತಿರುವ ಶರೀಬ್ ಅಲಿ ಮತ್ತು ಕ್ವಿಲ್ ಫೌಂಡೇಶನ್ ಪ್ರಕಾರ 2014ರಿಂದ ಭಾರತದಲ್ಲಿ ಒಟ್ಟು 948 ಅಪರಾಧ ಘಟನೆಗಳು ನಡೆದಿದ್ದು ಇದರಲ್ಲಿ 117 ಗುಂಪು ಹಲ್ಲೆಗಳು, 258 ದೈಹಿಕ ಹಲ್ಲೆಗಳ ಜೊತೆಗೆ ಚರ್ಚ್ ಮತ್ತು ಮಸೀದಿಗಳ ಮೇಲಿನ ದಾಳಿಗಳೂ ಸೇರಿವೆ.  ಒಟ್ಟು 11,722 ಜನ ದ್ವೇಷ ಅಪರಾಧಗಳಿಂದ ಸಂತ್ರಸ್ತರಾಗಿದ್ದು 108 ಜನ ಮೃತಪಟ್ಟಿದ್ದಾರೆಂದು ವರದಿ ಹೇಳುತ್ತಿದೆ. ಕರ್ನಾಟಕದಲ್ಲಿಯೂ 111 ಘಟನೆಗಳಿಂದ 553 ಜನ ಸಂತ್ರಸ್ತರಾಗಿದ್ದಾರೆ ಎಂದಿದ್ದಾರೆ.

ಅಪಾಯಿಕಾರಿ ಬೆಳವಣಿಗೆ

ಇದೊಂದು ಅಪಾಯಕಾರಿ ಬೆಳವಣಿಗೆಯಾಗಿದ್ದು  ಮೋದಿ ಅಧಿಕಾರಕ್ಕೆ ಬಂದ ನಂತರ  ಈ ರೀತಿಯ ದ್ವೇಷ ಅಪರಾಧಗಳು ಹೆಚ್ಚಾಗುತ್ತಿವೆ ಎಂದು ಆರೋಪಿಸಿದ್ದಾರೆ. ಅಲ್ಪಸಂಖ್ಯಾತರ ಮೇಲಿನ ಹಲ್ಲೆಗಳನ್ನು ಅವರು ಕಾನೂನುಬದ್ದಗೊಳಿಸಲು ಹೊರಟಿದ್ದಾರೆ, 2019ರಲ್ಲಿ ಅವರಿಗೆ ಸಿಕ್ಕ ಬಹುಮತ ಅವರನ್ನು ಈ ನಿಟ್ಟಿನಲ್ಲಿ ಮತ್ತಷ್ಟು ಪ್ರೇರೇಪಿಸಲಿದೆ ಎಂದಿದ್ದಾರೆ.

ಭಾರತ ಜನತೆ ಬಿಜೆಪಿಗೆ ಬಹುಮತವನ್ನು ನೀಡಿರುವುದು ಅಭಿವೃದ್ದಿಗಾಗಿ ಮತ್ತು ಆರ್ಥಿಕ ಬೆಳವಣಿಗೆ ಸಾಧಿಸುವುದಕ್ಕಾಗಿಯೇ ಹೊರತು ಹಿಂದುತ್ವದ ರಾಜಕಾರಣ ಮಾಡಲಿಕ್ಕಲ್ಲ ಎಂದಿದ್ದಾರೆ.

ಈ ನವ ಭಾರತದಲ್ಲಿ, ಮೋದಿಯವರ ಆಳ್ವಿಕೆಯಲ್ಲಿ ಹಿಂಸೆಯನ್ನು ವೈಭವೀಕರಿಸುತ್ತಾ, ಹಿಂಸೆ ಮಾಡಿದವರಿಗೆ ಹೀರೋ ಪಟ್ಟ ನೀಡಿತ್ತಾ ಮತ್ತಷ್ಟು ಹಿಂಸೆಗೆ ಪ್ರಚೋದನೆ ನೀಡಲಾಗುತ್ತಿದೆ. ಇಂದಿನ ಸಾಮಾಜಿಕ ರಚನೆಯನ್ನು ಮರುರಚಿಸುವ ಮೂಲಕ ಅಲ್ಪ ಸಂಖ್ಯಾತರರಿಗೆ ಇದು ನಿಮ್ಮ ನೆಲವಲ್ಲ ಎಂದು ಸಾರಿ ಹೇಳುತ್ತಿದ್ದಾರೆ. ಇಂದಿನ ಭಾರತದ ಸ್ಥಿತಿಯು 1930ರ ಜರ್ಮನಿಯಲ್ಲಿನ ಸ್ಥಿತಿಗಿಂತ ಭಿನ್ನವಾಗಿಲ್ಲ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಮಾನವೀಯತೆ ಮತ್ತು ಸೌಹಾರ್ದತೆಗಾಗಿನ ಮಹಾತ್ಮ ಗಾಂಧಿಯವರ ಕೆಲಸಗಳನ್ನು ನೆನಪಿಸಿದ ಹರ್ಷ ಮಂದರ್ ರವರು 1947ರಲ್ಲಿ ಗಾಂಧಿಯವರಿಗೆ ಪಾಕಿಸ್ತಾನಕ್ಕೆ ಆಗಮಿಸಲು ಆಹ್ವಾನ ಬಂದಿತ್ತು. ಭಾರತದಲ್ಲಿ ಮುಸ್ಲಿಂ ಯುವಕನೊಬ್ಬ ಭಯಮುಕ್ತನಾಗಿ ಬೀದಿಯಲ್ಲಿ ಓಡಾಡುವಂತಹ ಪರಿಸ್ಥಿತಿ ಬರುವವರೆಗೂ ನಾನು ದೆಹಲಿಯಿಂದ ಒಂದು ಹೆಜ್ಜೆ ಕೂಡ ಹೊರಹಾಕುವುದಿಲ್ಲ ಎಂದು ಹೇಳಿದ್ದನ್ನು ಸ್ಮರಿಸಿದರು. ಆದರೆ ಮಹಾತ್ಮ ಗಾಂಧಿಯವರ ಆಶಯಗಳು ಇನ್ನೂ ಈಡೇರಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...