Homeಕರ್ನಾಟಕದ್ವೇಷ – ಅಪರಾಧಗಳಲ್ಲಿ ಉತ್ತರ ಪ್ರದೇಶದ ನಂತರ ಕರ್ನಾಟಕ 2ನೇ ಸ್ಥಾನದಲ್ಲಿದೆ: ಹರ್ಷಮಂದರ್

ದ್ವೇಷ – ಅಪರಾಧಗಳಲ್ಲಿ ಉತ್ತರ ಪ್ರದೇಶದ ನಂತರ ಕರ್ನಾಟಕ 2ನೇ ಸ್ಥಾನದಲ್ಲಿದೆ: ಹರ್ಷಮಂದರ್

- Advertisement -
- Advertisement -

ದ್ವೇಷ – ಅಪರಾಧಗಳಲ್ಲಿ ಉತ್ತರ ಪ್ರದೇಶದ ನಂತರ ಕರ್ನಾಟಕ 2ನೇ ಸ್ಥಾನದಲ್ಲಿದೆ ಎಂದು ಖ್ಯಾತ ಹೋರಾಟಗಾರ ಹಾಗೂ ನವದೆಹಲಿಯ ಸೆಂಟರ್ ಫಾರ್ ಈಕ್ವಿಟಿ ಸ್ಟಡೀಸ್ ನಿರ್ದೇಶಕರಾದ ಹರ್ಷಮಂದರ್ ಕಳವಳ ವ್ಯಕ್ತಪಡಿಸಿದ್ದಾರೆ. ಹೆಚ್ಚುತ್ತಿರುವ ಅಸಹಿಷ್ಟುತೆ ಕುರಿತು ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ನಡೆದ ಪ್ಯಾನಲ್ ಚರ್ಚೆಯಲ್ಲಿ ಮಾತನಾಡಿದ ಅವರು ಕರ್ನಾಟಕ ಪರಿಸ್ಥಿತಿ ತೀರಾ ಕೆಳಮಟ್ಟದಲ್ಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯು ಹೆಚ್ಚುತ್ತಿರುವ ದ್ವೇಷ ಅಪರಾಧಗಳಲ್ಲಿ ಭಾರತದಲ್ಲಿಯೇ ನಂಬರ್ ಒನ್ ಜಿಲ್ಲೆಯಾಗಿದೆ ಎಂದು ಅವರು ಅಂಕಿ ಅಂಶದ ಸಮೇತ ವಿವರಿಸಿದ್ದಾರೆ.

ಕಳೆದ ಐದು ವರ್ಷಗಳಿಂದ ದೇಶದಲ್ಲಿನ ದ್ವೇಷ ಅಪರಾಧಗಳನ್ನು ದಾಖಲು ಮಾಡುತ್ತಿರುವ ಶರೀಬ್ ಅಲಿ ಮತ್ತು ಕ್ವಿಲ್ ಫೌಂಡೇಶನ್ ಪ್ರಕಾರ 2014ರಿಂದ ಭಾರತದಲ್ಲಿ ಒಟ್ಟು 948 ಅಪರಾಧ ಘಟನೆಗಳು ನಡೆದಿದ್ದು ಇದರಲ್ಲಿ 117 ಗುಂಪು ಹಲ್ಲೆಗಳು, 258 ದೈಹಿಕ ಹಲ್ಲೆಗಳ ಜೊತೆಗೆ ಚರ್ಚ್ ಮತ್ತು ಮಸೀದಿಗಳ ಮೇಲಿನ ದಾಳಿಗಳೂ ಸೇರಿವೆ.  ಒಟ್ಟು 11,722 ಜನ ದ್ವೇಷ ಅಪರಾಧಗಳಿಂದ ಸಂತ್ರಸ್ತರಾಗಿದ್ದು 108 ಜನ ಮೃತಪಟ್ಟಿದ್ದಾರೆಂದು ವರದಿ ಹೇಳುತ್ತಿದೆ. ಕರ್ನಾಟಕದಲ್ಲಿಯೂ 111 ಘಟನೆಗಳಿಂದ 553 ಜನ ಸಂತ್ರಸ್ತರಾಗಿದ್ದಾರೆ ಎಂದಿದ್ದಾರೆ.

ಅಪಾಯಿಕಾರಿ ಬೆಳವಣಿಗೆ

ಇದೊಂದು ಅಪಾಯಕಾರಿ ಬೆಳವಣಿಗೆಯಾಗಿದ್ದು  ಮೋದಿ ಅಧಿಕಾರಕ್ಕೆ ಬಂದ ನಂತರ  ಈ ರೀತಿಯ ದ್ವೇಷ ಅಪರಾಧಗಳು ಹೆಚ್ಚಾಗುತ್ತಿವೆ ಎಂದು ಆರೋಪಿಸಿದ್ದಾರೆ. ಅಲ್ಪಸಂಖ್ಯಾತರ ಮೇಲಿನ ಹಲ್ಲೆಗಳನ್ನು ಅವರು ಕಾನೂನುಬದ್ದಗೊಳಿಸಲು ಹೊರಟಿದ್ದಾರೆ, 2019ರಲ್ಲಿ ಅವರಿಗೆ ಸಿಕ್ಕ ಬಹುಮತ ಅವರನ್ನು ಈ ನಿಟ್ಟಿನಲ್ಲಿ ಮತ್ತಷ್ಟು ಪ್ರೇರೇಪಿಸಲಿದೆ ಎಂದಿದ್ದಾರೆ.

ಭಾರತ ಜನತೆ ಬಿಜೆಪಿಗೆ ಬಹುಮತವನ್ನು ನೀಡಿರುವುದು ಅಭಿವೃದ್ದಿಗಾಗಿ ಮತ್ತು ಆರ್ಥಿಕ ಬೆಳವಣಿಗೆ ಸಾಧಿಸುವುದಕ್ಕಾಗಿಯೇ ಹೊರತು ಹಿಂದುತ್ವದ ರಾಜಕಾರಣ ಮಾಡಲಿಕ್ಕಲ್ಲ ಎಂದಿದ್ದಾರೆ.

ಈ ನವ ಭಾರತದಲ್ಲಿ, ಮೋದಿಯವರ ಆಳ್ವಿಕೆಯಲ್ಲಿ ಹಿಂಸೆಯನ್ನು ವೈಭವೀಕರಿಸುತ್ತಾ, ಹಿಂಸೆ ಮಾಡಿದವರಿಗೆ ಹೀರೋ ಪಟ್ಟ ನೀಡಿತ್ತಾ ಮತ್ತಷ್ಟು ಹಿಂಸೆಗೆ ಪ್ರಚೋದನೆ ನೀಡಲಾಗುತ್ತಿದೆ. ಇಂದಿನ ಸಾಮಾಜಿಕ ರಚನೆಯನ್ನು ಮರುರಚಿಸುವ ಮೂಲಕ ಅಲ್ಪ ಸಂಖ್ಯಾತರರಿಗೆ ಇದು ನಿಮ್ಮ ನೆಲವಲ್ಲ ಎಂದು ಸಾರಿ ಹೇಳುತ್ತಿದ್ದಾರೆ. ಇಂದಿನ ಭಾರತದ ಸ್ಥಿತಿಯು 1930ರ ಜರ್ಮನಿಯಲ್ಲಿನ ಸ್ಥಿತಿಗಿಂತ ಭಿನ್ನವಾಗಿಲ್ಲ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಮಾನವೀಯತೆ ಮತ್ತು ಸೌಹಾರ್ದತೆಗಾಗಿನ ಮಹಾತ್ಮ ಗಾಂಧಿಯವರ ಕೆಲಸಗಳನ್ನು ನೆನಪಿಸಿದ ಹರ್ಷ ಮಂದರ್ ರವರು 1947ರಲ್ಲಿ ಗಾಂಧಿಯವರಿಗೆ ಪಾಕಿಸ್ತಾನಕ್ಕೆ ಆಗಮಿಸಲು ಆಹ್ವಾನ ಬಂದಿತ್ತು. ಭಾರತದಲ್ಲಿ ಮುಸ್ಲಿಂ ಯುವಕನೊಬ್ಬ ಭಯಮುಕ್ತನಾಗಿ ಬೀದಿಯಲ್ಲಿ ಓಡಾಡುವಂತಹ ಪರಿಸ್ಥಿತಿ ಬರುವವರೆಗೂ ನಾನು ದೆಹಲಿಯಿಂದ ಒಂದು ಹೆಜ್ಜೆ ಕೂಡ ಹೊರಹಾಕುವುದಿಲ್ಲ ಎಂದು ಹೇಳಿದ್ದನ್ನು ಸ್ಮರಿಸಿದರು. ಆದರೆ ಮಹಾತ್ಮ ಗಾಂಧಿಯವರ ಆಶಯಗಳು ಇನ್ನೂ ಈಡೇರಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...