Homeಕರ್ನಾಟಕದ್ವೇಷ – ಅಪರಾಧಗಳಲ್ಲಿ ಉತ್ತರ ಪ್ರದೇಶದ ನಂತರ ಕರ್ನಾಟಕ 2ನೇ ಸ್ಥಾನದಲ್ಲಿದೆ: ಹರ್ಷಮಂದರ್

ದ್ವೇಷ – ಅಪರಾಧಗಳಲ್ಲಿ ಉತ್ತರ ಪ್ರದೇಶದ ನಂತರ ಕರ್ನಾಟಕ 2ನೇ ಸ್ಥಾನದಲ್ಲಿದೆ: ಹರ್ಷಮಂದರ್

- Advertisement -
- Advertisement -

ದ್ವೇಷ – ಅಪರಾಧಗಳಲ್ಲಿ ಉತ್ತರ ಪ್ರದೇಶದ ನಂತರ ಕರ್ನಾಟಕ 2ನೇ ಸ್ಥಾನದಲ್ಲಿದೆ ಎಂದು ಖ್ಯಾತ ಹೋರಾಟಗಾರ ಹಾಗೂ ನವದೆಹಲಿಯ ಸೆಂಟರ್ ಫಾರ್ ಈಕ್ವಿಟಿ ಸ್ಟಡೀಸ್ ನಿರ್ದೇಶಕರಾದ ಹರ್ಷಮಂದರ್ ಕಳವಳ ವ್ಯಕ್ತಪಡಿಸಿದ್ದಾರೆ. ಹೆಚ್ಚುತ್ತಿರುವ ಅಸಹಿಷ್ಟುತೆ ಕುರಿತು ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ನಡೆದ ಪ್ಯಾನಲ್ ಚರ್ಚೆಯಲ್ಲಿ ಮಾತನಾಡಿದ ಅವರು ಕರ್ನಾಟಕ ಪರಿಸ್ಥಿತಿ ತೀರಾ ಕೆಳಮಟ್ಟದಲ್ಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯು ಹೆಚ್ಚುತ್ತಿರುವ ದ್ವೇಷ ಅಪರಾಧಗಳಲ್ಲಿ ಭಾರತದಲ್ಲಿಯೇ ನಂಬರ್ ಒನ್ ಜಿಲ್ಲೆಯಾಗಿದೆ ಎಂದು ಅವರು ಅಂಕಿ ಅಂಶದ ಸಮೇತ ವಿವರಿಸಿದ್ದಾರೆ.

ಕಳೆದ ಐದು ವರ್ಷಗಳಿಂದ ದೇಶದಲ್ಲಿನ ದ್ವೇಷ ಅಪರಾಧಗಳನ್ನು ದಾಖಲು ಮಾಡುತ್ತಿರುವ ಶರೀಬ್ ಅಲಿ ಮತ್ತು ಕ್ವಿಲ್ ಫೌಂಡೇಶನ್ ಪ್ರಕಾರ 2014ರಿಂದ ಭಾರತದಲ್ಲಿ ಒಟ್ಟು 948 ಅಪರಾಧ ಘಟನೆಗಳು ನಡೆದಿದ್ದು ಇದರಲ್ಲಿ 117 ಗುಂಪು ಹಲ್ಲೆಗಳು, 258 ದೈಹಿಕ ಹಲ್ಲೆಗಳ ಜೊತೆಗೆ ಚರ್ಚ್ ಮತ್ತು ಮಸೀದಿಗಳ ಮೇಲಿನ ದಾಳಿಗಳೂ ಸೇರಿವೆ.  ಒಟ್ಟು 11,722 ಜನ ದ್ವೇಷ ಅಪರಾಧಗಳಿಂದ ಸಂತ್ರಸ್ತರಾಗಿದ್ದು 108 ಜನ ಮೃತಪಟ್ಟಿದ್ದಾರೆಂದು ವರದಿ ಹೇಳುತ್ತಿದೆ. ಕರ್ನಾಟಕದಲ್ಲಿಯೂ 111 ಘಟನೆಗಳಿಂದ 553 ಜನ ಸಂತ್ರಸ್ತರಾಗಿದ್ದಾರೆ ಎಂದಿದ್ದಾರೆ.

ಅಪಾಯಿಕಾರಿ ಬೆಳವಣಿಗೆ

ಇದೊಂದು ಅಪಾಯಕಾರಿ ಬೆಳವಣಿಗೆಯಾಗಿದ್ದು  ಮೋದಿ ಅಧಿಕಾರಕ್ಕೆ ಬಂದ ನಂತರ  ಈ ರೀತಿಯ ದ್ವೇಷ ಅಪರಾಧಗಳು ಹೆಚ್ಚಾಗುತ್ತಿವೆ ಎಂದು ಆರೋಪಿಸಿದ್ದಾರೆ. ಅಲ್ಪಸಂಖ್ಯಾತರ ಮೇಲಿನ ಹಲ್ಲೆಗಳನ್ನು ಅವರು ಕಾನೂನುಬದ್ದಗೊಳಿಸಲು ಹೊರಟಿದ್ದಾರೆ, 2019ರಲ್ಲಿ ಅವರಿಗೆ ಸಿಕ್ಕ ಬಹುಮತ ಅವರನ್ನು ಈ ನಿಟ್ಟಿನಲ್ಲಿ ಮತ್ತಷ್ಟು ಪ್ರೇರೇಪಿಸಲಿದೆ ಎಂದಿದ್ದಾರೆ.

ಭಾರತ ಜನತೆ ಬಿಜೆಪಿಗೆ ಬಹುಮತವನ್ನು ನೀಡಿರುವುದು ಅಭಿವೃದ್ದಿಗಾಗಿ ಮತ್ತು ಆರ್ಥಿಕ ಬೆಳವಣಿಗೆ ಸಾಧಿಸುವುದಕ್ಕಾಗಿಯೇ ಹೊರತು ಹಿಂದುತ್ವದ ರಾಜಕಾರಣ ಮಾಡಲಿಕ್ಕಲ್ಲ ಎಂದಿದ್ದಾರೆ.

ಈ ನವ ಭಾರತದಲ್ಲಿ, ಮೋದಿಯವರ ಆಳ್ವಿಕೆಯಲ್ಲಿ ಹಿಂಸೆಯನ್ನು ವೈಭವೀಕರಿಸುತ್ತಾ, ಹಿಂಸೆ ಮಾಡಿದವರಿಗೆ ಹೀರೋ ಪಟ್ಟ ನೀಡಿತ್ತಾ ಮತ್ತಷ್ಟು ಹಿಂಸೆಗೆ ಪ್ರಚೋದನೆ ನೀಡಲಾಗುತ್ತಿದೆ. ಇಂದಿನ ಸಾಮಾಜಿಕ ರಚನೆಯನ್ನು ಮರುರಚಿಸುವ ಮೂಲಕ ಅಲ್ಪ ಸಂಖ್ಯಾತರರಿಗೆ ಇದು ನಿಮ್ಮ ನೆಲವಲ್ಲ ಎಂದು ಸಾರಿ ಹೇಳುತ್ತಿದ್ದಾರೆ. ಇಂದಿನ ಭಾರತದ ಸ್ಥಿತಿಯು 1930ರ ಜರ್ಮನಿಯಲ್ಲಿನ ಸ್ಥಿತಿಗಿಂತ ಭಿನ್ನವಾಗಿಲ್ಲ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಮಾನವೀಯತೆ ಮತ್ತು ಸೌಹಾರ್ದತೆಗಾಗಿನ ಮಹಾತ್ಮ ಗಾಂಧಿಯವರ ಕೆಲಸಗಳನ್ನು ನೆನಪಿಸಿದ ಹರ್ಷ ಮಂದರ್ ರವರು 1947ರಲ್ಲಿ ಗಾಂಧಿಯವರಿಗೆ ಪಾಕಿಸ್ತಾನಕ್ಕೆ ಆಗಮಿಸಲು ಆಹ್ವಾನ ಬಂದಿತ್ತು. ಭಾರತದಲ್ಲಿ ಮುಸ್ಲಿಂ ಯುವಕನೊಬ್ಬ ಭಯಮುಕ್ತನಾಗಿ ಬೀದಿಯಲ್ಲಿ ಓಡಾಡುವಂತಹ ಪರಿಸ್ಥಿತಿ ಬರುವವರೆಗೂ ನಾನು ದೆಹಲಿಯಿಂದ ಒಂದು ಹೆಜ್ಜೆ ಕೂಡ ಹೊರಹಾಕುವುದಿಲ್ಲ ಎಂದು ಹೇಳಿದ್ದನ್ನು ಸ್ಮರಿಸಿದರು. ಆದರೆ ಮಹಾತ್ಮ ಗಾಂಧಿಯವರ ಆಶಯಗಳು ಇನ್ನೂ ಈಡೇರಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...