Homeಕರ್ನಾಟಕಬೆಳೆ ಹಾನಿ ಸಮೀಕ್ಷೆ ಮಾಡಿಸಿ ತಕ್ಷಣ ಪರಿಹಾರ ನೀಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಪತ್ರ

ಬೆಳೆ ಹಾನಿ ಸಮೀಕ್ಷೆ ಮಾಡಿಸಿ ತಕ್ಷಣ ಪರಿಹಾರ ನೀಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಪತ್ರ

- Advertisement -
- Advertisement -

ರಾಜ್ಯದ ಹಲವೆಡೆ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಅಡಿಕೆ, ಭತ್ತ, ಜೋಳ, ಕಾಫಿ, ಕರಿಮೆಣಸು ಬೆಳೆದ ರೈತರು ಬೆಳೆನಷ್ಟ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಬೆಳೆಗಳನ್ನು ಈ ಕೂಡಲೆ ಸಮೀಕ್ಷೆ ಮಾಡಿಸಿ ಪರಿಹಾರ ನೀಡಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳುಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬಂದಿದೆ. ಇದರಿಂದಾಗಿ ಕೊಯಿಲಿಗೆ ಬಂದ ಬೆಳೆಗಳು ಹೊಲ ಗದ್ದೆಗಳಲ್ಲೆ ಕೊಳೆತು ಹೋಗುವಂತಾಗಿದೆ. ರಾಜ್ಯದಲ್ಲಿ ವಾಡಿಕೆಯಂತೆ 69.79 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗುತ್ತದೆ. ಕಳೆದ ವರ್ಷ ಮುಂಗಾರಿನಲ್ಲಿ ವಾಡಿಕೆಗಿಂತ ಸುಮಾರು 8 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. ಅಂದರೆ 77.65 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. ಕಳೆದ ಬಾರಿಗಿಂತ ಈ ಬಾರಿ 1.07 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹೆಚ್ಚಾಗಿ ಬಿತ್ತನೆಯಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಮುಂಗಾರು ಬೆಳೆಗಳಾದ ರಾಗಿ, ಭತ್ತ, ಮುಸುಕಿನ ಜೋಳ, ತೊಗರಿ, ಹತ್ತಿ, ಮೆಣಸಿನ ಕಾಯಿ, ಶೇಂಗಾ, ಹೆಸರು, ಉದ್ದು ಮುಂತಾದವುಗಳ ಕೊಯಿಲಿನ ಕೆಲಸ ನಡೆಯುತ್ತಿದೆ. ಆದರೆ ಸೆಪ್ಟೆಂಬರ್ ತಿಂಗಳಲ್ಲಿ ಪ್ರಾರಂಭವಾದ ಮಳೆ ಇನ್ನೂ ನಿಂತಿಲ್ಲ. ಆರಂಭದಲ್ಲಿ ಬಿತ್ತನೆ ಮಾಡುವಾಗ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಮಳೆ ಕೈಕೊಟ್ಟ ಕಾರಣ ದಕ್ಷಿಣ ಒಳನಾಡು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ರೈತರು ಹಾಕಿದ ಬಿತ್ತನೆ ಬೀಜಗಳು ಸರಿಯಾಗಿ ಹುಟ್ಟಲಿಲ್ಲ. ಆನಂತರ ಸರಿಯಾದ ಸಮಯಕ್ಕೆ ರಸಗೊಬ್ಬರ ಸಿಗಲಿಲ್ಲ. ಇಷ್ಟರ ನಡುವೆಯೂ ರೈತರು ಕಷ್ಟ ಪಟ್ಟು ಬೆಳೆಗಳನ್ನು ಬೆಳೆದಿದ್ದಾರೆ, ಆದರೆ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದ ರೈತಾಪಿ ಸಮುದಾಯ ಸಂಕಷ್ಟಕ್ಕೆ ಸಿಲುಕಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯಿಂದಾಗಿ ಅಡಿಕೆ, ಕಾಫಿ, ಮೆಣಸು ಮುಂತಾದ ವಾಣಿಜ್ಯ ಬೆಳೆಗಳು ಹಲವು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿವೆ. ಕೊಳೆ ರೋಗದ ಜೊತೆಗೆ ಅಡಿಕೆಗೆ ಹಳದಿ ಎಲೆ ರೋಗ ಬಂದಿದೆ. ಮೆಣಸಿನ ಬಳ್ಳಿಗಳು ಕೊಳೆತು ಹೋಗುತ್ತಿವೆ. ಕಾಫಿಯೂ ಕೊಳೆ ರೋಗದ ಸಮಸ್ಯೆಯನ್ನು ಎದುರಿಸುತ್ತಿದೆ. ಕೃಷಿ ಇಲಾಖೆಯ ಮಾಹಿತಿಯ ಪ್ರಕಾರ, ವ್ಯಾಪಕ ಮಳೆಯಿಂದಾಗಿ ಅಕ್ಟೋಬರ್ ಅಂತ್ಯದ ವೇಳೆಗೆ 11.22 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬೆಳೆದ ಬೆಳೆ ನಷ್ಟವಾಗಿದೆ. ಆದರೆ ಕೃಷಿ ಇಲಾಖೆಯ ಮಾಹಿತಿಗಳಲ್ಲಿ ಹಾನಿಯಾಗಿರುವ ಜಿಲ್ಲೆಗಳ ಮಾಹಿತಿಯೆ ಇಲ್ಲ. ಮಲೆನಾಡು, ಕರಾವಳಿ ಜಿಲ್ಲೆಗಳ ಅಡಿಕೆ, ಮೆಣಸು, ಕಾಫಿಗೆ ಆಗಿರುವ ನಷ್ಟದ ಮಾಹಿತಿ ಇಲ್ಲ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಟಿಪ್ಪು ಜಯಂತಿ: ನೈಜ ಇತಿಹಾಸದ ಪುಟಗಳಿಂದ ಟಿಪ್ಪುವನ್ನು ಅರಿಯೋಣ-ಸಿದ್ದರಾಮಯ್ಯ

’ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂ. ನಗರ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಮೈಸೂರು, ಮಂಡ್ಯ, ಚಾಮರಾಜನಗರ ಮುಂತಾದ ಜಿಲ್ಲೆಗಳಲ್ಲಿ ಬೆಳೆದ ರಾಗಿ, ಭತ್ತ, ಮುಸುಕಿನ ಜೋಳದ ಬೆಳೆಗಳಿಗೆ ಆಗಿರುವ ನಷ್ಟದ ಕುರಿತು ಸಮೀಕ್ಷೆಯೆ ನಡೆಸಿಲ್ಲ.
ಇನ್ನು ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕದ ಜಿಲ್ಲೆಗಳ ಬೆಳೆಗಳಲ್ಲಿ ಜುಲೈ ತಿಂಗಳಿಂದ ಸುರಿಯುತ್ತಿರುವ ಮಳೆಯಿಂದ ರೈತರು ವ್ಯಾಪಕ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇಷ್ಟೆಲ್ಲ ಆದರೂ ಸಹ ಸರ್ಕಾರ ಕೈ ಕಟ್ಟಿ ಕುಳಿತಿದೆ. ನಷ್ಟವಾಗಿರುವ ರೈತರ ಬೆಳೆಗಳನ್ನು ಸಮರ್ಪಕವಾಗಿ ಸಮೀಕ್ಷೆ ಮಾಡುವುದಾಗಲಿ, ಪರಿಹಾರ ನೀಡುವುದನ್ನಾಗಲಿ ಮಾಡುತ್ತಿಲ್ಲ’ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರವೂ ಕೂಡ ಸಮರ್ಪಕ ಪರಿಹಾರ ನೀಡುತ್ತಿಲ್ಲ. 2019-20, 2020-21 ರ ವರ್ಷಗಳಲ್ಲಿ ಸುಮಾರು 1.5 ರಿಂದ 2 ಲಕ್ಷ ಕೋಟಿ ರೂಗಳವರೆಗೆ ನಷ್ಟವಾಗಿತ್ತು. ಆದರೆ ಕೇಂದ್ರ ಸರ್ಕಾರ 2019-20 ರಲ್ಲಿ 1652.85, 2020-21 ರಲ್ಲಿ 1328.30 ಕೋಟಿಗಳನ್ನು ಮಾತ್ರ ಬಿಡುಗಡೆ ಮಾಡಿದೆ. ಅಂದರೆ ಒಟ್ಟು ಬಿಡುಗಡೆ ಮಾಡಿದ ಹಣ ಕೇವಲ 2981.15 ಕೋಟಿ ರೂಗಳು ಮಾತ್ರ. 2021-22ರ ನಷ್ಟಕ್ಕೆ ಒಂದು ರೂಪಾಯಿಯನ್ನೂ ನೀಡಿಲ್ಲ. ಕೇಂದ್ರ ಮತ್ತು ರಾಜ್ಯಗಳೆರಡೂ ಈ ಮಟ್ಟದ ನಿರ್ಲಕ್ಷ್ಯ ತೋರಿಸುವುದು ಅತ್ಯಂತ ಅಮಾನವೀಯ ನಡವಳಿಕೆಯಾಗುತ್ತದೆ ಕಿಡಿ ಕಾಡಿದ್ದಾರೆ.

’ಕೊರೊನಾದಿಂದ ಸಂಕಟದಲ್ಲಿರುವ ರೈತಾಪಿ ಸಮುದಾಯದಲ್ಲಿ ಆತ್ಮಹತ್ಯೆಗಳ ಪ್ರಮಾಣ ಮತ್ತೆ ಹೆಚ್ಚಾಗುತ್ತಿರುವುದು ಆತಂಕದ ಸಂಗತಿಯಾಗಿದೆ. ಈ ಹಿನ್ನೆಲೆಯಲ್ಲಿ ಮಳೆಯಿಂದ ತೊಂದರೆಗೊಳಗಾಗಿರುವ ರೈತರ ಬೆಳೆಗಳನ್ನು ಈ ಕೂಡಲೆ ಸಮರ್ಪಕವಾಗಿ ಸಮೀಕ್ಷೆ ಮಾಡಿಸಿ ಪರಿಹಾರ ನೀಡಬೇಕು’ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಚುನಾವಣೆಯಲ್ಲಿ BJP ಸೋಲಿಸಿದರೆ ಇಂಧನ ದರ ಇಳಿಯುತ್ತದೆ ಎಂಬ ಪಾಠ ಕಲಿಸಿಕೊಟ್ಟ ಮೋದಿ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...