Homeಕರ್ನಾಟಕಬೆಳೆ ಹಾನಿ ಸಮೀಕ್ಷೆ ಮಾಡಿಸಿ ತಕ್ಷಣ ಪರಿಹಾರ ನೀಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಪತ್ರ

ಬೆಳೆ ಹಾನಿ ಸಮೀಕ್ಷೆ ಮಾಡಿಸಿ ತಕ್ಷಣ ಪರಿಹಾರ ನೀಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಪತ್ರ

- Advertisement -
- Advertisement -

ರಾಜ್ಯದ ಹಲವೆಡೆ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಅಡಿಕೆ, ಭತ್ತ, ಜೋಳ, ಕಾಫಿ, ಕರಿಮೆಣಸು ಬೆಳೆದ ರೈತರು ಬೆಳೆನಷ್ಟ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಬೆಳೆಗಳನ್ನು ಈ ಕೂಡಲೆ ಸಮೀಕ್ಷೆ ಮಾಡಿಸಿ ಪರಿಹಾರ ನೀಡಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳುಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬಂದಿದೆ. ಇದರಿಂದಾಗಿ ಕೊಯಿಲಿಗೆ ಬಂದ ಬೆಳೆಗಳು ಹೊಲ ಗದ್ದೆಗಳಲ್ಲೆ ಕೊಳೆತು ಹೋಗುವಂತಾಗಿದೆ. ರಾಜ್ಯದಲ್ಲಿ ವಾಡಿಕೆಯಂತೆ 69.79 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗುತ್ತದೆ. ಕಳೆದ ವರ್ಷ ಮುಂಗಾರಿನಲ್ಲಿ ವಾಡಿಕೆಗಿಂತ ಸುಮಾರು 8 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. ಅಂದರೆ 77.65 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. ಕಳೆದ ಬಾರಿಗಿಂತ ಈ ಬಾರಿ 1.07 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹೆಚ್ಚಾಗಿ ಬಿತ್ತನೆಯಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಮುಂಗಾರು ಬೆಳೆಗಳಾದ ರಾಗಿ, ಭತ್ತ, ಮುಸುಕಿನ ಜೋಳ, ತೊಗರಿ, ಹತ್ತಿ, ಮೆಣಸಿನ ಕಾಯಿ, ಶೇಂಗಾ, ಹೆಸರು, ಉದ್ದು ಮುಂತಾದವುಗಳ ಕೊಯಿಲಿನ ಕೆಲಸ ನಡೆಯುತ್ತಿದೆ. ಆದರೆ ಸೆಪ್ಟೆಂಬರ್ ತಿಂಗಳಲ್ಲಿ ಪ್ರಾರಂಭವಾದ ಮಳೆ ಇನ್ನೂ ನಿಂತಿಲ್ಲ. ಆರಂಭದಲ್ಲಿ ಬಿತ್ತನೆ ಮಾಡುವಾಗ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಮಳೆ ಕೈಕೊಟ್ಟ ಕಾರಣ ದಕ್ಷಿಣ ಒಳನಾಡು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ರೈತರು ಹಾಕಿದ ಬಿತ್ತನೆ ಬೀಜಗಳು ಸರಿಯಾಗಿ ಹುಟ್ಟಲಿಲ್ಲ. ಆನಂತರ ಸರಿಯಾದ ಸಮಯಕ್ಕೆ ರಸಗೊಬ್ಬರ ಸಿಗಲಿಲ್ಲ. ಇಷ್ಟರ ನಡುವೆಯೂ ರೈತರು ಕಷ್ಟ ಪಟ್ಟು ಬೆಳೆಗಳನ್ನು ಬೆಳೆದಿದ್ದಾರೆ, ಆದರೆ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದ ರೈತಾಪಿ ಸಮುದಾಯ ಸಂಕಷ್ಟಕ್ಕೆ ಸಿಲುಕಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯಿಂದಾಗಿ ಅಡಿಕೆ, ಕಾಫಿ, ಮೆಣಸು ಮುಂತಾದ ವಾಣಿಜ್ಯ ಬೆಳೆಗಳು ಹಲವು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿವೆ. ಕೊಳೆ ರೋಗದ ಜೊತೆಗೆ ಅಡಿಕೆಗೆ ಹಳದಿ ಎಲೆ ರೋಗ ಬಂದಿದೆ. ಮೆಣಸಿನ ಬಳ್ಳಿಗಳು ಕೊಳೆತು ಹೋಗುತ್ತಿವೆ. ಕಾಫಿಯೂ ಕೊಳೆ ರೋಗದ ಸಮಸ್ಯೆಯನ್ನು ಎದುರಿಸುತ್ತಿದೆ. ಕೃಷಿ ಇಲಾಖೆಯ ಮಾಹಿತಿಯ ಪ್ರಕಾರ, ವ್ಯಾಪಕ ಮಳೆಯಿಂದಾಗಿ ಅಕ್ಟೋಬರ್ ಅಂತ್ಯದ ವೇಳೆಗೆ 11.22 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬೆಳೆದ ಬೆಳೆ ನಷ್ಟವಾಗಿದೆ. ಆದರೆ ಕೃಷಿ ಇಲಾಖೆಯ ಮಾಹಿತಿಗಳಲ್ಲಿ ಹಾನಿಯಾಗಿರುವ ಜಿಲ್ಲೆಗಳ ಮಾಹಿತಿಯೆ ಇಲ್ಲ. ಮಲೆನಾಡು, ಕರಾವಳಿ ಜಿಲ್ಲೆಗಳ ಅಡಿಕೆ, ಮೆಣಸು, ಕಾಫಿಗೆ ಆಗಿರುವ ನಷ್ಟದ ಮಾಹಿತಿ ಇಲ್ಲ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಟಿಪ್ಪು ಜಯಂತಿ: ನೈಜ ಇತಿಹಾಸದ ಪುಟಗಳಿಂದ ಟಿಪ್ಪುವನ್ನು ಅರಿಯೋಣ-ಸಿದ್ದರಾಮಯ್ಯ

’ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂ. ನಗರ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಮೈಸೂರು, ಮಂಡ್ಯ, ಚಾಮರಾಜನಗರ ಮುಂತಾದ ಜಿಲ್ಲೆಗಳಲ್ಲಿ ಬೆಳೆದ ರಾಗಿ, ಭತ್ತ, ಮುಸುಕಿನ ಜೋಳದ ಬೆಳೆಗಳಿಗೆ ಆಗಿರುವ ನಷ್ಟದ ಕುರಿತು ಸಮೀಕ್ಷೆಯೆ ನಡೆಸಿಲ್ಲ.
ಇನ್ನು ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕದ ಜಿಲ್ಲೆಗಳ ಬೆಳೆಗಳಲ್ಲಿ ಜುಲೈ ತಿಂಗಳಿಂದ ಸುರಿಯುತ್ತಿರುವ ಮಳೆಯಿಂದ ರೈತರು ವ್ಯಾಪಕ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇಷ್ಟೆಲ್ಲ ಆದರೂ ಸಹ ಸರ್ಕಾರ ಕೈ ಕಟ್ಟಿ ಕುಳಿತಿದೆ. ನಷ್ಟವಾಗಿರುವ ರೈತರ ಬೆಳೆಗಳನ್ನು ಸಮರ್ಪಕವಾಗಿ ಸಮೀಕ್ಷೆ ಮಾಡುವುದಾಗಲಿ, ಪರಿಹಾರ ನೀಡುವುದನ್ನಾಗಲಿ ಮಾಡುತ್ತಿಲ್ಲ’ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರವೂ ಕೂಡ ಸಮರ್ಪಕ ಪರಿಹಾರ ನೀಡುತ್ತಿಲ್ಲ. 2019-20, 2020-21 ರ ವರ್ಷಗಳಲ್ಲಿ ಸುಮಾರು 1.5 ರಿಂದ 2 ಲಕ್ಷ ಕೋಟಿ ರೂಗಳವರೆಗೆ ನಷ್ಟವಾಗಿತ್ತು. ಆದರೆ ಕೇಂದ್ರ ಸರ್ಕಾರ 2019-20 ರಲ್ಲಿ 1652.85, 2020-21 ರಲ್ಲಿ 1328.30 ಕೋಟಿಗಳನ್ನು ಮಾತ್ರ ಬಿಡುಗಡೆ ಮಾಡಿದೆ. ಅಂದರೆ ಒಟ್ಟು ಬಿಡುಗಡೆ ಮಾಡಿದ ಹಣ ಕೇವಲ 2981.15 ಕೋಟಿ ರೂಗಳು ಮಾತ್ರ. 2021-22ರ ನಷ್ಟಕ್ಕೆ ಒಂದು ರೂಪಾಯಿಯನ್ನೂ ನೀಡಿಲ್ಲ. ಕೇಂದ್ರ ಮತ್ತು ರಾಜ್ಯಗಳೆರಡೂ ಈ ಮಟ್ಟದ ನಿರ್ಲಕ್ಷ್ಯ ತೋರಿಸುವುದು ಅತ್ಯಂತ ಅಮಾನವೀಯ ನಡವಳಿಕೆಯಾಗುತ್ತದೆ ಕಿಡಿ ಕಾಡಿದ್ದಾರೆ.

’ಕೊರೊನಾದಿಂದ ಸಂಕಟದಲ್ಲಿರುವ ರೈತಾಪಿ ಸಮುದಾಯದಲ್ಲಿ ಆತ್ಮಹತ್ಯೆಗಳ ಪ್ರಮಾಣ ಮತ್ತೆ ಹೆಚ್ಚಾಗುತ್ತಿರುವುದು ಆತಂಕದ ಸಂಗತಿಯಾಗಿದೆ. ಈ ಹಿನ್ನೆಲೆಯಲ್ಲಿ ಮಳೆಯಿಂದ ತೊಂದರೆಗೊಳಗಾಗಿರುವ ರೈತರ ಬೆಳೆಗಳನ್ನು ಈ ಕೂಡಲೆ ಸಮರ್ಪಕವಾಗಿ ಸಮೀಕ್ಷೆ ಮಾಡಿಸಿ ಪರಿಹಾರ ನೀಡಬೇಕು’ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಚುನಾವಣೆಯಲ್ಲಿ BJP ಸೋಲಿಸಿದರೆ ಇಂಧನ ದರ ಇಳಿಯುತ್ತದೆ ಎಂಬ ಪಾಠ ಕಲಿಸಿಕೊಟ್ಟ ಮೋದಿ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...