Homeಮುಖಪುಟಬಲವಂತದ ಮತಾಂತರಕ್ಕೆ ಸಂವಿಧಾನದಲ್ಲಿ ಶಿಕ್ಷೆಯಿದೆ, ಹೊಸ ಕಾಯ್ದೆಯ ಅಗತ್ಯವೇನಿದೆ?: ಸಿದ್ದರಾಮಯ್ಯ ಪ್ರಶ್ನೆ

ಬಲವಂತದ ಮತಾಂತರಕ್ಕೆ ಸಂವಿಧಾನದಲ್ಲಿ ಶಿಕ್ಷೆಯಿದೆ, ಹೊಸ ಕಾಯ್ದೆಯ ಅಗತ್ಯವೇನಿದೆ?: ಸಿದ್ದರಾಮಯ್ಯ ಪ್ರಶ್ನೆ

”ರಾಜ್ಯದಲ್ಲಿ ಹಿಂದೂಗಳ ಸಂಖ್ಯೆ ಕಡಿಮೆಯಾಗುತ್ತಿದೆ, ಕ್ರಿಶ್ಚಿಯನ್ ಮತ್ತು ಮುಸ್ಲಿಂಮರ ಜನಸಂಖ್ಯೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದೆ ಎಂದು ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ’

- Advertisement -
- Advertisement -

“ಬಲವಂತವಾಗಿ, ಆಸೆ ಆಮಿಷ ಒಡ್ಡಿ ಅಥವಾ ಮೋಸದಿಂದ ಮತಾಂತರ ಮಾಡಿದರೆ ಅದು ಶಿಕ್ಷಾರ್ಹ ಅಪರಾಧ ಎಂದು ನಮ್ಮ ಸಂವಿಧಾನದಲ್ಲೇ ಸ್ಪಷ್ಟವಾಗಿ ಇರುವುದರಿಂದ ರಾಜ್ಯ ಸರ್ಕಾರದ ನೂತನ ಮತಾಂತರ ನಿಷೇಧ ಕಾಯ್ದೆಯ ಅಗತ್ಯವೇನಿದೆ? ಇದೇ ಕಾರಣಕ್ಕೆ ನಾವು ವಿರೋಧ ಮಾಡುತ್ತಿದ್ದೇವೆ” ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಅವರು, ’ನಮ್ಮ ಸರ್ಕಾರದ ಅವಧಿಯಲ್ಲಿ ಮತಾಂತರ ನಿಷೇಧ ಕಾಯ್ದೆಯ ಕರಡು ಸಂಪುಟದಲ್ಲಿ ಚರ್ಚೆಯೂ ಆಗಿಲ್ಲ, ಅನುಮೋದನೆಯೂ ಆಗಿಲ್ಲ. ಕೇವಲ ಸಂಪುಟದ ಚರ್ಚೆಗೆ ತನ್ನಿ ಎಂದು ಸಹಿ ಹಾಕಿದ ಕಡತಗಳೆಲ್ಲವೂ ಸರ್ಕಾರದ ನಿಲುವು ಆಗುವುದಿಲ್ಲ. ಸಂಸದೀಯ ವ್ಯವಸ್ಥೆಯಲ್ಲಿ ಮುಖ್ಯಮಂತ್ರಿ ಎಂದರೆ ಸಮಾನರಲ್ಲಿ ಮೊದಲಿಗ ಎಂಬ ವ್ಯಾಖ್ಯಾನವಿದೆ. ಮುಖ್ಯಮಂತ್ರಿಯಾಗಿ ನಾನೊಬ್ಬನೇ ಏಕಪಕ್ಷೀಯ ನಿರ್ಧಾರ ಕೈಗೊಳ್ಳಲು ಬರಲ್ಲ, ಕರಡು ಪ್ರತಿ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿ ಎಂಬ ಕಾರಣಕ್ಕೆ ಸಹಿ ಮಾಡಿದ್ದೆ. ಸಹಿ ಮಾಡಿದ ಮಾತ್ರಕ್ಕೆ ಒಪ್ಪಿದ್ದೆ ಎಂದಲ್ಲ” ಎಂದು ಹೇಳಿದ್ದಾರೆ.

’ನಾನು ಮತಾಂತರ ನಿಷೇಧ ಕಾಯಿದೆಯ ಕಡತವನ್ನು ಸಂಪುಟದ ಮುಂದೆ ತರುವಂತೆ ಸಹಿ ಹಾಕಿದ್ದು 2015 ರ ನವೆಂಬರ್ ತಿಂಗಳಿನಲ್ಲಿ. ಅದಾಗಿ ಎರಡೂವರೆ ವರ್ಷ ನಾವು ಅಧಿಕಾರದಲ್ಲಿ ಇದ್ದರೂ ಒಮ್ಮೆಯೂ ಅದನ್ನು ಸಂಪುಟದ ಮುಂದೆ ತರುವ ಪ್ರಯತ್ನ ಮಾಡಲಿಲ್ಲ. ಕಾರಣ ನಮ್ಮ ಸರ್ಕಾರಕ್ಕೆ ಇಂಥಾ ಮಸೂದೆಯ ಬಗ್ಗೆ ಆಸಕ್ತಿ ಇರಲಿಲ್ಲ’ ಎಂದಿದ್ದಾರೆ.

ಹಿಂದಿನ ಕರಡು ಪ್ರತಿಗೂ ಇಂದಿನ ಕರಡು ಪ್ರತಿಗೂ ವ್ಯತ್ಯಾಸ ತಿಳಿಸಿರುವ ವಿ ಪಕ್ಷ ನಾಯಕ, “ಮತಾಂತರ ನಿಷೇಧ ಕುರಿತ ಈ ಹಿಂದಿನ ಕರಡು ಪ್ರತಿಗೂ, ಈಗಿನ ಮಸೂದೆಗೂ ಇರುವ ಪ್ರಮುಖ ವ್ಯತ್ಯಾಸಗಳೆಂದರೆ. ಮೊದಲನೆಯದು ಹಿಂದಿನ ಕರಡು ಪ್ರತಿಯ ನಿಯಮ 3ರಲ್ಲಿ  ವಿವಾಹ ಎಂಬ ಪದ ಬಳಕೆ ಇರಲಿಲ್ಲ. ಬಿಜೆಪಿ ಯವರು ತಮ್ಮ ಕಾಯ್ದೆಯಲ್ಲಿ ವಿವಾಹವನ್ನು ಹೊಸದಾಗಿ ಸೇರಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಪ್ರಕಾರ ಸಾಕ್ಷಾಧಾರಗಳ ಕೊರತೆ ಕಂಡುಬಂದರೆ ಆರೋಪಿಯನ್ನು ತಪ್ಪಿತಸ್ಥ ಎಂದು ಪರಿಗಣಿಸಲು ಸಾಧ್ಯವಿಲ್ಲ. ಆದರೆ ಈ ಹೊಸ ಕಾಯ್ದೆಯ ನಿಯಮ 12 ರ ಪ್ರಕಾರ ಸಾಕ್ಷಾಧಾರ ಕೊರತೆ ಇದ್ದರೂ ಅದು ದೂರುದಾರನಿಗೆ ಅನುಕೂಲ ಮಾಡಿಕೊಡಲಿದೆ. ಹೀಗಾಗಿ ಕಾಯ್ದೆಯು ಕಾನೂನಿನ ನಿಯಮಗಳಿಗೆ ವಿರುದ್ಧವಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: 2021 ಸಿನಿಮಾ ಲೋಕ: ಜಾತಿ ದೌರ್ಜನ್ಯವನ್ನು ಪ್ರಶ್ನಿಸಿದ, ಚಿಂತನೆಗೆ ಹಚ್ಚಿದ ಚಲನಚಿತ್ರಗಳ ಪಟ್ಟಿ ಇಲ್ಲಿದೆ

’ಸಂವಿಧಾನದ 21 ಮತ್ತು 25ನೇ ವಿಧಿಯನ್ವಯ ಒಬ್ಬ ವ್ಯಕ್ತಿ ತನಗಿಷ್ಟವಾದ (ಯಾವುದೇ ಧರ್ಮಕ್ಕೆ ಸೇರಿದವರಾದರೂ ಸರಿ) ವ್ಯಕ್ತಿಯನ್ನು ಪ್ರೀತಿಸಿ ಮದುವೆಯಾಗಲು ಸಂಪೂರ್ಣ ಸ್ವಾತಂತ್ರ್ಯ ನೀಡಿರುವಾಗ, ಅದನ್ನು ಬೇಡ ಎನ್ನಲು ಸರ್ಕಾರಕ್ಕೇನು ಹಕ್ಕಿದೆ?’ ಎಂದು ಪ್ರಶ್ನಿಸಿದ್ದಾರೆ.

’ಇದೇ ಕಾರಣಕ್ಕೆ ಗುಜರಾತ್ ಸರ್ಕಾರ ಜಾರಿಗೊಳಿಸಲು ಹೊರಟಿದ್ದ ಮತಾಂತರ ನಿಷೇಧ ಕಾಯ್ದೆಗೆ ತಡೆಯಾಜ್ಞೆ ನೀಡಿರುವ ಅಲ್ಲಿನ ಹೈಕೋರ್ಟ್, ಅಲ್ಲಿನ ಸರ್ಕಾರಕ್ಕೆ ಛೀಮಾರಿ ಹಾಕಿದೆ. ಗುಜರಾತ್, ಉತ್ತರ ಪ್ರದೇಶ ಸರ್ಕಾರಗಳ ಮತಾಂತರ ನಿಷೇಧ ಕಾಯ್ದೆಯಲ್ಲಿ ಬಳಕೆ ಮಾಡಿರುವ ಪದಗಳು, ವಾಕ್ಯಗಳೇ ಇಲ್ಲಿಯೂ ಯಥಾವತ್ತಾಗಿವೆ. ಈ ಎಲ್ಲಾ ಸರ್ಕಾರಗಳ ಕರಡು ತಯಾರಿಕೆಯ ಹಿಂದೆ ಯಾವುದೋ ಒಂದು ಕಾಣದ ಕೈ ಇದೆ ಎಂಬ ಅನುಮಾನ ನನಗಿದೆ. ಅದು ಯಾವುದು ಎಂದು ಸರ್ಕಾರವೇ ಬಹಿರಂಗಪಡಿಸಬೇಕು’ ಎಂದು ಒತ್ತಾಯಿಸಿದ್ದಾರೆ.

’ದೇಶದಲ್ಲಿ ಶತಮಾನಗಳ ಹಿಂದಿನಿಂದಲೂ ಮತಾಂತರ ನಡೆದುಕೊಂಡು ಬಂದಿದೆ. ಬ್ರಾಹ್ಮಣ ಜಾತಿಯಲ್ಲಿ ಹುಟ್ಟಿದ ಪಂಪ, ರನ್ನರು ಜೈನ ಧರ್ಮಕ್ಕೆ ಮತಾಂತರ ಗೊಂಡರು. ಸಾಮ್ರಾಟ್ ಆಶೋಕ ಹಿಂದೂ ಧರ್ಮದಿಂದ ಬೌದ್ಧ ಧರ್ಮಕ್ಕೆ ಹೋಗಿಲ್ಲವೇ? ಇದಕ್ಕೆ ಕಾರಣವೇನು ಎಂಬುದು ಯಾರಿಗೂ ತಿಳಿಯದ ವಿಷಯವಲ್ಲ. ಸಾಮಾಜಿಕ ನ್ಯಾಯದ ಹರಿಕಾರ ಬಸವಣ್ಣನವರು ಬ್ರಾಹ್ಮಣರಾಗಿ ಹುಟ್ಟಿ ಲಿಂಗಾಯತ ಧರ್ಮ ಸ್ಥಾಪನೆ ಮಾಡಿಲ್ಲವೇ? ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್  ಲಕ್ಷಾಂತರ ಜನರ ಜೊತೆಗೆ ಬೌದ್ಧ ಧರ್ಮಕ್ಕೆ ಮತಾಂತರ ಆಗಿಲ್ಲವೇ? ಇವರ್ಯಾರು ಅಧಿಕಾರವೋ ಅಥವಾ ಇನ್ಯಾವುದೋ ಕಾರಣಕ್ಕೆ ಮತಾಂತರಗೊಂಡವರಲ್ಲ’ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಮತಾಂತರ ನಿಷೇಧ ಕಾಯಿದೆ ಹಿಂದೆ ದೇಶದ ಕೋಮುಸೌಹಾರ್ದತೆ ಹಾಳುಗೆಡವುವ ದುರುದ್ದೇಶವಿದೆ- ಸಿದ್ದರಾಮಯ್ಯ

’ರಾಜ್ಯದಲ್ಲಿ ಹಿಂದೂಗಳ ಸಂಖ್ಯೆ ಕಡಿಮೆಯಾಗುತ್ತಿದೆ, ಕ್ರಿಶ್ಚಿಯನ್ ಮತ್ತು ಮುಸ್ಲಿಂಮರ ಜನಸಂಖ್ಯೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದೆ ಎಂದು ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. 2001 ಮತ್ತು 2011 ರ ಜನಗಣತಿಯನ್ನು ನೋಡಿದರೆ ಸತ್ಯ ಏನೆಂದು ಅರಿವಾಗುತ್ತದೆ. 2001 ರ ಜನಗಣತಿ ಪ್ರಕಾರ ರಾಜ್ಯದ ಜನಸಂಖ್ಯೆಯಲ್ಲಿ 83.86% ಹಿಂದೂಗಳ ಪ್ರಮಾಣ ಇತ್ತು, ಅದು 2011 ಕ್ಕೆ ಶೇ. 84 ಕ್ಕೆ ಏರಿಕೆಯಾಗಿದೆ. ಮುಸ್ಲಿಮರ ಪ್ರಮಾಣ 12.23% ಇಂದ 12.92 ಹೆಚ್ಚಾಗಿದೆ. ಕ್ರೈಸ್ತರ ಪ್ರಮಾಣ 1.91% ಇಂದ 1.87% ಗೆ ಇಳಿಕೆಯಾಗಿದೆ. ಇದು ನಮ್ಮ ರಾಜ್ಯದ ವಾಸ್ತವ ಸ್ಥಿತಿ’ ಎಂದು ಅಂಕಿ ಅಂಶಗಳನ್ನು ಮುಂದಿಟ್ಟಿದ್ದಾರೆ.

’ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬುದು ಸಂವಿಧಾನದ ಮೂಲ ನಿಯಮ. ಆದರೆ ರಾಜ್ಯ ಸರ್ಕಾರದ ಮತಾಂತರ ನಿಷೇಧ ಕಾಯ್ದೆಯಲ್ಲಿ ಮಹಿಳೆಯರು, ಅಪ್ರಾಪ್ತರು, ಬುದ್ಧಿಭ್ರಮಣೆಯಾದವರು, ಪರಿಶಿಷ್ಟ ಜಾತಿ ಮತ್ತು ವರ್ಗದವರನ್ನು ಕಾನೂನು ಬಾಹಿರವಾಗಿ ಮತಾಂತರ ಮಾಡಿದರೆ ಮಾತ್ರ ಗರಿಷ್ಠ ಶಿಕ್ಷೆ ವಿಧಿಸಲಾಗಿದೆ. ಈ ಅಸಮಾನತೆಗೆ ಸಂವಿಧಾನದಲ್ಲಿ ಅವಕಾಶವಿಲ್ಲ’ ಎಂದಿ ತಿಳಿಸಿದ್ದಾರೆ.

’ಹಿಂದೂ ಧರ್ಮದ ಜಾತಿಯತೆ, ಅಸ್ಪೃಶ್ಯತೆ, ಅಸಮಾನತೆಗಳನ್ನು ಕಿತ್ತುಹಾಕಲು ಪ್ರಯತ್ನ ಮಾಡಿದ ಬಾಬಾ ಸಾಹೇಬರು, ಅದು ಸಾಧ್ಯವಾಗದಿದ್ದಾಗ ” ಹಿಂದೂವಾಗಿ ಹುಟ್ಟಿದ್ದೇನೆ, ಹಿಂದೂವಾಗಿ ಸಾಯಲಾರೆ” ಎಂದು ಬೌದ್ಧ ಧರ್ಮಕ್ಕೆ ಮತಾಂತರ ಗೊಂಡರು. ಜೊತೆಗೆ ಲಕ್ಷಾಂತರ ಜನರಿಗೆ ಸ್ವ ಇಚ್ಛೆಯಿಂದ ಮತಾಂತರಗೊಳ್ಳಲು ಕರೆನೀಡಿದ್ದು ನಿಜವಲ್ಲವೇ? ಬಲವಂತದಿಂದ, ಆಸೆ ಆಮಿಷ ಒಡ್ಡಿ, ಹೆದರಿಸಿ ಬೆದರಿಸಿ, ಮೋಸದ ಮೂಲಕ ಮತಾಂತರ ಮಾಡುವುದನ್ನು ನಾನು ವಿರೋಧಿಸುತ್ತೇನೆ. ಇದರ ಜೊತೆಗೆ ಜಾತೀಯತೆ, ಅಸ್ಪೃಶ್ಯತೆ ಅನುಸರಿಸುತ್ತಿರುವವರಿಗೂ ಕಠಿಣ ಶಿಕ್ಷೆಯಾಗಬೇಕು ಎಂಬುದು ನನ್ನ ಒತ್ತಾಯ’ ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

“ಮತಾಂತರವನ್ನು ದೂಷಿಸುವ ಬದಲು, ಮತಾಂತರವಾಗಲು ನಮ್ಮಲ್ಲಿರುವ ದೋಷಗಳೇನು ಎಂಬುದನ್ನು ಗುರುತಿಸಿ ಸರಿಪಡಿಸುವ ಕೆಲಸವನ್ನು ಮಾಡಬೇಕು ಎಂದು ಮಹಾತ್ಮ ಗಾಂಧಿ, ಸ್ವಾಮಿ ವಿವೇಕಾನಂದರು ಹೇಳಿದ್ದಾರೆ. ಇದು ನಿಜವಾಗಿ ಈಗ ನಾವು ಮಾಡಲೇಬೇಕಾದ ಕೆಲಸ. ರಾಜ್ಯ ಸರ್ಕಾರದ ಮತಾಂತರ ನಿಷೇಧ ಕಾಯ್ದೆ ಅಮಾನವೀಯ, ಸಂವಿಧಾನ ಬಾಹಿರ ಮತ್ತು ವ್ಯಕ್ತಿ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದ್ದು, ಇದನ್ನು ನಾನು ಬಲವಾಗಿ ಖಂಡಿಸುತ್ತೇನೆ. ಕೂಡಲೇ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು” ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಚಿಕ್ಕಬಳ್ಳಾಪುರ: ಮತಾಂತರ ನಿಷೇಧ ಮಸೂದೆ ಬೆನ್ನಲ್ಲೆ ದುಷ್ಕರ್ಮಿಗಳಿಂದ ಚರ್ಚ್ ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...