Homeಮುಖಪುಟಬಲವಂತದ ಮತಾಂತರಕ್ಕೆ ಸಂವಿಧಾನದಲ್ಲಿ ಶಿಕ್ಷೆಯಿದೆ, ಹೊಸ ಕಾಯ್ದೆಯ ಅಗತ್ಯವೇನಿದೆ?: ಸಿದ್ದರಾಮಯ್ಯ ಪ್ರಶ್ನೆ

ಬಲವಂತದ ಮತಾಂತರಕ್ಕೆ ಸಂವಿಧಾನದಲ್ಲಿ ಶಿಕ್ಷೆಯಿದೆ, ಹೊಸ ಕಾಯ್ದೆಯ ಅಗತ್ಯವೇನಿದೆ?: ಸಿದ್ದರಾಮಯ್ಯ ಪ್ರಶ್ನೆ

”ರಾಜ್ಯದಲ್ಲಿ ಹಿಂದೂಗಳ ಸಂಖ್ಯೆ ಕಡಿಮೆಯಾಗುತ್ತಿದೆ, ಕ್ರಿಶ್ಚಿಯನ್ ಮತ್ತು ಮುಸ್ಲಿಂಮರ ಜನಸಂಖ್ಯೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದೆ ಎಂದು ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ’

- Advertisement -
- Advertisement -

“ಬಲವಂತವಾಗಿ, ಆಸೆ ಆಮಿಷ ಒಡ್ಡಿ ಅಥವಾ ಮೋಸದಿಂದ ಮತಾಂತರ ಮಾಡಿದರೆ ಅದು ಶಿಕ್ಷಾರ್ಹ ಅಪರಾಧ ಎಂದು ನಮ್ಮ ಸಂವಿಧಾನದಲ್ಲೇ ಸ್ಪಷ್ಟವಾಗಿ ಇರುವುದರಿಂದ ರಾಜ್ಯ ಸರ್ಕಾರದ ನೂತನ ಮತಾಂತರ ನಿಷೇಧ ಕಾಯ್ದೆಯ ಅಗತ್ಯವೇನಿದೆ? ಇದೇ ಕಾರಣಕ್ಕೆ ನಾವು ವಿರೋಧ ಮಾಡುತ್ತಿದ್ದೇವೆ” ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಅವರು, ’ನಮ್ಮ ಸರ್ಕಾರದ ಅವಧಿಯಲ್ಲಿ ಮತಾಂತರ ನಿಷೇಧ ಕಾಯ್ದೆಯ ಕರಡು ಸಂಪುಟದಲ್ಲಿ ಚರ್ಚೆಯೂ ಆಗಿಲ್ಲ, ಅನುಮೋದನೆಯೂ ಆಗಿಲ್ಲ. ಕೇವಲ ಸಂಪುಟದ ಚರ್ಚೆಗೆ ತನ್ನಿ ಎಂದು ಸಹಿ ಹಾಕಿದ ಕಡತಗಳೆಲ್ಲವೂ ಸರ್ಕಾರದ ನಿಲುವು ಆಗುವುದಿಲ್ಲ. ಸಂಸದೀಯ ವ್ಯವಸ್ಥೆಯಲ್ಲಿ ಮುಖ್ಯಮಂತ್ರಿ ಎಂದರೆ ಸಮಾನರಲ್ಲಿ ಮೊದಲಿಗ ಎಂಬ ವ್ಯಾಖ್ಯಾನವಿದೆ. ಮುಖ್ಯಮಂತ್ರಿಯಾಗಿ ನಾನೊಬ್ಬನೇ ಏಕಪಕ್ಷೀಯ ನಿರ್ಧಾರ ಕೈಗೊಳ್ಳಲು ಬರಲ್ಲ, ಕರಡು ಪ್ರತಿ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿ ಎಂಬ ಕಾರಣಕ್ಕೆ ಸಹಿ ಮಾಡಿದ್ದೆ. ಸಹಿ ಮಾಡಿದ ಮಾತ್ರಕ್ಕೆ ಒಪ್ಪಿದ್ದೆ ಎಂದಲ್ಲ” ಎಂದು ಹೇಳಿದ್ದಾರೆ.

’ನಾನು ಮತಾಂತರ ನಿಷೇಧ ಕಾಯಿದೆಯ ಕಡತವನ್ನು ಸಂಪುಟದ ಮುಂದೆ ತರುವಂತೆ ಸಹಿ ಹಾಕಿದ್ದು 2015 ರ ನವೆಂಬರ್ ತಿಂಗಳಿನಲ್ಲಿ. ಅದಾಗಿ ಎರಡೂವರೆ ವರ್ಷ ನಾವು ಅಧಿಕಾರದಲ್ಲಿ ಇದ್ದರೂ ಒಮ್ಮೆಯೂ ಅದನ್ನು ಸಂಪುಟದ ಮುಂದೆ ತರುವ ಪ್ರಯತ್ನ ಮಾಡಲಿಲ್ಲ. ಕಾರಣ ನಮ್ಮ ಸರ್ಕಾರಕ್ಕೆ ಇಂಥಾ ಮಸೂದೆಯ ಬಗ್ಗೆ ಆಸಕ್ತಿ ಇರಲಿಲ್ಲ’ ಎಂದಿದ್ದಾರೆ.

ಹಿಂದಿನ ಕರಡು ಪ್ರತಿಗೂ ಇಂದಿನ ಕರಡು ಪ್ರತಿಗೂ ವ್ಯತ್ಯಾಸ ತಿಳಿಸಿರುವ ವಿ ಪಕ್ಷ ನಾಯಕ, “ಮತಾಂತರ ನಿಷೇಧ ಕುರಿತ ಈ ಹಿಂದಿನ ಕರಡು ಪ್ರತಿಗೂ, ಈಗಿನ ಮಸೂದೆಗೂ ಇರುವ ಪ್ರಮುಖ ವ್ಯತ್ಯಾಸಗಳೆಂದರೆ. ಮೊದಲನೆಯದು ಹಿಂದಿನ ಕರಡು ಪ್ರತಿಯ ನಿಯಮ 3ರಲ್ಲಿ  ವಿವಾಹ ಎಂಬ ಪದ ಬಳಕೆ ಇರಲಿಲ್ಲ. ಬಿಜೆಪಿ ಯವರು ತಮ್ಮ ಕಾಯ್ದೆಯಲ್ಲಿ ವಿವಾಹವನ್ನು ಹೊಸದಾಗಿ ಸೇರಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಪ್ರಕಾರ ಸಾಕ್ಷಾಧಾರಗಳ ಕೊರತೆ ಕಂಡುಬಂದರೆ ಆರೋಪಿಯನ್ನು ತಪ್ಪಿತಸ್ಥ ಎಂದು ಪರಿಗಣಿಸಲು ಸಾಧ್ಯವಿಲ್ಲ. ಆದರೆ ಈ ಹೊಸ ಕಾಯ್ದೆಯ ನಿಯಮ 12 ರ ಪ್ರಕಾರ ಸಾಕ್ಷಾಧಾರ ಕೊರತೆ ಇದ್ದರೂ ಅದು ದೂರುದಾರನಿಗೆ ಅನುಕೂಲ ಮಾಡಿಕೊಡಲಿದೆ. ಹೀಗಾಗಿ ಕಾಯ್ದೆಯು ಕಾನೂನಿನ ನಿಯಮಗಳಿಗೆ ವಿರುದ್ಧವಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: 2021 ಸಿನಿಮಾ ಲೋಕ: ಜಾತಿ ದೌರ್ಜನ್ಯವನ್ನು ಪ್ರಶ್ನಿಸಿದ, ಚಿಂತನೆಗೆ ಹಚ್ಚಿದ ಚಲನಚಿತ್ರಗಳ ಪಟ್ಟಿ ಇಲ್ಲಿದೆ

’ಸಂವಿಧಾನದ 21 ಮತ್ತು 25ನೇ ವಿಧಿಯನ್ವಯ ಒಬ್ಬ ವ್ಯಕ್ತಿ ತನಗಿಷ್ಟವಾದ (ಯಾವುದೇ ಧರ್ಮಕ್ಕೆ ಸೇರಿದವರಾದರೂ ಸರಿ) ವ್ಯಕ್ತಿಯನ್ನು ಪ್ರೀತಿಸಿ ಮದುವೆಯಾಗಲು ಸಂಪೂರ್ಣ ಸ್ವಾತಂತ್ರ್ಯ ನೀಡಿರುವಾಗ, ಅದನ್ನು ಬೇಡ ಎನ್ನಲು ಸರ್ಕಾರಕ್ಕೇನು ಹಕ್ಕಿದೆ?’ ಎಂದು ಪ್ರಶ್ನಿಸಿದ್ದಾರೆ.

’ಇದೇ ಕಾರಣಕ್ಕೆ ಗುಜರಾತ್ ಸರ್ಕಾರ ಜಾರಿಗೊಳಿಸಲು ಹೊರಟಿದ್ದ ಮತಾಂತರ ನಿಷೇಧ ಕಾಯ್ದೆಗೆ ತಡೆಯಾಜ್ಞೆ ನೀಡಿರುವ ಅಲ್ಲಿನ ಹೈಕೋರ್ಟ್, ಅಲ್ಲಿನ ಸರ್ಕಾರಕ್ಕೆ ಛೀಮಾರಿ ಹಾಕಿದೆ. ಗುಜರಾತ್, ಉತ್ತರ ಪ್ರದೇಶ ಸರ್ಕಾರಗಳ ಮತಾಂತರ ನಿಷೇಧ ಕಾಯ್ದೆಯಲ್ಲಿ ಬಳಕೆ ಮಾಡಿರುವ ಪದಗಳು, ವಾಕ್ಯಗಳೇ ಇಲ್ಲಿಯೂ ಯಥಾವತ್ತಾಗಿವೆ. ಈ ಎಲ್ಲಾ ಸರ್ಕಾರಗಳ ಕರಡು ತಯಾರಿಕೆಯ ಹಿಂದೆ ಯಾವುದೋ ಒಂದು ಕಾಣದ ಕೈ ಇದೆ ಎಂಬ ಅನುಮಾನ ನನಗಿದೆ. ಅದು ಯಾವುದು ಎಂದು ಸರ್ಕಾರವೇ ಬಹಿರಂಗಪಡಿಸಬೇಕು’ ಎಂದು ಒತ್ತಾಯಿಸಿದ್ದಾರೆ.

’ದೇಶದಲ್ಲಿ ಶತಮಾನಗಳ ಹಿಂದಿನಿಂದಲೂ ಮತಾಂತರ ನಡೆದುಕೊಂಡು ಬಂದಿದೆ. ಬ್ರಾಹ್ಮಣ ಜಾತಿಯಲ್ಲಿ ಹುಟ್ಟಿದ ಪಂಪ, ರನ್ನರು ಜೈನ ಧರ್ಮಕ್ಕೆ ಮತಾಂತರ ಗೊಂಡರು. ಸಾಮ್ರಾಟ್ ಆಶೋಕ ಹಿಂದೂ ಧರ್ಮದಿಂದ ಬೌದ್ಧ ಧರ್ಮಕ್ಕೆ ಹೋಗಿಲ್ಲವೇ? ಇದಕ್ಕೆ ಕಾರಣವೇನು ಎಂಬುದು ಯಾರಿಗೂ ತಿಳಿಯದ ವಿಷಯವಲ್ಲ. ಸಾಮಾಜಿಕ ನ್ಯಾಯದ ಹರಿಕಾರ ಬಸವಣ್ಣನವರು ಬ್ರಾಹ್ಮಣರಾಗಿ ಹುಟ್ಟಿ ಲಿಂಗಾಯತ ಧರ್ಮ ಸ್ಥಾಪನೆ ಮಾಡಿಲ್ಲವೇ? ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್  ಲಕ್ಷಾಂತರ ಜನರ ಜೊತೆಗೆ ಬೌದ್ಧ ಧರ್ಮಕ್ಕೆ ಮತಾಂತರ ಆಗಿಲ್ಲವೇ? ಇವರ್ಯಾರು ಅಧಿಕಾರವೋ ಅಥವಾ ಇನ್ಯಾವುದೋ ಕಾರಣಕ್ಕೆ ಮತಾಂತರಗೊಂಡವರಲ್ಲ’ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಮತಾಂತರ ನಿಷೇಧ ಕಾಯಿದೆ ಹಿಂದೆ ದೇಶದ ಕೋಮುಸೌಹಾರ್ದತೆ ಹಾಳುಗೆಡವುವ ದುರುದ್ದೇಶವಿದೆ- ಸಿದ್ದರಾಮಯ್ಯ

’ರಾಜ್ಯದಲ್ಲಿ ಹಿಂದೂಗಳ ಸಂಖ್ಯೆ ಕಡಿಮೆಯಾಗುತ್ತಿದೆ, ಕ್ರಿಶ್ಚಿಯನ್ ಮತ್ತು ಮುಸ್ಲಿಂಮರ ಜನಸಂಖ್ಯೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದೆ ಎಂದು ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. 2001 ಮತ್ತು 2011 ರ ಜನಗಣತಿಯನ್ನು ನೋಡಿದರೆ ಸತ್ಯ ಏನೆಂದು ಅರಿವಾಗುತ್ತದೆ. 2001 ರ ಜನಗಣತಿ ಪ್ರಕಾರ ರಾಜ್ಯದ ಜನಸಂಖ್ಯೆಯಲ್ಲಿ 83.86% ಹಿಂದೂಗಳ ಪ್ರಮಾಣ ಇತ್ತು, ಅದು 2011 ಕ್ಕೆ ಶೇ. 84 ಕ್ಕೆ ಏರಿಕೆಯಾಗಿದೆ. ಮುಸ್ಲಿಮರ ಪ್ರಮಾಣ 12.23% ಇಂದ 12.92 ಹೆಚ್ಚಾಗಿದೆ. ಕ್ರೈಸ್ತರ ಪ್ರಮಾಣ 1.91% ಇಂದ 1.87% ಗೆ ಇಳಿಕೆಯಾಗಿದೆ. ಇದು ನಮ್ಮ ರಾಜ್ಯದ ವಾಸ್ತವ ಸ್ಥಿತಿ’ ಎಂದು ಅಂಕಿ ಅಂಶಗಳನ್ನು ಮುಂದಿಟ್ಟಿದ್ದಾರೆ.

’ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬುದು ಸಂವಿಧಾನದ ಮೂಲ ನಿಯಮ. ಆದರೆ ರಾಜ್ಯ ಸರ್ಕಾರದ ಮತಾಂತರ ನಿಷೇಧ ಕಾಯ್ದೆಯಲ್ಲಿ ಮಹಿಳೆಯರು, ಅಪ್ರಾಪ್ತರು, ಬುದ್ಧಿಭ್ರಮಣೆಯಾದವರು, ಪರಿಶಿಷ್ಟ ಜಾತಿ ಮತ್ತು ವರ್ಗದವರನ್ನು ಕಾನೂನು ಬಾಹಿರವಾಗಿ ಮತಾಂತರ ಮಾಡಿದರೆ ಮಾತ್ರ ಗರಿಷ್ಠ ಶಿಕ್ಷೆ ವಿಧಿಸಲಾಗಿದೆ. ಈ ಅಸಮಾನತೆಗೆ ಸಂವಿಧಾನದಲ್ಲಿ ಅವಕಾಶವಿಲ್ಲ’ ಎಂದಿ ತಿಳಿಸಿದ್ದಾರೆ.

’ಹಿಂದೂ ಧರ್ಮದ ಜಾತಿಯತೆ, ಅಸ್ಪೃಶ್ಯತೆ, ಅಸಮಾನತೆಗಳನ್ನು ಕಿತ್ತುಹಾಕಲು ಪ್ರಯತ್ನ ಮಾಡಿದ ಬಾಬಾ ಸಾಹೇಬರು, ಅದು ಸಾಧ್ಯವಾಗದಿದ್ದಾಗ ” ಹಿಂದೂವಾಗಿ ಹುಟ್ಟಿದ್ದೇನೆ, ಹಿಂದೂವಾಗಿ ಸಾಯಲಾರೆ” ಎಂದು ಬೌದ್ಧ ಧರ್ಮಕ್ಕೆ ಮತಾಂತರ ಗೊಂಡರು. ಜೊತೆಗೆ ಲಕ್ಷಾಂತರ ಜನರಿಗೆ ಸ್ವ ಇಚ್ಛೆಯಿಂದ ಮತಾಂತರಗೊಳ್ಳಲು ಕರೆನೀಡಿದ್ದು ನಿಜವಲ್ಲವೇ? ಬಲವಂತದಿಂದ, ಆಸೆ ಆಮಿಷ ಒಡ್ಡಿ, ಹೆದರಿಸಿ ಬೆದರಿಸಿ, ಮೋಸದ ಮೂಲಕ ಮತಾಂತರ ಮಾಡುವುದನ್ನು ನಾನು ವಿರೋಧಿಸುತ್ತೇನೆ. ಇದರ ಜೊತೆಗೆ ಜಾತೀಯತೆ, ಅಸ್ಪೃಶ್ಯತೆ ಅನುಸರಿಸುತ್ತಿರುವವರಿಗೂ ಕಠಿಣ ಶಿಕ್ಷೆಯಾಗಬೇಕು ಎಂಬುದು ನನ್ನ ಒತ್ತಾಯ’ ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

“ಮತಾಂತರವನ್ನು ದೂಷಿಸುವ ಬದಲು, ಮತಾಂತರವಾಗಲು ನಮ್ಮಲ್ಲಿರುವ ದೋಷಗಳೇನು ಎಂಬುದನ್ನು ಗುರುತಿಸಿ ಸರಿಪಡಿಸುವ ಕೆಲಸವನ್ನು ಮಾಡಬೇಕು ಎಂದು ಮಹಾತ್ಮ ಗಾಂಧಿ, ಸ್ವಾಮಿ ವಿವೇಕಾನಂದರು ಹೇಳಿದ್ದಾರೆ. ಇದು ನಿಜವಾಗಿ ಈಗ ನಾವು ಮಾಡಲೇಬೇಕಾದ ಕೆಲಸ. ರಾಜ್ಯ ಸರ್ಕಾರದ ಮತಾಂತರ ನಿಷೇಧ ಕಾಯ್ದೆ ಅಮಾನವೀಯ, ಸಂವಿಧಾನ ಬಾಹಿರ ಮತ್ತು ವ್ಯಕ್ತಿ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದ್ದು, ಇದನ್ನು ನಾನು ಬಲವಾಗಿ ಖಂಡಿಸುತ್ತೇನೆ. ಕೂಡಲೇ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು” ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಚಿಕ್ಕಬಳ್ಳಾಪುರ: ಮತಾಂತರ ನಿಷೇಧ ಮಸೂದೆ ಬೆನ್ನಲ್ಲೆ ದುಷ್ಕರ್ಮಿಗಳಿಂದ ಚರ್ಚ್ ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...