HomeಅಂಕಣಗಳುKarnataka against SIRರಾಜ್ಯದಲ್ಲಿ 'SIR' ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, 'SIR ವಿರೋಧಿ ಕರ್ನಾಟಕ'...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

- Advertisement -
- Advertisement -

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ ‘ಎಸ್‌ಐಆರ್’ (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10 ಕೋಟಿಗೂ ಹೆಚ್ಚು) ಜೀವಂತ ಮತದಾರರನ್ನು ಪಟ್ಟಿಯಿಂದ ತೆಗೆದುಹಾಕಲು ಆಯೋಗ ಸಂಚು ರೂಪಿಸಿದೆ ಎಂದು ‘ಎಸ್‌ಐಆರ್ ವಿರೋಧಿ ಕರ್ನಾಟಕ’ ಒಕ್ಕೂಟ ಗಂಭೀರ ಆರೋಪ ಮಾಡಿದೆ.

ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡ ಒಕ್ಕೂಟದ ಮುಖಂಡರು, ಚುನಾವಣಾ ಆಯೋಗ ಹಂಚಿಕೊಂಡಿರುವ SIR ಮಾಹಿತಿ ಪ್ರತಿಗಳನ್ನು ಹರಿದು ಆಯೋಗದ ಸರ್ವಾಧಿಕಾರಿ ನಡೆಯನ್ನು ತೀವ್ರವಾಗಿ ಖಂಡಿಸಿದರು.

ಭಾರಿ ಪ್ರಮಾಣದ ಡಿಲೀಷನ್: ಆಯೋಗಕ್ಕೆ 3 ಪ್ರಮುಖ ಪ್ರಶ್ನೆಗಳು

ರಾಜ್ಯದಲ್ಲಿ ಪ್ರತಿ ಐವರು ಮತದಾರರಲ್ಲಿ ಒಬ್ಬರು ಹಕ್ಕು ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಬೆಂಗಳೂರಿನಲ್ಲೇ ಶೇ. 40 ರಷ್ಟು ಮತದಾರರು ಪಟ್ಟಿಯಿಂದ ಹೊರಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗಕ್ಕೆ ಒಕ್ಕೂಟ ಮೂರು ಪ್ರಮುಖ ಪ್ರಶ್ನೆಗಳನ್ನು ಕೇಳಿದೆ.

ಡಿಲೀಟ್ ಮಾಡಲು ಗುರುತಿಸಲಾಗಿರುವ ಮತದಾರರಲ್ಲಿ ಶೇ. 15 ರಷ್ಟು ಜನ ಕೇವಲ ವಲಸೆ ಹೋದವರು (Shifted) ಅಥವಾ ಬಿಎಲ್‌ಒ (BLO) ಭೇಟಿ ನೀಡಿದಾಗ ಸಿಗದವರಾಗಿದ್ದಾರೆ (Absent). ಇವರು ಸತ್ತವರೂ ಅಲ್ಲ, ನಕಲಿ ಮತದಾರರೂ ಅಲ್ಲ. ಹೀಗಿರುವಾಗ ರಾಜ್ಯದ ಒಂದು ಕೋಟಿಗೂ ಹೆಚ್ಚು ಜೀವಂತ ನಾಗರಿಕರನ್ನು ಪಟ್ಟಿಯಿಂದ ತೆಗೆದುಹಾಕುವುದು ಎಷ್ಟು ಸರಿ?

ಇನ್ಯುಮುರೇಷನ್ ಫಾರಂ 100% ವಿತರಣೆಯಾಗಿದೆ ಮತ್ತು ಡಿಜಿಟಲೀಕರಣ ಮುಕ್ತಾಯಗೊಂಡಿದೆ ಎಂದು ಆಯೋಗ ಪ್ರಕಟಿಸಿದೆ. ಆದರೆ ಇಂದಿಗೂ ಖಾಲಿ ಫಾರಂ ಹಿಡಿದು ಪರದಾಡುತ್ತಿರುವ ನೂರಾರು ಜೀವಂತ ಉದಾಹರಣೆಗಳನ್ನು ನಾವು ನೀಡಬಲ್ಲೆವು. ಇದಕ್ಕೆ ಆಯೋಗದ ಉತ್ತರವೇನು?

ಬಿಎಲ್‌ಒ ಆಪ್‌ನಲ್ಲಿರುವ ‘ಲಾಜಿಕಲ್ ಡಿಸ್ಕ್ರಿಪೆನ್ಸಿ ಸಾಫ್ಟ್‌ವೇರ್’ ಬಗ್ಗೆ ಬಿಎಲ್‌ಎ (BLA) ಗಳಿಗೆ ತರಬೇತಿ ನೀಡಿಲ್ಲವೇಕೆ? ಪ್ರಧಾನಿ ಹಾಗೂ ಗೃಹ ಸಚಿವರು ಈ ಪ್ರಕ್ರಿಯೆ ಒಳನುಸುಳುಕೋರರನ್ನು ಪತ್ತೆಹಚ್ಚಲು ನಡೆಯುತ್ತಿದೆ ಎಂದಿದ್ದಾರೆ. ಹಾಗಾದರೆ ಈ ಪ್ರಕ್ರಿಯೆಯ ಮೂಲಕ ಆಯೋಗ ಪತ್ತೆ ಹಚ್ಚಿದ ಅಕ್ರಮ ಬಾಂಗ್ಲಾದೇಶಿ ನುಸುಳುಕೋರರ ಸಂಖ್ಯೆ ಎಷ್ಟು?

ದುರುದ್ದೇಶಪೂರಿತ ಹಾಗೂ ಅವೈಜ್ಞಾನಿಕ ಪ್ರಕ್ರಿಯೆ

ಕೇಂದ್ರದ ಆಡಳಿತಾರೂಢ ಬಿಜೆಪಿಯ ರಾಜಕೀಯ ಅಜೆಂಡಾ ಈಡೇರಿಸಲು ಎಸ್‌ಐಆರ್ ಪ್ರಕ್ರಿಯೆಯನ್ನು ಜನರ ಮೇಲೆ ಹೇರಲಾಗಿದೆ. ಇದು ಮತದಾರರ ಪಟ್ಟಿ ಪರಿಷ್ಕರಣೆಯಲ್ಲ, ಬದಲಿಗೆ ಇಡೀ ರಾಜ್ಯದ ಮತದಾರರ ಹಕ್ಕನ್ನು ಕಸಿದುಕೊಂಡು ವಿಕೃತ ಪಟ್ಟಿ ತಯಾರಿಸುವ ಹುನ್ನಾರ. ಸರಿಯಾದ ತರಬೇತಿ ಇಲ್ಲದೆ, ಒತ್ತಡದಲ್ಲಿ ಕೆಲಸ ಮಾಡುತ್ತಿರುವ ಬಿಎಲ್‌ಒ (BLO) ಗಳನ್ನು ಬಲಿಪಶು ಮಾಡಲಾಗುತ್ತಿದೆ.

ಉದ್ಯೋಗ ಅರಸಿ, ಜೀವನೋಪಾಯಕ್ಕಾಗಿ ಬೇರೆಡೆಗೆ ವಲಸೆ ಹೋದ ಬಡ ಮತ್ತು ಮಧ್ಯಮ ವರ್ಗದವರನ್ನು ‘ಸಿಗದವರು’ ಎಂಬ ಏಕೈಕ ಕಾರಣಕ್ಕೆ ಪಟ್ಟಿಯಿಂದ ತೆಗೆದುಹಾಕುವುದು ಪ್ರಜಾಪ್ರಭುತ್ವ ವಿರೋಧಿ ಮತ್ತು ಸಂವಿಧಾನಕ್ಕೆ ಎಸಗುವ ಅಪಚಾರವಾಗಿದೆ.

ಎಸ್‌ಐಆರ್ ವಿರೋಧಿ ಕರ್ನಾಟಕ’ದ ಪ್ರಮುಖ ಒತ್ತಾಯಗಳು:
  • ಸಮಗ್ರ ಪರಿಶೀಲನೆ: ಇದುವರೆಗೆ ನಡೆದಿರುವ ಎಸ್‌ಐಆರ್ ಪ್ರಕ್ರಿಯೆಯ ಪುನರ್ ಪರಿಶೀಲನೆಯಾಗಬೇಕು ಮತ್ತು ಜನಪರ ಸಂಘಟನೆಗಳಿಗೂ ಅಭಿಪ್ರಾಯ ಮಂಡಿಸಲು ಅವಕಾಶ ನೀಡಬೇಕು.
  • ವಲಸೆ ಹೋದವರಿಗೆ ಪರ್ಯಾಯ ವ್ಯವಸ್ಥೆ: ಬೇರೆಡೆಗೆ ಸ್ಥಳಾಂತರಗೊಂಡವರನ್ನು ಪಟ್ಟಿಯಿಂದ ತೆಗೆಯದೆ, ಅವರು ಇರುವ ಸ್ಥಳದಲ್ಲೇ ‘ಫಾರಂ 8’ ನೀಡಿ ಮತದಾನದ ಹಕ್ಕನ್ನು ವರ್ಗಾಯಿಸಿಕೊಡಬೇಕು.
  • ಸಮಯಾವಕಾಶ ವಿಸ್ತರಣೆ: ಈ ಗಂಭೀರ ದೋಷಗಳನ್ನು ಸರಿಪಡಿಸಲು ಪ್ರಕ್ರಿಯೆಯ ಅವಧಿಯನ್ನು ಕನಿಷ್ಠ ಒಂದು ತಿಂಗಳು ವಿಸ್ತರಿಸಬೇಕು.
  • ಸಾರ್ವಜನಿಕ ಪರಿಶೀಲನಾ ಸಭೆ: ಕರಡು ಪಟ್ಟಿ ಪ್ರಕಟವಾದ ನಂತರ ಆಯೋಗದ ಮಾರ್ಗದರ್ಶನದಂತೆ ಪ್ರತಿಯೊಂದು ಪ್ರದೇಶದಲ್ಲೂ ಸಾರ್ವಜನಿಕ ಪರಿಶೀಲನಾ ಸಭೆ ನಡೆಸಿ, ಸಾಕ್ಷ್ಯಗಳ ಆಧಾರದ ಮೇಲೆ ಹೆಸರುಗಳನ್ನು ಉಳಿಸಿಕೊಳ್ಳಬೇಕು.

ಪ್ರಸ್ತುತ ರಾಜ್ಯದಾದ್ಯಂತ ‘ನಾಗರಿಕ ಮತ ಕಾವಲು ಸಮಿತಿ’ಗಳನ್ನು ರಚಿಸಲಾಗಿದ್ದು, ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕು ಸುರಕ್ಷಿತಗೊಳ್ಳುವವರೆಗೆ ಈ ಹೋರಾಟ ಮುಂದುವರಿಯಲಿದ್ದು, ರಾಜ್ಯದ ಜನರ ತಾಳ್ಮೆಯನ್ನು ಆಯೋಗ ಪರೀಕ್ಷಿಸಬಾರದು. ನಾಗರಿಕ ಸಮಾಜದ ಪ್ರಸ್ತಾಪಗಳನ್ನು ಪುರಸ್ಕರಿಸದೆ, ಅಕ್ರಮ ಡಿಲೀಷನ್ ಕೈಬಿಡದಿದ್ದರೆ ಹಾಗೂ ಪ್ರಕ್ರಿಯೆಯ ಅವಧಿ ವಿಸ್ತರಿಸದಿದ್ದರೆ ರಾಜ್ಯಾದ್ಯಂತ ತೀವ್ರ ಸ್ವರೂಪದ ಸಾರ್ವಜನಿಕ ಪ್ರತಿರೋಧ ಎದುರಿಸಬೇಕಾಗುತ್ತದೆ ಎಂದು SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ ಚುನಾವಣಾ ಆಯೋಗವನ್ನು ಎಚ್ಚರಿಸಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...