Homeಕರ್ನಾಟಕರಾಜ್ಯದ ಸಮ್ಮಿಶ್ರ ಸರ್ಕಾರ ಬೀಳತ್ತೋ? ಕೊಡವಿಕೊಂಡು ಏಳತ್ತೋ?

ರಾಜ್ಯದ ಸಮ್ಮಿಶ್ರ ಸರ್ಕಾರ ಬೀಳತ್ತೋ? ಕೊಡವಿಕೊಂಡು ಏಳತ್ತೋ?

- Advertisement -
- Advertisement -

| ಪಿ.ಕೆ. ಮಲ್ಲನಗೌಡರ್ |

ಪುಟ್ಟಾಪೂರಾ ಬಹುಮತವಿರುವ ಮಮತಾ ಬ್ಯಾನರ್ಜಿಯವರ ಟಿಎಂಸಿ ಸರ್ಕಾರವನ್ನೇ ಉರುಳಿಸಲು ‘ಸ್ಕೆಚ್ಚು’ ರೆಡಿಯಾಗಿದೆ ಎಂದು ಚಿಲ್ಲರೆ ಮಾತಾಡುವ ಪ್ರಧಾನಿ ಇರುವಾಗ, 10-12 ಸಲ ರಾಜ್ಯದ ಸರ್ಕಾರ ಉರುಳಿಸಲು ಯತ್ನಿಸುತ್ತಲೇ ಬಂದ ಅವರ ಭಯಂಕರ ಶಿಷ್ಯರು ಮತ್ತೆ ಈಗ ಸರ್ಕಾರ ತಂತಾನೇ ಬೀಳುತ್ತೆ ಎನ್ನುತ್ತಲೇ ಕಾಂಗ್ರೆಸ್‍ನ ಶಾಸಕರ ಹಿಂದಿಂದೆ ಅಲೆಯುತ್ತಿದ್ದಾರೆ. ಇತ್ತ ತಮ್ಮ ಶಾಸಕರಿಗೆ ಬಿಗಿ ಮಾಡಲಾಗದ ಮಿತ್ರಪಕ್ಷಗಳು ಪ್ರತಿತಂತ್ರದ ಹೆಸರಲ್ಲಿ ಬಿಜೆಪಿಯ ಹಾದಿಯನ್ನೇ ಹಿಡಿದು ಕೊಡವಿ‘ಕೊಂಡು’ ಏಳಲು ಹೊರಟಂತಿದೆ…

ಈ ಸಲ ಹಿಂದಿಗಿಂತ ಬರ ತೀವ್ರವಾಗಿದ್ದರೂ, ಕಳೆದ ವರ್ಷ ಕುಡಿಯುವ ನೀರಿಗೆಂದು ಖರ್ಚು ಮಾಡಲಾಗಿದ್ದ ( ಎಷ್ಟು ಖರ್ಚಾಗಿತ್ತು, ಅದು ಬೇರೆ ಮಾತು) ಹಣದ ಪ್ರಮಾಣದಷ್ಟೇ ಹಣವನ್ನೂ ಈ ವರ್ಷವೂ ಖರ್ಚು ಮಾಡಲಾಗುತ್ತದೆ ಅಂತೆ! ಇದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳು ಮಾಡಿದ ತೀರ್ಮಾನ! ಏಪ್ರಿಲ್ 23ರ ಮತದಾನದ ನಂತರ ಏಪ್ರಿಲ್ 27ರಂದು ಈ ತೀರ್ಮಾನವನ್ನು ಹೊರಡಿಸುತ್ತಾರೆ!

ಮೂರೂ ಪಕ್ಷಗಳ ಜನಪ್ರತಿನಿಧಿಗಳು, ನಾಯಕರು ಬರೀ ಅಧಿಕಾರ, ಗದ್ದುಗೆಯ ಚಿಂತೆಯಲ್ಲಿದ್ದ ಪರಿಣಾಮವಿದು. ನೀತಿ ಸಂಹಿತೆ ಮಣ್ಣುಮಸಿ ಹಾಳಾಗಲಿ, ಕುಡಿಯುವ ನೀರಿಗೆ ಅದ್ಯಾವುದೂ ಅನ್ವಯ ಆಗಲ್ಲ, ಆಗಬಾರದು ಅಲ್ಲವೇ? ಆದರೆ ನಮ್ಮ ಮೂರೂ ಪಕ್ಷಗಳಿಗೆ ಅಧಿಕಾರದ್ದೇ ಚಿಂತೆ ಆದ್ದರಿಂದ ಇಲ್ಲಿ ಅಧಿಕಾರಿಗಳೇ ಪರಮ ಅಧಿಕಾರ ಚಲಾಯಿಸುತ್ತಿದ್ದಾರೆ.

ಅಧಿಕೃತ ಅಂಕಿಅಂಶದ ಪ್ರಕಾರವೇ ಈಗ ರಾಜ್ಯದ 2,424 ಗ್ರಾಮಗಳಲ್ಲಿ ನೀರಿಗೆ ತತ್ವಾರವಿದೆ. ಯಾವೊಬ್ಬ ರಾಜಕೀಯ ನಾಯಕನೂ ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಬಿಜೆಪಿಗೆ ಹೇಗಾದರೂ ಮಾಡಿ ಅಧಿಕಾರವನ್ನು ಕೊಂಡುಕೊಳ್ಳುವ ಕನಸು… ಅದು ಮತ್ತೆ ಮತ್ತೆ ವಿಫಲವಾಗಿದ್ದು ಗೊತ್ತಿದ್ದೂ, ಭಯ ಬಿದ್ದು ಸರ್ಕಾರ ಉಳಿಸಿ ‘ಕೊಳ್ಳಲು’ ಮೈತ್ರಿ ಪಕ್ಷಗಳ ಸೆಣಸು..

ಬೀಳಿಸಲ್ವಂತೆ, ಬೀಳುತ್ತಂತೆ!
ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಸರ್ಕಾರ ತಾನಾಗೇ ಬೀಳಲಿದೆ ಎನ್ನುತ್ತಿದ್ದ ಬಿಜೆಪಿ ನಾಯಕರು ಫಲಿತಾಂಶ ಬರುವ ಮೊದಲೇ ‘ಸಕ್ರಿಯ’ರಾಗಿರುವ ಸೂಚನೆಗಳಿಗೆ ಸಾಕ್ಷಿಯಾಗಿ ಗೋಕಾಕಿನ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ನಿಂತಿದ್ದಾರೆ. ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರುವ ಮೊದಲೇ ಉರುಳಿಸುವ ಆಟಕ್ಕೆ ಇಳಿದ ಬಿಜೆಪಿಗೆ ಕಳೆದ ಅಗಸ್ಟ್‍ನಲ್ಲಿ ಒಬ್ಬ ‘ಪ್ರಬಲ’ ಆಟಗಾರ ಸಿಕ್ಕ. ಮೈತ್ರಿ ಸರ್ಕಾರದಲ್ಲಿ ಪೌರಾಡಳಿತ ಸಚಿವರಾಗಿದ್ದ ರಮೇಶ ಜಾರಕಿಹೊಳಿನೇ ಈ ಚಂಚಲಚಿತ್ತ ಪ್ಲೇಯರ್. ಬೆಳಗಾವಿ ಪಿಎಲ್‍ಡಿ ಬ್ಯಾಂಕ್ ಚುನಾವಣೆ ವಿಚಾರದಲ್ಲಿ ಈ ಕುರಿತು ಕೊಂಯ್ ಕೊಂಯ್ ಅಂದ ರಮೇಶ್‍ರನ್ನು ಬಿಜೆಪಿ ಬುಟ್ಟಿಗೆ ಹಾಕಿಕೊಂಡಿತು-ಡಿಸಿಎಂ ಮಾಡ್ತೀವಿ ಅಂತಾ!

ಈಗಲೂ ಬೀಳಿಸುವ, ಉಳಿಸಿಕೊಳ್ಳುವ ಅಥವಾ ಕೊಡವಿಕೊಂಡು ಏಳುವ- ಮೂರೂ ಯತ್ನಗಳ ಕೇಂದ್ರಬಿಂದು ಈ ಹುಂಬಾತಿಹುಂಬ ರಮೇಶ ಜಾರಕಿಹೊಳಿ. ಎರಡನೇ ಹಂತದ ಮತದಾನದ ದಿನ (ಏ. 23) ಗೋಕಾಕಿನಲ್ಲಿ ಪ್ರತ್ಯಕ್ಷವಾದ ಈ ಮಹಾಶಯ, ರಾಜಿನಾಮೆ ಕೊಡ್ತೇನೆ, ಒಬ್ಬನೇ ಅಲ್ಲ ನನ್ ಜೊತೆ ಹಲವರಿದ್ದಾರೆ ಎಂದರು. ಅಲ್ಲಿವರೆಗೂ ಬೆಳಗಾವಿ-ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡದ ಈ ಶಾಸಕ, ಮತದಾನಕ್ಕೆ ಮೊದಲೇ ಏಪ್ರಿಲ್ 17ರಂದು ಗೋಕಾಕದ ತಮ್ಮ ನಿವಾಸದಲ್ಲಿ ಅಲ್ಲಿನ ಎಲ್ಲ ಪುರಸಭೆ ಸದಸ್ಯರನ್ನು ಕರೆದು ತಾನು ಕಾಂಗ್ರೆಸ್ ಪರ ಪ್ರಚಾರ ಮಾಡಲ್ಲ ಎನ್ನುತ್ತಾರೆ! (ಎಲ್ಲ ಪುರಸಭೆ ಸದಸ್ಯರು! ಹೇಗೆ ಗೊತ್ತಾ? ಗೋಕಾಕಿನ ಪುರಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕ್ಯಾಂಡಿಡೇಟೇ ಇರಲ್ಲ! ಗೆದ್ದವರೆಲ್ಲರೂ ಜಾರಕಿಹೊಳಿ!)

ಉಲ್ಟಾ ಹೊಡೆದರೇ ‘ಸಹಚರರು’?
ಏ. 23ರಂದು ಈತ ಬಾಂಬ್ ಸ್ಫೋಟಿಸಿದ ನಂತರ ಅವರ ಸಹೋದರ ಸಚಿವ ಸತೀಶ್ ಜಾರಕಿಹೊಳಿ ಇದನ್ನೆಲ್ಲ ಹುಚ್ಚಾಟ ಎಂದರು. ಆಗ ತಮ್ಮ ಸತೀಶ್ ಮೇಲೇ ತಿರುಗಿಬಿದ್ದರು. ಬೆಂಗಳೂರಿಗೆ ಹೋಗಿ, ನನ್ನ ಜೊತೆ ಹಲವರ ರಾಜಿನಾಮೆ ಕೊಡಿಸಿ, ನನ್ನ ಶಕ್ತಿ ತೋರಿಸ್ತೀನಿ ಎಂದರು.

ಆದರೆ ರಮೇಶ್ ನಂಬಿದ್ದ ಕಾಂಗ್ರೆಸ್ ಶಾಸಕರಾರು ಅವರ ಜತೆ ಇರಲೇ ಇಲ್ಲ! ಅಥಣಿ ಶಾಸಕ ಮಹೇಶ ಕುಮಟಳ್ಳಿ, ಕಾಗವಾಡ ಶಾಸಕ ಶ್ರೀಮಂತ್ ಪಾಟೀಲ್, ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ್, ಹೊಸಪೇಟೆ ಶಾಸಕ ಆನಂದಸಿಂಗ್, ಕಂಪ್ಲಿ ಶಾಸಕ ಗಣೇಶ- ಈ ಯಾರೂ ರಮೇಶನ ಉತ್ಸಾಹಕ್ಕೆ ಸ್ಪಂದಿಸಲೇ ಇಲ್ಲ…

ಸಿದ್ದು ಆಸೆ, ಕುಮಾರ್ ಪ್ರತಿತಂತ್ರ!
ಈ ಅತಂತ್ರ ಸ್ಥಿತಿ ಬಳಸಿಕೊಂಡು ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲು ಯತ್ನಿಸುತ್ತಿದ್ದಾರೆ ಎಂಬ ಸುದ್ದಿಯೂ ಹರಡಿತು. ಇದಕ್ಕೆ ಪೂರಕ ಎಂಬಂತೆ ಬೆಂಗಳೂರು ಶಾಸಕರಾದ ಎಸ್‍ಟಿ ಸೋಮಶೇಖರ್, ಭೈರತಿ ಸೋಮಶೇಖರ್, ಮುನಿರತ್ನರು ಆಗಾಗ ಹಲವು ಶಾಸಕರ ಸಭೆ ಸೇರಿಸುತ್ತಿದ್ದಾರೆ. ಅವರ ನಾಯಕ ಸಿದ್ದರಾಮಯ್ಯ ಹೊರತು ಇನ್ನಾರೂ ಅಲ್ಲ!

ಈ ನಡುವೆ ಸರ್ಕಾರ ಉಳಿಸಿಕೊಳ್ಳಲು ಕುಮಾರಸ್ವಾಮಿ ಒಂದು ತಂತ್ರ-ಕುತಂತ್ರ ಮಾಡಿದ್ದಾರಂತೆ. ಬಿಜೆಪಿ ಸೇರಬಹುದಾದ ಶಾಸಕರ ಹಗರಣಗಳ, ಲೋಪಗಳ ವಿವರಗಳನ್ನೆಲ್ಲ ಪಡೆದಿರುವ ಅವರು, ತಮ್ಮ ಆಟ ಶುರು ಮಾಡಿದ್ದಾರಂತೆ!
ಭೀಕರ ಬರದ ತೀವ್ರ ಪರಿಣಾಮ ಗೋಚರಿಸುವುದು ಮೇ ತಿಂಗಳಲ್ಲೇ..ಈಗಲೇ ನೀರಿನ ದಾಹ… ಜನಪ್ರತಿನಿಧಿಗಳಿಗೆ ಮಾತ್ರ ಅಧಿಕಾರದ ದಾಹ!

ಬೀಳಿಸುವುದರ ಹಿಂದಿದೆಯಾ ಸಿದ್ದು ಗುದ್ದು?
ಯಾಕೆ ಈ ಪ್ರಶ್ನೆ ಎಂದರೆ, ರಮೇಶ ಜಾರಕಿಹೊಳಿ ಬಹಿರಂಗವಾಗಿ ಬಿಜೆಪಿ ಸೇರುತ್ತೇನೆ ಎಂದಿದ್ದು ರಾಜ್ಯದ ಎರಡನೇ ಹಂತದ ಮತದಾನ ನಡೆದ ದಿನ ಏ. 23ರಂದು. ಆದರೆ ಅದಕ್ಕೂ ಮೊದಲಾಗಲೇ ಅವರು ಗೋಕಾಕ್ ಪುರಸಭೆಯ ಸದಸ್ಯರನ್ನು ಸೇರಿಸಿ ಮಾತಾಡಿದ್ದನ್ನು ಮುಖ್ಯ ವರದಿಯಲ್ಲಿ ಬರೆಯಲಾಗಿದೆ.

ಇಲ್ಲಿ ಸಿದ್ದರಾಮಯ್ಯರ ಆಟ ಏನೂ ಇಲ್ಲವಾ? ಅವರು ಮತ್ತು ಅವರ ಅಭಿಮಾನಿ ಪ್ರಗತಿಪರರು ಇಲ್ಲವೆನ್ನಬಹುದು… ಆದರೆ ಸಿದ್ದರಾಮಯ್ಯ ಎಷ್ಟೇ ಪ್ರಗತಿಪರ ಮನಸ್ಸು ಹೊಂದಿದ್ದರೂ, ಅವರೊಬ್ಬ ವೃತ್ತಿ ರಾಜಕಾರಣಿ.

ಈ ನಿಟ್ಟಿನಲ್ಲಿ ಕೆದಕುತ್ತ ಹೋದರೆ, ಈ ಚುನಾವಣೆ ಹೊತ್ತಲ್ಲಿ ರಮೇಶ್ ಜಾರಕಿಹೊಳಿಗೂ ಮೊದಲೇ ಸರ್ಕಾರ ‘ಬೀಳುವ, ಏಳುವ’ ಮಾತಾಡಿದ್ದೇ ಅವರು. ಚುನಾವಣಾ ಸಭೆಯೊಂದರಲ್ಲಿ ಸರ್ಕಾರ ಬೀಳುತ್ತೆ ಎಂದು ಸಿಗ್ನಲ್ ಕೊಟ್ಟ ಅವರು, ನಂತರ ಪತ್ರಕರ್ತರ ಮುಂದೆ, ಸರ್ಕಾರ ಬೀಳುತ್ತೆ ಎಂದಿಲ್ಲ, ಸರ್ಕಾರ ಬೀಳಿಸಲು ಬಿಜೆಪಿ ಯತ್ನ ಮಾಡುತ್ತಿದೆ ಎಂದೆ ಅಷ್ಟೇ ಎಂದು ಸಬೂಬು ಹೇಳಿದರು-ಅವತ್ತು ಏಪ್ರಿಲ್ 15, ರಮೇಶ್ ಜಾರಕಿಹೊಳಿ ಅಸಮಾಧಾನ ಹಾಕುವ ಮೊದಲು, ಎರಡನೇ ಹಂತದ ಮತದಾನ ಮುಗಿಯುವ ಮೊದಲು!

ಅಂದರೆ, ಒಟ್ಟಲ್ಲಿ, ಸಿದ್ದರಾಮಯ್ಯರಿಗೆ ಈ ಸರ್ಕಾರ ಬೇಡವಾಗಿದೆ. ಹಾಗಂತ ಕುಮಾರಸ್ವಾಮಿ ಮತ್ತು ದೇವೇಗೌಡರಿಗೂ ಮನಸ್ಸಿನಾಳದಲ್ಲಿ ಗೊತ್ತಿದೆ! ಹಾಗಾದರೆ ಸಿದ್ದರಾಮಯ್ಯ ಯೋಜನೆ ಏನು ಇರಬಹುದು?

ನಮಗೆ ಸಿಕ್ಕ ನಂಬಲರ್ಹ ಮಾಹಿತಿಗಳು ಮತ್ತು ರಾಜಕೀಯ ವಿಶ್ಲೇಷಕರ ಮಾತಿನ ಪ್ರಕಾರ, ಲೋಕಸಭಾ ಚುನಾವಣೆ ನಂತರ ವಿಧಾನಸಭೆಗೆ ಈಗಲೇ ಚುನಾವಣೆ ನಡೆದರೆ ಕಾಂಗ್ರೆಸ್ ಮತ್ತು ತಮಗೂ ಒಳಿತು ಎಂದು ಅವರು ಬಯಸಿದ್ದಾರೆ. ಜೆಡಿಎಸ್ ತೊರೆದು ಈಗಲೇ ಅಸೆಂಬ್ಲಿ ಚುನಾವಣೆಗೆ ಹೋದರೆ, ಗೆಲುವು ಸುಲಭವಷ್ಟೇ ಅಲ್ಲ, ಮೈತ್ರಿ ಹೆಸರಲ್ಲಿ ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್‍ನ್ನು ಜೆಡಿಎಸ್ ನಾಶ ಮಾಡಲಿದೆ ಎಂಬ ಅಭಿಪ್ರಾಯ ಅವರಲ್ಲಿದೆಯಂತೆ. ಇದಕ್ಕೆ ಹಳೆ ಮೈಸೂರು ಭಾಗದ ಕಾಂಗ್ರೆಸ್ ಜನಪ್ರತಿನಿಧಿಗಳ ಬೆಂಬಲವೂ ಇದೆ. ಈಗಾಗಲೇ ಎಂಪಿ ಚುನಾವಣೆಯಲ್ಲೇ ತಮ್ಮ ಬುದ್ಧಿ ತೋರಿಸಿದ ಜೆಡಿಎಸ್ ಎಂಎಲ್‍ಎ, ಜಿಲ್ಲಾ ಪಂಚಾಯತ್ ಸ್ಥಾನಗಳಲ್ಲೂ ವಿಪರೀತ ಪಾಲು ಕೇಳಿ ನಮ್ಮನ್ನು ನಾಶ ಮಾಡಲಿದೆ ಎಂಬುದು ಹಳೆ ಮೈಸೂರಿನ ಕಾಂಗ್ರೆಸ್‍ನ ನಿಷ್ಠಾವಂತ ಮತ್ತು ಸಿದ್ದು ಅಭಿಮಾನಿಗಳ ಅಭಿಪ್ರಾಯ.

ಅದನ್ನೇ ಆಧಾರವಾಗಿ ಇಟ್ಟಕೊಂಡಿರುವ ಸಿದ್ದರಾಮಯ್ಯ, ಮೈಸೂರು ಜೊತೆಗೆ ಉತ್ತರ ಕರ್ನಾಟಕದಲ್ಲಿ ತಮ್ಮ ಮತ್ತು ಕಾಂಗ್ರೆಸ್ ನೆಲೆಯನ್ನು ಇನ್ನಷ್ಟು ವಿಸ್ತರಿಸಲು ಯತ್ನಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ಉತ್ತರ ಕರ್ನಾಟಕದ ಬಾದಾಮಿಯ ಶಾಸಕರೂ ಆಗಿರುವ ಅವರು, ಈ ಸಲದ ಚುನಾವಣೆಯಲ್ಲಿ ಬಾಗಲಕೋಟೆ, ಕೊಪ್ಪಳಗಳಲ್ಲಿ ಕಾಂಗ್ರೆsಸ್ ಗೆಲ್ಲಲು ಬೇಕಾದ ಎಲ್ಲ ಪ್ರಾಮಾಣಿಕ ಯತ್ನ ಮಾಡಿದ್ದಾರೆ.

ಬೆಂಗಳೂರಲ್ಲಿ ಕಾಂಗ್ರೆಸ್‍ಗಿಂತ ಬಿಜೆಪಿಗೆ ಹೆಚ್ಚು ಬೆಂಬಲ ಎನ್ನುವುದನ್ನು ಅರಿತಿರುವ ಸಿದ್ದರಾಮಯ್ಯ, ಮೈಸೂರು, ಅದಕ್ಕೂ ಮುಖ್ಯವಾಗಿ ಉತ್ತರ ಕರ್ನಾಟಕವನ್ನು ಬೇಸ್ ಮಾಡಿಕೊಂಡು ಹೊಸ ರಾಜಕಾರಣ ಶುರು ಮಾಡಿರಬಹುದೇ? ಸದ್ಯ ಕರ್ನಾಟಕ ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯ ಬಿಟ್ಟರೆ ಬೇರೆ ಯಾವುದೇ ಮಾಸ್ ಲೀಡರ್ ಇಲ್ಲ. ಉತ್ತರ ಕರ್ನಾಟಕದ ಬಹುಪಾಲು ನಾಯಕರು ಸಿದ್ದು ಪರವಾಗಿಯೇ ಇದ್ದಾರೆ…
ಮತ್ತೆ ಚುನಾವಣೆಗೆ ತಯಾರಾಗಿ ಅಂತಿದ್ದಾರೆಯೇ ಸಿದ್ದರಾಮಯ್ಯ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾ: ತೈಲ ಉದ್ಯಮ ವಿದೇಶಿ ಹೂಡಿಕೆಗೆ ತೆರೆಯಲು, ಅಮೆರಿಕದೊಂದಿಗಿನ ಸಂಬಂಧ ಹೆಚ್ಚಿಸಲು ಕರೆ ನೀಡಿದ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್

ಕ್ಯಾರಕಾಸ್: ವೆನೆಜುವೆಲಾದ ಕಚ್ಚಾ ತೈಲ ಮಾರಾಟದ ನಿಯಂತ್ರಣವನ್ನು ವಶಪಡಿಸಿಕೊಳ್ಳುವುದಾಗಿ ಅಮೆರಿಕಾ ಅಧ್ಯಕ್ಷ ಟ್ರಂಪ್ ಪ್ರತಿಜ್ಞೆ ಮಾಡಿದ ನಂತರ, ವೆನೆಜುವೆಲಾದ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಗುರುವಾರ ತಮ್ಮ ಮೊದಲ ಒಕ್ಕೂಟದ ಸಂದೇಶವನ್ನು ಬಳಸಿಕೊಂಡು...

ನ್ಯಾ. ಯಶವಂತ್ ವರ್ಮಾಗೆ ಹಿನ್ನಡೆ; ಭ್ರಷ್ಟಾಚಾರ ಆರೋಪ ತನಿಖೆಗೆ ಸಂಸದೀಯ ಸಮಿತಿ ರಚನೆ ವಿರುದ್ಧದ ಅರ್ಜಿ ತಿರಸ್ಕರಿಸಿದ ಸುಪ್ರೀಂ 

ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪಗಳ ತನಿಖೆಗಾಗಿ ನ್ಯಾಯಾಧೀಶರ (ವಿಚಾರಣಾ) ಕಾಯ್ದೆಯಡಿ ಮೂವರು ಸದಸ್ಯರ ಸಮಿತಿಯನ್ನು ರಚಿಸುವ ಲೋಕಸಭಾ ಸ್ಪೀಕರ್ ಅವರ ನಿರ್ಧಾರವನ್ನು ರದ್ದುಗೊಳಿಸುವಂತೆ ಕೋರಿ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ...

1962ರ ಯುದ್ಧದಲ್ಲಿ ಸೈನ್ಯಕ್ಕೆ 600 ಕೆಜಿ ಚಿನ್ನ ದಾನ ಮಾಡಿದ್ದ ದರ್ಭಂಗಾದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ ನಿಧನ

ದರ್ಭಾಂಗ ರಾಜಮನೆತನದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ 2025 ಜನವರಿ 12 ರಂದು ನಿಧನರಾಗಿದ್ದಾರೆ.  ಅನಾರೋಗ್ಯದಿಂದ ಬಳಲುತ್ತಿದ್ದ ಮಹಾರಾಣಿ ಕಾಮಸುಂದರಿ ಅವರು, ಬಿಹಾರದ ದರ್ಭಾಂಗದಲ್ಲಿರುವ ತಮ್ಮ ಐತಿಹಾಸಿಕ ನಿವಾಸ 'ಕಲ್ಯಾಣಿ'ಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದೊಂದಿಗೆ...

ವಿಧಾನಸಭೆ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ

2027 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸೇರಿದಂತೆ ದೇಶಾದ್ಯಂತ ಎಲ್ಲಾ ಚುನಾವಣೆಗಳಲ್ಲಿ ತಮ್ಮ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ. ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)...

ಐ-ಪ್ಯಾಕ್ ದಾಳಿ | ಇಡಿ ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ತಡೆ : ಮಮತಾ ಬ್ಯಾನರ್ಜಿ, ಪ.ಬಂಗಾಳ ಸರ್ಕಾರಕ್ಕೆ ನೋಟಿಸ್

ಐ-ಪ್ಯಾಕ್ ಕಚೇರಿ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಇಡಿ ಅಧಿಕಾರಿಗಳ ವಿರುದ್ದ ಕೋಲ್ಕತ್ತಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ಗುರುವಾರ (ಜ.15) ತಡೆ ನೀಡಿದೆ. ಇದರಿಂದ...

ಕಾಶ್ಮೀರ: ಭಯೋತ್ಪಾದನಾ ಪ್ರಕರಣದಲ್ಲಿ ಆಸಿಯಾ ಅಂದ್ರಾಬಿ ಮತ್ತು ಅವರ ಇಬ್ಬರು ಸಹಚರರು ದೋಷಿಗಳು ಎಂದು ತೀರ್ಪು ನೀಡಿದ ದೆಹಲಿ ನ್ಯಾಯಾಲಯ 

ದೆಹಲಿಯ ಎನ್ಐಎ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಬುಧವಾರ ನಿಷೇಧಿತ ಕಾಶ್ಮೀರಿ ಸಂಘಟನೆ ದುಖ್ತರನ್-ಎ-ಮಿಲ್ಲತ್ (ಡಿಇಎಂ) ಮುಖ್ಯಸ್ಥೆ ಆಸಿಯಾ ಅಂದ್ರಾಬಿ ಮತ್ತು ಆಕೆಯ ಇಬ್ಬರು ಸಹಚರರಾದ ಸೋಫಿ ಫೆಹ್ಮಿದಾ...

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ: ಉದ್ಧವ್ ಠಾಕ್ರೆ ಆರೋಪ

ಮಹಾರಾಷ್ಟ್ರದ ನಾಗರಿಕ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಗುರುವಾರ ಆರೋಪಿಸಿದ್ದು, ಇದು ಪ್ರಜಾಪ್ರಭುತ್ವವನ್ನು ಕೊಲೆ ಮಾಡುವ ಪ್ರಯತ್ನ ಎಂದು ಹೇಳಿದ್ದಾರೆ. ನಗರಸಭೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂಬ...

2025ರಲ್ಲಿ ಭಾರತದಲ್ಲಿ 1,318 ದ್ವೇಷ ಭಾಷಣ ಪ್ರಕರಣಗಳು ವರದಿಯಾಗಿದ್ದು, ಅವುಗಳಲ್ಲಿ ಶೇ. 98 ಮುಸ್ಲಿಮರನ್ನು ಗುರಿಯಾಗಿಸಿಕೊಂಡಿವೆ; ವರದಿ

2025ರಲ್ಲಿ ಭಾರತವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಧಾರ್ಮಿಕ ಅಲ್ಪಸಂಖ್ಯಾತರನ್ನು, ವಿಶೇಷವಾಗಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡ ಕನಿಷ್ಠ 1,318 ದ್ವೇಷ ಭಾಷಣ ಘಟನೆಗಳಿಗೆ ಸಾಕ್ಷಿಯಾಗಿದೆ. ದಿನಕ್ಕೆ ಸರಾಸರಿ ನಾಲ್ಕು ದ್ವೇಷ ಭಾಷಣ...

ಪಶ್ಚಿಮ ಬಂಗಾಳ ಎಸ್‌ಐಆರ್ ಪ್ರತಿಭಟನೆ; ಉತ್ತರ ದಿನಾಜ್‌ಪುರದ ಸರ್ಕಾರಿ ಕಚೇರಿ ಧ್ವಂಸ

ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯಲ್ಲಿ ಗುರುವಾರ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಸರ್ಕಾರಿ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಜಾನೆಯಿಂದಲೇ, ಚಾಕುಲಿಯಾದಲ್ಲಿನ ಕಹಾಟಾ...

ಕೇರಳದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್‌ನಲ್ಲಿ ಇಬ್ಬರು ಬಾಲಕಿಯರ ಶವಗಳು ಪತ್ತೆ

ಕೇರಳದ ಕೊಲ್ಲಂನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರ (SAI) ಹಾಸ್ಟೆಲ್‌ನಲ್ಲಿ ತಂಗಿದ್ದ ಇಬ್ಬರು ಹುಡುಗಿಯರು ಗುರುವಾರ ಬೆಳಿಗ್ಗೆ ತಮ್ಮ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಕೋಝಿಕ್ಕೋಡ್ ಜಿಲ್ಲೆಯ ಸಾಂಡ್ರಾ (17) ಮತ್ತು...