Homeಕರ್ನಾಟಕರಾಜ್ಯದ ಸಮ್ಮಿಶ್ರ ಸರ್ಕಾರ ಬೀಳತ್ತೋ? ಕೊಡವಿಕೊಂಡು ಏಳತ್ತೋ?

ರಾಜ್ಯದ ಸಮ್ಮಿಶ್ರ ಸರ್ಕಾರ ಬೀಳತ್ತೋ? ಕೊಡವಿಕೊಂಡು ಏಳತ್ತೋ?

- Advertisement -
- Advertisement -

| ಪಿ.ಕೆ. ಮಲ್ಲನಗೌಡರ್ |

ಪುಟ್ಟಾಪೂರಾ ಬಹುಮತವಿರುವ ಮಮತಾ ಬ್ಯಾನರ್ಜಿಯವರ ಟಿಎಂಸಿ ಸರ್ಕಾರವನ್ನೇ ಉರುಳಿಸಲು ‘ಸ್ಕೆಚ್ಚು’ ರೆಡಿಯಾಗಿದೆ ಎಂದು ಚಿಲ್ಲರೆ ಮಾತಾಡುವ ಪ್ರಧಾನಿ ಇರುವಾಗ, 10-12 ಸಲ ರಾಜ್ಯದ ಸರ್ಕಾರ ಉರುಳಿಸಲು ಯತ್ನಿಸುತ್ತಲೇ ಬಂದ ಅವರ ಭಯಂಕರ ಶಿಷ್ಯರು ಮತ್ತೆ ಈಗ ಸರ್ಕಾರ ತಂತಾನೇ ಬೀಳುತ್ತೆ ಎನ್ನುತ್ತಲೇ ಕಾಂಗ್ರೆಸ್‍ನ ಶಾಸಕರ ಹಿಂದಿಂದೆ ಅಲೆಯುತ್ತಿದ್ದಾರೆ. ಇತ್ತ ತಮ್ಮ ಶಾಸಕರಿಗೆ ಬಿಗಿ ಮಾಡಲಾಗದ ಮಿತ್ರಪಕ್ಷಗಳು ಪ್ರತಿತಂತ್ರದ ಹೆಸರಲ್ಲಿ ಬಿಜೆಪಿಯ ಹಾದಿಯನ್ನೇ ಹಿಡಿದು ಕೊಡವಿ‘ಕೊಂಡು’ ಏಳಲು ಹೊರಟಂತಿದೆ…

ಈ ಸಲ ಹಿಂದಿಗಿಂತ ಬರ ತೀವ್ರವಾಗಿದ್ದರೂ, ಕಳೆದ ವರ್ಷ ಕುಡಿಯುವ ನೀರಿಗೆಂದು ಖರ್ಚು ಮಾಡಲಾಗಿದ್ದ ( ಎಷ್ಟು ಖರ್ಚಾಗಿತ್ತು, ಅದು ಬೇರೆ ಮಾತು) ಹಣದ ಪ್ರಮಾಣದಷ್ಟೇ ಹಣವನ್ನೂ ಈ ವರ್ಷವೂ ಖರ್ಚು ಮಾಡಲಾಗುತ್ತದೆ ಅಂತೆ! ಇದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳು ಮಾಡಿದ ತೀರ್ಮಾನ! ಏಪ್ರಿಲ್ 23ರ ಮತದಾನದ ನಂತರ ಏಪ್ರಿಲ್ 27ರಂದು ಈ ತೀರ್ಮಾನವನ್ನು ಹೊರಡಿಸುತ್ತಾರೆ!

ಮೂರೂ ಪಕ್ಷಗಳ ಜನಪ್ರತಿನಿಧಿಗಳು, ನಾಯಕರು ಬರೀ ಅಧಿಕಾರ, ಗದ್ದುಗೆಯ ಚಿಂತೆಯಲ್ಲಿದ್ದ ಪರಿಣಾಮವಿದು. ನೀತಿ ಸಂಹಿತೆ ಮಣ್ಣುಮಸಿ ಹಾಳಾಗಲಿ, ಕುಡಿಯುವ ನೀರಿಗೆ ಅದ್ಯಾವುದೂ ಅನ್ವಯ ಆಗಲ್ಲ, ಆಗಬಾರದು ಅಲ್ಲವೇ? ಆದರೆ ನಮ್ಮ ಮೂರೂ ಪಕ್ಷಗಳಿಗೆ ಅಧಿಕಾರದ್ದೇ ಚಿಂತೆ ಆದ್ದರಿಂದ ಇಲ್ಲಿ ಅಧಿಕಾರಿಗಳೇ ಪರಮ ಅಧಿಕಾರ ಚಲಾಯಿಸುತ್ತಿದ್ದಾರೆ.

ಅಧಿಕೃತ ಅಂಕಿಅಂಶದ ಪ್ರಕಾರವೇ ಈಗ ರಾಜ್ಯದ 2,424 ಗ್ರಾಮಗಳಲ್ಲಿ ನೀರಿಗೆ ತತ್ವಾರವಿದೆ. ಯಾವೊಬ್ಬ ರಾಜಕೀಯ ನಾಯಕನೂ ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಬಿಜೆಪಿಗೆ ಹೇಗಾದರೂ ಮಾಡಿ ಅಧಿಕಾರವನ್ನು ಕೊಂಡುಕೊಳ್ಳುವ ಕನಸು… ಅದು ಮತ್ತೆ ಮತ್ತೆ ವಿಫಲವಾಗಿದ್ದು ಗೊತ್ತಿದ್ದೂ, ಭಯ ಬಿದ್ದು ಸರ್ಕಾರ ಉಳಿಸಿ ‘ಕೊಳ್ಳಲು’ ಮೈತ್ರಿ ಪಕ್ಷಗಳ ಸೆಣಸು..

ಬೀಳಿಸಲ್ವಂತೆ, ಬೀಳುತ್ತಂತೆ!
ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಸರ್ಕಾರ ತಾನಾಗೇ ಬೀಳಲಿದೆ ಎನ್ನುತ್ತಿದ್ದ ಬಿಜೆಪಿ ನಾಯಕರು ಫಲಿತಾಂಶ ಬರುವ ಮೊದಲೇ ‘ಸಕ್ರಿಯ’ರಾಗಿರುವ ಸೂಚನೆಗಳಿಗೆ ಸಾಕ್ಷಿಯಾಗಿ ಗೋಕಾಕಿನ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ನಿಂತಿದ್ದಾರೆ. ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರುವ ಮೊದಲೇ ಉರುಳಿಸುವ ಆಟಕ್ಕೆ ಇಳಿದ ಬಿಜೆಪಿಗೆ ಕಳೆದ ಅಗಸ್ಟ್‍ನಲ್ಲಿ ಒಬ್ಬ ‘ಪ್ರಬಲ’ ಆಟಗಾರ ಸಿಕ್ಕ. ಮೈತ್ರಿ ಸರ್ಕಾರದಲ್ಲಿ ಪೌರಾಡಳಿತ ಸಚಿವರಾಗಿದ್ದ ರಮೇಶ ಜಾರಕಿಹೊಳಿನೇ ಈ ಚಂಚಲಚಿತ್ತ ಪ್ಲೇಯರ್. ಬೆಳಗಾವಿ ಪಿಎಲ್‍ಡಿ ಬ್ಯಾಂಕ್ ಚುನಾವಣೆ ವಿಚಾರದಲ್ಲಿ ಈ ಕುರಿತು ಕೊಂಯ್ ಕೊಂಯ್ ಅಂದ ರಮೇಶ್‍ರನ್ನು ಬಿಜೆಪಿ ಬುಟ್ಟಿಗೆ ಹಾಕಿಕೊಂಡಿತು-ಡಿಸಿಎಂ ಮಾಡ್ತೀವಿ ಅಂತಾ!

ಈಗಲೂ ಬೀಳಿಸುವ, ಉಳಿಸಿಕೊಳ್ಳುವ ಅಥವಾ ಕೊಡವಿಕೊಂಡು ಏಳುವ- ಮೂರೂ ಯತ್ನಗಳ ಕೇಂದ್ರಬಿಂದು ಈ ಹುಂಬಾತಿಹುಂಬ ರಮೇಶ ಜಾರಕಿಹೊಳಿ. ಎರಡನೇ ಹಂತದ ಮತದಾನದ ದಿನ (ಏ. 23) ಗೋಕಾಕಿನಲ್ಲಿ ಪ್ರತ್ಯಕ್ಷವಾದ ಈ ಮಹಾಶಯ, ರಾಜಿನಾಮೆ ಕೊಡ್ತೇನೆ, ಒಬ್ಬನೇ ಅಲ್ಲ ನನ್ ಜೊತೆ ಹಲವರಿದ್ದಾರೆ ಎಂದರು. ಅಲ್ಲಿವರೆಗೂ ಬೆಳಗಾವಿ-ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡದ ಈ ಶಾಸಕ, ಮತದಾನಕ್ಕೆ ಮೊದಲೇ ಏಪ್ರಿಲ್ 17ರಂದು ಗೋಕಾಕದ ತಮ್ಮ ನಿವಾಸದಲ್ಲಿ ಅಲ್ಲಿನ ಎಲ್ಲ ಪುರಸಭೆ ಸದಸ್ಯರನ್ನು ಕರೆದು ತಾನು ಕಾಂಗ್ರೆಸ್ ಪರ ಪ್ರಚಾರ ಮಾಡಲ್ಲ ಎನ್ನುತ್ತಾರೆ! (ಎಲ್ಲ ಪುರಸಭೆ ಸದಸ್ಯರು! ಹೇಗೆ ಗೊತ್ತಾ? ಗೋಕಾಕಿನ ಪುರಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕ್ಯಾಂಡಿಡೇಟೇ ಇರಲ್ಲ! ಗೆದ್ದವರೆಲ್ಲರೂ ಜಾರಕಿಹೊಳಿ!)

ಉಲ್ಟಾ ಹೊಡೆದರೇ ‘ಸಹಚರರು’?
ಏ. 23ರಂದು ಈತ ಬಾಂಬ್ ಸ್ಫೋಟಿಸಿದ ನಂತರ ಅವರ ಸಹೋದರ ಸಚಿವ ಸತೀಶ್ ಜಾರಕಿಹೊಳಿ ಇದನ್ನೆಲ್ಲ ಹುಚ್ಚಾಟ ಎಂದರು. ಆಗ ತಮ್ಮ ಸತೀಶ್ ಮೇಲೇ ತಿರುಗಿಬಿದ್ದರು. ಬೆಂಗಳೂರಿಗೆ ಹೋಗಿ, ನನ್ನ ಜೊತೆ ಹಲವರ ರಾಜಿನಾಮೆ ಕೊಡಿಸಿ, ನನ್ನ ಶಕ್ತಿ ತೋರಿಸ್ತೀನಿ ಎಂದರು.

ಆದರೆ ರಮೇಶ್ ನಂಬಿದ್ದ ಕಾಂಗ್ರೆಸ್ ಶಾಸಕರಾರು ಅವರ ಜತೆ ಇರಲೇ ಇಲ್ಲ! ಅಥಣಿ ಶಾಸಕ ಮಹೇಶ ಕುಮಟಳ್ಳಿ, ಕಾಗವಾಡ ಶಾಸಕ ಶ್ರೀಮಂತ್ ಪಾಟೀಲ್, ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ್, ಹೊಸಪೇಟೆ ಶಾಸಕ ಆನಂದಸಿಂಗ್, ಕಂಪ್ಲಿ ಶಾಸಕ ಗಣೇಶ- ಈ ಯಾರೂ ರಮೇಶನ ಉತ್ಸಾಹಕ್ಕೆ ಸ್ಪಂದಿಸಲೇ ಇಲ್ಲ…

ಸಿದ್ದು ಆಸೆ, ಕುಮಾರ್ ಪ್ರತಿತಂತ್ರ!
ಈ ಅತಂತ್ರ ಸ್ಥಿತಿ ಬಳಸಿಕೊಂಡು ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲು ಯತ್ನಿಸುತ್ತಿದ್ದಾರೆ ಎಂಬ ಸುದ್ದಿಯೂ ಹರಡಿತು. ಇದಕ್ಕೆ ಪೂರಕ ಎಂಬಂತೆ ಬೆಂಗಳೂರು ಶಾಸಕರಾದ ಎಸ್‍ಟಿ ಸೋಮಶೇಖರ್, ಭೈರತಿ ಸೋಮಶೇಖರ್, ಮುನಿರತ್ನರು ಆಗಾಗ ಹಲವು ಶಾಸಕರ ಸಭೆ ಸೇರಿಸುತ್ತಿದ್ದಾರೆ. ಅವರ ನಾಯಕ ಸಿದ್ದರಾಮಯ್ಯ ಹೊರತು ಇನ್ನಾರೂ ಅಲ್ಲ!

ಈ ನಡುವೆ ಸರ್ಕಾರ ಉಳಿಸಿಕೊಳ್ಳಲು ಕುಮಾರಸ್ವಾಮಿ ಒಂದು ತಂತ್ರ-ಕುತಂತ್ರ ಮಾಡಿದ್ದಾರಂತೆ. ಬಿಜೆಪಿ ಸೇರಬಹುದಾದ ಶಾಸಕರ ಹಗರಣಗಳ, ಲೋಪಗಳ ವಿವರಗಳನ್ನೆಲ್ಲ ಪಡೆದಿರುವ ಅವರು, ತಮ್ಮ ಆಟ ಶುರು ಮಾಡಿದ್ದಾರಂತೆ!
ಭೀಕರ ಬರದ ತೀವ್ರ ಪರಿಣಾಮ ಗೋಚರಿಸುವುದು ಮೇ ತಿಂಗಳಲ್ಲೇ..ಈಗಲೇ ನೀರಿನ ದಾಹ… ಜನಪ್ರತಿನಿಧಿಗಳಿಗೆ ಮಾತ್ರ ಅಧಿಕಾರದ ದಾಹ!

ಬೀಳಿಸುವುದರ ಹಿಂದಿದೆಯಾ ಸಿದ್ದು ಗುದ್ದು?
ಯಾಕೆ ಈ ಪ್ರಶ್ನೆ ಎಂದರೆ, ರಮೇಶ ಜಾರಕಿಹೊಳಿ ಬಹಿರಂಗವಾಗಿ ಬಿಜೆಪಿ ಸೇರುತ್ತೇನೆ ಎಂದಿದ್ದು ರಾಜ್ಯದ ಎರಡನೇ ಹಂತದ ಮತದಾನ ನಡೆದ ದಿನ ಏ. 23ರಂದು. ಆದರೆ ಅದಕ್ಕೂ ಮೊದಲಾಗಲೇ ಅವರು ಗೋಕಾಕ್ ಪುರಸಭೆಯ ಸದಸ್ಯರನ್ನು ಸೇರಿಸಿ ಮಾತಾಡಿದ್ದನ್ನು ಮುಖ್ಯ ವರದಿಯಲ್ಲಿ ಬರೆಯಲಾಗಿದೆ.

ಇಲ್ಲಿ ಸಿದ್ದರಾಮಯ್ಯರ ಆಟ ಏನೂ ಇಲ್ಲವಾ? ಅವರು ಮತ್ತು ಅವರ ಅಭಿಮಾನಿ ಪ್ರಗತಿಪರರು ಇಲ್ಲವೆನ್ನಬಹುದು… ಆದರೆ ಸಿದ್ದರಾಮಯ್ಯ ಎಷ್ಟೇ ಪ್ರಗತಿಪರ ಮನಸ್ಸು ಹೊಂದಿದ್ದರೂ, ಅವರೊಬ್ಬ ವೃತ್ತಿ ರಾಜಕಾರಣಿ.

ಈ ನಿಟ್ಟಿನಲ್ಲಿ ಕೆದಕುತ್ತ ಹೋದರೆ, ಈ ಚುನಾವಣೆ ಹೊತ್ತಲ್ಲಿ ರಮೇಶ್ ಜಾರಕಿಹೊಳಿಗೂ ಮೊದಲೇ ಸರ್ಕಾರ ‘ಬೀಳುವ, ಏಳುವ’ ಮಾತಾಡಿದ್ದೇ ಅವರು. ಚುನಾವಣಾ ಸಭೆಯೊಂದರಲ್ಲಿ ಸರ್ಕಾರ ಬೀಳುತ್ತೆ ಎಂದು ಸಿಗ್ನಲ್ ಕೊಟ್ಟ ಅವರು, ನಂತರ ಪತ್ರಕರ್ತರ ಮುಂದೆ, ಸರ್ಕಾರ ಬೀಳುತ್ತೆ ಎಂದಿಲ್ಲ, ಸರ್ಕಾರ ಬೀಳಿಸಲು ಬಿಜೆಪಿ ಯತ್ನ ಮಾಡುತ್ತಿದೆ ಎಂದೆ ಅಷ್ಟೇ ಎಂದು ಸಬೂಬು ಹೇಳಿದರು-ಅವತ್ತು ಏಪ್ರಿಲ್ 15, ರಮೇಶ್ ಜಾರಕಿಹೊಳಿ ಅಸಮಾಧಾನ ಹಾಕುವ ಮೊದಲು, ಎರಡನೇ ಹಂತದ ಮತದಾನ ಮುಗಿಯುವ ಮೊದಲು!

ಅಂದರೆ, ಒಟ್ಟಲ್ಲಿ, ಸಿದ್ದರಾಮಯ್ಯರಿಗೆ ಈ ಸರ್ಕಾರ ಬೇಡವಾಗಿದೆ. ಹಾಗಂತ ಕುಮಾರಸ್ವಾಮಿ ಮತ್ತು ದೇವೇಗೌಡರಿಗೂ ಮನಸ್ಸಿನಾಳದಲ್ಲಿ ಗೊತ್ತಿದೆ! ಹಾಗಾದರೆ ಸಿದ್ದರಾಮಯ್ಯ ಯೋಜನೆ ಏನು ಇರಬಹುದು?

ನಮಗೆ ಸಿಕ್ಕ ನಂಬಲರ್ಹ ಮಾಹಿತಿಗಳು ಮತ್ತು ರಾಜಕೀಯ ವಿಶ್ಲೇಷಕರ ಮಾತಿನ ಪ್ರಕಾರ, ಲೋಕಸಭಾ ಚುನಾವಣೆ ನಂತರ ವಿಧಾನಸಭೆಗೆ ಈಗಲೇ ಚುನಾವಣೆ ನಡೆದರೆ ಕಾಂಗ್ರೆಸ್ ಮತ್ತು ತಮಗೂ ಒಳಿತು ಎಂದು ಅವರು ಬಯಸಿದ್ದಾರೆ. ಜೆಡಿಎಸ್ ತೊರೆದು ಈಗಲೇ ಅಸೆಂಬ್ಲಿ ಚುನಾವಣೆಗೆ ಹೋದರೆ, ಗೆಲುವು ಸುಲಭವಷ್ಟೇ ಅಲ್ಲ, ಮೈತ್ರಿ ಹೆಸರಲ್ಲಿ ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್‍ನ್ನು ಜೆಡಿಎಸ್ ನಾಶ ಮಾಡಲಿದೆ ಎಂಬ ಅಭಿಪ್ರಾಯ ಅವರಲ್ಲಿದೆಯಂತೆ. ಇದಕ್ಕೆ ಹಳೆ ಮೈಸೂರು ಭಾಗದ ಕಾಂಗ್ರೆಸ್ ಜನಪ್ರತಿನಿಧಿಗಳ ಬೆಂಬಲವೂ ಇದೆ. ಈಗಾಗಲೇ ಎಂಪಿ ಚುನಾವಣೆಯಲ್ಲೇ ತಮ್ಮ ಬುದ್ಧಿ ತೋರಿಸಿದ ಜೆಡಿಎಸ್ ಎಂಎಲ್‍ಎ, ಜಿಲ್ಲಾ ಪಂಚಾಯತ್ ಸ್ಥಾನಗಳಲ್ಲೂ ವಿಪರೀತ ಪಾಲು ಕೇಳಿ ನಮ್ಮನ್ನು ನಾಶ ಮಾಡಲಿದೆ ಎಂಬುದು ಹಳೆ ಮೈಸೂರಿನ ಕಾಂಗ್ರೆಸ್‍ನ ನಿಷ್ಠಾವಂತ ಮತ್ತು ಸಿದ್ದು ಅಭಿಮಾನಿಗಳ ಅಭಿಪ್ರಾಯ.

ಅದನ್ನೇ ಆಧಾರವಾಗಿ ಇಟ್ಟಕೊಂಡಿರುವ ಸಿದ್ದರಾಮಯ್ಯ, ಮೈಸೂರು ಜೊತೆಗೆ ಉತ್ತರ ಕರ್ನಾಟಕದಲ್ಲಿ ತಮ್ಮ ಮತ್ತು ಕಾಂಗ್ರೆಸ್ ನೆಲೆಯನ್ನು ಇನ್ನಷ್ಟು ವಿಸ್ತರಿಸಲು ಯತ್ನಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ಉತ್ತರ ಕರ್ನಾಟಕದ ಬಾದಾಮಿಯ ಶಾಸಕರೂ ಆಗಿರುವ ಅವರು, ಈ ಸಲದ ಚುನಾವಣೆಯಲ್ಲಿ ಬಾಗಲಕೋಟೆ, ಕೊಪ್ಪಳಗಳಲ್ಲಿ ಕಾಂಗ್ರೆsಸ್ ಗೆಲ್ಲಲು ಬೇಕಾದ ಎಲ್ಲ ಪ್ರಾಮಾಣಿಕ ಯತ್ನ ಮಾಡಿದ್ದಾರೆ.

ಬೆಂಗಳೂರಲ್ಲಿ ಕಾಂಗ್ರೆಸ್‍ಗಿಂತ ಬಿಜೆಪಿಗೆ ಹೆಚ್ಚು ಬೆಂಬಲ ಎನ್ನುವುದನ್ನು ಅರಿತಿರುವ ಸಿದ್ದರಾಮಯ್ಯ, ಮೈಸೂರು, ಅದಕ್ಕೂ ಮುಖ್ಯವಾಗಿ ಉತ್ತರ ಕರ್ನಾಟಕವನ್ನು ಬೇಸ್ ಮಾಡಿಕೊಂಡು ಹೊಸ ರಾಜಕಾರಣ ಶುರು ಮಾಡಿರಬಹುದೇ? ಸದ್ಯ ಕರ್ನಾಟಕ ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯ ಬಿಟ್ಟರೆ ಬೇರೆ ಯಾವುದೇ ಮಾಸ್ ಲೀಡರ್ ಇಲ್ಲ. ಉತ್ತರ ಕರ್ನಾಟಕದ ಬಹುಪಾಲು ನಾಯಕರು ಸಿದ್ದು ಪರವಾಗಿಯೇ ಇದ್ದಾರೆ…
ಮತ್ತೆ ಚುನಾವಣೆಗೆ ತಯಾರಾಗಿ ಅಂತಿದ್ದಾರೆಯೇ ಸಿದ್ದರಾಮಯ್ಯ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...