Homeಕರ್ನಾಟಕದೂರದೃಷ್ಟಿಯಿಲ್ಲದ ರಾಜ್ಯ ಬಜೆಟ್‌: ವಿಪಕ್ಷ, ಹೋರಾಟಗಾರರ ಟೀಕೆ...

ದೂರದೃಷ್ಟಿಯಿಲ್ಲದ ರಾಜ್ಯ ಬಜೆಟ್‌: ವಿಪಕ್ಷ, ಹೋರಾಟಗಾರರ ಟೀಕೆ…

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 2020-21ನೇ ಸಾಲಿನ 2,37,893 ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದ್ದಾರೆ. 2020–21ನೇ ಸಾಲಿನಲ್ಲಿ ಒಟ್ಟು ರೂ. 2,33,134 ಕೋಟಿ ಜಮೆಗಳನ್ನು ನಿರೀಕ್ಷಿಸಿ 2,37,893 ಕೋಟಿ ವೆಚ್ಚವನ್ನು ಅಂದಾಜಿಸಲಾಗಿದೆ. ಕೇಂದ್ರದಿಂದ ರಾಜ್ಯಕ್ಕೆ ಅನುದಾನ ಕಡಿತಗೊಂಡಿದೆ ಎಂದು ಮುಖ್ಯಮಂತ್ರಿ ಸದನದಲ್ಲಿ ಹೇಳಿದರು.

ಶಿಕ್ಷಣ ಇಲಾಖೆಗೆ 29,768 ಕೋಟಿ (ಶೇ.11), ನಗರಾಭಿವೃದ್ಧಿ ಇಲಾಖೆಗೆ 27,952 ಕೋಟಿ (ಶೇ.10), ಜಲಸಂಪನ್ಮೂಲ ಇಲಾಖೆಗೆ 21,308 ಕೋಟಿ(ಶೇ.8), ಇಂಧನ ಇಲಾಖೆಗೆ 17,290 ಕೋಟಿ(ಶೇ.7), ಗ್ರಾಮೀಣಾಭಿವೃದ್ಧಿ ಇಲಾಖೆಗೆ, 15.595 ಕೋಟಿ(ಶೇ. 6), ಕಂದಾಯ ಇಲಾಖೆಗೆ 11, 860 ಕೋಟಿ (ಶೇ. 4), ಲೋಕೋಪಯೋಗಿ ಇಲಾಖೆಗೆ 11, 463 ಕೋಟಿ (ಶೇ.4), ಆರೋಗ್ಯ ಇಲಾಖೆಗೆ 10,122 ಕೋಟಿ(ಶೇ. 4), ಸಾರಿಗೆ, ಒಳಾಡಳಿತ ಇಲಾಖೆಗೆ 10,108 ಕೋಟಿ (ಶೇ. 4), ಸಮಾಜ ಕಲ್ಯಾಣ ಇಲಾಖೆಗೆ 9,444 ಕೋಟಿ (ಶೇ.4), ಕೃಷಿ ಮತ್ತು ತೋಟಗಾರಿಕೆ ಇಲಾಖೆಗೆ 7,889 ಕೋಟಿ(ಶೇ.3), ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 4,650 ಕೋಟಿ (ಶೇ.2), ವಸತಿ ಇಲಾಖೆಗೆ 2,971 ಕೋಟಿ (ಶೇ.1), ಆಹಾರ ಇಲಾಖೆಗೆ 2,668 ಕೋಟಿ(ಶೇ.1) ಇತರೆ ಇಲಾಖೆಗೆ 84,023 ಕೋಟಿ (ಶೇ. 31) ಮೀಸಲಿರಿಸಲಾಗಿದೆ.

ಬಜೆಟ್‌ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ “ಯಡಿಯೂರಪ್ಪನವರು ಪ್ರತಿಪಕ್ಷಗಳ ಪ್ರಶ್ನೆಗೆ ಬಜೆಟ್ ಮೂಲಕ ಉತ್ತರ ಕೊಡುತ್ತೇನೆ ಎನ್ನುತ್ತಿದ್ದರು, ಈಗ ಏನು ಮಾಡಿದ್ದಾರೆ. ಕೇವಲ ಹಸಿರು ಶಾಲು ಮಾತ್ರ ಹಾಕಿಕೊಂಡಿದ್ದರೆ ಸಾಲದು, ನಾನು ಕೂಡಾ ವ್ಯವಸಾಯ ಮಾಡುವ ಕುಟುಂಬದಿಂದ ಬಂದವನು. ರೈತರಪರ ಇರುತ್ತೇನೆ ಎನ್ನುತ್ತಿದ್ದ ಏನು ನೀಡಿದ್ದಾರೆ. ಬಜೆಟ್ ಬೆಳವಣಿಗೆ ಆಗಿರುವುದೇ ಕೇವಲ 1.5%. ಇದು ಹಳೆಯ ಬಜೆಟನ್ನು ಸೇರಿಸಿ ಮಾಡಿದ ಬಜೆಟ್” ಎಂದಿದ್ದಾರೆ.

ಹೈದರಾಬಾದ್ ಕರ್ನಾಟಕದ ಹೋರಾಟಗಾರ, ಚಿಂತಕ ರಜಾಕ್ ಉಸ್ತಾದ್ ಅವರು “ಪೆಟ್ರೋಲ್, ಡೀಸೆಲ್, ಹಾಲಿನ ದರ, ಬಸ್ಸಿನ ದರ ಏರಿಸಿ ಮದ್ಯಮ ವರ್ಗದ ಮೇಲೆ ಹೊರೆ ಹಾಕಿದ ಕೇಂದ್ರ ಸರ್ಕಾರದಿಂದ ಅನುದಾನವನ್ನು ಕೇಳಲಾಗದೆ, ಒಂದು ರೀತಿಯಲ್ಲಿ ನಿರಾಶದಾಯಕವಾದ ಹಾಗೂ ದೂರದೃಷ್ಟಿ ಇಲ್ಲದ ಬಜೆಟ್ ಇದಾಗಿದೆ. ಬಿಡಿಬಿಡಿಯಾಗಿ ಬಜೆಟ್ ಮಂಡನೆ ಮಾಡಿದ ಯಾವುದೇ ಅಭಿವೃದ್ಧಿಗೆ ಪೂರಕವಾಗಿಲ್ಲದ ಬಜೆಟ್ ಇದು. ಹೈದರಾಬಾದ್ ಕರ್ನಾಟಕಕ್ಕೆ ಕಲ್ಯಾಣ ಕರ್ನಾಟಕ ಎಂದು ಹೆಸರಷ್ಟೇ ಬದಲಾವಣೆ ಮಾಡಿ ಹೆಚ್ಚಿನ ಅನುದಾನ ಕೊಡದೆ ಈ ಭಾಗಕ್ಕೂ ಕೂಡಾ ಅನ್ಯಾಯ ಮಾಡಿದ್ದಾರೆ. 1500 ಕೋಟಿ ಅನುದಾನ ಮೊದಲಿಂದನೂ ಬರುತ್ತಿದ್ದು, ಈಗಲೂ ಅಷ್ಟೇ ಅನುದಾನ ಇಟ್ಟಿದ್ದಾರೆ. ಈ ಅನುದಾನ 3000 ಕೋಟಿಗೆ ಹೆಚ್ಚು ಮಾಡುವ ನಿರೀಕ್ಷೆ ಇತ್ತು, ಆದರೆ ಅದು ಆಗಲಿಲ್ಲ. ಆದ್ದರಿಂದ ಯಾರಿಗೂ ತೃಪ್ತಿಕರವಾಗಿರದ ಬಜೆಟ್ ಮಂಡನೆ ಮಾಡಿದ್ದಾರೆ” ಎಂದಿದ್ದಾರೆ.

SFI ರಾಜ್ಯ ಕಾರ್ಯದರ್ಶಿ ಕೆ.ವಾಸುದೇವರೆಡ್ಡಿ ಅವರು “ರಾಜ್ಯ ಬಿಜೆಪಿ ಸರ್ಕಾರ ಈ ಬಜೆಟ್ ನಲ್ಲಿ ಶಿಕ್ಷಣಕ್ಕೆ ಕೇವಲ 29,786 (11%) ಕೋಟಿ ರೂಪಾಯಿ ಮಾತ್ರ ನೀಡುವುದರ ಮೂಲಕ ತನ್ನ ಶಿಕ್ಷಣ ವಿರೋಧಿ, ವಿದ್ಯಾರ್ಥಿ ದ್ರೋಹಿ ನೀತಿಯನ್ನು ಮುಂದುವರೆಸಿದೆ. ಕಳೆದ ವರ್ಷದ ಬಜೆಟ್ ಗಿಂತಲೂ ಈ ವರ್ಷದ ಬಜೆಟ್ ನಲ್ಲಿ 0.3% ಹಣವನ್ನು ಶಿಕ್ಷಣ ಕ್ಷೇತ್ರಕ್ಕೆ ಕಡಿತ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ಯಡಿಯೂರಪ್ಪ ಸರ್ಕಾರ ಮತ್ತೆ ಮಠ ಮಾನ್ಯಗಳಿಗೆ, ಜಾತಿವಾರು ಪ್ರತಿಮೆಗಳ ನಿರ್ಮಾಣಕ್ಕಾಗಿ ಸಾವಿರಾರು ಕೋಟಿ ರೂಪಾಯಿ ಹಣವನ್ನು ಮೀಸಲಿಡುವುದರ ಮೂಲಕ ಬಿಜೆಪಿ ಸರ್ಕಾರವೂ ಶಿಕ್ಷಣ ವ್ಯವಸ್ಥೆಯ ಸಮಗ್ರ ಅಭಿವೃದ್ಧಿಯ ಬಗ್ಗೆ ಯಾವುದೇ ದೂರದೃಷ್ಟಿಕೋನ ಮತ್ತು ಅಭಿವೃದ್ಧಿಯ ಕಣ್ಣೋಟ ಇಲ್ಲ ಎಂಬುದು ಈ ಬಜೆಟ್ ನಲ್ಲಿ ಮತ್ತೊಮ್ಮೆ ಸಾಬೀತಾಗಿದೆ” ಎಂದಿದ್ದಾರೆ.

“ರಾಜ್ಯದ ವಿದ್ಯಾರ್ಥಿಗಳು ಉಚಿತ ಲ್ಯಾಪ್‌ಟಾಪ್, ಉಚಿತ ಬಸ್ ಪಾಸ್ , ಹಾಸ್ಟೆಲ್ ವಿದ್ಯಾರ್ಥಿಗಳ ಮಾಸಿಕ ಆಹಾರ ಭತ್ಯೆ ಕನಿಷ್ಠ 3500/-ರೂ ಹೆಚ್ಚಿಸಬೇಕು, ಶಿಕ್ಷಣದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಬಜೆಟ್ ನಲ್ಲಿ 30% ಮೀಸಲಿಡಬೇಕು ಎಂದು ಇಡೀ ರಾಜ್ಯಾದ್ಯಂತ ಹೋರಾಟಗಳನ್ನು ನಡೆಸಿದರೂ ಈ ರಾಜ್ಯ ಸರ್ಕಾರ ಪರಿಗಣಿಸದೆ ಶಿಕ್ಷಣ ಕ್ಷೇತ್ರಕ್ಕೆ ನಿರ್ಲಕ್ಷ್ಯತೆ ತೋರಿದೆ. ಬಿಜೆಪಿ ಸರ್ಕಾರದ ಪ್ರತಿ ಬಾರಿಯೂ ಶಿಕ್ಷಣ ಕ್ಷೇತ್ರಕ್ಕೆ ಹಣ ಕಡಿತ ಮಾಡುವ ಪರಿಪಾಠವನ್ನು ಮುಂದುವರಿಸಿರುವುದರಿಂದ ರಾಜ್ಯದ ವಿದ್ಯಾರ್ಥಿ ಸಮುದಾಯಕ್ಕೆ ದ್ರೋಹ ಬಗೆದಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...