Homeಕರ್ನಾಟಕದೂರದೃಷ್ಟಿಯಿಲ್ಲದ ರಾಜ್ಯ ಬಜೆಟ್‌: ವಿಪಕ್ಷ, ಹೋರಾಟಗಾರರ ಟೀಕೆ...

ದೂರದೃಷ್ಟಿಯಿಲ್ಲದ ರಾಜ್ಯ ಬಜೆಟ್‌: ವಿಪಕ್ಷ, ಹೋರಾಟಗಾರರ ಟೀಕೆ…

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 2020-21ನೇ ಸಾಲಿನ 2,37,893 ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದ್ದಾರೆ. 2020–21ನೇ ಸಾಲಿನಲ್ಲಿ ಒಟ್ಟು ರೂ. 2,33,134 ಕೋಟಿ ಜಮೆಗಳನ್ನು ನಿರೀಕ್ಷಿಸಿ 2,37,893 ಕೋಟಿ ವೆಚ್ಚವನ್ನು ಅಂದಾಜಿಸಲಾಗಿದೆ. ಕೇಂದ್ರದಿಂದ ರಾಜ್ಯಕ್ಕೆ ಅನುದಾನ ಕಡಿತಗೊಂಡಿದೆ ಎಂದು ಮುಖ್ಯಮಂತ್ರಿ ಸದನದಲ್ಲಿ ಹೇಳಿದರು.

ಶಿಕ್ಷಣ ಇಲಾಖೆಗೆ 29,768 ಕೋಟಿ (ಶೇ.11), ನಗರಾಭಿವೃದ್ಧಿ ಇಲಾಖೆಗೆ 27,952 ಕೋಟಿ (ಶೇ.10), ಜಲಸಂಪನ್ಮೂಲ ಇಲಾಖೆಗೆ 21,308 ಕೋಟಿ(ಶೇ.8), ಇಂಧನ ಇಲಾಖೆಗೆ 17,290 ಕೋಟಿ(ಶೇ.7), ಗ್ರಾಮೀಣಾಭಿವೃದ್ಧಿ ಇಲಾಖೆಗೆ, 15.595 ಕೋಟಿ(ಶೇ. 6), ಕಂದಾಯ ಇಲಾಖೆಗೆ 11, 860 ಕೋಟಿ (ಶೇ. 4), ಲೋಕೋಪಯೋಗಿ ಇಲಾಖೆಗೆ 11, 463 ಕೋಟಿ (ಶೇ.4), ಆರೋಗ್ಯ ಇಲಾಖೆಗೆ 10,122 ಕೋಟಿ(ಶೇ. 4), ಸಾರಿಗೆ, ಒಳಾಡಳಿತ ಇಲಾಖೆಗೆ 10,108 ಕೋಟಿ (ಶೇ. 4), ಸಮಾಜ ಕಲ್ಯಾಣ ಇಲಾಖೆಗೆ 9,444 ಕೋಟಿ (ಶೇ.4), ಕೃಷಿ ಮತ್ತು ತೋಟಗಾರಿಕೆ ಇಲಾಖೆಗೆ 7,889 ಕೋಟಿ(ಶೇ.3), ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 4,650 ಕೋಟಿ (ಶೇ.2), ವಸತಿ ಇಲಾಖೆಗೆ 2,971 ಕೋಟಿ (ಶೇ.1), ಆಹಾರ ಇಲಾಖೆಗೆ 2,668 ಕೋಟಿ(ಶೇ.1) ಇತರೆ ಇಲಾಖೆಗೆ 84,023 ಕೋಟಿ (ಶೇ. 31) ಮೀಸಲಿರಿಸಲಾಗಿದೆ.

ಬಜೆಟ್‌ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ “ಯಡಿಯೂರಪ್ಪನವರು ಪ್ರತಿಪಕ್ಷಗಳ ಪ್ರಶ್ನೆಗೆ ಬಜೆಟ್ ಮೂಲಕ ಉತ್ತರ ಕೊಡುತ್ತೇನೆ ಎನ್ನುತ್ತಿದ್ದರು, ಈಗ ಏನು ಮಾಡಿದ್ದಾರೆ. ಕೇವಲ ಹಸಿರು ಶಾಲು ಮಾತ್ರ ಹಾಕಿಕೊಂಡಿದ್ದರೆ ಸಾಲದು, ನಾನು ಕೂಡಾ ವ್ಯವಸಾಯ ಮಾಡುವ ಕುಟುಂಬದಿಂದ ಬಂದವನು. ರೈತರಪರ ಇರುತ್ತೇನೆ ಎನ್ನುತ್ತಿದ್ದ ಏನು ನೀಡಿದ್ದಾರೆ. ಬಜೆಟ್ ಬೆಳವಣಿಗೆ ಆಗಿರುವುದೇ ಕೇವಲ 1.5%. ಇದು ಹಳೆಯ ಬಜೆಟನ್ನು ಸೇರಿಸಿ ಮಾಡಿದ ಬಜೆಟ್” ಎಂದಿದ್ದಾರೆ.

ಹೈದರಾಬಾದ್ ಕರ್ನಾಟಕದ ಹೋರಾಟಗಾರ, ಚಿಂತಕ ರಜಾಕ್ ಉಸ್ತಾದ್ ಅವರು “ಪೆಟ್ರೋಲ್, ಡೀಸೆಲ್, ಹಾಲಿನ ದರ, ಬಸ್ಸಿನ ದರ ಏರಿಸಿ ಮದ್ಯಮ ವರ್ಗದ ಮೇಲೆ ಹೊರೆ ಹಾಕಿದ ಕೇಂದ್ರ ಸರ್ಕಾರದಿಂದ ಅನುದಾನವನ್ನು ಕೇಳಲಾಗದೆ, ಒಂದು ರೀತಿಯಲ್ಲಿ ನಿರಾಶದಾಯಕವಾದ ಹಾಗೂ ದೂರದೃಷ್ಟಿ ಇಲ್ಲದ ಬಜೆಟ್ ಇದಾಗಿದೆ. ಬಿಡಿಬಿಡಿಯಾಗಿ ಬಜೆಟ್ ಮಂಡನೆ ಮಾಡಿದ ಯಾವುದೇ ಅಭಿವೃದ್ಧಿಗೆ ಪೂರಕವಾಗಿಲ್ಲದ ಬಜೆಟ್ ಇದು. ಹೈದರಾಬಾದ್ ಕರ್ನಾಟಕಕ್ಕೆ ಕಲ್ಯಾಣ ಕರ್ನಾಟಕ ಎಂದು ಹೆಸರಷ್ಟೇ ಬದಲಾವಣೆ ಮಾಡಿ ಹೆಚ್ಚಿನ ಅನುದಾನ ಕೊಡದೆ ಈ ಭಾಗಕ್ಕೂ ಕೂಡಾ ಅನ್ಯಾಯ ಮಾಡಿದ್ದಾರೆ. 1500 ಕೋಟಿ ಅನುದಾನ ಮೊದಲಿಂದನೂ ಬರುತ್ತಿದ್ದು, ಈಗಲೂ ಅಷ್ಟೇ ಅನುದಾನ ಇಟ್ಟಿದ್ದಾರೆ. ಈ ಅನುದಾನ 3000 ಕೋಟಿಗೆ ಹೆಚ್ಚು ಮಾಡುವ ನಿರೀಕ್ಷೆ ಇತ್ತು, ಆದರೆ ಅದು ಆಗಲಿಲ್ಲ. ಆದ್ದರಿಂದ ಯಾರಿಗೂ ತೃಪ್ತಿಕರವಾಗಿರದ ಬಜೆಟ್ ಮಂಡನೆ ಮಾಡಿದ್ದಾರೆ” ಎಂದಿದ್ದಾರೆ.

SFI ರಾಜ್ಯ ಕಾರ್ಯದರ್ಶಿ ಕೆ.ವಾಸುದೇವರೆಡ್ಡಿ ಅವರು “ರಾಜ್ಯ ಬಿಜೆಪಿ ಸರ್ಕಾರ ಈ ಬಜೆಟ್ ನಲ್ಲಿ ಶಿಕ್ಷಣಕ್ಕೆ ಕೇವಲ 29,786 (11%) ಕೋಟಿ ರೂಪಾಯಿ ಮಾತ್ರ ನೀಡುವುದರ ಮೂಲಕ ತನ್ನ ಶಿಕ್ಷಣ ವಿರೋಧಿ, ವಿದ್ಯಾರ್ಥಿ ದ್ರೋಹಿ ನೀತಿಯನ್ನು ಮುಂದುವರೆಸಿದೆ. ಕಳೆದ ವರ್ಷದ ಬಜೆಟ್ ಗಿಂತಲೂ ಈ ವರ್ಷದ ಬಜೆಟ್ ನಲ್ಲಿ 0.3% ಹಣವನ್ನು ಶಿಕ್ಷಣ ಕ್ಷೇತ್ರಕ್ಕೆ ಕಡಿತ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ಯಡಿಯೂರಪ್ಪ ಸರ್ಕಾರ ಮತ್ತೆ ಮಠ ಮಾನ್ಯಗಳಿಗೆ, ಜಾತಿವಾರು ಪ್ರತಿಮೆಗಳ ನಿರ್ಮಾಣಕ್ಕಾಗಿ ಸಾವಿರಾರು ಕೋಟಿ ರೂಪಾಯಿ ಹಣವನ್ನು ಮೀಸಲಿಡುವುದರ ಮೂಲಕ ಬಿಜೆಪಿ ಸರ್ಕಾರವೂ ಶಿಕ್ಷಣ ವ್ಯವಸ್ಥೆಯ ಸಮಗ್ರ ಅಭಿವೃದ್ಧಿಯ ಬಗ್ಗೆ ಯಾವುದೇ ದೂರದೃಷ್ಟಿಕೋನ ಮತ್ತು ಅಭಿವೃದ್ಧಿಯ ಕಣ್ಣೋಟ ಇಲ್ಲ ಎಂಬುದು ಈ ಬಜೆಟ್ ನಲ್ಲಿ ಮತ್ತೊಮ್ಮೆ ಸಾಬೀತಾಗಿದೆ” ಎಂದಿದ್ದಾರೆ.

“ರಾಜ್ಯದ ವಿದ್ಯಾರ್ಥಿಗಳು ಉಚಿತ ಲ್ಯಾಪ್‌ಟಾಪ್, ಉಚಿತ ಬಸ್ ಪಾಸ್ , ಹಾಸ್ಟೆಲ್ ವಿದ್ಯಾರ್ಥಿಗಳ ಮಾಸಿಕ ಆಹಾರ ಭತ್ಯೆ ಕನಿಷ್ಠ 3500/-ರೂ ಹೆಚ್ಚಿಸಬೇಕು, ಶಿಕ್ಷಣದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಬಜೆಟ್ ನಲ್ಲಿ 30% ಮೀಸಲಿಡಬೇಕು ಎಂದು ಇಡೀ ರಾಜ್ಯಾದ್ಯಂತ ಹೋರಾಟಗಳನ್ನು ನಡೆಸಿದರೂ ಈ ರಾಜ್ಯ ಸರ್ಕಾರ ಪರಿಗಣಿಸದೆ ಶಿಕ್ಷಣ ಕ್ಷೇತ್ರಕ್ಕೆ ನಿರ್ಲಕ್ಷ್ಯತೆ ತೋರಿದೆ. ಬಿಜೆಪಿ ಸರ್ಕಾರದ ಪ್ರತಿ ಬಾರಿಯೂ ಶಿಕ್ಷಣ ಕ್ಷೇತ್ರಕ್ಕೆ ಹಣ ಕಡಿತ ಮಾಡುವ ಪರಿಪಾಠವನ್ನು ಮುಂದುವರಿಸಿರುವುದರಿಂದ ರಾಜ್ಯದ ವಿದ್ಯಾರ್ಥಿ ಸಮುದಾಯಕ್ಕೆ ದ್ರೋಹ ಬಗೆದಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...