Homeಕರ್ನಾಟಕದೂರದೃಷ್ಟಿಯಿಲ್ಲದ ರಾಜ್ಯ ಬಜೆಟ್‌: ವಿಪಕ್ಷ, ಹೋರಾಟಗಾರರ ಟೀಕೆ...

ದೂರದೃಷ್ಟಿಯಿಲ್ಲದ ರಾಜ್ಯ ಬಜೆಟ್‌: ವಿಪಕ್ಷ, ಹೋರಾಟಗಾರರ ಟೀಕೆ…

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 2020-21ನೇ ಸಾಲಿನ 2,37,893 ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದ್ದಾರೆ. 2020–21ನೇ ಸಾಲಿನಲ್ಲಿ ಒಟ್ಟು ರೂ. 2,33,134 ಕೋಟಿ ಜಮೆಗಳನ್ನು ನಿರೀಕ್ಷಿಸಿ 2,37,893 ಕೋಟಿ ವೆಚ್ಚವನ್ನು ಅಂದಾಜಿಸಲಾಗಿದೆ. ಕೇಂದ್ರದಿಂದ ರಾಜ್ಯಕ್ಕೆ ಅನುದಾನ ಕಡಿತಗೊಂಡಿದೆ ಎಂದು ಮುಖ್ಯಮಂತ್ರಿ ಸದನದಲ್ಲಿ ಹೇಳಿದರು.

ಶಿಕ್ಷಣ ಇಲಾಖೆಗೆ 29,768 ಕೋಟಿ (ಶೇ.11), ನಗರಾಭಿವೃದ್ಧಿ ಇಲಾಖೆಗೆ 27,952 ಕೋಟಿ (ಶೇ.10), ಜಲಸಂಪನ್ಮೂಲ ಇಲಾಖೆಗೆ 21,308 ಕೋಟಿ(ಶೇ.8), ಇಂಧನ ಇಲಾಖೆಗೆ 17,290 ಕೋಟಿ(ಶೇ.7), ಗ್ರಾಮೀಣಾಭಿವೃದ್ಧಿ ಇಲಾಖೆಗೆ, 15.595 ಕೋಟಿ(ಶೇ. 6), ಕಂದಾಯ ಇಲಾಖೆಗೆ 11, 860 ಕೋಟಿ (ಶೇ. 4), ಲೋಕೋಪಯೋಗಿ ಇಲಾಖೆಗೆ 11, 463 ಕೋಟಿ (ಶೇ.4), ಆರೋಗ್ಯ ಇಲಾಖೆಗೆ 10,122 ಕೋಟಿ(ಶೇ. 4), ಸಾರಿಗೆ, ಒಳಾಡಳಿತ ಇಲಾಖೆಗೆ 10,108 ಕೋಟಿ (ಶೇ. 4), ಸಮಾಜ ಕಲ್ಯಾಣ ಇಲಾಖೆಗೆ 9,444 ಕೋಟಿ (ಶೇ.4), ಕೃಷಿ ಮತ್ತು ತೋಟಗಾರಿಕೆ ಇಲಾಖೆಗೆ 7,889 ಕೋಟಿ(ಶೇ.3), ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 4,650 ಕೋಟಿ (ಶೇ.2), ವಸತಿ ಇಲಾಖೆಗೆ 2,971 ಕೋಟಿ (ಶೇ.1), ಆಹಾರ ಇಲಾಖೆಗೆ 2,668 ಕೋಟಿ(ಶೇ.1) ಇತರೆ ಇಲಾಖೆಗೆ 84,023 ಕೋಟಿ (ಶೇ. 31) ಮೀಸಲಿರಿಸಲಾಗಿದೆ.

ಬಜೆಟ್‌ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ “ಯಡಿಯೂರಪ್ಪನವರು ಪ್ರತಿಪಕ್ಷಗಳ ಪ್ರಶ್ನೆಗೆ ಬಜೆಟ್ ಮೂಲಕ ಉತ್ತರ ಕೊಡುತ್ತೇನೆ ಎನ್ನುತ್ತಿದ್ದರು, ಈಗ ಏನು ಮಾಡಿದ್ದಾರೆ. ಕೇವಲ ಹಸಿರು ಶಾಲು ಮಾತ್ರ ಹಾಕಿಕೊಂಡಿದ್ದರೆ ಸಾಲದು, ನಾನು ಕೂಡಾ ವ್ಯವಸಾಯ ಮಾಡುವ ಕುಟುಂಬದಿಂದ ಬಂದವನು. ರೈತರಪರ ಇರುತ್ತೇನೆ ಎನ್ನುತ್ತಿದ್ದ ಏನು ನೀಡಿದ್ದಾರೆ. ಬಜೆಟ್ ಬೆಳವಣಿಗೆ ಆಗಿರುವುದೇ ಕೇವಲ 1.5%. ಇದು ಹಳೆಯ ಬಜೆಟನ್ನು ಸೇರಿಸಿ ಮಾಡಿದ ಬಜೆಟ್” ಎಂದಿದ್ದಾರೆ.

ಹೈದರಾಬಾದ್ ಕರ್ನಾಟಕದ ಹೋರಾಟಗಾರ, ಚಿಂತಕ ರಜಾಕ್ ಉಸ್ತಾದ್ ಅವರು “ಪೆಟ್ರೋಲ್, ಡೀಸೆಲ್, ಹಾಲಿನ ದರ, ಬಸ್ಸಿನ ದರ ಏರಿಸಿ ಮದ್ಯಮ ವರ್ಗದ ಮೇಲೆ ಹೊರೆ ಹಾಕಿದ ಕೇಂದ್ರ ಸರ್ಕಾರದಿಂದ ಅನುದಾನವನ್ನು ಕೇಳಲಾಗದೆ, ಒಂದು ರೀತಿಯಲ್ಲಿ ನಿರಾಶದಾಯಕವಾದ ಹಾಗೂ ದೂರದೃಷ್ಟಿ ಇಲ್ಲದ ಬಜೆಟ್ ಇದಾಗಿದೆ. ಬಿಡಿಬಿಡಿಯಾಗಿ ಬಜೆಟ್ ಮಂಡನೆ ಮಾಡಿದ ಯಾವುದೇ ಅಭಿವೃದ್ಧಿಗೆ ಪೂರಕವಾಗಿಲ್ಲದ ಬಜೆಟ್ ಇದು. ಹೈದರಾಬಾದ್ ಕರ್ನಾಟಕಕ್ಕೆ ಕಲ್ಯಾಣ ಕರ್ನಾಟಕ ಎಂದು ಹೆಸರಷ್ಟೇ ಬದಲಾವಣೆ ಮಾಡಿ ಹೆಚ್ಚಿನ ಅನುದಾನ ಕೊಡದೆ ಈ ಭಾಗಕ್ಕೂ ಕೂಡಾ ಅನ್ಯಾಯ ಮಾಡಿದ್ದಾರೆ. 1500 ಕೋಟಿ ಅನುದಾನ ಮೊದಲಿಂದನೂ ಬರುತ್ತಿದ್ದು, ಈಗಲೂ ಅಷ್ಟೇ ಅನುದಾನ ಇಟ್ಟಿದ್ದಾರೆ. ಈ ಅನುದಾನ 3000 ಕೋಟಿಗೆ ಹೆಚ್ಚು ಮಾಡುವ ನಿರೀಕ್ಷೆ ಇತ್ತು, ಆದರೆ ಅದು ಆಗಲಿಲ್ಲ. ಆದ್ದರಿಂದ ಯಾರಿಗೂ ತೃಪ್ತಿಕರವಾಗಿರದ ಬಜೆಟ್ ಮಂಡನೆ ಮಾಡಿದ್ದಾರೆ” ಎಂದಿದ್ದಾರೆ.

SFI ರಾಜ್ಯ ಕಾರ್ಯದರ್ಶಿ ಕೆ.ವಾಸುದೇವರೆಡ್ಡಿ ಅವರು “ರಾಜ್ಯ ಬಿಜೆಪಿ ಸರ್ಕಾರ ಈ ಬಜೆಟ್ ನಲ್ಲಿ ಶಿಕ್ಷಣಕ್ಕೆ ಕೇವಲ 29,786 (11%) ಕೋಟಿ ರೂಪಾಯಿ ಮಾತ್ರ ನೀಡುವುದರ ಮೂಲಕ ತನ್ನ ಶಿಕ್ಷಣ ವಿರೋಧಿ, ವಿದ್ಯಾರ್ಥಿ ದ್ರೋಹಿ ನೀತಿಯನ್ನು ಮುಂದುವರೆಸಿದೆ. ಕಳೆದ ವರ್ಷದ ಬಜೆಟ್ ಗಿಂತಲೂ ಈ ವರ್ಷದ ಬಜೆಟ್ ನಲ್ಲಿ 0.3% ಹಣವನ್ನು ಶಿಕ್ಷಣ ಕ್ಷೇತ್ರಕ್ಕೆ ಕಡಿತ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ಯಡಿಯೂರಪ್ಪ ಸರ್ಕಾರ ಮತ್ತೆ ಮಠ ಮಾನ್ಯಗಳಿಗೆ, ಜಾತಿವಾರು ಪ್ರತಿಮೆಗಳ ನಿರ್ಮಾಣಕ್ಕಾಗಿ ಸಾವಿರಾರು ಕೋಟಿ ರೂಪಾಯಿ ಹಣವನ್ನು ಮೀಸಲಿಡುವುದರ ಮೂಲಕ ಬಿಜೆಪಿ ಸರ್ಕಾರವೂ ಶಿಕ್ಷಣ ವ್ಯವಸ್ಥೆಯ ಸಮಗ್ರ ಅಭಿವೃದ್ಧಿಯ ಬಗ್ಗೆ ಯಾವುದೇ ದೂರದೃಷ್ಟಿಕೋನ ಮತ್ತು ಅಭಿವೃದ್ಧಿಯ ಕಣ್ಣೋಟ ಇಲ್ಲ ಎಂಬುದು ಈ ಬಜೆಟ್ ನಲ್ಲಿ ಮತ್ತೊಮ್ಮೆ ಸಾಬೀತಾಗಿದೆ” ಎಂದಿದ್ದಾರೆ.

“ರಾಜ್ಯದ ವಿದ್ಯಾರ್ಥಿಗಳು ಉಚಿತ ಲ್ಯಾಪ್‌ಟಾಪ್, ಉಚಿತ ಬಸ್ ಪಾಸ್ , ಹಾಸ್ಟೆಲ್ ವಿದ್ಯಾರ್ಥಿಗಳ ಮಾಸಿಕ ಆಹಾರ ಭತ್ಯೆ ಕನಿಷ್ಠ 3500/-ರೂ ಹೆಚ್ಚಿಸಬೇಕು, ಶಿಕ್ಷಣದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಬಜೆಟ್ ನಲ್ಲಿ 30% ಮೀಸಲಿಡಬೇಕು ಎಂದು ಇಡೀ ರಾಜ್ಯಾದ್ಯಂತ ಹೋರಾಟಗಳನ್ನು ನಡೆಸಿದರೂ ಈ ರಾಜ್ಯ ಸರ್ಕಾರ ಪರಿಗಣಿಸದೆ ಶಿಕ್ಷಣ ಕ್ಷೇತ್ರಕ್ಕೆ ನಿರ್ಲಕ್ಷ್ಯತೆ ತೋರಿದೆ. ಬಿಜೆಪಿ ಸರ್ಕಾರದ ಪ್ರತಿ ಬಾರಿಯೂ ಶಿಕ್ಷಣ ಕ್ಷೇತ್ರಕ್ಕೆ ಹಣ ಕಡಿತ ಮಾಡುವ ಪರಿಪಾಠವನ್ನು ಮುಂದುವರಿಸಿರುವುದರಿಂದ ರಾಜ್ಯದ ವಿದ್ಯಾರ್ಥಿ ಸಮುದಾಯಕ್ಕೆ ದ್ರೋಹ ಬಗೆದಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...