Homeಕರ್ನಾಟಕದೂರದೃಷ್ಟಿಯಿಲ್ಲದ ರಾಜ್ಯ ಬಜೆಟ್‌: ವಿಪಕ್ಷ, ಹೋರಾಟಗಾರರ ಟೀಕೆ...

ದೂರದೃಷ್ಟಿಯಿಲ್ಲದ ರಾಜ್ಯ ಬಜೆಟ್‌: ವಿಪಕ್ಷ, ಹೋರಾಟಗಾರರ ಟೀಕೆ…

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 2020-21ನೇ ಸಾಲಿನ 2,37,893 ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದ್ದಾರೆ. 2020–21ನೇ ಸಾಲಿನಲ್ಲಿ ಒಟ್ಟು ರೂ. 2,33,134 ಕೋಟಿ ಜಮೆಗಳನ್ನು ನಿರೀಕ್ಷಿಸಿ 2,37,893 ಕೋಟಿ ವೆಚ್ಚವನ್ನು ಅಂದಾಜಿಸಲಾಗಿದೆ. ಕೇಂದ್ರದಿಂದ ರಾಜ್ಯಕ್ಕೆ ಅನುದಾನ ಕಡಿತಗೊಂಡಿದೆ ಎಂದು ಮುಖ್ಯಮಂತ್ರಿ ಸದನದಲ್ಲಿ ಹೇಳಿದರು.

ಶಿಕ್ಷಣ ಇಲಾಖೆಗೆ 29,768 ಕೋಟಿ (ಶೇ.11), ನಗರಾಭಿವೃದ್ಧಿ ಇಲಾಖೆಗೆ 27,952 ಕೋಟಿ (ಶೇ.10), ಜಲಸಂಪನ್ಮೂಲ ಇಲಾಖೆಗೆ 21,308 ಕೋಟಿ(ಶೇ.8), ಇಂಧನ ಇಲಾಖೆಗೆ 17,290 ಕೋಟಿ(ಶೇ.7), ಗ್ರಾಮೀಣಾಭಿವೃದ್ಧಿ ಇಲಾಖೆಗೆ, 15.595 ಕೋಟಿ(ಶೇ. 6), ಕಂದಾಯ ಇಲಾಖೆಗೆ 11, 860 ಕೋಟಿ (ಶೇ. 4), ಲೋಕೋಪಯೋಗಿ ಇಲಾಖೆಗೆ 11, 463 ಕೋಟಿ (ಶೇ.4), ಆರೋಗ್ಯ ಇಲಾಖೆಗೆ 10,122 ಕೋಟಿ(ಶೇ. 4), ಸಾರಿಗೆ, ಒಳಾಡಳಿತ ಇಲಾಖೆಗೆ 10,108 ಕೋಟಿ (ಶೇ. 4), ಸಮಾಜ ಕಲ್ಯಾಣ ಇಲಾಖೆಗೆ 9,444 ಕೋಟಿ (ಶೇ.4), ಕೃಷಿ ಮತ್ತು ತೋಟಗಾರಿಕೆ ಇಲಾಖೆಗೆ 7,889 ಕೋಟಿ(ಶೇ.3), ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 4,650 ಕೋಟಿ (ಶೇ.2), ವಸತಿ ಇಲಾಖೆಗೆ 2,971 ಕೋಟಿ (ಶೇ.1), ಆಹಾರ ಇಲಾಖೆಗೆ 2,668 ಕೋಟಿ(ಶೇ.1) ಇತರೆ ಇಲಾಖೆಗೆ 84,023 ಕೋಟಿ (ಶೇ. 31) ಮೀಸಲಿರಿಸಲಾಗಿದೆ.

ಬಜೆಟ್‌ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ “ಯಡಿಯೂರಪ್ಪನವರು ಪ್ರತಿಪಕ್ಷಗಳ ಪ್ರಶ್ನೆಗೆ ಬಜೆಟ್ ಮೂಲಕ ಉತ್ತರ ಕೊಡುತ್ತೇನೆ ಎನ್ನುತ್ತಿದ್ದರು, ಈಗ ಏನು ಮಾಡಿದ್ದಾರೆ. ಕೇವಲ ಹಸಿರು ಶಾಲು ಮಾತ್ರ ಹಾಕಿಕೊಂಡಿದ್ದರೆ ಸಾಲದು, ನಾನು ಕೂಡಾ ವ್ಯವಸಾಯ ಮಾಡುವ ಕುಟುಂಬದಿಂದ ಬಂದವನು. ರೈತರಪರ ಇರುತ್ತೇನೆ ಎನ್ನುತ್ತಿದ್ದ ಏನು ನೀಡಿದ್ದಾರೆ. ಬಜೆಟ್ ಬೆಳವಣಿಗೆ ಆಗಿರುವುದೇ ಕೇವಲ 1.5%. ಇದು ಹಳೆಯ ಬಜೆಟನ್ನು ಸೇರಿಸಿ ಮಾಡಿದ ಬಜೆಟ್” ಎಂದಿದ್ದಾರೆ.

ಹೈದರಾಬಾದ್ ಕರ್ನಾಟಕದ ಹೋರಾಟಗಾರ, ಚಿಂತಕ ರಜಾಕ್ ಉಸ್ತಾದ್ ಅವರು “ಪೆಟ್ರೋಲ್, ಡೀಸೆಲ್, ಹಾಲಿನ ದರ, ಬಸ್ಸಿನ ದರ ಏರಿಸಿ ಮದ್ಯಮ ವರ್ಗದ ಮೇಲೆ ಹೊರೆ ಹಾಕಿದ ಕೇಂದ್ರ ಸರ್ಕಾರದಿಂದ ಅನುದಾನವನ್ನು ಕೇಳಲಾಗದೆ, ಒಂದು ರೀತಿಯಲ್ಲಿ ನಿರಾಶದಾಯಕವಾದ ಹಾಗೂ ದೂರದೃಷ್ಟಿ ಇಲ್ಲದ ಬಜೆಟ್ ಇದಾಗಿದೆ. ಬಿಡಿಬಿಡಿಯಾಗಿ ಬಜೆಟ್ ಮಂಡನೆ ಮಾಡಿದ ಯಾವುದೇ ಅಭಿವೃದ್ಧಿಗೆ ಪೂರಕವಾಗಿಲ್ಲದ ಬಜೆಟ್ ಇದು. ಹೈದರಾಬಾದ್ ಕರ್ನಾಟಕಕ್ಕೆ ಕಲ್ಯಾಣ ಕರ್ನಾಟಕ ಎಂದು ಹೆಸರಷ್ಟೇ ಬದಲಾವಣೆ ಮಾಡಿ ಹೆಚ್ಚಿನ ಅನುದಾನ ಕೊಡದೆ ಈ ಭಾಗಕ್ಕೂ ಕೂಡಾ ಅನ್ಯಾಯ ಮಾಡಿದ್ದಾರೆ. 1500 ಕೋಟಿ ಅನುದಾನ ಮೊದಲಿಂದನೂ ಬರುತ್ತಿದ್ದು, ಈಗಲೂ ಅಷ್ಟೇ ಅನುದಾನ ಇಟ್ಟಿದ್ದಾರೆ. ಈ ಅನುದಾನ 3000 ಕೋಟಿಗೆ ಹೆಚ್ಚು ಮಾಡುವ ನಿರೀಕ್ಷೆ ಇತ್ತು, ಆದರೆ ಅದು ಆಗಲಿಲ್ಲ. ಆದ್ದರಿಂದ ಯಾರಿಗೂ ತೃಪ್ತಿಕರವಾಗಿರದ ಬಜೆಟ್ ಮಂಡನೆ ಮಾಡಿದ್ದಾರೆ” ಎಂದಿದ್ದಾರೆ.

SFI ರಾಜ್ಯ ಕಾರ್ಯದರ್ಶಿ ಕೆ.ವಾಸುದೇವರೆಡ್ಡಿ ಅವರು “ರಾಜ್ಯ ಬಿಜೆಪಿ ಸರ್ಕಾರ ಈ ಬಜೆಟ್ ನಲ್ಲಿ ಶಿಕ್ಷಣಕ್ಕೆ ಕೇವಲ 29,786 (11%) ಕೋಟಿ ರೂಪಾಯಿ ಮಾತ್ರ ನೀಡುವುದರ ಮೂಲಕ ತನ್ನ ಶಿಕ್ಷಣ ವಿರೋಧಿ, ವಿದ್ಯಾರ್ಥಿ ದ್ರೋಹಿ ನೀತಿಯನ್ನು ಮುಂದುವರೆಸಿದೆ. ಕಳೆದ ವರ್ಷದ ಬಜೆಟ್ ಗಿಂತಲೂ ಈ ವರ್ಷದ ಬಜೆಟ್ ನಲ್ಲಿ 0.3% ಹಣವನ್ನು ಶಿಕ್ಷಣ ಕ್ಷೇತ್ರಕ್ಕೆ ಕಡಿತ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ಯಡಿಯೂರಪ್ಪ ಸರ್ಕಾರ ಮತ್ತೆ ಮಠ ಮಾನ್ಯಗಳಿಗೆ, ಜಾತಿವಾರು ಪ್ರತಿಮೆಗಳ ನಿರ್ಮಾಣಕ್ಕಾಗಿ ಸಾವಿರಾರು ಕೋಟಿ ರೂಪಾಯಿ ಹಣವನ್ನು ಮೀಸಲಿಡುವುದರ ಮೂಲಕ ಬಿಜೆಪಿ ಸರ್ಕಾರವೂ ಶಿಕ್ಷಣ ವ್ಯವಸ್ಥೆಯ ಸಮಗ್ರ ಅಭಿವೃದ್ಧಿಯ ಬಗ್ಗೆ ಯಾವುದೇ ದೂರದೃಷ್ಟಿಕೋನ ಮತ್ತು ಅಭಿವೃದ್ಧಿಯ ಕಣ್ಣೋಟ ಇಲ್ಲ ಎಂಬುದು ಈ ಬಜೆಟ್ ನಲ್ಲಿ ಮತ್ತೊಮ್ಮೆ ಸಾಬೀತಾಗಿದೆ” ಎಂದಿದ್ದಾರೆ.

“ರಾಜ್ಯದ ವಿದ್ಯಾರ್ಥಿಗಳು ಉಚಿತ ಲ್ಯಾಪ್‌ಟಾಪ್, ಉಚಿತ ಬಸ್ ಪಾಸ್ , ಹಾಸ್ಟೆಲ್ ವಿದ್ಯಾರ್ಥಿಗಳ ಮಾಸಿಕ ಆಹಾರ ಭತ್ಯೆ ಕನಿಷ್ಠ 3500/-ರೂ ಹೆಚ್ಚಿಸಬೇಕು, ಶಿಕ್ಷಣದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಬಜೆಟ್ ನಲ್ಲಿ 30% ಮೀಸಲಿಡಬೇಕು ಎಂದು ಇಡೀ ರಾಜ್ಯಾದ್ಯಂತ ಹೋರಾಟಗಳನ್ನು ನಡೆಸಿದರೂ ಈ ರಾಜ್ಯ ಸರ್ಕಾರ ಪರಿಗಣಿಸದೆ ಶಿಕ್ಷಣ ಕ್ಷೇತ್ರಕ್ಕೆ ನಿರ್ಲಕ್ಷ್ಯತೆ ತೋರಿದೆ. ಬಿಜೆಪಿ ಸರ್ಕಾರದ ಪ್ರತಿ ಬಾರಿಯೂ ಶಿಕ್ಷಣ ಕ್ಷೇತ್ರಕ್ಕೆ ಹಣ ಕಡಿತ ಮಾಡುವ ಪರಿಪಾಠವನ್ನು ಮುಂದುವರಿಸಿರುವುದರಿಂದ ರಾಜ್ಯದ ವಿದ್ಯಾರ್ಥಿ ಸಮುದಾಯಕ್ಕೆ ದ್ರೋಹ ಬಗೆದಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...