Homeಕರ್ನಾಟಕದೂರದೃಷ್ಟಿಯಿಲ್ಲದ ರಾಜ್ಯ ಬಜೆಟ್‌: ವಿಪಕ್ಷ, ಹೋರಾಟಗಾರರ ಟೀಕೆ...

ದೂರದೃಷ್ಟಿಯಿಲ್ಲದ ರಾಜ್ಯ ಬಜೆಟ್‌: ವಿಪಕ್ಷ, ಹೋರಾಟಗಾರರ ಟೀಕೆ…

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 2020-21ನೇ ಸಾಲಿನ 2,37,893 ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದ್ದಾರೆ. 2020–21ನೇ ಸಾಲಿನಲ್ಲಿ ಒಟ್ಟು ರೂ. 2,33,134 ಕೋಟಿ ಜಮೆಗಳನ್ನು ನಿರೀಕ್ಷಿಸಿ 2,37,893 ಕೋಟಿ ವೆಚ್ಚವನ್ನು ಅಂದಾಜಿಸಲಾಗಿದೆ. ಕೇಂದ್ರದಿಂದ ರಾಜ್ಯಕ್ಕೆ ಅನುದಾನ ಕಡಿತಗೊಂಡಿದೆ ಎಂದು ಮುಖ್ಯಮಂತ್ರಿ ಸದನದಲ್ಲಿ ಹೇಳಿದರು.

ಶಿಕ್ಷಣ ಇಲಾಖೆಗೆ 29,768 ಕೋಟಿ (ಶೇ.11), ನಗರಾಭಿವೃದ್ಧಿ ಇಲಾಖೆಗೆ 27,952 ಕೋಟಿ (ಶೇ.10), ಜಲಸಂಪನ್ಮೂಲ ಇಲಾಖೆಗೆ 21,308 ಕೋಟಿ(ಶೇ.8), ಇಂಧನ ಇಲಾಖೆಗೆ 17,290 ಕೋಟಿ(ಶೇ.7), ಗ್ರಾಮೀಣಾಭಿವೃದ್ಧಿ ಇಲಾಖೆಗೆ, 15.595 ಕೋಟಿ(ಶೇ. 6), ಕಂದಾಯ ಇಲಾಖೆಗೆ 11, 860 ಕೋಟಿ (ಶೇ. 4), ಲೋಕೋಪಯೋಗಿ ಇಲಾಖೆಗೆ 11, 463 ಕೋಟಿ (ಶೇ.4), ಆರೋಗ್ಯ ಇಲಾಖೆಗೆ 10,122 ಕೋಟಿ(ಶೇ. 4), ಸಾರಿಗೆ, ಒಳಾಡಳಿತ ಇಲಾಖೆಗೆ 10,108 ಕೋಟಿ (ಶೇ. 4), ಸಮಾಜ ಕಲ್ಯಾಣ ಇಲಾಖೆಗೆ 9,444 ಕೋಟಿ (ಶೇ.4), ಕೃಷಿ ಮತ್ತು ತೋಟಗಾರಿಕೆ ಇಲಾಖೆಗೆ 7,889 ಕೋಟಿ(ಶೇ.3), ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 4,650 ಕೋಟಿ (ಶೇ.2), ವಸತಿ ಇಲಾಖೆಗೆ 2,971 ಕೋಟಿ (ಶೇ.1), ಆಹಾರ ಇಲಾಖೆಗೆ 2,668 ಕೋಟಿ(ಶೇ.1) ಇತರೆ ಇಲಾಖೆಗೆ 84,023 ಕೋಟಿ (ಶೇ. 31) ಮೀಸಲಿರಿಸಲಾಗಿದೆ.

ಬಜೆಟ್‌ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ “ಯಡಿಯೂರಪ್ಪನವರು ಪ್ರತಿಪಕ್ಷಗಳ ಪ್ರಶ್ನೆಗೆ ಬಜೆಟ್ ಮೂಲಕ ಉತ್ತರ ಕೊಡುತ್ತೇನೆ ಎನ್ನುತ್ತಿದ್ದರು, ಈಗ ಏನು ಮಾಡಿದ್ದಾರೆ. ಕೇವಲ ಹಸಿರು ಶಾಲು ಮಾತ್ರ ಹಾಕಿಕೊಂಡಿದ್ದರೆ ಸಾಲದು, ನಾನು ಕೂಡಾ ವ್ಯವಸಾಯ ಮಾಡುವ ಕುಟುಂಬದಿಂದ ಬಂದವನು. ರೈತರಪರ ಇರುತ್ತೇನೆ ಎನ್ನುತ್ತಿದ್ದ ಏನು ನೀಡಿದ್ದಾರೆ. ಬಜೆಟ್ ಬೆಳವಣಿಗೆ ಆಗಿರುವುದೇ ಕೇವಲ 1.5%. ಇದು ಹಳೆಯ ಬಜೆಟನ್ನು ಸೇರಿಸಿ ಮಾಡಿದ ಬಜೆಟ್” ಎಂದಿದ್ದಾರೆ.

ಹೈದರಾಬಾದ್ ಕರ್ನಾಟಕದ ಹೋರಾಟಗಾರ, ಚಿಂತಕ ರಜಾಕ್ ಉಸ್ತಾದ್ ಅವರು “ಪೆಟ್ರೋಲ್, ಡೀಸೆಲ್, ಹಾಲಿನ ದರ, ಬಸ್ಸಿನ ದರ ಏರಿಸಿ ಮದ್ಯಮ ವರ್ಗದ ಮೇಲೆ ಹೊರೆ ಹಾಕಿದ ಕೇಂದ್ರ ಸರ್ಕಾರದಿಂದ ಅನುದಾನವನ್ನು ಕೇಳಲಾಗದೆ, ಒಂದು ರೀತಿಯಲ್ಲಿ ನಿರಾಶದಾಯಕವಾದ ಹಾಗೂ ದೂರದೃಷ್ಟಿ ಇಲ್ಲದ ಬಜೆಟ್ ಇದಾಗಿದೆ. ಬಿಡಿಬಿಡಿಯಾಗಿ ಬಜೆಟ್ ಮಂಡನೆ ಮಾಡಿದ ಯಾವುದೇ ಅಭಿವೃದ್ಧಿಗೆ ಪೂರಕವಾಗಿಲ್ಲದ ಬಜೆಟ್ ಇದು. ಹೈದರಾಬಾದ್ ಕರ್ನಾಟಕಕ್ಕೆ ಕಲ್ಯಾಣ ಕರ್ನಾಟಕ ಎಂದು ಹೆಸರಷ್ಟೇ ಬದಲಾವಣೆ ಮಾಡಿ ಹೆಚ್ಚಿನ ಅನುದಾನ ಕೊಡದೆ ಈ ಭಾಗಕ್ಕೂ ಕೂಡಾ ಅನ್ಯಾಯ ಮಾಡಿದ್ದಾರೆ. 1500 ಕೋಟಿ ಅನುದಾನ ಮೊದಲಿಂದನೂ ಬರುತ್ತಿದ್ದು, ಈಗಲೂ ಅಷ್ಟೇ ಅನುದಾನ ಇಟ್ಟಿದ್ದಾರೆ. ಈ ಅನುದಾನ 3000 ಕೋಟಿಗೆ ಹೆಚ್ಚು ಮಾಡುವ ನಿರೀಕ್ಷೆ ಇತ್ತು, ಆದರೆ ಅದು ಆಗಲಿಲ್ಲ. ಆದ್ದರಿಂದ ಯಾರಿಗೂ ತೃಪ್ತಿಕರವಾಗಿರದ ಬಜೆಟ್ ಮಂಡನೆ ಮಾಡಿದ್ದಾರೆ” ಎಂದಿದ್ದಾರೆ.

SFI ರಾಜ್ಯ ಕಾರ್ಯದರ್ಶಿ ಕೆ.ವಾಸುದೇವರೆಡ್ಡಿ ಅವರು “ರಾಜ್ಯ ಬಿಜೆಪಿ ಸರ್ಕಾರ ಈ ಬಜೆಟ್ ನಲ್ಲಿ ಶಿಕ್ಷಣಕ್ಕೆ ಕೇವಲ 29,786 (11%) ಕೋಟಿ ರೂಪಾಯಿ ಮಾತ್ರ ನೀಡುವುದರ ಮೂಲಕ ತನ್ನ ಶಿಕ್ಷಣ ವಿರೋಧಿ, ವಿದ್ಯಾರ್ಥಿ ದ್ರೋಹಿ ನೀತಿಯನ್ನು ಮುಂದುವರೆಸಿದೆ. ಕಳೆದ ವರ್ಷದ ಬಜೆಟ್ ಗಿಂತಲೂ ಈ ವರ್ಷದ ಬಜೆಟ್ ನಲ್ಲಿ 0.3% ಹಣವನ್ನು ಶಿಕ್ಷಣ ಕ್ಷೇತ್ರಕ್ಕೆ ಕಡಿತ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ಯಡಿಯೂರಪ್ಪ ಸರ್ಕಾರ ಮತ್ತೆ ಮಠ ಮಾನ್ಯಗಳಿಗೆ, ಜಾತಿವಾರು ಪ್ರತಿಮೆಗಳ ನಿರ್ಮಾಣಕ್ಕಾಗಿ ಸಾವಿರಾರು ಕೋಟಿ ರೂಪಾಯಿ ಹಣವನ್ನು ಮೀಸಲಿಡುವುದರ ಮೂಲಕ ಬಿಜೆಪಿ ಸರ್ಕಾರವೂ ಶಿಕ್ಷಣ ವ್ಯವಸ್ಥೆಯ ಸಮಗ್ರ ಅಭಿವೃದ್ಧಿಯ ಬಗ್ಗೆ ಯಾವುದೇ ದೂರದೃಷ್ಟಿಕೋನ ಮತ್ತು ಅಭಿವೃದ್ಧಿಯ ಕಣ್ಣೋಟ ಇಲ್ಲ ಎಂಬುದು ಈ ಬಜೆಟ್ ನಲ್ಲಿ ಮತ್ತೊಮ್ಮೆ ಸಾಬೀತಾಗಿದೆ” ಎಂದಿದ್ದಾರೆ.

“ರಾಜ್ಯದ ವಿದ್ಯಾರ್ಥಿಗಳು ಉಚಿತ ಲ್ಯಾಪ್‌ಟಾಪ್, ಉಚಿತ ಬಸ್ ಪಾಸ್ , ಹಾಸ್ಟೆಲ್ ವಿದ್ಯಾರ್ಥಿಗಳ ಮಾಸಿಕ ಆಹಾರ ಭತ್ಯೆ ಕನಿಷ್ಠ 3500/-ರೂ ಹೆಚ್ಚಿಸಬೇಕು, ಶಿಕ್ಷಣದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಬಜೆಟ್ ನಲ್ಲಿ 30% ಮೀಸಲಿಡಬೇಕು ಎಂದು ಇಡೀ ರಾಜ್ಯಾದ್ಯಂತ ಹೋರಾಟಗಳನ್ನು ನಡೆಸಿದರೂ ಈ ರಾಜ್ಯ ಸರ್ಕಾರ ಪರಿಗಣಿಸದೆ ಶಿಕ್ಷಣ ಕ್ಷೇತ್ರಕ್ಕೆ ನಿರ್ಲಕ್ಷ್ಯತೆ ತೋರಿದೆ. ಬಿಜೆಪಿ ಸರ್ಕಾರದ ಪ್ರತಿ ಬಾರಿಯೂ ಶಿಕ್ಷಣ ಕ್ಷೇತ್ರಕ್ಕೆ ಹಣ ಕಡಿತ ಮಾಡುವ ಪರಿಪಾಠವನ್ನು ಮುಂದುವರಿಸಿರುವುದರಿಂದ ರಾಜ್ಯದ ವಿದ್ಯಾರ್ಥಿ ಸಮುದಾಯಕ್ಕೆ ದ್ರೋಹ ಬಗೆದಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...