Homeಕರ್ನಾಟಕರಾಜ್ಯ ಉಪಚುನಾವಣೆ ಫಲಿತಾಂಶ: ಸಿಂದಗಿಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು

ರಾಜ್ಯ ಉಪಚುನಾವಣೆ ಫಲಿತಾಂಶ: ಸಿಂದಗಿಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು

- Advertisement -
- Advertisement -

ಭಾರಿ ಕುತೂಹಲ ಮೂಡಿಸಿದ್ದ ಕರ್ನಾಟಕದ ಉಪಚುನಾವಣೆಯಲ್ಲಿ ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಮತ ಎಣಿಕೆ ಆರಂಭವಾದಾಗಿನಿಂದ ಮುನ್ನಡೆ ಸಾಧಿಸಿದ್ದ ಬಿಜೆಪಿ 22ನೇ ಸುತ್ತಿನಲ್ಲಿ 31,088 ಮತಗಳ ಅಂತರ ಕಾಯ್ದುಕೊಂಡಿತ್ತು.

ವಿಜಯಪುರದ ಸಿಂದಗಿಯ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು 93,380 ಮತಗಳು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ 62,292 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ ಕೇವಲ 4,321 ಮತಗಳನ್ನು ಪಡೆದಿದ್ದಾರೆ.

ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು 20ನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ ಅವರಿಂದ 28,462 ಮತಗಳ ಅಂತರ ಕಾಯ್ದುಕೊಂಡಿದ್ದರು.

ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ, ಪಕ್ಷದ ನಾಯಕರು ಮತ್ತು ಕಾರ್ಯರ್ತರು ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ. ಚುನಾವಣೆಯ ಉಸ್ತುವಾರಿ ವಹಿಸಿದ್ದ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಸಿಂದಗಿಗೆ ಬಂದಿದ್ದು ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದಾರೆ.

ಇದನ್ನೂ ಓದಿ: ಸಿಂದಗಿ ಉಪಚುನಾವಣೆ: ಕಾಂಗ್ರೆಸ್, ಬಿಜೆಪಿ ನಡುವೆ ನೇರಾನೇರ ಪೈಪೋಟಿ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಜೆಡಿಎಸ್ ಚಿತ್ತ ಏನು?

’ಸಿಂದಗಿಯಲ್ಲಿ ಜನ ಅಭಿವೃದ್ಧಿ ಬಯಸಿದ್ದಾರೆ. ಹಾಗಾಗಿ ಜನ ಮತ ಹಾಕಿದ್ದಾರೆ. ನಾವು ಕೂಡ ಭರವಸೆಯನ್ನು ನೀಡಿದ್ದೇವು. ಇದನ್ನು ಜನ ನಂಬಿಕೆ ಇಟ್ಟು ಆಡಳಿತ ಪಕ್ಷಕ್ಕೆ ಮತ ಹಾಕಿದ್ದಾರೆ’ ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿದ್ದಾರೆ.

“ಸಿಂದಗಿ ಉಪಚುನಾವಣೆಯಲ್ಲಿ ಉತ್ತಮ ಅಂತರದಲ್ಲಿ ವಿಜಯ ಸಾಧಿಸಿದ ಪಕ್ಷದ ಅಭ್ಯರ್ಥಿ ರಮೇಶ್ ಭೂಸನೂರ್ ಅವರಿಗೆ ಅಭಿನಂದನೆಗಳು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳು, ರಾಜ್ಯ ಬಿಜೆಪಿ ಸರ್ಕಾರದ ಜನಪರ ಯೋಜನೆಗಳನ್ನು ಜನ ಮೆಚ್ಚಿದ್ದಾರೆ ಎನ್ನುವುದಕ್ಕೆ ಈ ಕ್ಷೇತ್ರದಲ್ಲಿ ಪಕ್ಷದ ಗೆಲುವು ಸಂಕೇತವಾಗಿದೆ” ಎಂದು ಮಾಜಿ ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಸಿಂದಗಿ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌,  “ಸಿಂದಗಿಯಲ್ಲಿ ನಾವು 3ನೇ ಸ್ಥಾನದಲ್ಲಿದ್ದೇವು. ಕಾಂಗ್ರೆಸ್‌ಗೆ ಬರಬೇಕು ಅಂತ ಮನಗೊಳಿ ಅವರು ಆಸೆ ಪಟ್ಟು ಬಂದರು. ಹಾಗಾಗಿ ಅವರಿಗೆ ಟಿಕೆಟ್ ನೀಡಿದ್ದೇವು. ಅಲ್ಲಿ ಗೆಲುವು ದಾಖಲಿಸುವ ವಿಶ್ವಾಸವಿತ್ತು. ಜನ ಕಾಂಗ್ರೆಸ್‌ಗೆ ನೀಡಿರುವ ಮತ ನನಗೆ ಸಮಾಧಾನ ತಂದಿದೆ. ಸಿಂದಗಿಯಲ್ಲಿ ಸೋತಿದ್ದರು ಸಮಾಧಾನ ತಂದಿದೆ” ಎಂದಿದ್ದಾರೆ.

“ಒಳ್ಳೆ ಬೆಳವಣಿಗೆ ಆಗ್ತಿದೆ. 2 ಕ್ಷೇತ್ರದ ಚುನಾವಣೆ ಫಲಿತಾಂಶ ನೋಡಿದರೆ, ಜನ ರಾಜ್ಯದಲ್ಲಿ ಬದಲಾವಣೆ ಬಯಸುತ್ತಿದ್ದಾರೆ. ಎರಡು ಕ್ಷೇತ್ರದಲ್ಲಿ ಒಂದು ದಳ ಮತ್ತು ಒಂದು ಬಿಜೆಪಿ ಸೀಟ್ ಇದ್ದವು . ದಳದ ಸೀಟ್ ಬಿಜೆಪಿ ಕಿತ್ತುಕೊಂಡಿದೆ. ಬಿಜೆಪಿ ಸೀಟ್ ಕಾಂಗ್ರೆಸ್ ಕಿತ್ತುಕಂಡಿದೆ. ಇದು ದೇಶಕ್ಕೆ ದೊಡ್ಡ ಸಂದೇಶ. ಮತದಾರ ಕಾಂಗ್ರೆಸ್ ಕಡೆ ನೋಡುತ್ತಿದ್ದಾರೆ. ಅವರ ನಂಬಿಕೆ, ವಿಶ್ವಾಸ, ಪ್ರೀತಿ ಇಟ್ಟುಕೊಂಡು ಮುಂದೆ ಮತ್ತಷ್ಟು ಉತ್ತಮ ಕೆಲಸ ಮಾಡುತ್ತೇವೆ” ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಇದನ್ನೂ ಓದಿ: ಅಪ್ಪು ಅಗಲಿಕೆ: ಎಲ್ಲಾ ನಟರ ಅಭಿಮಾನಿಗಳಿಂದ ’ಸ್ಟಾಪ್ ಫ್ಯಾನ್ಸ್ ವಾರ್’ ಅಭಿಯಾನ

ಸಿಂದಗಿ ಉಪಚುನಾವಣಾ ಕಣದಲ್ಲಿದ್ದ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳು

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ “ಚುನಾವಣೆ ಫಲಿತಾಂಶ ನಿರಾಸೆ ತಂದಿದೆ. ಎಂ. ಸಿ.ಮನಗೊಳಿ ಅವರ ಮಗನನ್ನು ಹೈಜಾಕ್ ಮಾಡಲಾಯಿತು. ನಮ್ಮ ಸಂಘಟನೆಯ ಕೊರತೆಯಿಂದ ಹಿನ್ನೆಡೆ ಆಯಿತು. ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಗುರುತಿಸುವದು ಕಷ್ಟ ಆಗಿದೆ. ಚುನಾವಣಾ ಫಲಿತಾಂಶ ಆಘಾತ ತಂದಿಲ್ಲ. ನಾನು ಉಪ ಚುನಾವಣೆಗೆ ಒತ್ತು ಕೊಡುವುದಿಲ್ಲ. ನನ್ನ ಗಮನ ಇರುವದು 2023ಕ್ಕೆ ಪಕ್ಷವನ್ನು ಸ್ವತಂತ್ರವಾಗಿ ಆಡಳಿತಕ್ಕೆ ತರುವುದು ನಮ್ಮ ಗುರಿ. ನಮ್ಮ ಗಮನ ಇರುವುದು ಆ ಕಡೆಗೆ” ಎಂದು ಹೇಳಿದ್ದಾರೆ.

ಸಿಂದಗಿ ಚುನಾವಣೆ ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿತ್ತು. ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಸರ್ಕಾರ ಎಂಬ ಧ್ಯೇಯ ಇಟ್ಟುಕೊಂಡು ಮತಯಾಚಿಸಿತ್ತು. ಕ್ಷೇತ್ರ ಅಭಿವೃದ್ಧಿಯಾಗಲು ಬಿಜೆಪಿಗೆ ಮತ ನೀಡಬೇಕು ಎಂದು ಪ್ರಚಾರ ನಡೆಸಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ವಸತಿ ಸಚಿವ ವಿ.ಸೋಮಣ್ಣ, ಸಚಿವ ಲಕ್ಷ್ಮಣ್ ಸವದಿ ಆದಿಯಾಗಿ ಬಿಜೆಪಿ ನಾಯಕರು ಕಣದಲ್ಲಿ ತೊಡಗಿಸಿಕೊಂಡಿದ್ದರು.

ದಿವಂಗತ ಎಂ.ಸಿ.ಮನಗೊಳಿ ಅವರ ಪುತ್ರ ಅಶೋಕ್ ಮಲ್ಲಪ್ಪ ಮನಗೊಳಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿ, ಅನುಕಂಪದ ಮತಗಳ ಮೇಲೆ ಕಣ್ಣಿಟ್ಟಿತ್ತು. ಬಿಜೆಪಿಯು ಈ ಹಿಂದೆ ಎರಡು ಬಾರಿ ಶಾಸಕರಾಗಿದ್ದ, ಕಳೆದ ಚುನಾವಣೆಯಲ್ಲಿ ಎಂ.ಸಿ.ಮನಗೊಳಿ ಎದುರು 9 ಸಾವಿರ ಮತಗಳ ಅಂತರದಿಂದ ಸೋಲು ಕಂಡಿದ್ದ ರಮೇಶ್ ಭೂಸನೂರ್ ಅವರನ್ನು ಕಣಕ್ಕಿಳಿಸಿತ್ತು. ಈಗ ಭರ್ಜರಿ 31,088 ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ.

ಜೆಡಿಎಸ್ ನಾಜಿಯಾ ಅಂಗಡಿಯವರನ್ನು ಕಣಕ್ಕಿಳಿಸಿತ್ತು. ಅಲ್ಪಸಂಖ್ಯಾತ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವ ಜೆಡಿಎಸ್, ಮತ ವಿಭಜನೆಗೆ ಮುನ್ನುಡಿ ಹಾಡಲು ಯತ್ನಿಸಿದೆ ಎಂಬ ಆರೋಪವನ್ನು ಎದುರಿಸಿತ್ತು.


ಇದನ್ನೂ ಓದಿ: 29 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ: ಬಿಜೆಪಿ- ಕಾಂಗ್ರೆಸ್‌ ನಡುವೆ ಭಾರೀ ಫೈಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...