Homeಕರ್ನಾಟಕರಾಜ್ಯ ಉಪಚುನಾವಣೆ ಫಲಿತಾಂಶ: ಸಿಂದಗಿಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು

ರಾಜ್ಯ ಉಪಚುನಾವಣೆ ಫಲಿತಾಂಶ: ಸಿಂದಗಿಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು

- Advertisement -
- Advertisement -

ಭಾರಿ ಕುತೂಹಲ ಮೂಡಿಸಿದ್ದ ಕರ್ನಾಟಕದ ಉಪಚುನಾವಣೆಯಲ್ಲಿ ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಮತ ಎಣಿಕೆ ಆರಂಭವಾದಾಗಿನಿಂದ ಮುನ್ನಡೆ ಸಾಧಿಸಿದ್ದ ಬಿಜೆಪಿ 22ನೇ ಸುತ್ತಿನಲ್ಲಿ 31,088 ಮತಗಳ ಅಂತರ ಕಾಯ್ದುಕೊಂಡಿತ್ತು.

ವಿಜಯಪುರದ ಸಿಂದಗಿಯ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು 93,380 ಮತಗಳು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ 62,292 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ ಕೇವಲ 4,321 ಮತಗಳನ್ನು ಪಡೆದಿದ್ದಾರೆ.

ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು 20ನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ ಅವರಿಂದ 28,462 ಮತಗಳ ಅಂತರ ಕಾಯ್ದುಕೊಂಡಿದ್ದರು.

ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ, ಪಕ್ಷದ ನಾಯಕರು ಮತ್ತು ಕಾರ್ಯರ್ತರು ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ. ಚುನಾವಣೆಯ ಉಸ್ತುವಾರಿ ವಹಿಸಿದ್ದ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಸಿಂದಗಿಗೆ ಬಂದಿದ್ದು ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದಾರೆ.

ಇದನ್ನೂ ಓದಿ: ಸಿಂದಗಿ ಉಪಚುನಾವಣೆ: ಕಾಂಗ್ರೆಸ್, ಬಿಜೆಪಿ ನಡುವೆ ನೇರಾನೇರ ಪೈಪೋಟಿ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಜೆಡಿಎಸ್ ಚಿತ್ತ ಏನು?

’ಸಿಂದಗಿಯಲ್ಲಿ ಜನ ಅಭಿವೃದ್ಧಿ ಬಯಸಿದ್ದಾರೆ. ಹಾಗಾಗಿ ಜನ ಮತ ಹಾಕಿದ್ದಾರೆ. ನಾವು ಕೂಡ ಭರವಸೆಯನ್ನು ನೀಡಿದ್ದೇವು. ಇದನ್ನು ಜನ ನಂಬಿಕೆ ಇಟ್ಟು ಆಡಳಿತ ಪಕ್ಷಕ್ಕೆ ಮತ ಹಾಕಿದ್ದಾರೆ’ ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿದ್ದಾರೆ.

“ಸಿಂದಗಿ ಉಪಚುನಾವಣೆಯಲ್ಲಿ ಉತ್ತಮ ಅಂತರದಲ್ಲಿ ವಿಜಯ ಸಾಧಿಸಿದ ಪಕ್ಷದ ಅಭ್ಯರ್ಥಿ ರಮೇಶ್ ಭೂಸನೂರ್ ಅವರಿಗೆ ಅಭಿನಂದನೆಗಳು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳು, ರಾಜ್ಯ ಬಿಜೆಪಿ ಸರ್ಕಾರದ ಜನಪರ ಯೋಜನೆಗಳನ್ನು ಜನ ಮೆಚ್ಚಿದ್ದಾರೆ ಎನ್ನುವುದಕ್ಕೆ ಈ ಕ್ಷೇತ್ರದಲ್ಲಿ ಪಕ್ಷದ ಗೆಲುವು ಸಂಕೇತವಾಗಿದೆ” ಎಂದು ಮಾಜಿ ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಸಿಂದಗಿ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌,  “ಸಿಂದಗಿಯಲ್ಲಿ ನಾವು 3ನೇ ಸ್ಥಾನದಲ್ಲಿದ್ದೇವು. ಕಾಂಗ್ರೆಸ್‌ಗೆ ಬರಬೇಕು ಅಂತ ಮನಗೊಳಿ ಅವರು ಆಸೆ ಪಟ್ಟು ಬಂದರು. ಹಾಗಾಗಿ ಅವರಿಗೆ ಟಿಕೆಟ್ ನೀಡಿದ್ದೇವು. ಅಲ್ಲಿ ಗೆಲುವು ದಾಖಲಿಸುವ ವಿಶ್ವಾಸವಿತ್ತು. ಜನ ಕಾಂಗ್ರೆಸ್‌ಗೆ ನೀಡಿರುವ ಮತ ನನಗೆ ಸಮಾಧಾನ ತಂದಿದೆ. ಸಿಂದಗಿಯಲ್ಲಿ ಸೋತಿದ್ದರು ಸಮಾಧಾನ ತಂದಿದೆ” ಎಂದಿದ್ದಾರೆ.

“ಒಳ್ಳೆ ಬೆಳವಣಿಗೆ ಆಗ್ತಿದೆ. 2 ಕ್ಷೇತ್ರದ ಚುನಾವಣೆ ಫಲಿತಾಂಶ ನೋಡಿದರೆ, ಜನ ರಾಜ್ಯದಲ್ಲಿ ಬದಲಾವಣೆ ಬಯಸುತ್ತಿದ್ದಾರೆ. ಎರಡು ಕ್ಷೇತ್ರದಲ್ಲಿ ಒಂದು ದಳ ಮತ್ತು ಒಂದು ಬಿಜೆಪಿ ಸೀಟ್ ಇದ್ದವು . ದಳದ ಸೀಟ್ ಬಿಜೆಪಿ ಕಿತ್ತುಕೊಂಡಿದೆ. ಬಿಜೆಪಿ ಸೀಟ್ ಕಾಂಗ್ರೆಸ್ ಕಿತ್ತುಕಂಡಿದೆ. ಇದು ದೇಶಕ್ಕೆ ದೊಡ್ಡ ಸಂದೇಶ. ಮತದಾರ ಕಾಂಗ್ರೆಸ್ ಕಡೆ ನೋಡುತ್ತಿದ್ದಾರೆ. ಅವರ ನಂಬಿಕೆ, ವಿಶ್ವಾಸ, ಪ್ರೀತಿ ಇಟ್ಟುಕೊಂಡು ಮುಂದೆ ಮತ್ತಷ್ಟು ಉತ್ತಮ ಕೆಲಸ ಮಾಡುತ್ತೇವೆ” ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಇದನ್ನೂ ಓದಿ: ಅಪ್ಪು ಅಗಲಿಕೆ: ಎಲ್ಲಾ ನಟರ ಅಭಿಮಾನಿಗಳಿಂದ ’ಸ್ಟಾಪ್ ಫ್ಯಾನ್ಸ್ ವಾರ್’ ಅಭಿಯಾನ

ಸಿಂದಗಿ ಉಪಚುನಾವಣಾ ಕಣದಲ್ಲಿದ್ದ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳು

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ “ಚುನಾವಣೆ ಫಲಿತಾಂಶ ನಿರಾಸೆ ತಂದಿದೆ. ಎಂ. ಸಿ.ಮನಗೊಳಿ ಅವರ ಮಗನನ್ನು ಹೈಜಾಕ್ ಮಾಡಲಾಯಿತು. ನಮ್ಮ ಸಂಘಟನೆಯ ಕೊರತೆಯಿಂದ ಹಿನ್ನೆಡೆ ಆಯಿತು. ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಗುರುತಿಸುವದು ಕಷ್ಟ ಆಗಿದೆ. ಚುನಾವಣಾ ಫಲಿತಾಂಶ ಆಘಾತ ತಂದಿಲ್ಲ. ನಾನು ಉಪ ಚುನಾವಣೆಗೆ ಒತ್ತು ಕೊಡುವುದಿಲ್ಲ. ನನ್ನ ಗಮನ ಇರುವದು 2023ಕ್ಕೆ ಪಕ್ಷವನ್ನು ಸ್ವತಂತ್ರವಾಗಿ ಆಡಳಿತಕ್ಕೆ ತರುವುದು ನಮ್ಮ ಗುರಿ. ನಮ್ಮ ಗಮನ ಇರುವುದು ಆ ಕಡೆಗೆ” ಎಂದು ಹೇಳಿದ್ದಾರೆ.

ಸಿಂದಗಿ ಚುನಾವಣೆ ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿತ್ತು. ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಸರ್ಕಾರ ಎಂಬ ಧ್ಯೇಯ ಇಟ್ಟುಕೊಂಡು ಮತಯಾಚಿಸಿತ್ತು. ಕ್ಷೇತ್ರ ಅಭಿವೃದ್ಧಿಯಾಗಲು ಬಿಜೆಪಿಗೆ ಮತ ನೀಡಬೇಕು ಎಂದು ಪ್ರಚಾರ ನಡೆಸಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ವಸತಿ ಸಚಿವ ವಿ.ಸೋಮಣ್ಣ, ಸಚಿವ ಲಕ್ಷ್ಮಣ್ ಸವದಿ ಆದಿಯಾಗಿ ಬಿಜೆಪಿ ನಾಯಕರು ಕಣದಲ್ಲಿ ತೊಡಗಿಸಿಕೊಂಡಿದ್ದರು.

ದಿವಂಗತ ಎಂ.ಸಿ.ಮನಗೊಳಿ ಅವರ ಪುತ್ರ ಅಶೋಕ್ ಮಲ್ಲಪ್ಪ ಮನಗೊಳಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿ, ಅನುಕಂಪದ ಮತಗಳ ಮೇಲೆ ಕಣ್ಣಿಟ್ಟಿತ್ತು. ಬಿಜೆಪಿಯು ಈ ಹಿಂದೆ ಎರಡು ಬಾರಿ ಶಾಸಕರಾಗಿದ್ದ, ಕಳೆದ ಚುನಾವಣೆಯಲ್ಲಿ ಎಂ.ಸಿ.ಮನಗೊಳಿ ಎದುರು 9 ಸಾವಿರ ಮತಗಳ ಅಂತರದಿಂದ ಸೋಲು ಕಂಡಿದ್ದ ರಮೇಶ್ ಭೂಸನೂರ್ ಅವರನ್ನು ಕಣಕ್ಕಿಳಿಸಿತ್ತು. ಈಗ ಭರ್ಜರಿ 31,088 ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ.

ಜೆಡಿಎಸ್ ನಾಜಿಯಾ ಅಂಗಡಿಯವರನ್ನು ಕಣಕ್ಕಿಳಿಸಿತ್ತು. ಅಲ್ಪಸಂಖ್ಯಾತ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವ ಜೆಡಿಎಸ್, ಮತ ವಿಭಜನೆಗೆ ಮುನ್ನುಡಿ ಹಾಡಲು ಯತ್ನಿಸಿದೆ ಎಂಬ ಆರೋಪವನ್ನು ಎದುರಿಸಿತ್ತು.


ಇದನ್ನೂ ಓದಿ: 29 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ: ಬಿಜೆಪಿ- ಕಾಂಗ್ರೆಸ್‌ ನಡುವೆ ಭಾರೀ ಫೈಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...