Homeಕರ್ನಾಟಕರಾಜ್ಯ ಉಪಚುನಾವಣೆ ಫಲಿತಾಂಶ: ಸಿಂದಗಿಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು

ರಾಜ್ಯ ಉಪಚುನಾವಣೆ ಫಲಿತಾಂಶ: ಸಿಂದಗಿಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು

- Advertisement -
- Advertisement -

ಭಾರಿ ಕುತೂಹಲ ಮೂಡಿಸಿದ್ದ ಕರ್ನಾಟಕದ ಉಪಚುನಾವಣೆಯಲ್ಲಿ ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಮತ ಎಣಿಕೆ ಆರಂಭವಾದಾಗಿನಿಂದ ಮುನ್ನಡೆ ಸಾಧಿಸಿದ್ದ ಬಿಜೆಪಿ 22ನೇ ಸುತ್ತಿನಲ್ಲಿ 31,088 ಮತಗಳ ಅಂತರ ಕಾಯ್ದುಕೊಂಡಿತ್ತು.

ವಿಜಯಪುರದ ಸಿಂದಗಿಯ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು 93,380 ಮತಗಳು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ 62,292 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ ಕೇವಲ 4,321 ಮತಗಳನ್ನು ಪಡೆದಿದ್ದಾರೆ.

ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು 20ನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ ಅವರಿಂದ 28,462 ಮತಗಳ ಅಂತರ ಕಾಯ್ದುಕೊಂಡಿದ್ದರು.

ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ, ಪಕ್ಷದ ನಾಯಕರು ಮತ್ತು ಕಾರ್ಯರ್ತರು ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ. ಚುನಾವಣೆಯ ಉಸ್ತುವಾರಿ ವಹಿಸಿದ್ದ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಸಿಂದಗಿಗೆ ಬಂದಿದ್ದು ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದಾರೆ.

ಇದನ್ನೂ ಓದಿ: ಸಿಂದಗಿ ಉಪಚುನಾವಣೆ: ಕಾಂಗ್ರೆಸ್, ಬಿಜೆಪಿ ನಡುವೆ ನೇರಾನೇರ ಪೈಪೋಟಿ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಜೆಡಿಎಸ್ ಚಿತ್ತ ಏನು?

’ಸಿಂದಗಿಯಲ್ಲಿ ಜನ ಅಭಿವೃದ್ಧಿ ಬಯಸಿದ್ದಾರೆ. ಹಾಗಾಗಿ ಜನ ಮತ ಹಾಕಿದ್ದಾರೆ. ನಾವು ಕೂಡ ಭರವಸೆಯನ್ನು ನೀಡಿದ್ದೇವು. ಇದನ್ನು ಜನ ನಂಬಿಕೆ ಇಟ್ಟು ಆಡಳಿತ ಪಕ್ಷಕ್ಕೆ ಮತ ಹಾಕಿದ್ದಾರೆ’ ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿದ್ದಾರೆ.

“ಸಿಂದಗಿ ಉಪಚುನಾವಣೆಯಲ್ಲಿ ಉತ್ತಮ ಅಂತರದಲ್ಲಿ ವಿಜಯ ಸಾಧಿಸಿದ ಪಕ್ಷದ ಅಭ್ಯರ್ಥಿ ರಮೇಶ್ ಭೂಸನೂರ್ ಅವರಿಗೆ ಅಭಿನಂದನೆಗಳು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳು, ರಾಜ್ಯ ಬಿಜೆಪಿ ಸರ್ಕಾರದ ಜನಪರ ಯೋಜನೆಗಳನ್ನು ಜನ ಮೆಚ್ಚಿದ್ದಾರೆ ಎನ್ನುವುದಕ್ಕೆ ಈ ಕ್ಷೇತ್ರದಲ್ಲಿ ಪಕ್ಷದ ಗೆಲುವು ಸಂಕೇತವಾಗಿದೆ” ಎಂದು ಮಾಜಿ ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಸಿಂದಗಿ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌,  “ಸಿಂದಗಿಯಲ್ಲಿ ನಾವು 3ನೇ ಸ್ಥಾನದಲ್ಲಿದ್ದೇವು. ಕಾಂಗ್ರೆಸ್‌ಗೆ ಬರಬೇಕು ಅಂತ ಮನಗೊಳಿ ಅವರು ಆಸೆ ಪಟ್ಟು ಬಂದರು. ಹಾಗಾಗಿ ಅವರಿಗೆ ಟಿಕೆಟ್ ನೀಡಿದ್ದೇವು. ಅಲ್ಲಿ ಗೆಲುವು ದಾಖಲಿಸುವ ವಿಶ್ವಾಸವಿತ್ತು. ಜನ ಕಾಂಗ್ರೆಸ್‌ಗೆ ನೀಡಿರುವ ಮತ ನನಗೆ ಸಮಾಧಾನ ತಂದಿದೆ. ಸಿಂದಗಿಯಲ್ಲಿ ಸೋತಿದ್ದರು ಸಮಾಧಾನ ತಂದಿದೆ” ಎಂದಿದ್ದಾರೆ.

“ಒಳ್ಳೆ ಬೆಳವಣಿಗೆ ಆಗ್ತಿದೆ. 2 ಕ್ಷೇತ್ರದ ಚುನಾವಣೆ ಫಲಿತಾಂಶ ನೋಡಿದರೆ, ಜನ ರಾಜ್ಯದಲ್ಲಿ ಬದಲಾವಣೆ ಬಯಸುತ್ತಿದ್ದಾರೆ. ಎರಡು ಕ್ಷೇತ್ರದಲ್ಲಿ ಒಂದು ದಳ ಮತ್ತು ಒಂದು ಬಿಜೆಪಿ ಸೀಟ್ ಇದ್ದವು . ದಳದ ಸೀಟ್ ಬಿಜೆಪಿ ಕಿತ್ತುಕೊಂಡಿದೆ. ಬಿಜೆಪಿ ಸೀಟ್ ಕಾಂಗ್ರೆಸ್ ಕಿತ್ತುಕಂಡಿದೆ. ಇದು ದೇಶಕ್ಕೆ ದೊಡ್ಡ ಸಂದೇಶ. ಮತದಾರ ಕಾಂಗ್ರೆಸ್ ಕಡೆ ನೋಡುತ್ತಿದ್ದಾರೆ. ಅವರ ನಂಬಿಕೆ, ವಿಶ್ವಾಸ, ಪ್ರೀತಿ ಇಟ್ಟುಕೊಂಡು ಮುಂದೆ ಮತ್ತಷ್ಟು ಉತ್ತಮ ಕೆಲಸ ಮಾಡುತ್ತೇವೆ” ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಇದನ್ನೂ ಓದಿ: ಅಪ್ಪು ಅಗಲಿಕೆ: ಎಲ್ಲಾ ನಟರ ಅಭಿಮಾನಿಗಳಿಂದ ’ಸ್ಟಾಪ್ ಫ್ಯಾನ್ಸ್ ವಾರ್’ ಅಭಿಯಾನ

ಸಿಂದಗಿ ಉಪಚುನಾವಣಾ ಕಣದಲ್ಲಿದ್ದ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳು

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ “ಚುನಾವಣೆ ಫಲಿತಾಂಶ ನಿರಾಸೆ ತಂದಿದೆ. ಎಂ. ಸಿ.ಮನಗೊಳಿ ಅವರ ಮಗನನ್ನು ಹೈಜಾಕ್ ಮಾಡಲಾಯಿತು. ನಮ್ಮ ಸಂಘಟನೆಯ ಕೊರತೆಯಿಂದ ಹಿನ್ನೆಡೆ ಆಯಿತು. ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಗುರುತಿಸುವದು ಕಷ್ಟ ಆಗಿದೆ. ಚುನಾವಣಾ ಫಲಿತಾಂಶ ಆಘಾತ ತಂದಿಲ್ಲ. ನಾನು ಉಪ ಚುನಾವಣೆಗೆ ಒತ್ತು ಕೊಡುವುದಿಲ್ಲ. ನನ್ನ ಗಮನ ಇರುವದು 2023ಕ್ಕೆ ಪಕ್ಷವನ್ನು ಸ್ವತಂತ್ರವಾಗಿ ಆಡಳಿತಕ್ಕೆ ತರುವುದು ನಮ್ಮ ಗುರಿ. ನಮ್ಮ ಗಮನ ಇರುವುದು ಆ ಕಡೆಗೆ” ಎಂದು ಹೇಳಿದ್ದಾರೆ.

ಸಿಂದಗಿ ಚುನಾವಣೆ ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿತ್ತು. ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಸರ್ಕಾರ ಎಂಬ ಧ್ಯೇಯ ಇಟ್ಟುಕೊಂಡು ಮತಯಾಚಿಸಿತ್ತು. ಕ್ಷೇತ್ರ ಅಭಿವೃದ್ಧಿಯಾಗಲು ಬಿಜೆಪಿಗೆ ಮತ ನೀಡಬೇಕು ಎಂದು ಪ್ರಚಾರ ನಡೆಸಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ವಸತಿ ಸಚಿವ ವಿ.ಸೋಮಣ್ಣ, ಸಚಿವ ಲಕ್ಷ್ಮಣ್ ಸವದಿ ಆದಿಯಾಗಿ ಬಿಜೆಪಿ ನಾಯಕರು ಕಣದಲ್ಲಿ ತೊಡಗಿಸಿಕೊಂಡಿದ್ದರು.

ದಿವಂಗತ ಎಂ.ಸಿ.ಮನಗೊಳಿ ಅವರ ಪುತ್ರ ಅಶೋಕ್ ಮಲ್ಲಪ್ಪ ಮನಗೊಳಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿ, ಅನುಕಂಪದ ಮತಗಳ ಮೇಲೆ ಕಣ್ಣಿಟ್ಟಿತ್ತು. ಬಿಜೆಪಿಯು ಈ ಹಿಂದೆ ಎರಡು ಬಾರಿ ಶಾಸಕರಾಗಿದ್ದ, ಕಳೆದ ಚುನಾವಣೆಯಲ್ಲಿ ಎಂ.ಸಿ.ಮನಗೊಳಿ ಎದುರು 9 ಸಾವಿರ ಮತಗಳ ಅಂತರದಿಂದ ಸೋಲು ಕಂಡಿದ್ದ ರಮೇಶ್ ಭೂಸನೂರ್ ಅವರನ್ನು ಕಣಕ್ಕಿಳಿಸಿತ್ತು. ಈಗ ಭರ್ಜರಿ 31,088 ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ.

ಜೆಡಿಎಸ್ ನಾಜಿಯಾ ಅಂಗಡಿಯವರನ್ನು ಕಣಕ್ಕಿಳಿಸಿತ್ತು. ಅಲ್ಪಸಂಖ್ಯಾತ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವ ಜೆಡಿಎಸ್, ಮತ ವಿಭಜನೆಗೆ ಮುನ್ನುಡಿ ಹಾಡಲು ಯತ್ನಿಸಿದೆ ಎಂಬ ಆರೋಪವನ್ನು ಎದುರಿಸಿತ್ತು.


ಇದನ್ನೂ ಓದಿ: 29 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ: ಬಿಜೆಪಿ- ಕಾಂಗ್ರೆಸ್‌ ನಡುವೆ ಭಾರೀ ಫೈಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...