Homeಮುಖಪುಟಕೇಂದ್ರದಿಂದ ಹೆಚ್ಚಿನ ಆರ್ಥಿಕ ಅನುದಾನಕ್ಕೆ ರಾಜ್ಯ ಕಾಂಗ್ರೆಸ್‌ ಒತ್ತಾಯ

ಕೇಂದ್ರದಿಂದ ಹೆಚ್ಚಿನ ಆರ್ಥಿಕ ಅನುದಾನಕ್ಕೆ ರಾಜ್ಯ ಕಾಂಗ್ರೆಸ್‌ ಒತ್ತಾಯ

ಕೊರೋನಾ ರೋಗ ಹರಡುವಿಕೆಯಲ್ಲಿ ಧರ್ಮವನ್ನು ಎಳೆದುಕೊಂಡು, ಒಂದು ಕೋಮಿನ ಜನರನ್ನು ಗುರಿಯಾಗಿಸಿ ಅವರ ವಿರುದ್ಧ ಅಪಪ್ರಚಾರ ಮಾಡುವವರ ಮೇಲೆ ಕ್ರಮ ಜರುಗಿಸಿದ ಪೊಲೀಸ್ ಅಧಿಕಾರಿಗಳನ್ನೇ ವರ್ಗಾವಣೆ ಮಾಡಿರುವುದು ಖಂಡನೀಯ ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರದಿಂದ ಹೆಚ್ಚಿನ ಆರ್ಥಿಕ ಅನುದಾನ ಸೇರಿದಂತೆ ಸರ್ಕಾರ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಕೆಪಿಸಿಸಿ ವತಿಯಿಂದ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯನವರು ಇಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

WHO ಮಾರ್ಗಸೂಚಿಯ ಪ್ರಕಾರ ಕೊರೋನಾ ರೋಗ ನಿಯಂತ್ರಣಕ್ಕೆ ಪ್ರಾಥಮಿಕವಾಗಿ 10 ಲಕ್ಷ ಜನಸಂಖ್ಯೆಗೆ 10 ಸಾವಿರ ಜನರನ್ನು ಪರೀಕ್ಷೆಗೆ ಒಳಪಡಿಸಬೇಕಾಗಿರುತ್ತದೆ. ಆದರೆ ಇಲ್ಲಿಯವರೆಗೂ ನಮ್ಮ ರಾಜ್ಯದಲ್ಲಿ ಹಾಗೂ ರಾಷ್ಟ್ರದಲ್ಲಿ ಪ್ರತಿ 10 ಲಕ್ಷಕ್ಕೆ ಕೇವಲ 152 ಜನರನ್ನು ಪರೀಕ್ಷೆಗೆ ಒಳಪಡಿಸಿದ್ದರೂ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ಒಟ್ಟು 12 ಲಕ್ಷ ಕಿಟ್‌ಗಳ ಅಗತ್ಯವಿದ್ದು, ಈಗ ಕೇವಲ 2,27,000 ಕಿಟ್‍ಗಳಿವೆ, 5,46,721 ಎನ್-95 ಮಾಸ್ಕ್‌ಗಳು ಮತ್ತು 2,79,999 ಹೈಡ್ರಾಕ್ಸಿಕ್ಲೋರಾಕ್ಸಿನ್ ಮಾತ್ರೆಗಳಿವೆ. ಇವು ಯಾವುದಕ್ಕೂ ಸಾಲುವುದಿಲ್ಲ ಎಂಬಂತಾಗಿದೆ. ರಾಜ್ಯದಲ್ಲಿರುವ 18 ಕೊರೊನಾ ಪರೀಕ್ಷೆ ಲ್ಯಾಬ್‍ಗಳಲ್ಲಿ 9 ಲ್ಯಾಬ್‍ಗಳು ಬೆಂಗಳೂರಿನಲ್ಲಿಯೇ ಇವೆ ಎಂದು ಮನವಿ ಪತ್ರದಲ್ಲಿ ದೂರಲಾಗಿದೆ.

ವಿಶ್ವವ್ಯಾಪಿಯಾಗಿ ಹರಡಿರುವ ಕೊರೊನಾ ರೋಗವನ್ನು “ರಾಷ್ಟ್ರೀಯ ವಿಪತ್ತು” ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಲು ಮತ್ತು ಕೊರೋನಾ ರೋಗ ನಿವಾರಣೆ ಹಾಗೂ ಲಾಕ್‍ಡೌನ್ ಅವಧಿಯಲ್ಲಿ ಜನರ ಸಂಕಷ್ಟಕ್ಕೆ ಎಲ್ಲಾ ರೀತಿಯ ಆರ್ಥಿಕ ಹಾಗೂ ಇನ್ನಿತರ ಸಹಾಯ ನೀಡಲು ರಾಜ್ಯ ಸರ್ಕಾರ ಕೇಂದ್ರವನ್ನು ಒತ್ತಾಯಿಸಬೇಕು. ಲಾಕ್‍ಡೌನ್ ಅವಧಿಯಲ್ಲಿ ಎಲ್ಲಾ ಅಸಂಘಟಿತ ವಲಯದ ಕಾರ್ಮಿಕರು, ಕೂಲಿಕೆಲಸಗಾರರು ಹಾಗೂ ಬಡವರಿಗೆ ತಲಾ ಪ್ರತಿ ತಿಂಗಳು ಕನಿಷ್ಠ 10 ಕೆ.ಜಿ. ಅಕ್ಕಿ, ಹಾಲು, 2 ಲೀಟರ್ ಅಡುಗೆ ಎಣ್ಣೆ, ತರಕಾರಿ ಮುಂತಾದ ಅಗತ್ಯ ಪದಾರ್ಥಗಳನ್ನು ಪ್ರತಿ ತಿಂಗಳ ಮೊದಲ ವಾರ ಒದಗಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ಕೊರೋನಾ ರೋಗ ಹರಡುವಿಕೆಯಲ್ಲಿ ಧರ್ಮವನ್ನು ಎಳೆದುಕೊಂಡು, ಒಂದು ಕೋಮಿನ ಜನರನ್ನು ಗುರಿಯಾಗಿಸಿ ಅವರ ವಿರುದ್ಧ ಅಪಪ್ರಚಾರ ಮಾಡುವವರ ಮೇಲೆ ಕ್ರಮ ಜರುಗಿಸಿದ ಪೊಲೀಸ್ ಅಧಿಕಾರಿಗಳನ್ನೇ ವರ್ಗಾವಣೆ ಮಾಡಿರುವುದು ಖಂಡನೀಯ. ತಕ್ಷಣ ಸರ್ಕಾರ ತನ್ನ ನಿರ್ಧಾರ ಬದಲಿಸಿ, ಕೋಮುಪ್ರಚೋದನೆ ನೀಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು. ಲಾಕ್‍ಡೌನ್ ಅವಧಿಯಲ್ಲಿ ಸರ್ಕಾರದಿಂದ ಹಂಚಿಕೆ ಮಾಡುತ್ತಿರುವ ಆಹಾರ ಪದಾರ್ಥಗಳ ಕಿಟ್ ಮೇಲೆ ಆಡಳಿತ ಪಕ್ಷದ ನಾಯಕರುಗಳು ತಮ್ಮ ಪಕ್ಷದ ಚಿನ್ಹೆ ಹೊಂದಿರುವ ಲೇಬಲ್‍ಗಳನ್ನು ಅಂಟಿಸಿ ಮತದಾರರನ್ನು ಓಲೈಸಿಕೊಳ್ಳುವ ಹೀನ ರಾಜಕೀಯ ಪ್ರವೃತ್ತಿಯನ್ನು ತೋರುತ್ತಿದ್ದಾರೆ. ಇಂತಹ ಸರ್ಕಾರಿ ಸೌಲಭ್ಯಗಳ ದುರುಪಯೋಗವನ್ನು ತಡೆಯಬೇಕು ಎಂದು ಆಗ್ರಹಿಸಲಾಗಿದೆ.

ಲಾಕ್‍ಡೌನ್ ಅವಧಿಯಲ್ಲಿ ನರೇಗಾ ಯೋಜನೆಯನ್ನು ಸ್ಥಗಿತಗೊಳಿಸಿದ ಕಾರಣ ನೋಂದಾಯಿತ ಕಾರ್ಮಿಕರಿಗೆ ಕೆಲಸವಿಲ್ಲದಂತಾಗಿದೆ, ಹಾಗಾಗಿ ಇವರಿಗೆ ಲಾಕ್‍ಡೌನ್ ಅವಧಿಯ ದಿನಗೂಲಿಯನ್ನು ಬ್ಯಾಂಕ್ ಖಾತೆಗಳಿಗೆ ಸರ್ಕಾರ ಜಮಾ ಮಾಡಬೇಕು ಮತ್ತು ಕೂಡಲೇ ನರೇಗಾ ಯೋಜನೆಯಲ್ಲಿ ನೋಂದಾಯಿತ ಕಾರ್ಮಿಕರಿಗೆ ಕೆಲಸಕ್ಕೆ ಅವಕಾಶ ಮಾಡಿಕೊಡಬೇಕು. ಜೀವ ಮತ್ತು ಜೀವನವನ್ನು ಉಳಿಸಿ, ಬೆಳೆಸಲು, ಹದಗೆಟ್ಟಿರುವ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಕೂಡಲೇ ರಾಜಕೀಯ ತಜ್ಞರು, ಆರ್ಥಿಕ ತಜ್ಞರು, ಉದ್ಯಮಿಗಳು, ಕಾರ್ಮಿಕ ಸಂಘಟನೆಗಳ ನಾಯಕರಗಳನ್ನು ಒಳಗೊಂಡಿರುವ ಕಾರ್ಯಪಡೆಯನ್ನು ರಚಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ಕೊರೊನಾ ರೋಗದ ಕಾರಣದಿಂದ ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಬಗ್ಗೆ ಆತಂಕದಲ್ಲಿದ್ದಾರೆ. ಈ ಆತಂಕವನ್ನು ದೂರ ಮಾಡಲು ಸರ್ಕಾರ ಕೂಡಲೇ ವಿದ್ಯಾರ್ಥಿಗಳಿಗೆ ಮುಂದಿನ ತರಗತಿಗಳ ಹಾಗೂ ಪರೀಕ್ಷೆ ದಿನಾಂಕಕ್ಕೆ ಸಂಬಂಧಪಟ್ಟ ಸೂಕ್ತ ಮಾಹಿತಿ ನೀಡಬೇಕು ಎಂದು ಸಹ ತಿಳಿಸಲಾಗಿದೆ.


ಇದನ್ನೂ ಓದಿ: ಪ್ರಧಾನಿ ಪರಿಹಾರ ನಿಧಿಯಿಂದ ಹಣ ತೆಗೆಯಲು ಸೋನಿಯಾ ಒಪ್ಪಿಗೆ ಬೇಕೆ? ಅದಕ್ಕಾಗಿ ಮೋದಿ PM CARES ಶುರು ಮಾಡಿದರೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...