Homeಕರ್ನಾಟಕಕನ್ನಡ-ಸಂಸ್ಕೃತಿ ಇಲಾಖೆಯಿಂದ ರಾಷ್ಟ್ರೀಯ, ರಾಜ್ಯ ಪ್ರಶಸ್ತಿಗಳ ಘೋಷಣೆ: ಆನಂದ್ ತೇಲ್ತುಂಬ್ಡೆ ಸೇರಿ ಹಲವರಿಗೆ ಪ್ರಶಸ್ತಿ

ಕನ್ನಡ-ಸಂಸ್ಕೃತಿ ಇಲಾಖೆಯಿಂದ ರಾಷ್ಟ್ರೀಯ, ರಾಜ್ಯ ಪ್ರಶಸ್ತಿಗಳ ಘೋಷಣೆ: ಆನಂದ್ ತೇಲ್ತುಂಬ್ಡೆ ಸೇರಿ ಹಲವರಿಗೆ ಪ್ರಶಸ್ತಿ

- Advertisement -
- Advertisement -

ಕನ್ನಡ ಮತ್ತು ಸಂಸ್ಕೃತಿ ಇಲಾಖೆ 2022–23 ಹಾಗೂ 2023–24ನೇ ಸಾಲಿನ ವಿವಿಧ ರಾಷ್ಟ್ರೀಯ ಮತ್ತು ರಾಜ್ಯ ಪ್ರಶಸ್ತಿಗಳನ್ನು ಘೋಷಿಸಿದೆ.

ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಈ ಕುರಿತು ಮಾತನಾಡಿದ್ದು, ಬಸವ ರಾಷ್ಟ್ರೀಯ ಪ್ರಶಸ್ತಿ, ಭಗವಾನ್‌ ಮಹಾವೀರ ಶಾಂತಿ ಪ್ರಶಸ್ತಿ, ಟಿ. ಚೌಡಯ್ಯ ಪ್ರಶಸ್ತಿ, ಪ್ರತಿಷ್ಠಿತ ಪಂಪ ಪ್ರಶಸ್ತಿ ಸೇರಿದಂತೆ ವಿವಿಧ ರಾಜ್ಯಮಟ್ಟದ ಪ್ರಶಸ್ತಿಗಳಿಗೆ ಪುರಸ್ಕೃತರನ್ನು ಆಯ್ಕೆ ಮಾಡಲಾಗಿದೆ. ಜನವರಿ 31ರಂದು ಬೆಂಗಳೂರಿನ ರವಿಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಬಸವ ರಾಷ್ಟ್ರೀಯ ಪುರಸ್ಕಾರ: ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಪ್ರಖರ ಚಿಂತಕ ಆನಂದ್ ತೇಲ್ತುಂಬ್ಡೆ ಅವರು ಆಯ್ಕೆಯಾಗಿದ್ದಾರೆ. ಡಾ.ಎನ್.ಜಿ. ಮಹದೇವಪ್ಪ ಅವರನ್ನು ಕೂಡ ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.

ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿ: ಧಾರವಾಡದ ಜಿನದತ್ತ ದೇಸಾಯಿ ಹಾಗೂ ಗುಜರಾತ್‌ನ ಗಾಂಧಿ ಸೇವಾಶ್ರಮ ಆಯ್ಕೆಯಾಗಿದೆ.

ಟಿ.ಚೌಡಯ್ಯ ಪ್ರಶಸ್ತಿ; ಕೊಳಲು ವಾದಕ ನಿತ್ಯಾನಂದ ಹಳದಿಪುರ, ಕೋಲಾರದ ನಾದಸ್ವರ ಕಲಾವಿದ ಶ್ರೀರಾಮುಲು ಆಯ್ಕೆಯಾಗಿದ್ದಾರೆ.

ಗಾಯನಯೋಗಿ ಪಂ.ಪಂಚಾಕ್ಷರಿ ಗವಾಯಿ ಪ್ರಶಸ್ತಿ; ಹಿಂದೂಸ್ಥಾನಿ ಗಾಯಕ ಧಾರವಾಡದ ಪಂ. ಸೋಮನಾಥ ಮರಡೂರ ಹಾಗೂ ಕರ್ನಾಟಕ ಸಂಗೀತದ ಮೈಸೂರಿನ ಡಾ.ನಾಗಮಣಿ ಶ್ರೀನಾಥ್ ಆಯ್ಕೆಯಾಗಿದ್ದಾರೆ.

ಪ್ರೊ. ಕೆ.ಜಿ.ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ: ಮಹಾರಾಷ್ಟ್ರದ ಡಾ. ಕೆ.ವಿಶ್ವನಾಥ್ ಕಾರ್ನಾಡ, ಬೆಳಗಾವಿಯ ಚಂದ್ರಕಾಂತ ಪೋಕಳೆ ಆಯ್ಕೆಯಾಗಿದ್ದಾರೆ.

ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ: ಹಾಸನದ ಬಾನು ಮುಷ್ತಾಕ್, ರಾಯಚೂರಿನ ಎಚ್‌.ಎಸ್.ಮುಕ್ತಾಯಕ್ಕ ಆಯ್ಕೆಯಾಗಿದ್ದಾರೆ.

ಬಿ.ವಿ.ಕಾರಂತ ಪ್ರಶಸ್ತಿ: ಬೆಂಗಳೂರಿನ ಸಿ.ಬಸವಲಿಂಗಯ್ಯ, ಮಂಗಳೂರಿನ ಸದಾನಂದ ಸುವರ್ಣ ಅವರು ಆಯ್ಕೆಯಾಗಿದ್ದಾರೆ.

ಡಾ. ಗುಬ್ಬಿ ವೀರಣ್ಣ ಪ್ರಶಸ್ತಿ: ತುಮಕೂರಿನ ಚನ್ನಬಸಯ್ಯ ಗುಬ್ಬಿ, ವಿಜಯಪುರದ ಎಲ್.ಬಿ.ಶೇಖ್ ಮಾಸ್ತರ ಅವರು ಆಯ್ಕೆಯಾಗಿದ್ದಾರೆ.

ಡಾ. ಸಿದ್ದಲಿಂಗಯ್ಯ ಸಾಹಿತ್ಯ ಪ್ರಶಸ್ತಿ: ಹಂಪಿ ಡಾ.ಮೊಗಳ್ಳಿ ಗಣೇಶ್, ಉತ್ತಮ ಕಾಂಬ್ಳೆ , ದಾವಣಗೆರೆಯ ಬಿ.ಟಿ.ಜಾಹ್ನವಿ ಅವರು ಆಯ್ಕೆಯಾಗಿದ್ದಾರೆ.

ಸಂಗೊಳ್ಳಿ ರಾಯಣ್ಣ ಪ್ರಶಸ್ತಿ: ಬೆಂಗಳೂರಿನ ಕೆ. ಮರುಳಸಿದ್ದಪ್ಪ, ಬೆಳಗಾವಿಯ ಹಸನ್‌ ನಯೀಂ ಸುರಕೋಡ, ಕೋಲಾರದ ಕೆ. ರಾಮಯ್ಯ, ಬಳ್ಳಾರಿಯ ವೀರಸಂಗಯ್ಯ ಅವರು ಆಯ್ಕೆಯಾಗಿದ್ದಾರೆ.

ಅಕ್ಕಮಹಾದೇವಿ ಪ್ರಶಸ್ತಿ: ಧಾರವಾಡದ ಜಗನ್ಮಾತೆ ಅಕ್ಕಮಹಾದೇವಿ ಆಶ್ರಮ ಟ್ರಸ್ಟ್, ಮಂಡ್ಯದ ಡಾ. ಆರ್.ಸುನಂದಮ್ಮ, ಕಲಬುರಗಿಯ ಮೀನಾಕ್ಷಿ ಬಾಳಿ, ಬೆಂಗಳೂರಿನ ಡಾ. ವಸುಂಧರಾ ಭೂಪತಿ ಅವರು ಆಯ್ಕೆಯಾಗಿದ್ದಾರೆ.

ಕನಕಶ್ರೀ ಪ್ರಶಸ್ತಿ: ಹಾವೇರಿಯ ಡಾ. ಲಿಂಗದಹಳ್ಳಿ ಹಾಲಪ್ಪ, ಮಂಗಳೂರಿನ ಡಾ. ಬಿ.ಶೆಟ್ಟಿ ಆಯ್ಕೆಯಾಗಿದ್ದಾರೆ.

ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ: ಮೈಸೂರಿನ ಜಿ.ಎಲ್.ಎನ್.ಸಿಂಹ,  ಕಲಬುರಗಿಯ ಬಸವರಾಜ್ ಎಲ್.ಜಾನೆ ಆಯ್ಕೆಯಾಗಿದ್ದಾರೆ.

ಜಾನಪದಶ್ರೀ ಪ್ರಶಸ್ತಿ– ವಾದನ: ದಕ್ಷಿಣ ಕನ್ನಡದ ಅರುವ ಕೊರಗಪ್ಪ ಶೆಟ್ಟಿ , ಚಿಕ್ಕಮಗಳೂರಿನ ಜಿ.ಪಿ. ಜಗದೀಶ್ ಅವರು ಆಯ್ಕೆಯಾಗಿದ್ದಾರೆ.

ಜಾನದಪಶ್ರೀ ಪ್ರಶಸ್ತಿ– ಗಾಯನ: ಬೀದರ್‌ನ ಕಲ್ಲಪ್ಪ ಮಿರ್ಜಾಪುರ, ಚಿತ್ರದುರ್ಗದ ಹಲಗೆ ದುರ್ಗಮ್ಮ ಅವರು ಆಯ್ಕೆಯಾಗಿದ್ದಾರೆ.

ನಿಜಗುಣ–ಪುರಂದರ ಪ್ರಶಸ್ತಿ: ಮೈಸೂರಿನ ಎಂ.ಕೆ.ಸರಸ್ವತಿ, ಧಾರವಾಡದ ಅಕ್ಕಮಹಾದೇವಿ ಮಠ ಆಯ್ಕೆಯಾಗಿದೆ.

ಕುಮಾರವ್ಯಾಸ ಪ್ರಶಸ್ತಿ: ಗದುಗಿನ ಸಿದ್ದೇಶ್ವರ ಶಾಸ್ತ್ರಿ, ಮೈಸೂರಿನ ಕೃಷ್ಣಗಿರಿ ರಾಮಚಂದ್ರ ಅವರು ಆಯ್ಕೆಯಾಗಿದ್ದಾರೆ.

ಶಾಂತಲಾ ನಾಟ್ಯ ಪ್ರಶಸ್ತಿ: ಬೆಂಗಳೂರಿನ ಚಿತ್ರಾ ವೇಣುಗೋಪಾಲ್, ಬೆಂಗಳೂರಿನ ರೇವತಿ ನರಸಿಂಹನ್‌ ಅವರು ಆಯ್ಕೆಯಾಗಿದ್ದಾರೆ.

ಸಂತ ಶಿಶುನಾಳ ಷರೀಫ ಪ್ರಶಸ್ತಿ: ಬೆಂಗಳೂರಿನ ಕಸ್ತೂರಿ ರಂಗನ್‌, ಶಿವಮೊಗ್ಗದ ಎನ್.ಬಿ.ಶಿವಲಿಂಗಪ್ಪ ಅವರು ಆಯ್ಕೆಯಾಗಿದ್ದಾರೆ.

ಪಂಪ ಪ್ರಶಸ್ತಿ: ಹಿರಿಯ ಸಾಹಿತಿ, ಶಿವಮೊಗ್ಗದ ನಾ. ಡಿಸೋಜಾ ಅವರು ಆಯ್ಕೆಯಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...