Homeಕರ್ನಾಟಕಕನ್ನಡ-ಸಂಸ್ಕೃತಿ ಇಲಾಖೆಯಿಂದ ರಾಷ್ಟ್ರೀಯ, ರಾಜ್ಯ ಪ್ರಶಸ್ತಿಗಳ ಘೋಷಣೆ: ಆನಂದ್ ತೇಲ್ತುಂಬ್ಡೆ ಸೇರಿ ಹಲವರಿಗೆ ಪ್ರಶಸ್ತಿ

ಕನ್ನಡ-ಸಂಸ್ಕೃತಿ ಇಲಾಖೆಯಿಂದ ರಾಷ್ಟ್ರೀಯ, ರಾಜ್ಯ ಪ್ರಶಸ್ತಿಗಳ ಘೋಷಣೆ: ಆನಂದ್ ತೇಲ್ತುಂಬ್ಡೆ ಸೇರಿ ಹಲವರಿಗೆ ಪ್ರಶಸ್ತಿ

- Advertisement -
- Advertisement -

ಕನ್ನಡ ಮತ್ತು ಸಂಸ್ಕೃತಿ ಇಲಾಖೆ 2022–23 ಹಾಗೂ 2023–24ನೇ ಸಾಲಿನ ವಿವಿಧ ರಾಷ್ಟ್ರೀಯ ಮತ್ತು ರಾಜ್ಯ ಪ್ರಶಸ್ತಿಗಳನ್ನು ಘೋಷಿಸಿದೆ.

ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಈ ಕುರಿತು ಮಾತನಾಡಿದ್ದು, ಬಸವ ರಾಷ್ಟ್ರೀಯ ಪ್ರಶಸ್ತಿ, ಭಗವಾನ್‌ ಮಹಾವೀರ ಶಾಂತಿ ಪ್ರಶಸ್ತಿ, ಟಿ. ಚೌಡಯ್ಯ ಪ್ರಶಸ್ತಿ, ಪ್ರತಿಷ್ಠಿತ ಪಂಪ ಪ್ರಶಸ್ತಿ ಸೇರಿದಂತೆ ವಿವಿಧ ರಾಜ್ಯಮಟ್ಟದ ಪ್ರಶಸ್ತಿಗಳಿಗೆ ಪುರಸ್ಕೃತರನ್ನು ಆಯ್ಕೆ ಮಾಡಲಾಗಿದೆ. ಜನವರಿ 31ರಂದು ಬೆಂಗಳೂರಿನ ರವಿಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಬಸವ ರಾಷ್ಟ್ರೀಯ ಪುರಸ್ಕಾರ: ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಪ್ರಖರ ಚಿಂತಕ ಆನಂದ್ ತೇಲ್ತುಂಬ್ಡೆ ಅವರು ಆಯ್ಕೆಯಾಗಿದ್ದಾರೆ. ಡಾ.ಎನ್.ಜಿ. ಮಹದೇವಪ್ಪ ಅವರನ್ನು ಕೂಡ ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.

ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿ: ಧಾರವಾಡದ ಜಿನದತ್ತ ದೇಸಾಯಿ ಹಾಗೂ ಗುಜರಾತ್‌ನ ಗಾಂಧಿ ಸೇವಾಶ್ರಮ ಆಯ್ಕೆಯಾಗಿದೆ.

ಟಿ.ಚೌಡಯ್ಯ ಪ್ರಶಸ್ತಿ; ಕೊಳಲು ವಾದಕ ನಿತ್ಯಾನಂದ ಹಳದಿಪುರ, ಕೋಲಾರದ ನಾದಸ್ವರ ಕಲಾವಿದ ಶ್ರೀರಾಮುಲು ಆಯ್ಕೆಯಾಗಿದ್ದಾರೆ.

ಗಾಯನಯೋಗಿ ಪಂ.ಪಂಚಾಕ್ಷರಿ ಗವಾಯಿ ಪ್ರಶಸ್ತಿ; ಹಿಂದೂಸ್ಥಾನಿ ಗಾಯಕ ಧಾರವಾಡದ ಪಂ. ಸೋಮನಾಥ ಮರಡೂರ ಹಾಗೂ ಕರ್ನಾಟಕ ಸಂಗೀತದ ಮೈಸೂರಿನ ಡಾ.ನಾಗಮಣಿ ಶ್ರೀನಾಥ್ ಆಯ್ಕೆಯಾಗಿದ್ದಾರೆ.

ಪ್ರೊ. ಕೆ.ಜಿ.ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ: ಮಹಾರಾಷ್ಟ್ರದ ಡಾ. ಕೆ.ವಿಶ್ವನಾಥ್ ಕಾರ್ನಾಡ, ಬೆಳಗಾವಿಯ ಚಂದ್ರಕಾಂತ ಪೋಕಳೆ ಆಯ್ಕೆಯಾಗಿದ್ದಾರೆ.

ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ: ಹಾಸನದ ಬಾನು ಮುಷ್ತಾಕ್, ರಾಯಚೂರಿನ ಎಚ್‌.ಎಸ್.ಮುಕ್ತಾಯಕ್ಕ ಆಯ್ಕೆಯಾಗಿದ್ದಾರೆ.

ಬಿ.ವಿ.ಕಾರಂತ ಪ್ರಶಸ್ತಿ: ಬೆಂಗಳೂರಿನ ಸಿ.ಬಸವಲಿಂಗಯ್ಯ, ಮಂಗಳೂರಿನ ಸದಾನಂದ ಸುವರ್ಣ ಅವರು ಆಯ್ಕೆಯಾಗಿದ್ದಾರೆ.

ಡಾ. ಗುಬ್ಬಿ ವೀರಣ್ಣ ಪ್ರಶಸ್ತಿ: ತುಮಕೂರಿನ ಚನ್ನಬಸಯ್ಯ ಗುಬ್ಬಿ, ವಿಜಯಪುರದ ಎಲ್.ಬಿ.ಶೇಖ್ ಮಾಸ್ತರ ಅವರು ಆಯ್ಕೆಯಾಗಿದ್ದಾರೆ.

ಡಾ. ಸಿದ್ದಲಿಂಗಯ್ಯ ಸಾಹಿತ್ಯ ಪ್ರಶಸ್ತಿ: ಹಂಪಿ ಡಾ.ಮೊಗಳ್ಳಿ ಗಣೇಶ್, ಉತ್ತಮ ಕಾಂಬ್ಳೆ , ದಾವಣಗೆರೆಯ ಬಿ.ಟಿ.ಜಾಹ್ನವಿ ಅವರು ಆಯ್ಕೆಯಾಗಿದ್ದಾರೆ.

ಸಂಗೊಳ್ಳಿ ರಾಯಣ್ಣ ಪ್ರಶಸ್ತಿ: ಬೆಂಗಳೂರಿನ ಕೆ. ಮರುಳಸಿದ್ದಪ್ಪ, ಬೆಳಗಾವಿಯ ಹಸನ್‌ ನಯೀಂ ಸುರಕೋಡ, ಕೋಲಾರದ ಕೆ. ರಾಮಯ್ಯ, ಬಳ್ಳಾರಿಯ ವೀರಸಂಗಯ್ಯ ಅವರು ಆಯ್ಕೆಯಾಗಿದ್ದಾರೆ.

ಅಕ್ಕಮಹಾದೇವಿ ಪ್ರಶಸ್ತಿ: ಧಾರವಾಡದ ಜಗನ್ಮಾತೆ ಅಕ್ಕಮಹಾದೇವಿ ಆಶ್ರಮ ಟ್ರಸ್ಟ್, ಮಂಡ್ಯದ ಡಾ. ಆರ್.ಸುನಂದಮ್ಮ, ಕಲಬುರಗಿಯ ಮೀನಾಕ್ಷಿ ಬಾಳಿ, ಬೆಂಗಳೂರಿನ ಡಾ. ವಸುಂಧರಾ ಭೂಪತಿ ಅವರು ಆಯ್ಕೆಯಾಗಿದ್ದಾರೆ.

ಕನಕಶ್ರೀ ಪ್ರಶಸ್ತಿ: ಹಾವೇರಿಯ ಡಾ. ಲಿಂಗದಹಳ್ಳಿ ಹಾಲಪ್ಪ, ಮಂಗಳೂರಿನ ಡಾ. ಬಿ.ಶೆಟ್ಟಿ ಆಯ್ಕೆಯಾಗಿದ್ದಾರೆ.

ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ: ಮೈಸೂರಿನ ಜಿ.ಎಲ್.ಎನ್.ಸಿಂಹ,  ಕಲಬುರಗಿಯ ಬಸವರಾಜ್ ಎಲ್.ಜಾನೆ ಆಯ್ಕೆಯಾಗಿದ್ದಾರೆ.

ಜಾನಪದಶ್ರೀ ಪ್ರಶಸ್ತಿ– ವಾದನ: ದಕ್ಷಿಣ ಕನ್ನಡದ ಅರುವ ಕೊರಗಪ್ಪ ಶೆಟ್ಟಿ , ಚಿಕ್ಕಮಗಳೂರಿನ ಜಿ.ಪಿ. ಜಗದೀಶ್ ಅವರು ಆಯ್ಕೆಯಾಗಿದ್ದಾರೆ.

ಜಾನದಪಶ್ರೀ ಪ್ರಶಸ್ತಿ– ಗಾಯನ: ಬೀದರ್‌ನ ಕಲ್ಲಪ್ಪ ಮಿರ್ಜಾಪುರ, ಚಿತ್ರದುರ್ಗದ ಹಲಗೆ ದುರ್ಗಮ್ಮ ಅವರು ಆಯ್ಕೆಯಾಗಿದ್ದಾರೆ.

ನಿಜಗುಣ–ಪುರಂದರ ಪ್ರಶಸ್ತಿ: ಮೈಸೂರಿನ ಎಂ.ಕೆ.ಸರಸ್ವತಿ, ಧಾರವಾಡದ ಅಕ್ಕಮಹಾದೇವಿ ಮಠ ಆಯ್ಕೆಯಾಗಿದೆ.

ಕುಮಾರವ್ಯಾಸ ಪ್ರಶಸ್ತಿ: ಗದುಗಿನ ಸಿದ್ದೇಶ್ವರ ಶಾಸ್ತ್ರಿ, ಮೈಸೂರಿನ ಕೃಷ್ಣಗಿರಿ ರಾಮಚಂದ್ರ ಅವರು ಆಯ್ಕೆಯಾಗಿದ್ದಾರೆ.

ಶಾಂತಲಾ ನಾಟ್ಯ ಪ್ರಶಸ್ತಿ: ಬೆಂಗಳೂರಿನ ಚಿತ್ರಾ ವೇಣುಗೋಪಾಲ್, ಬೆಂಗಳೂರಿನ ರೇವತಿ ನರಸಿಂಹನ್‌ ಅವರು ಆಯ್ಕೆಯಾಗಿದ್ದಾರೆ.

ಸಂತ ಶಿಶುನಾಳ ಷರೀಫ ಪ್ರಶಸ್ತಿ: ಬೆಂಗಳೂರಿನ ಕಸ್ತೂರಿ ರಂಗನ್‌, ಶಿವಮೊಗ್ಗದ ಎನ್.ಬಿ.ಶಿವಲಿಂಗಪ್ಪ ಅವರು ಆಯ್ಕೆಯಾಗಿದ್ದಾರೆ.

ಪಂಪ ಪ್ರಶಸ್ತಿ: ಹಿರಿಯ ಸಾಹಿತಿ, ಶಿವಮೊಗ್ಗದ ನಾ. ಡಿಸೋಜಾ ಅವರು ಆಯ್ಕೆಯಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...